Homeಅಂಕಣಗಳುಮಾರಣಹೋಮದ ಪೂರ್ವ ತಯಾರಿ!

ಮಾರಣಹೋಮದ ಪೂರ್ವ ತಯಾರಿ!

- Advertisement -
- Advertisement -

ಸ್ತ್ರಿದ್ವೇಷ ಮತ್ತು ಧರ್ಮಾಂಧತೆ ಈ ನೆಲಕ್ಕೆ ಹೊಸ ಆವಿಷ್ಕಾರಗಳೇನೂ ಅಲ್ಲ. ಆದರೆ ’ಬೇಟೀ ಬಚಾವೊ, ಬೇಟಿ ಪಢಾವೋ’ (ಮಗಳನ್ನು ಕಾಪಾಡಿರಿ, ಆಕೆಗೆ ಅಕ್ಷರ ಕಲಿಸಿರಿ) ಎಂಬುದು ಖುದ್ದು ಪ್ರಧಾನಮಂತ್ರಿಯವರೇ ವರ್ಷಗಳ ಹಿಂದೆ ನೀಡಿದ ಘೋಷಣೆ. ಎಲ್ಲಿ ನಾರಿಯರು ಪೂಜಿಸಲ್ಪಡುವರೋ ಅಲ್ಲಿ ದೇವಾನುದೇವತೆಗಳೂ ರಮಿಸುವರು ಎಂದು ಅಡಿಗಡಿಗೆ ಹೇಳಿಕೊಳ್ಳಲಾಗುತ್ತದೆ. ಮುಸ್ಲಿಮ್ ನಾರಿಯರು, ದಲಿತ ದಮನಿತ ಆದಿವಾಸಿ ನಾರಿಯರು, ಕ್ರೈಸ್ತ ನಾರಿಯರು, ಕಡೆಗೆ ಉಗ್ರ ಹಿಂದುತ್ವವನ್ನು ಒಪ್ಪದಿರುವ ಹಿಂದೂ ನಾರಿಯರು ನಾರಿಯರೇ ಅಲ್ಲವೇ? ಅವರನ್ನು ಹೀನಾಮಾನ ನಿಂದಿಸಲುಬಹುದೇ? ಮುಸಲ್ಮಾನರೂ ಸೇರಿದಂತೆ ಎಲ್ಲ ದೇಶವಾಸಿಗಳ ಡಿ.ಎನ್.ಎ. ಒಂದೇ ಎಂದು ಸರಸಂಘಚಾಲಕರು ನೀಡಿದ ಹೇಳಿಕೆಗೆ ಅರ್ಥವೇನು?

ಪ್ರಧಾನಿಯಾಗಲಿ, ದೇಶದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ ಅವರೇ ಇರಲಿ, ಮುಸಲ್ಮಾನ ಹೆಣ್ಣುಮಕ್ಕಳ ಡಿಜಿಟಲ್ ಹರಾಜಿನ ಕುರಿತು ಈತನಕ ತುಟಿ ಬಿಚ್ಚಿಲ್ಲ. ಬೆಚ್ಚಿಬೀಳಿಸುವ ಆತಂಕಕಾರಿ ಅರ್ಥಗರ್ಭಿತ ಮೌನವಿದು. ಸಮ್ಮತಿಯಲ್ಲದೆ ಇನ್ನೇನೆಂದು ಅರ್ಥೈಸಬೇಕು?

ಅಲ್ಪಸಂಖ್ಯಾತರು, ಹೆಣ್ಣುಮಕ್ಕಳು, ದಲಿತ ದಮನಿತರು ಭಯದ ನೆರಳಿನಲ್ಲಿ ಬದುಕುವ ದ್ವೇಷ ರಾಜಕಾರಣದ ವಾತಾವರಣವನ್ನು ಕಳೆದ ಕೆಲವು ವರ್ಷಗಳಲ್ಲಿ ಕಟ್ಟಿ ಬೆಳೆಸಲಾಗಿದೆ. ಹೊಸ ದ್ವೇಷಗಳ ವಿಷದ ಕಳೆಗೆ ಯಥೇಚ್ಛ ನೀರು ಗೊಬ್ಬರ ನಿರ್ಭೀತಿ ನಿರ್ಲಜ್ಜೆಯನ್ನು ಎರೆಯತೊಡಗಿದೆ ಈ ವಾತಾವರಣ. ಮುಸಲ್ಮಾನರ ನರಮೇಧಕ್ಕೆ ಬಹಿರಂಗ ಕರೆ ನೀಡುವವರನ್ನು ಮುಟ್ಟಲೂ ಆಗದೆ ಅಸಹಾಯಕವಾಗಿ ಕೈಕಟ್ಟಿ ಕುಳಿತಿದೆ ಕಾನೂನು.

