Homeಮುಖಪುಟಚಂಪಾರೊಂದಿಗೆ ಹೆಜ್ಜೆ ಹಾಕಿದ ನೆನಪು..

ಚಂಪಾರೊಂದಿಗೆ ಹೆಜ್ಜೆ ಹಾಕಿದ ನೆನಪು..

- Advertisement -
- Advertisement -

1979 ಮಾರ್ಚ್ 10ರಂದು ಬೆಂಗಳೂರಿನ ದೇವಾಂಗ ಸಂಘದಲ್ಲಿ ನಡೆದ ಮೊದಲನೇ ಬಂಡಾಯ ಸಾಹಿತ್ಯ ಸಮ್ಮೇಳನಕ್ಕೆ ಕೋಲಾರದಿಂದ ನಾನು, ಕೋಟಿಗಾನಹಳ್ಳಿ ರಾಮಯ್ಯ, ಲಕ್ಷ್ಮೀಪತಿ ಕೋಲಾರ, ಎಚ್ಚೆನ್, ಸೋಮಶೇಖರ ಗೌಡ, ಹ.ಸೋಮಶೇಖರ್ ಬಂದಿದ್ದೆವು. ನಾವು ಸತತವಾಗಿ ಓದುತಿದ್ದ ’ಸಂಕ್ರಮಣ’ ಪತ್ರಿಕೆಯ ಮೂಲಕ ನಮಗೆ ಅಪಾರ ಮೆಚ್ಚುಗೆಯಾಗಿದ್ದ ಚಂಪಾರನ್ನು ಅಂದೇ ಮೊದಲು ನೋಡಿದ್ದು. ಅವರ ಮೊನಚು, ವ್ಯಂಗ್ಯಗಳಿಂದಾಗಿ ಮಿಕ್ಕೆಲ್ಲ ಸಾಹಿತಿಗಳಿಗಿಂತಲೂ ಚಂಪಾ ನಮಗೆ ಹೆಚ್ಚು ಹತ್ತಿರವಾಗಿದ್ದರು. ಮಿಕ್ಕವರ ಸಾಹಿತ್ಯ ಅದರ ಸಂಕೀರ್ಣತೆಯಿಂದಾಗಿ ಆ ಹದಿಹರೆಯದ ವಯಸ್ಸಿನಲ್ಲಿ ನಮಗೆ ಅಷ್ಟೇನು ಅರ್ಥವಾಗುತ್ತಿರಲಿಲ್ಲ. ಅವರು ಬಂಡಾಯ ಸಮ್ಮೇಳನದ ಸಭಾಂಗಣದ ಮುಂದೆ, ಅದಾಗ ತಾನೇ ಬರೆದುತಂದಿದ್ದ ’ನಳಕವಿಯ ಮಸ್ತಕಾಭಿಷೇಕ’ ನಾಟಕದ ಪೋಸ್ಟರ್‌ಅನ್ನು ಕಂಬಕ್ಕೆ ಕಟ್ಟುತ್ತಿದ್ದರು. ದೂರದಿಂದ ಚಂಪಾ ಅವರನ್ನು ನಮಗೆ ಎಟುಕಲಾರದ ಬಹಳ ದೊಡ್ಡ ಸಾಹಿತಿ ಎಂದು ಊಹಿಸಿಕೊಂಡಿದ್ದೆವು, ಅಲ್ಲಿ ಅವರ ಸರಳತೆಯನ್ನು ಕಂಡು ದಂಗಾದೆವು!

ನಂತರದ ಬಂಡಾಯ ಸಾಹಿತ್ಯದ ಒಡನಾಟದಲ್ಲಿ ಚಂಪಾ ತೀರಾ ಹತ್ತಿರವಾಗಿಬಿಟ್ಟರು. ನಾನು ’ಲಂಕೇಶ್ ಪತ್ರಿಕೆ’ಯಲ್ಲಿ ಬರೆಯಲು ಆರಂಭಿಸಿದ ಮೇಲಂತೂ ತೀರಾ ಆಪ್ತರಾಗಿ, ಅವರು ಲಂಕೇಶರ ಜತೆ ಜಗಳವಾಡಿಕೊಂಡು ಹೊರಹೋದ ಮೇಲೂ ಅವರ ನನ್ನ ಬಾಂಧವ್ಯ ಕಡಿಮೆಯಾಗಲಿಲ್ಲ. ಲಂಕೇಶರು ನಿಧನರಾದ ನಂತರ, ನಾವೆಲ್ಲ ’ಅಗ್ನಿ’ ಪತ್ರಿಕೆಯಲ್ಲಿ ಬರೆಯಲು ಆರಂಭಿಸಿದ ಮೇಲೆ ಅಗ್ನಿ ಶ್ರೀಧರ್ ಮತ್ತಿತರ ಸಾಹಿತಿ ಹೋರಾಟಗಾರರೊಂದಿಗೆ ಅನೇಕ ಪ್ರತಿಭಟನೆ, ಹೋರಾಟಗಳನ್ನು ಹಮ್ಮಿಕೊಂಡೆವು, ಅದರಲ್ಲಿ ಪ್ರಮುಖ ಪಾತ್ರ ಚಂಪಾ ಅವರದೇ ಆಗಿತ್ತು.

