Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಹೈದ್ರಾಬಾದ್‌ನಲ್ಲಿ ಉದ್ಘಾಟನೆಯಾಗಲಿರುವ ರಾಮಾನುಜಾಚಾರ್ಯರ ಪ್ರತಿಮೆ ಪ್ರಧಾನಿ ಮೋದಿ ನಿರ್ಮಿಸಿದ್ದಲ್ಲ!

ಫ್ಯಾಕ್ಟ್‌ಚೆಕ್‌: ಹೈದ್ರಾಬಾದ್‌ನಲ್ಲಿ ಉದ್ಘಾಟನೆಯಾಗಲಿರುವ ರಾಮಾನುಜಾಚಾರ್ಯರ ಪ್ರತಿಮೆ ಪ್ರಧಾನಿ ಮೋದಿ ನಿರ್ಮಿಸಿದ್ದಲ್ಲ!

- Advertisement -
- Advertisement -

“ಪ್ರಧಾನಿ ಮೋದಿ ಅವರು ಹೈದರಾಬಾದ್‌ನಲ್ಲಿ ಹಿಂದೂ ಸಂತನ ಪ್ರತಿಮೆಯನ್ನು ನಿರ್ಮಿಸುತ್ತಿದ್ದಾರೆ” ಎಂಬ ಪೋಸ್ಟ್‍ ಅನ್ನು ಬಿಜೆಪಿ ನಾಯಕರು ಸೇರಿದಂತೆ ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ಹಂಚಿಕೊಳ್ಳುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಪ್ರಧಾನಿ ಮೋದಿ, ಸಂಸದ ಅಸಾದುದ್ದೀನ್ ಓವೈಸಿ ಮತ್ತು ಪ್ರತಿಮೆಯ ದೃಶ್ಯಗಳನ್ನು ವಿಡಿಯೊದಲ್ಲಿ ಕಾಣಬಹುದು. AIMIM   ಅಧ್ಯಕ್ಷ ಅಸಾದುದ್ದೀನ್ ಓವೈಸಿ ಅವರ ಭದ್ರಕೋಟೆಯಾಗಿರುವ ಹೈದರಾಬಾದ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತೀಯ ಜನತಾ ಪಕ್ಷವು ವಿಶ್ವದ ಅತಿ ಎತ್ತರದ ಹಿಂದೂ ಸಂತನ ಪ್ರತಿಮೆಯನ್ನು ನಿರ್ಮಿಸುತ್ತಿದೆ ಎಂದು ಬಿಂಬಿಸಲಾಗುತ್ತಿದೆ.

ಈ ವಿಡಿಯೋವನ್ನು ಶೇರ್ ಮಾಡುತ್ತಿರುವವರು ಅಸಾದುದ್ದೀನ್ ಓವೈಸಿಯನ್ನು ಗೇಲಿ ಮಾಡುತ್ತಿದ್ದಾರೆ. ಮುಂಬರುವ ಉತ್ತರ ಪ್ರದೇಶ ಚುನಾವಣೆಯೊಂದಿಗೆ ಈ ಪ್ರತಿಪಾದನೆ ತಳುಕು ಹಾಕಿಕೊಂಡಿದೆ. ಬಿಜೆಪಿ ಮುಖಂಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಗಿರಿರಾಜ್ ಸಿಂಗ್ ಕೂಡ ಈ ವಿಡಿಯೋವನ್ನು ಹಂಚಿಕೊಂಡಿದ್ದು, ಓವೈಸಿಯವರನ್ನು ಟಾರ್ಗೆಟ್‍ ಮಾಡಿ ಟ್ವೀಟ್ ಮಾಡಿದ್ದಾರೆ.

ಓವೈಸಿಯವರನ್ನು ಗುರಿಯಾಗಿಸಿಕೊಂಡು `ನಿಲುಮೆ’ ಫೇಸ್‌ಬುಕ್‌  ಗ್ರೂಪಿನಲ್ಲಿ ಪೋಸ್ಟ್‌ ಮಾಡಲಾಗಿದೆ.

ಈಗ ವೈರಲ್‍ ಆಗಿರುವ ವಿಡಿಯೊವನ್ನು ಟ್ವಿಟರ್ ಮತ್ತು ಫೇಸ್‌ಬುಕ್‌ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದಾಗಿದೆ.