ಮನೆಯಲ್ಲಿ ಉಳಿದು ಮಕ್ಕಳನ್ನು ಹೆತ್ತು ಪೋಷಿಸುವ ಪಾತ್ರವನ್ನು ಮಹಿಳೆ ನಿಭಾಯಿಸಬೇಕೆಂಬ ಮಾತನ್ನು ಆರೆಸ್ಸೆಸ್ ಮುಖ್ಯಸ್ಥರು ಕೂಡ ಹೇಳುತ್ತಾರೆ. ಹಿಂದೂಗಳು ಹೆಚ್ಚು ಮಕ್ಕಳನ್ನು ಹೆರಬೇಕೆಂಬ ಕರೆಯನ್ನು ವಿಶ್ವಹಿಂದೂ ಪರಿಷತ್ ನೀಡುತ್ತಲೇ ಬಂದಿದೆ. ತೀವ್ರ ಹಿಂದುತ್ವವಾದಿ ನರಸಿಂಘಾನಂದ್ ಹೆಚ್ಚು ಮಕ್ಕಳನ್ನು ಹೆರದಿರುವ ಹಿಂದೂ ಮಹಿಳೆಯರನ್ನು ರಾಕ್ಷಸಿಯರು ಮತ್ತು ನಾಗಿಣಿಯರು ಎಂದು ಜರೆದರು. ಸಾಧು ಸಂತರು ಎರಡೆರಡು ಸಲ ಮದುವೆಯಾಗಿ ’ಶುದ್ಧ ಹಿಂದೂ ಡಿ.ಎನ್.ಎ’ ವೃದ್ಧಿಸಬೇಕು ಎಂದು ಕರೆ ನೀಡಿದರು. ಕುಣಾಲ್ ಶರ್ಮ ಎಂಬ ಈತನ ಶಿಷ್ಯನೊಬ್ಬನು ಬಡತನದ ಹಿನ್ನೆಲೆಯ ಮುಸ್ಲಿಮ್ ಹೆಣ್ಣುಮಕ್ಕಳ ಮೊಬೈಲು ಫೋನು ನಂಬರುಗಳ ಪಟ್ಟಿಯೊಂದನ್ನು ಹೊರಡಿಸಿ ಅವರನ್ನು ರೇಪ್ ಮಾಡುವಂತೆ ಹಿಂದೂ ಗಂಡಸರಿಗೆ ಕರೆ ನೀಡಿದ. ಮುಸ್ಲಿಮ್ ಹುಡುಗಿಯರ ಮದುವೆ ಮಾಡಿಕೊಂಡು ಅವರನ್ನು ಸರ್ಕಾರಿ ಆಸ್ತಿಯೆಂದು ಬಳಸಿರಿ, ಖುದ್ದು ಭೋಗಿಸಿ ಇತರರಿಗೂ ಕೊಡಿಸಿರಿ. ಆಗ ಮಾತ್ರವೇ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ (ಸರ್ವರಿಗೂ ನ್ಯಾಯ) ಸಿಕ್ಕೀತು ಎಂದು ಸಾಮಾಜಿಕ
ಜಾಲತಾಣಗಳಲ್ಲಿ ಬೊಗಳಿದ್ದ. ಒಂದನ್ನೊಂದು ಮೀರಿಸುವ ಇಂತಹದೇ ಕಾರ್ಕೋಟಕ ನಂಜಿನ ಹೇಳಿಕೆಗಳಿಂದ ಕಿಕ್ಕಿರಿದಿವೆ ಸಾಮಾಜಿಕ ಜಾಲತಾಣಗಳು.

