Homeಮುಖಪುಟಯುಪಿ ಬಿಜೆಪಿ: ಅತ್ತ ರಾಜೀನಾಮೆ ಪರ್ವ, ಇತ್ತ ಸೀಟು ಹಂಚಿಕೆಯಲ್ಲಿ ಪಾಲು ಹೆಚ್ಚಳಕ್ಕೆ ಮಿತ್ರಪಕ್ಷಗಳ ಪಟ್ಟು

ಯುಪಿ ಬಿಜೆಪಿ: ಅತ್ತ ರಾಜೀನಾಮೆ ಪರ್ವ, ಇತ್ತ ಸೀಟು ಹಂಚಿಕೆಯಲ್ಲಿ ಪಾಲು ಹೆಚ್ಚಳಕ್ಕೆ ಮಿತ್ರಪಕ್ಷಗಳ ಪಟ್ಟು

- Advertisement -
- Advertisement -

ಉತ್ತರ ಪ್ರದೇಶದಲ್ಲಿ ರಾಜೀನಾಮೆ ಪರ್ವ ಮುಂದುವರೆದಿರುವ ಬೆನ್ನಲ್ಲೇ ಮುಂಬರುವ ವಿಧಾನಸಭಾ ಚುನಾವಣೆಯ ಸೀಟುಗಳಲ್ಲಿ ತಮ್ಮ ಪಾಲನ್ನು ಹೆಚ್ಚಿಸಲು ಬಿಜೆಪಿಯ ಮಿತ್ರಪಕ್ಷಗಳು ಪ್ರಯತ್ನಿಸುತ್ತಿವೆ.

ಉತ್ತರ ಪ್ರದೇಶದಲ್ಲಿ ಬಿಜೆಪಿ ಮಿತ್ರಪಕ್ಷಗಳಾದ ಅನುಪ್ರಿಯಾ ಪಟೇಲ್ ನೇತೃತ್ವದ ಅಪ್ನಾ ದಳ (ಎಸ್) ಮತ್ತು ಸಂಜಯ್ ನಿಶಾದ್ ನೇತೃತ್ವದ ನಿಶಾದ್ ಪಕ್ಷವು ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚಿನ ಸೀಟು ನೀಡಬೇಕು ಎಂದು ಪ್ರಸ್ತಾವನೆ ನೀಡಿವೆ.

ಪ್ರಧಾನಿ ಮೋದಿ ಸಂಪುಟದ ರಾಜ್ಯ ಸಚಿವೆ ಅನುಪ್ರಿಯಾ ಪಟೇಲ್, ಬಿಜೆಪಿ ನಾಯಕ ಸಂಜಯ್ ನಿಶಾದ್ ತಮ್ಮ ಪುತ್ರ ಸಂತ ಕಬೀರ್ ನಗರದ ಬಿಜೆಪಿ ಸಂಸದ ಪ್ರವೀಣ್ ನಿಶಾದ್ ಅವರೊಂದಿಗೆ ಬುಧವಾರ ಸಂಜೆ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ.

ಇದನ್ನೂ ಓದಿ: ಯುಪಿ ಬಿಜೆಪಿಗೆ ಮತ್ತೊಂದು ಆಘಾತ: ಮತ್ತೊಬ್ಬ ಒಬಿಸಿ ನಾಯಕ ಮುಖೇಶ್ ವರ್ಮಾ ರಾಜೀನಾಮೆ

ಸಚಿವೆ ಅನುಪ್ರಿಯಾ ಪಟೇಲ್ ಈ ಬಾರಿ ಮತ್ತೆ ಹನ್ನೆರಡು ಸ್ಥಾನಗಳಿಗೆ ಬೇಡಿಕೆ ಇಟ್ಟಿದ್ದಾರೆ. ಅವುಗಳಲ್ಲಿ ತಮ್ಮ ಪಕ್ಷದ ಪ್ರಭಾವವಿರುವ ಪೂರ್ವ ಯುಪಿಯಿಂದ ಅರ್ಧದಷ್ಟು ಮತ್ತು ಬುಂದೇಲ್‌ಖಂಡ್ ಪ್ರದೇಶಗಳಿಗೆ ನೀಡಬೇಕು ಎಂದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದರಲ್ಲಿ ಗಮನಿಸಬೇಕಾದದ್ದು, 2017 ರ ವಿಧಾನಸಭಾ ಚುನಾವಣೆಯಲ್ಲಿ ಬುಂದೇಲ್‌ಖಂಡ್ ಪ್ರದೇಶದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿತ್ತು. ಜೊತೆಗೆ 2019ರ ಲೋಕಸಭೆ ಚುನಾವಣೆಯಲ್ಲೂ ಪಕ್ಷವು ಈ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿತ್ತು.