ಪ್ರತಿಪಾದನೆ: ಹಿಂದೂ ಸಂತ  ರಾಮಾನುಜಾಚಾರ್ಯರ ಅತಿ ಎತ್ತರದ ಪ್ರತಿಮೆಯನ್ನು ಬಿಜೆಪಿ ಮತ್ತು ಪ್ರಧಾನಿ ಮೋದಿಯವರು ಹೈದರಾಬಾದ್‌ನಲ್ಲಿ ವಿಶ್ವದ ನಿರ್ಮಿಸಿದ್ದಾರೆ.

ಫ್ಯಾಕ್ಟ್‌ಚೆಕ್: `ಸ್ಟ್ಯಾಚ್ಯೂ ಆಫ್ ಇಕ್ವಾಲಿಟಿ’, `ರಾಮಾನುಜಾಚಾರ್ಯ’, `ಹೈದರಾಬಾದ್’ ಮುಂತಾದ ಕೆಲವು ಪದಗಳನ್ನು ವೀಡಿಯೊದಲ್ಲಿ ಸಾಕಷ್ಟು ಬಾರಿ ಹೇಳಿರುವುದನ್ನು ನಾವು ಗಮನಿಸಿದ್ದೇವೆ. ಅದರ ಆಧಾರದಲ್ಲಿ ನಾವು ರಿವರ್ಸ್‍ ಇಮೇಜ್‍್ ಮಾಡಿದಾಗ ಅದೇ ರೀತಿಯ ಪ್ರತಿಮೆಯನ್ನು ಹೋಲುವ ಹಲವಾರು ವರದಿಗಳು ಲಭಿಸಿವೆ.  ದಿನಾಂಕ 28 ಆಗಸ್ಟ್ 2021ರಂದು ನ್ಯೂಸ್ 18 ಮಾಡಿರುವ ವರದಿಯ ಪ್ರಕಾರ, ಸಂತ ಶ್ರೀ ರಾಮಾನುಜಾಚಾರ್ಯರ  ಜನ್ಮದಿನದ ಸಂದರ್ಭದಲ್ಲಿ, ಹೈದರಾಬಾದ್‌ನ ಶ್ರೀ ರಾಮ್ ನಗರ ಜೀವಾಶ್ರಮದ ಬಳಿ 216 ಅಡಿ ಎತ್ತರದ ಪ್ರತಿಮೆಯನ್ನು ಸ್ಥಾಪಿಸಲಾಗಿದೆ. ಸಮಾನತೆಯ ಪ್ರತಿಮೆ ಎಂದೂ ಕರೆಯಲ್ಪಡುವ ರಾಮಾನುಜಾಚಾರ್ಯರ ಪ್ರತಿಮೆಯನ್ನು ಅಷ್ಟಧಾತುಗಳ ಮಿಶ್ರಣದಿಂದ ಮಾಡಲಾಗಿದೆ.

ಈ ಕುರಿತು ನಾವು ಹಲವಾರು ವೀಡಿಯೊ ವರದಿಗಳನ್ನು ನೋಡಿದ್ದೇವೆ. `TV9 ಭಾರತವರ್ಷ’ ಚಾನೆಲ್‍್‍ ವರದಿಯ ಪ್ರಕಾರ, 1000 ಕೋಟಿ ವೆಚ್ಚದ ಈ ಯೋಜನೆಯು 75 ಎಕರೆಗೂ ಹೆಚ್ಚು ಪ್ರದೇಶದಲ್ಲಿ ಹರಡಿಕೊಂಡಿದೆ.

statueofequality.org ವೆಬ್‌ಸೈಟ್‌ನ ವಿವಿಧ ವಿಭಾಗಗಳನ್ನು ಪರಿಶೀಲಿಸಲು ಪ್ರಾರಂಭಿಸಿದಾಗ  ನಾವು ಪ್ರಧಾನಿ ಮೋದಿಯವರನ್ನು ಆಹ್ವಾನಿಸಿದ ವರದಿಯನ್ನು ಗಮನಿಸಲಾಗಿದೆ. ಅದರ ಪ್ರಕಾರ, ತ್ರಿದಂಡಿ ಶ್ರೀಮನ್ನಾರಾಯಣ ರಾಮಾನುಜ ಚಿನ್ನಜೀಯರ ಸ್ವಾಮೀಜಿ ಅವರು 216 ಅಡಿಗಳ ಭಗವದ್ ರಾಮಾನುಜಾಚಾರ್ಯರ ಪ್ರತಿಮೆ ಮತ್ತು 108 ಸ್ಫೂರ್ತಿ ಕೇಂದ್ರಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗಿದೆ. ಕಾರ್ಯಕ್ರಮವು ಫೆಬ್ರವರಿ 2 ರಿಂದ ಫೆಬ್ರವರಿ 14, 2022 ರವರೆಗೆ ನಡೆಯಲಿದ್ದು, ಅಲ್ಲಿ ಪ್ರಧಾನಿ ಮೋದಿಯವರು ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ರಾಷ್ಟ್ರಪತಿ, ಉಪರಾಷ್ಟ್ರಪತಿ, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಕ್ಯಾಬಿನೆಟ್ ಸಚಿವರು ಮತ್ತು ಇತರ ಗಣ್ಯರಿಗೂ ಆಹ್ವಾನ ನೀಡಲಾಗಿದೆ ಎಂದು ಇತರ ವರದಿಗಳು ಹೇಳುತ್ತವೆ.