ಇಸ್ಲಾಮ್ ಕ್ಷಿಪ್ರ ವಿಷವೆಂದೂ, ಕ್ರೈಸ್ತ ಧರ್ಮ ನಿಧಾನ ವಿಷವೆಂದೂ ಎರಡನ್ನೂ ಇಳೆಯಿಂದಲೇ ಅಳಿಸಿಹಾಕಬೇಕೆಂದೂ, ತೀವ್ರ ಹಿಂದುತ್ವವಾದಿಗಳು ಪ್ರಚಾರ ಮಾಡುತ್ತಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಕಿಕ್ಕಿರಿದಿರುವ ಧರ್ಮಾಂಧ ಖಾತೆಗಳು ತಾವು ’ಕಾಲಿಫ್ಲವರ್ ಫಾರ್ಮರ್’ (ಹೂಕೋಸು ರೈತ) ಎಂಬ ಬಣ್ಣನೆ ಹೊಂದಿರುತ್ತಿದ್ದವು. ಈಗಲೂ ಇಂತಹ ಲೆಕ್ಕವಿಲ್ಲದಷ್ಟು ಖಾತೆಗಳು ಕಾಣಸಿಗುತ್ತವೆ. 1989ರ ಭಗಲ್ಪುರ ಕೋಮುಗಲಭೆಗಳಲ್ಲಿ ಒಂದು ಕೋಮಿನವರು ಮತ್ತೊಂದು ಕೋಮಿಗೆ ಸೇರಿದವರನ್ನು ಕೊಂದು ಹೊಲಗಳಲ್ಲಿ ಹುಗಿದು ಮೇಲೆ ಹೂಕೋಸು ಬೆಳೆಯಲಾಗಿತ್ತು. ಹೂಕೋಸು ಕೃಷಿಯ ಈ ಕ್ರೂರ ರೂಪಕ ಇದೀಗ ಪುನಃ ಚಾಲ್ತಿಗೆ ಬಂದಿದೆ.

ಅರವತ್ತು ಲಕ್ಷ ಯಹೂದಿಗಳ ನರಮೇಧ ಸರಣಿಗೆ ಮುನ್ನ ಜರ್ಮನಿ ಇಂತಹುದೇ ದ್ವೇಷದ ಕೃಷಿ ಜರ್ಮನಿಯಲ್ಲಿ ನಡೆದಿತ್ತು. ಶ್ರೇಷ್ಠ ಜರ್ಮನ್ ಜನಾಂಗೀಯ ಶುದ್ಧಿಯ ವ್ಯಸನದ ಬಲೆಗೆ ಸಿಲುಕಿದ್ದ ಹಿಟ್ಲರ್. ಅವನ ನಾಜೀವಾದವು ಕ್ರೌರ್ಯದ ಪರಮಾವಧಿಯನ್ನು ಮುಟ್ಟಿತ್ತು.

ಜರ್ಮನರ ಆರ್ಯಜನಾಂಗೀಯ ’ಶುದ್ಧ ಶ್ರೇಷ್ಠ ರಕ್ತ’ವನ್ನು ಯಹೂದಿಗಳ ’ಕೀಳು ರಕ್ತ’ದಿಂದ ಕಲುಷಿತವಾಗದಂತೆ ’ಸಂರಕ್ಷಿಸುವುದು’ ನಾಜೀವಾದದ ಗುರಿಯಾಗಿತ್ತು.

ಒಬ್ಬ ಮನುಷ್ಯನ ರಕ್ತ ಶ್ರೇಷ್ಠ ಅಥವಾ ಮತ್ತೊಬ್ಬನದು ಕನಿಷ್ಠ ಎಂಬ ವಾದಕ್ಕೆ ವೈಜ್ಞಾನಿಕ ಸಮರ್ಥನೆ ಇಲ್ಲ. ಆದರೆ ಹಿಟ್ಲರ್ ಅದಕ್ಕೆಲ್ಲ ಸೊಪ್ಪು ಹಾಕಲಿಲ್ಲ. ಜರ್ಮನ್ ರಕ್ತ ಹೊಂದಿರುವವರಿಗೆ ಮಾತ್ರವೇ ಜರ್ಮನ್ ನಾಗರಿಕತೆ ಮೀಸಲು. ಹೀಗಾಗಿ ಅನ್ಯ ಜನಾಂಗವಾಗಿದ್ದ ಯಹೂದಿಗಳು ಜರ್ಮನ್ ನಾಗರಿಕತೆಗೆ ಅರ್ಹರಲ್ಲ ಎಂದು ಸಾರಲಾಯಿತು. ಅವರ ನಾಗರಿಕ ಹಕ್ಕುಗಳನ್ನು ಕಿತ್ತುಕೊಳ್ಳಲಾಯಿತು. ಯಹೂದಿಗಳು ಮತ್ತು ಜರ್ಮನರ ನಡುವೆ ವಿವಾಹ ಮತ್ತು ವಿವಾಹೇತರ ಸಂಬಂಧವನ್ನು ನಿಷೇಧಿಸಲಾಯಿತು.

