Homeಮುಖಪುಟಚಂಪಾರೊಂದಿಗೆ ಹೆಜ್ಜೆ ಹಾಕಿದ ನೆನಪು..

ಚಂಪಾರೊಂದಿಗೆ ಹೆಜ್ಜೆ ಹಾಕಿದ ನೆನಪು..

- Advertisement -
- Advertisement -

1979 ಮಾರ್ಚ್ 10ರಂದು ಬೆಂಗಳೂರಿನ ದೇವಾಂಗ ಸಂಘದಲ್ಲಿ ನಡೆದ ಮೊದಲನೇ ಬಂಡಾಯ ಸಾಹಿತ್ಯ ಸಮ್ಮೇಳನಕ್ಕೆ ಕೋಲಾರದಿಂದ ನಾನು, ಕೋಟಿಗಾನಹಳ್ಳಿ ರಾಮಯ್ಯ, ಲಕ್ಷ್ಮೀಪತಿ ಕೋಲಾರ, ಎಚ್ಚೆನ್, ಸೋಮಶೇಖರ ಗೌಡ, ಹ.ಸೋಮಶೇಖರ್ ಬಂದಿದ್ದೆವು. ನಾವು ಸತತವಾಗಿ ಓದುತಿದ್ದ ’ಸಂಕ್ರಮಣ’ ಪತ್ರಿಕೆಯ ಮೂಲಕ ನಮಗೆ ಅಪಾರ ಮೆಚ್ಚುಗೆಯಾಗಿದ್ದ ಚಂಪಾರನ್ನು ಅಂದೇ ಮೊದಲು ನೋಡಿದ್ದು. ಅವರ ಮೊನಚು, ವ್ಯಂಗ್ಯಗಳಿಂದಾಗಿ ಮಿಕ್ಕೆಲ್ಲ ಸಾಹಿತಿಗಳಿಗಿಂತಲೂ ಚಂಪಾ ನಮಗೆ ಹೆಚ್ಚು ಹತ್ತಿರವಾಗಿದ್ದರು. ಮಿಕ್ಕವರ ಸಾಹಿತ್ಯ ಅದರ ಸಂಕೀರ್ಣತೆಯಿಂದಾಗಿ ಆ ಹದಿಹರೆಯದ ವಯಸ್ಸಿನಲ್ಲಿ ನಮಗೆ ಅಷ್ಟೇನು ಅರ್ಥವಾಗುತ್ತಿರಲಿಲ್ಲ. ಅವರು ಬಂಡಾಯ ಸಮ್ಮೇಳನದ ಸಭಾಂಗಣದ ಮುಂದೆ, ಅದಾಗ ತಾನೇ ಬರೆದುತಂದಿದ್ದ ’ನಳಕವಿಯ ಮಸ್ತಕಾಭಿಷೇಕ’ ನಾಟಕದ ಪೋಸ್ಟರ್‌ಅನ್ನು ಕಂಬಕ್ಕೆ ಕಟ್ಟುತ್ತಿದ್ದರು. ದೂರದಿಂದ ಚಂಪಾ ಅವರನ್ನು ನಮಗೆ ಎಟುಕಲಾರದ ಬಹಳ ದೊಡ್ಡ ಸಾಹಿತಿ ಎಂದು ಊಹಿಸಿಕೊಂಡಿದ್ದೆವು, ಅಲ್ಲಿ ಅವರ ಸರಳತೆಯನ್ನು ಕಂಡು ದಂಗಾದೆವು!

ನಂತರದ ಬಂಡಾಯ ಸಾಹಿತ್ಯದ ಒಡನಾಟದಲ್ಲಿ ಚಂಪಾ ತೀರಾ ಹತ್ತಿರವಾಗಿಬಿಟ್ಟರು. ನಾನು ’ಲಂಕೇಶ್ ಪತ್ರಿಕೆ’ಯಲ್ಲಿ ಬರೆಯಲು ಆರಂಭಿಸಿದ ಮೇಲಂತೂ ತೀರಾ ಆಪ್ತರಾಗಿ, ಅವರು ಲಂಕೇಶರ ಜತೆ ಜಗಳವಾಡಿಕೊಂಡು ಹೊರಹೋದ ಮೇಲೂ ಅವರ ನನ್ನ ಬಾಂಧವ್ಯ ಕಡಿಮೆಯಾಗಲಿಲ್ಲ. ಲಂಕೇಶರು ನಿಧನರಾದ ನಂತರ, ನಾವೆಲ್ಲ ’ಅಗ್ನಿ’ ಪತ್ರಿಕೆಯಲ್ಲಿ ಬರೆಯಲು ಆರಂಭಿಸಿದ ಮೇಲೆ ಅಗ್ನಿ ಶ್ರೀಧರ್ ಮತ್ತಿತರ ಸಾಹಿತಿ ಹೋರಾಟಗಾರರೊಂದಿಗೆ ಅನೇಕ ಪ್ರತಿಭಟನೆ, ಹೋರಾಟಗಳನ್ನು ಹಮ್ಮಿಕೊಂಡೆವು, ಅದರಲ್ಲಿ ಪ್ರಮುಖ ಪಾತ್ರ ಚಂಪಾ ಅವರದೇ ಆಗಿತ್ತು.

