Homeಮುಖಪುಟಬಿಕ್ಕಟ್ಟಿನಲ್ಲಿ ಯೂಪಿ ಬಿಜೆಪಿ: ಅಯೋಧ್ಯೆಯಿಂದ ಯೋಗಿ ಆದಿತ್ಯನಾಥ್‌ ಸ್ಪರ್ಧೆ?

ಬಿಕ್ಕಟ್ಟಿನಲ್ಲಿ ಯೂಪಿ ಬಿಜೆಪಿ: ಅಯೋಧ್ಯೆಯಿಂದ ಯೋಗಿ ಆದಿತ್ಯನಾಥ್‌ ಸ್ಪರ್ಧೆ?

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಕಳೆದ ಎರಡು ದಿನಗಳ ಅವಧಿಯಲ್ಲಿ ಆರು ಜನ ನಾಯಕರು ಬಿಜೆಪಿ ತೊರೆದಿದ್ದು, ಪಕ್ಷಕ್ಕೆ ಬಂಡಾಯದ ಬಿಸಿ ತಟ್ಟುತ್ತಿದೆ. ಹೀಗಾಗಿ ವಿಧಾನಸಭಾ ಚುನಾವಣೆಯಲ್ಲಿ ಅಯೋಧ್ಯೆಯಿಂದ ಯೋಗಿ ಆದಿತ್ಯನಾಥ್ ಅವರನ್ನು ಕಣಕ್ಕಿಳಿಸಲು ಪಕ್ಷವು ಚಿಂತಿಸುತ್ತಿದೆ ಎಂದು ಮೂಲಗಳು ತಿಳಿಸಿರುವಾಗಿ ಎನ್‌ಡಿಟಿವಿ ವರದಿ ಮಾಡಿದೆ. ಈ ಪ್ರಸ್ತಾವನೆಗೆ ಪ್ರಧಾನಿ ನರೇಂದ್ರ ಮೋದಿ ಒಪ್ಪಿಗೆ ಸೂಚಿಸಲಿದ್ದಾರೆ ಎನ್ನಲಾಗಿದೆ.

ಪೂರ್ವ ಯೂಪಿಯಿಂದ ಬಂದವರಾದ ಯೋಗಿ ಆದಿತ್ಯನಾಥ ಅವರು, ಗೋರಖ್‌ಪುರ ಕ್ಷೇತ್ರದಿಂದ ಐದು ಬಾರಿ ಲೋಕಸಭಾ ಸಂಸದರಾಗಿ ಆಯ್ಕೆಯಾಗಿದ್ದಾರೆ. ಆದರೆ ಹಿಂದುಳಿದ ವರ್ಗದ ನಾಯಕರು ಬಿಜೆಪಿಯನ್ನು ತೊರೆಯುತ್ತಿರುವುದರಿಂದಾಗಿ ಪೂರ್ವ ಯೂಪಿಯಲ್ಲಿ ಬಿಜೆಪಿಗೆ ಹಿನ್ನಡೆಯಾಗಲಿದೆ ಎನ್ನಲಾಗುತ್ತಿದೆ.

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿರುವುದರಿಂದ ಬಿಜೆಪಿಯ ರಾಜಕೀಯ ಚಟುವಟಿಕೆಗೆ ಶಕ್ತಿ ನೀಡಬಹುದು ಎಂದು ಮೂಲಗಳು ಹೇಳಿವೆ. ಇದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಹೆಚ್ಚಿನ ಅನುಕೂಲ ಮಾಡಿಕೊಡುವುದಷ್ಟೇ ಅಲ್ಲದೇ ಅವರನ್ನು ಹಿಂದುತ್ವದ ಐಕಾನ್ ಆಗಿ ಬಿಂಬಿಸಲು ಅನುವು ಮಾಡಿಕೊಡುತ್ತದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಡುತ್ತಾರೆ.

ಅಯೋಧ್ಯೆ ಕ್ಷೇತ್ರವನ್ನು ಬಿಜೆಪಿಯ ವೇದ್ ಪ್ರಕಾಶ್ ಗುಪ್ತಾ ಅವರು ಪ್ರಸ್ತುತ ವಿಧಾನಸಭೆಯಲ್ಲಿ ಪ್ರತಿನಿಧಿಸುತ್ತಿದ್ದಾರೆ.

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷದ ಕೋರ್ ಕಮಿಟಿಯ ಸಭೆ ನಡೆದಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕ್ಷೇತ್ರವಾರು ಪರಿಶೀಲನೆ ನಡೆಸಿದ್ದಾರೆ. ಗ್ರೌಂಡ್‌ ರಿಪೋರ್ಟ್‌‌ಗಳನ್ನು ಸ್ಥಳೀಯ ಉಸ್ತುವಾರಿಗಳಿಂದ ಪಡೆದಿದ್ದಾರೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಅಯೋಧ್ಯೆಯಿಂದ ಸ್ಪರ್ಧಿಸುವ ಸಾಧ್ಯತೆಗಳು ಸಭೆಯಲ್ಲಿ ವ್ಯಕ್ತವಾಗಿವೆ. ಆದಿತ್ಯನಾಥ ಅವರು ಪ್ರಸ್ತುತ ವಿಧಾನ ಪರಿಷತ್ತಿನ ಸದಸ್ಯರಾಗಿದ್ದಾರೆ. ಪಕ್ಷದ ವರಿಷ್ಠರು ತಿಳಿಸಿದ ಕ್ಷೇತ್ರದಿಂದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಥ ಎಂದು ಅವರು ಇತ್ತೀಚೆಗೆ ಹೇಳಿದ್ದರು.

ಫೆಬ್ರವರಿ 10 ಮತ್ತು 14 ರಂದು ನಡೆಯಲಿರುವ ಮೊದಲ ಎರಡು ಹಂತಗಳ ಚುನಾವಣೆಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯ ಸ್ಥಾನಗಳಿಗೆ ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒಳಗೊಂಡಿರುವ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯು ಶೀಘ್ರದಲ್ಲೇ ಸಭೆ ಸೇರುವ ಸಾಧ್ಯತೆಯಿದೆ.

ಉತ್ತರ ಪ್ರದೇಶದಲ್ಲಿ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಫೆ.10ರಂದು ಮೊದಲ ಸುತ್ತಿನ ಚುನಾವಣೆ ನಡೆಯಲಿದೆ. ಮಾರ್ಚ್ 10 ರಂದು ಮತ ಎಣಿಕೆಯಾಗಲಿದೆ.


ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ಹೈದ್ರಾಬಾದ್‌ನಲ್ಲಿ ಉದ್ಘಾಟನೆಯಾಗಲಿರುವ ರಾಮಾನುಜಾಚಾರ್ಯರ ಪ್ರತಿಮೆ ಪ್ರಧಾನಿ ಮೋದಿ ನಿರ್ಮಿಸಿದ್ದಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...