ಮತ ಚಲಾಯಿಸುವ ಹಕ್ಕು, ಸಾರ್ವಜನಿಕ ಸ್ಥಾನಮಾನಗಳಿಗೆ ಮತ್ತು ಚುನಾವಣೆಗಳಲ್ಲಿ ಸ್ಪರ್ಧಿಸುವ ಹಕ್ಕುಗಳನ್ನು ಯಹೂದಿಗಳಿಗೆ ನಿರಾಕರಿಸಲಾಯಿತು. ಅವರು ರಾಜ್ಯವಿಲ್ಲದ ಪ್ರಜೆಗಳಾದರು. ಪಾಸ್‌ಪೋರ್ಟುಗಳು ವೀಸಾಗಳನ್ನೂ ಅವರು ಹೊಂದುವಂತಿರಲಿಲ್ಲ. ಅಂತಿಮವಾಗಿ ಯಹೂದಿಗಳ ಮಾರಣಹೋಮಕ್ಕೆ ನಡೆಸಲಾದ ಪೂರ್ವಭಾವಿ ತಯಾರಿಯಾಗಿತ್ತು ಇದು.

ಹೆಚ್ಚುಹೆಚ್ಚು ಮಕ್ಕಳನ್ನು ಹೆರುವ ಮೂಲಕ ಶುದ್ಧ ಆರ್ಯ ಜರ್ಮನ್ ಜನಾಂಗದ ಸಂಖ್ಯೆಯನ್ನು ವೃದ್ಧಿಸಬೇಕೆಂದು ಜರ್ಮನ್ ಮಹಿಳೆಯರ ಮೇಲೆ ಅತೀವ ಒತ್ತಡ ಹೇರಲಾಯಿತು. ಸ್ತ್ರೀವಾದಿ ಆಂದೋಲನವನ್ನು ಹೀಗಳೆಯಲಾಯಿತು. ಮಹಿಳೆಯು ಕೇವಲ ಮಕ್ಕಳ ಹೆರುವ ಯಂತ್ರವಾಗಿ ಮನೆಯ ನಾಲ್ಕು ಗೋಡೆಗಳ ಉಳಿಯಬೇಕೆಂದು ನಿರೀಕ್ಷಿಸಲಾಯಿತು. ಹೆರಲು ಅಸಮರ್ಥರಾದ ಹೆಂಡತಿಯರಿಗೆ ವಿಚ್ಛೇದನ ನೀಡಿ ಯುವತಿಯರನ್ನು ವರಿಸಿ ಮಕ್ಕಳ ಹುಟ್ಟಿಸುವಂತೆ ಜರ್ಮನ್ ಪುರುಷರನ್ನು ಪ್ರೋತ್ಸಾಹಿಸಲಾಯಿತು.

ಜರ್ಮನಿಯಲ್ಲಿ ದಫನ್ ಆದದ್ದು ಹಿಟ್ಲರನ ಭೌತಿಕ ಶರೀರ ಮಾತ್ರ. ಕುಲೀನ ಹಸಿರು ರಕ್ತದ ಆರ್ಯ ಜನಾಂಗೀಯ ಮೇಲ್ಮೆಯನ್ನು ಮತ್ತೆ ಸ್ಥಾಪಿಸುವ ಅವನ ಧೋರಣೆಗಳು ದಫನಾಗಿಲ್ಲ. ಅವು ಗಾಳಿಯಲ್ಲಿ ನೀರಿನಲ್ಲಿ ತೇಲಿ ದೇಶ ದೇಶಗಳನ್ನು ಮುಟ್ಟಿವೆ. ಪ್ರಚಂಡ ನಾಯಕರ ಒಡಲುಗಳನ್ನು ಮೆದುಳುಗಳನ್ನು ಸೇರಿಹೋಗಿವೆ. ಜನಾಂಗೀಯ ಶ್ರೇಷ್ಠತೆಯ ಹುಸಿ ಹೆಮ್ಮೆಯನ್ನೂ, ಅನಾರ್ಯ ರಕ್ತದ ಮೇಲೆ ದ್ವೇಷದ ಕಿಚ್ಚನ್ನೂ ಹೊತ್ತಿಸಿ ಉರಿಸತೊಡಗಿವೆ.

