Homeಮುಖಪುಟಸಾಹಿತ್ಯ ಪರಿಷತ್‌ಗಿರುವ ಶಕ್ತಿ ತೋರಿಸಿದ್ದ ಚಂಪಾ

ಸಾಹಿತ್ಯ ಪರಿಷತ್‌ಗಿರುವ ಶಕ್ತಿ ತೋರಿಸಿದ್ದ ಚಂಪಾ

- Advertisement -
- Advertisement -

ಬರಹಗಾರ, ಸಾಮಾಜಿಕ ಕಾರ್ಯಕರ್ತ, ಸಮಾಜವಾದಿ ಚಂಪಾ ನಮ್ಮನ್ನಗಲಿದ್ದಾರೆ. ಚಂದ್ರಶೇಖರ ಪಾಟೀಲರು ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿದ್ದಾಗ ಸಾಹಿತ್ಯ ಪರಿಷತ್ತಿಗೆ ಶಕ್ತಿಯೇನೆಂಬುದನ್ನು ಅಂದಿನ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಧಾರ್ಮಿಕ ಮೂಲಭೂತವಾದಿಗಳಿಗೆ ತೋರಿಸಿಕೊಟ್ಟ ಪ್ರಸಂಗವನ್ನು ಇವತ್ತು ಮೆಲುಕು ಹಾಕುವುದು ಮುಖ್ಯವೆನಿಸುತ್ತದೆ.

ಕೆ.ಎಸ್ ನಿಸಾರ್ ಅಹಮದ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ 73ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ 2006ರಲ್ಲಿ ಶಿವಮೊಗ್ಗದಲ್ಲಿ ನಡೆಯಿತು. ಅಂದಿನ ಜಿಲ್ಲಾಕನ್ನಡ ಸಾಹಿತ್ಯ ಪರಿಷತ್‌ಗೆ ಅಧ್ಯಕ್ಷರಾಗಿದ್ದ ಡಿ.ಮಂಜುನಾಥ್ ಮಾಧ್ಯಮ ಕುರಿತು ಮಾತನಾಡಲು ಗೌರಿಲಂಕೇಶ್ ಮತ್ತು ಮಲೆನಾಡಿನ ಪರಿಸರ ಕುರಿತು ಮಾತನಾಡಲು ಕಲ್ಕುಳಿ ವಿಠ್ಠಲ ಹೆಗಡೆಯನ್ನು ಆಹ್ವಾನಿಸಿದ್ದಲ್ಲದೆ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಿದರು. ಇದನ್ನು ನೋಡಿ ಸಿಟ್ಟಾದ ಶಿವಮೊಗ್ಗ ಬಿಜೆಪಿ ಕಾರ್ಯಕರ್ತರು ಅಂದಿನ ಉಪಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಚಾಡಿ ಹೇಳಿ ಈ ಇಬ್ಬರೂ ಬರಕೂಡದೆಂದು ಹಠ ಹಿಡಿದರು. ಯಡಿಯೂರಪ್ಪನವರು ಡಿ.ಮಂಜುನಾಥ್‌ಗೆ ಹೇಳಿದಾಗ ಅವರು ಚಂಪಾರನ್ನು ಸಂಪರ್ಕಿಸಿ ಗೌರಿ ಮತ್ತು ವಿಠ್ಠಲ ಹೆಗಡೆ ಬಗ್ಗೆ ಬಿಜೆಪಿಯವರು ತೆಗೆದಿರುವ ತಕರಾರಿನ ವಿಷಯ ತಿಳಿಸಿದರು. ಅದಕ್ಕೆ ಚಂಪಾ ’ಏ ಅಂಗಾಗುವುದಿಲ್ಲರಿ, ಸಾಹಿತ್ಯ ಪರಿಷತ್ ಸ್ವಾಯತ್ತ ಸಂಸ್ಥೆ ಯಾರನ್ನು ಕರಿಬೇಕು ಕರಿಬಾರ್ದು ಅನ್ನದು ನಮಗೆ ಸೇರಿದ್ದು, ಒಂದು ವೇಳೆ ಅವರು ಹಠ ಹಿಡಿದರಪ್ಪ ಅಂದ್ರೆ ನಾವೇ ಸಾಹಿತ್ಯ ಸಮ್ಮೇಳನ ಮುಂದಕಾಕ್ತಿವಿ. ಗೌರಿ, ವಿಠ್ಠಲ ಹೆಗಡೆ ಬರಬಾರ್ದು ಅನ್ನುವುದಕ್ಕೆ ಇವುಂರ್‍ಯಾರು’ ಎಂದರು ಅಲ್ಲಿಗೆ ಬಿಜೆಪಿಗಳು ಸುಮ್ಮನಾದರು.

ಗೌರಿ ಬರುವ ದಿವಸ ಆಕೆಯ ಮೇಲೆ ದಾಳಿ ನಡೆಯಬಹುದೆಂದು ನಾನು ಮಿಳ್ಳಘಟ್ಟದ ರೇಣುಕಮ್ಮ, ರಾಧಮ್ಮ, ಜಾನಕಿ, ಗೌರಮ್ಮ ಇವರನ್ನೆಲ್ಲಾ ಗೌರಿಯ ಸುತ್ತ ಇದ್ದು ಕಾಯಲು ಕೇಳಿಕೊಂಡೆ. ಆಗ ರೇಣುಕಮ್ಮ ಎಂಬ ದಿಟ್ಟ ಮಹಿಳೆ ’ನೀನೇನು ಹೆದರಬೇಡ ಬುಡಣ್ಣ ಅವುನ್ಯಾವನು ಬತ್ತನೋ ನೋಡ್ತಿನಿ’ ಎನ್ನುತ್ತಾ ಬಂದು ಗೌರಿಗೆ ಬೆಂಗಾವಲಾದರು.