ಟ್ರಸ್ಟ್‌ನ ಅಧಿಕೃತ  ವೆಬ್‌ಸೈಟ್‌ನಲ್ಲಿ ಈ ವಸ್ತುಸಂಗ್ರಹಾಲಯಕ್ಕಾಗಿ ಸ್ವೀಕರಿಸಿದ ದೇಣಿಗೆ ಮತ್ತು ಅದರ ವೆಚ್ಚವನ್ನು ಉಲ್ಲೇಖಿಸುವ ಹಣಕಾಸಿನ ವಿವರಗಳನ್ನು ಗಮನಿಸಬಹುದಗಿದೆ. ಟ್ರಸ್ಟ್ ಪ್ರಪಂಚದಾದ್ಯಂತ ಇರುವ ತನ್ನ ಭಕ್ತರಿಗೆ ದೇಣಿಗೆಗಾಗಿ ಮನವಿ ಮಾಡಿದೆ. ಆದಾಗ್ಯೂ, ಇದು ಎಲ್ಲಿಯೂ ಭಾರತೀಯ ಜನತಾ ಪಕ್ಷದಿಂದ ಅಥವಾ ಪ್ರಧಾನಿ ನರೇಂದ್ರ ಮೋದಿಯವರಿಂದ ಸಹಾಯ ಪಡೆದ ಉಲ್ಲೇಖಿಸಿಲ್ಲ ಎಂಬುದು ಗಮನಾರ್ಹವಾಗಿದೆ. ಹಣಕಾಸಿನ ವರದಿಯನ್ನು ಇಲ್ಲಿ ನೋಡಬಹುದಾಗಿದೆ.

ಇದರ ಕುರಿತು the logical Indian ಮಾಧ್ಯಮದವರು  ಚಿನ್ನ ಜೀಯರ್ ಸ್ವಾಮಿ (ಆಶ್ರಮ) ಅವರೊಂದಿಗೆ ಮಾತನಾಡಿದ್ದಾರೆ. ವ್ಯವಸ್ಥಾಪನಾ ಸಮಿತಿಯ ಸದಸ್ಯೆ ಭಾರತೀಯ ಲಕ್ಷ್ಮಿ, ದಿ ಲಾಜಿಕಲ್ ಇಂಡಿಯನ್‌ನೊಂದಿಗೆ ಮಾತನಾಡುತ್ತಾ, “ಯಾವುದೇ ರಾಜಕೀಯ ಪಕ್ಷ ಇದರಲ್ಲಿ ಭಾಗಿಯಾಗಿಲ್ಲ. ಬಿಜೆಪಿ ಅಥವಾ ಯಾವುದೇ ಪಕ್ಷವೂ ಇಲ್ಲ. ಇದೆಲ್ಲವೂ ದೇಣಿಗೆಯಿಂದ ಬಂದ ಹಣವಾಗಿದೆ. ತೆಲುಗು ದೇಶಂ ಪಕ್ಷವಾಗಲೀ, ತೆಲಂಗಾಣ ರಾಷ್ಟ್ರ ಸಮಿತಿಯಾಗಲೀ ಅಥವಾ  ಬೇರೆ ಯಾವುದೇ ಪಕ್ಷವಾಗಲಿ ಪ್ರತಿಮೆ ನಿರ್ಮಿಸಿಲ್ಲ. ನಾವು ದೇಣಿಗೆಯಿಂದ ಎಲ್ಲವನ್ನೂ ಸಿದ್ದಪಡಿಸಿದ್ದೇವೆ. ಇದರ ಬಗ್ಗೆ ಎಲ್ಲ ಪಕ್ಷಗಳು ಏನಾದರೂ ಹೇಳಬಹುದು. ಅದು ನಿಜವಲ್ಲ. ನಾವು 1 ರೂಪಾಯಿಯಿಂದಲೂ ದೇಣಿಗೆ ಸಂಗ್ರಹಿಸಿದ್ದೇವೆ. ನಾವು ಪ್ರತಿಯೊಬ್ಬರ ರಸೀದಿ ಹೊಂದಿದ್ದೇವೆ.  2014ರಿಂದ ನಾವು ದೇಣಿಯನ್ನು ತೆಗೆದುಕೊಳ್ಳಲು ಪ್ರಾರಂಭಿಸಿದ್ದೇವೆ” ಎಂದಿದ್ದಾರೆ.