“Birth, Sex and Abuse: Women`s Vioces Under Nazi Rule’’ ಎಂಬ ಹೆಸರಿನ
ಹೊತ್ತಿಗೆಯೊಂದಿದೆ. ಹೊಟ್ಟೆ ತೊಳಸಿ ಬರುವ ಭಯಾನಕ ಅತ್ಯಾಚಾರಗಳ ವಿವರಗಳಿಂದ ಅದು ತುಂಬಿಹೋಗಿದೆ. ಓದುವುದು ಕಡುಕಠಿಣ. ಡಾ.ಬೀವರ್ಲೀ ಛಾಮರ್ಸ್ ಎಂಬಾಕೆ ಈ ಪುಸ್ತಕದ ಲೇಖಕಿ.

ಯಾತನಾ ಶಿಬಿರಗಳಲ್ಲಿ ಯಹೂದಿ ಮಹಿಳೆಯರ ಮೇಲೆ ನಾಜೀಗಳು ನಡೆಸುವ ಅತ್ಯಾಚಾರಗಳನ್ನೂ, ಅಮಾನುಷ ವೈದ್ಯಕೀಯ ಪ್ರಯೋಗಗಳನ್ನೂ, ಅವರನ್ನು ಸೂಳೆಗಾರಿಕೆಗೆ ಬಳಸಿ ಕೊಲ್ಲುವುದನ್ನೂ ಇಲ್ಲಿ ದಾಖಲಿಸಲಾಗಿದೆ. ಕೌಸರ್ ಬೀಬಿಯ ಬಸಿರನ್ನು ಖಡ್ಗದಿಂದ ಬಗೆದು ಭ್ರೂಣವನ್ನು ಎತ್ತಿ ಹಿಡಿದ ಪೈಶಾಚಿಕತೆಯ ಪೂರ್ವನಿದರ್ಶನಗಳು ಇಲ್ಲಿ ಹೇರಳ.

ಕೋಮು ದಂಗೆಗಳೂ ಸೇರಿದಂತೆ ಚರಿತ್ರೆ ಮತ್ತು ವರ್ತಮಾನ ಕಾಲದ ಧಾರ್ಮಿಕ, ಜನಾಂಗೀಯ, ರಾಜಕೀಯ, ಆರ್ಥಿಕ ಹಿತಾಸಕ್ತಿಯ ಕದನಗಳು, ಯುದ್ಧಗಳಿಗೆ ಲಕ್ಷಲಕ್ಷ ಹೆಣ್ಣು ದೇಹಗಳು ಕದನ ಭೂಮಿಗಳಾಗಿ ಪರಿಣಮಿಸಿದ್ದು ನಾಚಿಕೆಗೇಡಿನ ನಿಜ. ಬುಲ್ಲೀಬಾಯಿ ಸುಲ್ಲೀಡೀಲ್ಸ್ ಹರಾಜಿನ ಅಧಮ ಕೃತ್ಯದ ಹಿಂದೆ ಈ ಬಗೆಯ ಗಂಡಾಳಿಕೆಯೂ ಹೆಡೆಯಾಡಿದೆ.

ಅಪಾಯಕಾರಿ ವ್ಯಾಧಿಯ ನಿಚ್ಚಳ ಲಕ್ಷಣಗಳು ಸಮಕಾಲೀನ ಭಾರತದಲ್ಲಿ ಭುಸುಗುಟ್ಟಿವೆ. ಸೌಹಾರ್ದ ಸಾಮರಸ್ಯದ ಬಹುಮುಖೀ ಸಂಸ್ಕೃತಿಯ ಸಾಮಾಜಿಕ ಹಂದರವನ್ನು ಛಿದ್ರಗೊಳಿಸಿ ದೇಶವನ್ನು ದುರ್ಬಲಗೊಳಿಸುವ ರೋಗದ ಚಿಹ್ನೆಗಳಿವು.

ಈ ರೋಗ ಬಡಿದಿದ್ದ ಜರ್ಮನಿಯು ಕಂಡ ನೀಚಾತಿನೀಚ ನರಮೇಧಗಳ ತಾಜಾ ಉದಾಹರಣೆ ನಮ್ಮ ಕಣ್ಣಮುಂದೆಯೇ ಇದೆ. ಹಗಲು ಕಂಡ ಈ ಭಾವಿಗೆ ರಾತ್ರಿ ಬೀಳತೊಡಗಿದೆ ಭಾರತ.


ಇದನ್ನೂ ಓದಿ: ’ಬುಲ್ಲಿ ಭಾಯ್’ – ಗುಂಪುದಾಳಿ ಮನಸ್ಥಿತಿ ವರ್ಚುವಲ್ ಸ್ಪೇಸ್‌ನೊಳಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...