ಕುವೆಂಪು ರಂಗಮಂದಿರದಲ್ಲಿ ಪೊಲೀಸರ ರಕ್ಷಣೆಯಲ್ಲಿ ಗೌರಿ ಮಾತನಾಡಿದರು. ನಂತರ ಅವರ ಬೆಂಗಾವಲಿನಲ್ಲೇ ತರೀಕೆರೆವರೆಗೂ ಹೋದರು. ಇದೆಲ್ಲ ಗೌರಿಗೆ ಹೆಮ್ಮೆಯ ಸಂಗತಿಯಾಗಿತ್ತು.
ಆದರೆ ಕಲ್ಕುಳಿ ವಿಠ್ಠಲ ಹೆಗಡೆ ಭಾಷಣ ಮಾಡುವಾಗ ಯಾರೋ ವೇದಿಕೆಗೆ ಓಡಿ ಬರಲು ಯತ್ನಿಸಿದ. ಡಿ.ವೈ.ಎಸ್.ಪಿ ಚಂದ್ರಶೇಖರ್ ಸಮಯ ಪ್ರಜ್ಞೆ ಮೆರೆದು ಆಗಬಹುದಿದ್ದ ಕಹಿ ಘಟನೆಗೆ ತಡೆಹಾಕಿದರು. ಕಾಗೋಡು ತಿಮ್ಮಪ್ಪನವರೂ ಮೂಲಭೂತವಾದಿಗಳ ನಡವಳಿಕೆಯನ್ನು ಖಂಡಿಸಿದರು. ಚಂಪಾರ ದಿಟ್ಟ ನಡವಳಿಕೆಯಿಂದ ಸಾಹಿತ್ಯ ಪರಿಷತ್‌ನ ಪವರ್ರು ಸಾಮಾನ್ಯರ ಅರಿವಿಗೆ ಬಂತು.

ಇದನ್ನು ಶೃಂಗೇರಿಯಲ್ಲಿ 2020ರಲ್ಲಿ ನಡೆದ ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ವಿಠ್ಠಲ ಹೆಗಡೆ ಅವರು ಆಯ್ಕೆಯಾದಾಗ ನಡೆದ ಘಟನೆಗಳಿಗೆ ತುಲನೆ ಮಾಡಿ ನೋಡಬೇಕಿದೆ. ಇದಕ್ಕೆ ಅಡ್ಡಿಪಡಿಸಲು ಮುಂದಾದ ಸಿ.ಟಿ ರವಿ ಮತ್ತು ಇತರ ಬಿಜೆಪಿ ಕಾರ್ಯಕರ್ತರು, ಅಂದಿನ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನುಬಳಿಗಾರ್‌ಗೆ ಒತ್ತಡ ತಂದು ಹಣ ಬಿಡುಗಡೆಯಾಗದಂತೆ ಮಾಡಿದ್ದಲ್ಲದೆ, ಒಂದಿಷ್ಟು ಗಲಭೆಕೋರ ರನ್ನು ಕಳಿಸಿ ಸಾಹಿತ್ಯ ಸಮ್ಮೇಳನಕ್ಕೆ ಅಡ್ಡಿಪಡಿಸಿ ತಡೆದರು. ಇದಕ್ಕೆ ಸಾಹಿತ್ಯ ಪರಿಷತ್‌ನಿಂದ ಸರಿಯಾದ ಸ್ಪಷ್ಟೀಕರಣ ಕೂಡ ಬರಲಿಲ್ಲ. ಇದು ಕನ್ನಡ ಸಾಹಿತ್ಯ ಪರಿಷತ್ತಿನ ಇತಿಹಾಸದಲ್ಲಿ ದುರಂತ ಕಹಿ ಘಟನೆಯಾಗಿ ದಾಖಲಾಗಿಹೋಯಿತು. ಇದಕ್ಕೆ ಮುಖ್ಯ ಕಾರಣರಾದ ಮನುಬಳಿಗಾರ್ ಮತ್ತು ಸಿ.ಟಿ ರವಿ ಅವರುಗಳನ್ನು ಸಾಹಿತ್ಯ ಲೋಕ ಎಂದಿಗೂ ಕ್ಷಮಿಸುವುದಿಲ್ಲ.

ಸ್ವಾಯತ್ತ ಸಂಸ್ಥೆಗಳು ತಮ್ಮ ಸ್ವತಂತ್ರವನ್ನು ಕಳೆದುಕೊಂಡು ಆಳುವ ಪಕ್ಷಗಳ, ಪ್ರಭುತ್ವಗಳ ಕೈಗೊಂಬೆಗಳಾಗಿ ಕುಣಿಯುತ್ತಿರುವ ಈ ಸಂದರ್ಭದಲ್ಲಿ ಚಂಪಾ ಮತ್ತು ಅವರ ದಿಟ್ಟ ನಡೆಗಳು ಮತ್ತೆಮತ್ತೆ ನೆನಪಾಗುತ್ತವೆ.


ಇದನ್ನೂ ಓದಿ: ಕಾಫಿ ವಲಯದ ಸಾಂಸ್ಕೃತಿಕ ಲೋಕ ಹೀಗಿತ್ತು: ಪ್ರಸಾದ್ ರಕ್ಷಿದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...