ರಾಜಕುಮಾರ್ ಅವರನ್ನು ವೀರಪ್ಪನ್ ಕಿಡ್ನಾಪ್ ಮಾಡಿದಾಗ ಈ ಸಂಬಂಧ ನೆಡುಮಾರನ್ ಅವರನ್ನು ನೋಡಲು ಅಗ್ನಿ ಶ್ರೀಧರ್ ನೇತೃತ್ವದಲ್ಲಿ ದೇವನೂರು ಮಹದೇವ, ಅಗ್ರಹಾರ ಕೃಷ್ಣಮೂರ್ತಿ, ಎಲ್.ಹನುಮಂತಯ್ಯ ಮುಂತಾಗಿ ನಾವೆಲ್ಲ ಬಸ್ ಮಾಡಿಕೊಂಡು ಚೆನೈಗೆ ಹೋಗಿದ್ದೆವು. ಅದಕ್ಕೂ ಕ್ಯಾಪ್ಟನ್ ಚಂಪಾ ಅವರೇ ಆಗಿದ್ದರು.

ಅಮೆರಿಕದ ಬಾಲ್ಟಿಮೋರ್‌ನಲ್ಲಿ ನಡೆದ ’ಅಕ್ಕ’ ಸಮ್ಮೇಳನಕ್ಕೆ ಅನೇಕ ಸಾಹಿತಿ ಕಲಾವಿದರೊಂದಿಗೆ ಚಂಪಾ, ಜನ್ನಿ, ನಾನು ಕೂಡ ಹೋಗಿದ್ದೆವು. ಅಲ್ಲೇ ನೆಲೆಸಿರುವ ಸಿರೂರ್ ಹನುಮಂತ ರೆಡ್ಡಿ ನಮ್ಮೊಂದಿಗೆ ಸೇರಿಕೊಂಡರು. ಗೋಷ್ಠಿಯೊಂದರಲ್ಲಿ ಎಸ್.ಎಲ್.ಬೈರಪ್ಪನವರನ್ನು ಹಾಡಿ ಹೊಗಳುವ ಭಜನಾ ಕಾರ್ಯಕ್ರಮವೊಂದು ನಡೆಯುತಿತ್ತು. “ಸರ್.. ನಿಮ್ಮ ’ಪರ್ವ’ ಕಾದಂಬರಿ ಮಹಾಭಾರತದ ಮರುಸೃಷ್ಟಿ.. ಕನ್ನಡದಲ್ಲಿ ಇಂತಹದೊಂದು ಬರುವುದು ಅಪರೂಪ.. ಇದೇ ರೀತಿ ರಾಮಾಯಣದ ಮರುಸೃಷ್ಟಿ ಮಾಡಿ ಸರ್.. ನಿಮ್ಮಿಂದ ಮಾತ್ರ ಇದು ಸಾದ್ಯ..” ಎಂದು ಒಬ್ಬ ವಟು ಹೇಳಿದಾಕ್ಷಣ ಬೇರೆಲ್ಲಾ ವಟುಗಳು ’ವಟವಟ’ ಎನ್ನತೊಡಗಿದವು. ಬೈರಪ್ಪನವರು “ರಾಮಾಯಣ ಮರುಸೃಷ್ಟಿ ಸಾಧವಾಗಲಾರದು..” ಎನ್ನುತಿದ್ದಂತೆ ಹಿಂದೆ ನಮ್ಮೊಂದಿಗೆ ಕುಂತಿದ್ದ ಚಂಪಾ “ನೀವ್ಯಾರೂ ಕುವೆಂಪು ಅವರ ರಾಮಾಯಣ ದರ್ಶನಂ ಓದಿಲ್ಲೇನ್ರಿ.. ಅದು ರಾಮಾಯಣದ ಮರುಸೃಷ್ಟಿ ಅಲ್ಲೇನು” ಎನ್ನುತಿದ್ದಂತೆ ಬೈರಪ್ಪನವರ ವಂದಿಮಾಗಧ ವಟುಗಳು ಮೌನವಾದರು. ನಾವು ಆ ಭಜನಾ ಕಾರ್ಯಕ್ರಮವನ್ನು ಪ್ರತಿಭಟಿಸಿ ಹೊರಬಂದೆವು. ಅಂದು ಇಡೀ ರಾತ್ರಿ ತೀರ್ಥಸೇವನೆ ಮಾಡುತ್ತಾ ಚಂಪಾ ಅವರ ಜೋಕುಗಳಿಗೆ ಮನಸಾರೆ ನಕ್ಕೆವು.