ರಾಜಕುಮಾರ್ ಅವರನ್ನು ವೀರಪ್ಪನ್ ಕಿಡ್ನಾಪ್ ಮಾಡಿದಾಗ ಈ ಸಂಬಂಧ ನೆಡುಮಾರನ್ ಅವರನ್ನು ನೋಡಲು ಅಗ್ನಿ ಶ್ರೀಧರ್ ನೇತೃತ್ವದಲ್ಲಿ ದೇವನೂರು ಮಹದೇವ, ಅಗ್ರಹಾರ ಕೃಷ್ಣಮೂರ್ತಿ, ಎಲ್.ಹನುಮಂತಯ್ಯ ಮುಂತಾಗಿ ನಾವೆಲ್ಲ ಬಸ್ ಮಾಡಿಕೊಂಡು ಚೆನೈಗೆ ಹೋಗಿದ್ದೆವು. ಅದಕ್ಕೂ ಕ್ಯಾಪ್ಟನ್ ಚಂಪಾ ಅವರೇ ಆಗಿದ್ದರು.

ಅಮೆರಿಕದ ಬಾಲ್ಟಿಮೋರ್‌ನಲ್ಲಿ ನಡೆದ ’ಅಕ್ಕ’ ಸಮ್ಮೇಳನಕ್ಕೆ ಅನೇಕ ಸಾಹಿತಿ ಕಲಾವಿದರೊಂದಿಗೆ ಚಂಪಾ, ಜನ್ನಿ, ನಾನು ಕೂಡ ಹೋಗಿದ್ದೆವು. ಅಲ್ಲೇ ನೆಲೆಸಿರುವ ಸಿರೂರ್ ಹನುಮಂತ ರೆಡ್ಡಿ ನಮ್ಮೊಂದಿಗೆ ಸೇರಿಕೊಂಡರು. ಗೋಷ್ಠಿಯೊಂದರಲ್ಲಿ ಎಸ್.ಎಲ್.ಬೈರಪ್ಪನವರನ್ನು ಹಾಡಿ ಹೊಗಳುವ ಭಜನಾ ಕಾರ್ಯಕ್ರಮವೊಂದು ನಡೆಯುತಿತ್ತು. “ಸರ್.. ನಿಮ್ಮ ’ಪರ್ವ’ ಕಾದಂಬರಿ ಮಹಾಭಾರತದ ಮರುಸೃಷ್ಟಿ.. ಕನ್ನಡದಲ್ಲಿ ಇಂತಹದೊಂದು ಬರುವುದು ಅಪರೂಪ.. ಇದೇ ರೀತಿ ರಾಮಾಯಣದ ಮರುಸೃಷ್ಟಿ ಮಾಡಿ ಸರ್.. ನಿಮ್ಮಿಂದ ಮಾತ್ರ ಇದು ಸಾದ್ಯ..” ಎಂದು ಒಬ್ಬ ವಟು ಹೇಳಿದಾಕ್ಷಣ ಬೇರೆಲ್ಲಾ ವಟುಗಳು ’ವಟವಟ’ ಎನ್ನತೊಡಗಿದವು. ಬೈರಪ್ಪನವರು “ರಾಮಾಯಣ ಮರುಸೃಷ್ಟಿ ಸಾಧವಾಗಲಾರದು..” ಎನ್ನುತಿದ್ದಂತೆ ಹಿಂದೆ ನಮ್ಮೊಂದಿಗೆ ಕುಂತಿದ್ದ ಚಂಪಾ “ನೀವ್ಯಾರೂ ಕುವೆಂಪು ಅವರ ರಾಮಾಯಣ ದರ್ಶನಂ ಓದಿಲ್ಲೇನ್ರಿ.. ಅದು ರಾಮಾಯಣದ ಮರುಸೃಷ್ಟಿ ಅಲ್ಲೇನು” ಎನ್ನುತಿದ್ದಂತೆ ಬೈರಪ್ಪನವರ ವಂದಿಮಾಗಧ ವಟುಗಳು ಮೌನವಾದರು. ನಾವು ಆ ಭಜನಾ ಕಾರ್ಯಕ್ರಮವನ್ನು ಪ್ರತಿಭಟಿಸಿ ಹೊರಬಂದೆವು. ಅಂದು ಇಡೀ ರಾತ್ರಿ ತೀರ್ಥಸೇವನೆ ಮಾಡುತ್ತಾ ಚಂಪಾ ಅವರ ಜೋಕುಗಳಿಗೆ ಮನಸಾರೆ ನಕ್ಕೆವು.