ಇದೇ ವೇಳೆ ಮಾತನಾಡಿದ ಅವರು, ಸಮಾನತೆಯ ಪ್ರತಿಮೆ ಉದ್ಘಾಟನೆಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಸೇರಿದಂತೆ,  ಪಕ್ಷ ಭೇದವಿಲ್ಲದೆ ಎಲ್ಲ ಮುಖ್ಯಮಂತ್ರಿಗಳನ್ನು ಆಹ್ವಾನಿಸಿದ್ದೇವೆ. ನ್ಯಾಯಾಧೀಶರು ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದವರಲ್ಲ, ಬಿಜೆಪಿ ಕುರಿತು ಸಾಫ್ಟ್ ಕಾರ್ನರ್ ಇಲ್ಲ.  ನಾವು ಅಸಾದುದ್ದೀನ್ ಓವೈಸಿಯವರನ್ನೂ ಆಹ್ವಾನಿಸಿದ್ದೇವೆ. ನಾವು ಎಲ್ಲಾ ಮಂತ್ರಿಗಳನ್ನು ಆಹ್ವಾನಿಸುತ್ತಿದ್ದೇವೆ. ನಮಗೆ ಯಾವುದೇ ಪಕ್ಷದ ಬಗ್ಗೆ ಕಾಳಜಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ , ರಾಮಾನುಜಾಚಾರ್ಯರಿಗೆ ಸಮರ್ಪಿತವಾದ ಸಮಾನತೆಯ ಪ್ರತಿಮೆಯನ್ನು ಜೀಯರ್ ಎಜುಕೇಶನಲ್ ಟ್ರಸ್ಟ್  ನಿರ್ಮಿಸಿದೆ. ಪ್ರಪಂಚದಾದ್ಯಂತ ಇರುವ ರಾಮಾನುಜಾಚಾರ್ಯರ ಭಕ್ತರು ಇದಕ್ಕಾಗಿ ದೇಣಿಗೆ ನೀಡಿದ್ದಾರೆ.  ಫೆಬ್ರವರಿ 5, 2022ರಂದು ಪ್ರಧಾನಿ ಮೋದಿ ಇದನ್ನು ಅನಾವರಣಗೊಳಿಸುತ್ತಾರೆ. ಆದರೆ ಬಿಜೆಪಿ ಅಥವಾ ಮೋದಿಯವರಿಂದ ಈ ಪ್ರತಿಮೆ ನಿರ್ಮಾಣವಾಗಿಲ್ಲ.  ವಿವಿಧ ರಾಜಕೀಯ ಪಕ್ಷಗಳ ನಾಯಕರು ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಹೀಗಾಗಿ ವೈರಲ್‍್‍ ಆದ ಪ್ರತಿಪಾದನೆ ಸುಳ್ಳಾಗಿದೆ.

ಕೃಪೆ: ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌ ‘ಏನ್‌.ಸುದ್ದಿ.ಕಾಂ


ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಸಂಸತ್‌ನಲ್ಲಿ ಮೋದಿ ಮೋದಿ ಎಂಬ ಘೋಷಣೆ ಕೂಗಿದ್ದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಮಗೆ ದೇಣಿಗೆ ನೀಡುವುದು ದೇಶದ್ರೋಹಿ ಗಳಿಗೆ ಸಹಾಯ ಮಾಡಿದಂತೆ ನಿಮ್ಮಂಥ ಮಾದ್ಯಮಗಳು ದೇಶಕ್ಕೆ ಮಾರಕ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...