ನಂತರದ ದಿನಗಳಲ್ಲಿ ಚಂಪಾ ಅವರೊಂದಿಗೆ ಅನೇಕ ಟಿ.ವಿ. ಡಿಬೇಟ್‌ಗಳಲ್ಲಿ ಭಾಗವಹಿಸುತ್ತಿದ್ದೆ.
ನಾವಿಬ್ಬರೂ ಸೇರಿದರಂತೂ ಚಡ್ಡಿಗಳನ್ನು ಹಣ್ಣುಗಾಯಿ ನೀರುಗಾಯಿ ಮಾಡುತ್ತಿದ್ದೆವು. ’ಲಿಂಗಾಯತ ಧರ್ಮ’ದ ಹೋರಾಟದಲ್ಲೂ ಇಬ್ಬರೂ ಜತೆಜತೆಯಾಗಿ ಅನೇಕ ಸಭೆಗಳಲ್ಲಿ ಪಾಲ್ಗೊಂಡೆವು. ಚಂಪಾ
ಕುರಿತು ಮಾತಾಡಲು ಬರೆಯಲು ಇನ್ನೂ ಸಾಕಷ್ಟಿದೆ, ಮುಂದೆ ಬರೆಯುತ್ತೇನೆ. ಕವಿ, ನಾಟಕಕಾರ, ಹೋರಾಟಗಾರರಾದ ಚಂಪಾ ನಮ್ಮಂತವರ ಸಾಕ್ಷಿಪ್ರಜ್ಞೆಯಾಗಿದ್ದರು. ಎಂದೂ ಎಲ್ಲೂ ರಾಜಿಯಾಗದ ತಮ್ಮ ಸಾಹಿತ್ಯ ಮತ್ತು ಹೋರಾಟಗಳಿಂದಾಗಿ ಸದಾ ಜೀವಂತವಾಗಿದ್ದ ಚಂಪಾರಿಗೆ ಸಾವಿಲ್ಲ, ಇನ್ನು ಮುಂದೆ ನಡೆಯುವ ಹೋರಾಟಗಳಲ್ಲೂ ಅವರು ನಮ್ಮೊಂದಿಗೆ-ನಮ್ಮೊಳಗೆ ಜೀವಂತವಾಗಿ ಇರುತ್ತಾರೆ.

ಸಿ.ಎಸ್.ದ್ವಾರಕಾನಾಥ್

ಸಿ.ಎಸ್.ದ್ವಾರಕಾನಾಥ್
ವೃತ್ತಿಯಿಂದ ವಕೀಲರು. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರು. ಲಂಕೇಶ್ ಪತ್ರಿಕೆಯ ಒಡನಾಡಿಯಾಗಿದ್ದ ದ್ವಾರಕಾನಾಥ್, ’ಮೂಕ ನಾಯಕ’, ’ಗಾಂಧಿಮಟ್ಟಿದ ನಾಡಿನಲ್ಲಿ’, ’ಸಾಕ್ರೆಟಿಸ್ ಮತ್ತಿತರ ಕಥೆಗಳು’ ಕೃತಿಗಳನ್ನು ರಚಿಸಿದ್ದಾರೆ.


ಇದನ್ನೂ ಓದಿ: ಓಶೋ ಕಂಡಂತೆ ವಿವೇಕಾನಂದರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...