ನಂತರದ ದಿನಗಳಲ್ಲಿ ಚಂಪಾ ಅವರೊಂದಿಗೆ ಅನೇಕ ಟಿ.ವಿ. ಡಿಬೇಟ್‌ಗಳಲ್ಲಿ ಭಾಗವಹಿಸುತ್ತಿದ್ದೆ.
ನಾವಿಬ್ಬರೂ ಸೇರಿದರಂತೂ ಚಡ್ಡಿಗಳನ್ನು ಹಣ್ಣುಗಾಯಿ ನೀರುಗಾಯಿ ಮಾಡುತ್ತಿದ್ದೆವು. ’ಲಿಂಗಾಯತ ಧರ್ಮ’ದ ಹೋರಾಟದಲ್ಲೂ ಇಬ್ಬರೂ ಜತೆಜತೆಯಾಗಿ ಅನೇಕ ಸಭೆಗಳಲ್ಲಿ ಪಾಲ್ಗೊಂಡೆವು. ಚಂಪಾ
ಕುರಿತು ಮಾತಾಡಲು ಬರೆಯಲು ಇನ್ನೂ ಸಾಕಷ್ಟಿದೆ, ಮುಂದೆ ಬರೆಯುತ್ತೇನೆ. ಕವಿ, ನಾಟಕಕಾರ, ಹೋರಾಟಗಾರರಾದ ಚಂಪಾ ನಮ್ಮಂತವರ ಸಾಕ್ಷಿಪ್ರಜ್ಞೆಯಾಗಿದ್ದರು. ಎಂದೂ ಎಲ್ಲೂ ರಾಜಿಯಾಗದ ತಮ್ಮ ಸಾಹಿತ್ಯ ಮತ್ತು ಹೋರಾಟಗಳಿಂದಾಗಿ ಸದಾ ಜೀವಂತವಾಗಿದ್ದ ಚಂಪಾರಿಗೆ ಸಾವಿಲ್ಲ, ಇನ್ನು ಮುಂದೆ ನಡೆಯುವ ಹೋರಾಟಗಳಲ್ಲೂ ಅವರು ನಮ್ಮೊಂದಿಗೆ-ನಮ್ಮೊಳಗೆ ಜೀವಂತವಾಗಿ ಇರುತ್ತಾರೆ.

ಸಿ.ಎಸ್.ದ್ವಾರಕಾನಾಥ್

ಸಿ.ಎಸ್.ದ್ವಾರಕಾನಾಥ್
ವೃತ್ತಿಯಿಂದ ವಕೀಲರು. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರು. ಲಂಕೇಶ್ ಪತ್ರಿಕೆಯ ಒಡನಾಡಿಯಾಗಿದ್ದ ದ್ವಾರಕಾನಾಥ್, ’ಮೂಕ ನಾಯಕ’, ’ಗಾಂಧಿಮಟ್ಟಿದ ನಾಡಿನಲ್ಲಿ’, ’ಸಾಕ್ರೆಟಿಸ್ ಮತ್ತಿತರ ಕಥೆಗಳು’ ಕೃತಿಗಳನ್ನು ರಚಿಸಿದ್ದಾರೆ.


ಇದನ್ನೂ ಓದಿ: ಓಶೋ ಕಂಡಂತೆ ವಿವೇಕಾನಂದರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...