“ಈಗ ಅಪ್ನಾ ದಳ (ಎಸ್) ಬೇಡಿಕೆಗೆ ಬಿಜೆಪಿ ಒಪ್ಪಿಗೆ ನೀಡಿದರೇ, ಈ ಬುಂದೇಲ್‌ಖಂಡ್ ಪ್ರದೇಶದಲ್ಲಿ ಇರುವ ತಮ್ಮದೆ ಹಾಲಿ ಶಾಸಕರಿಗೆ ಹೇಗೆ ಅವಕಾಶ ಕಲ್ಪಿಸುತ್ತದೆ” ಎಂದು ಹಿರಿಯ ರಾಜಕೀಯ ವಿಮರ್ಶಕ ಜೆಪಿ ಶುಕ್ಲಾ ಪ್ರಶ್ನಿಸುತ್ತಾರೆ.

ಇತ್ತ, ನಿಶಾದ್ ಪಕ್ಷ, ರಾಮ್ ದಾಸ್ ಅಠಾವಾಳೆ ನೇತೃತ್ವದ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಮತ್ತು ಜನತಾ ದಳ (ಯು) ಸೇರಿದಂತೆ ಇತರ NDA ಮಿತ್ರ ಪಕ್ಷಗಳು ಸಹ ಬಿಜೆಪಿ ಮೇಲೆ ಸೀಟು ಹಂಚಿಕೆ ವಿಚಾರವಾಗಿ ಒತ್ತಡವನ್ನು ಹೆಚ್ಚಿಸುತ್ತಿವೆ.

ಇದನ್ನೂ ಓದಿ: ಗೋವಾ BJPಗೆ ಭಾರಿ ಮುಖಭಂಗ: ಒಂದೇ ದಿನದಲ್ಲಿ ಇಬ್ಬರು ಶಾಸಕರು ರಾಜೀನಾಮೆ!

2017 ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ, ಬಿಜೆಪಿ ಅಪ್ನಾ ದಳ (ಎಸ್) ಗೆ 11 ಸ್ಥಾನಗಳನ್ನು ನೀಡಿತ್ತು. ಇವುಗಳ ಹೊರತಾಗಿ, ಅವಧ್ ಪ್ರದೇಶದಾದ್ಯಂತ ಅಪ್ನಾ ದಳವು ಸುಮಾರು ಹನ್ನೆರಡು ಸ್ಥಾನಗಳಿಗೆ ಬೇಡಿಕೆ ಇಟ್ಟಿದೆ. “ಪ್ರತಿಯೊಂದು ಪಕ್ಷವೂ ತನ್ನ ರೆಕ್ಕೆಗಳನ್ನು ಚಾಚಲು ಬಯಸುತ್ತದೆ. ನಮ್ಮ ಬೇಡಿಕೆಯನ್ನು ಬಿಜೆಪಿ ಮುಂದೆ ಇಟ್ಟಿದ್ದೇವೆ. ಈಗ ಚೆಂಡು ಅವರ ಅಂಗಳದಲ್ಲಿದೆ” ಎಂದು ಅನುಪ್ರಿಯಾ ಅವರ ಪತಿ ಮತ್ತು ಅಪ್ನಾ ದಳ (ಎಸ್) ಕಾರ್ಯಾಧ್ಯಕ್ಷ ಆಶಿಶ್ ಪಟೇಲ್ ಹೇಳಿದ್ದಾರೆ.

ಇನ್ನು ನಿಶಾದ್ ಪಕ್ಷದ ಮುಖ್ಯಸ್ಥ ಸಂಜಯ್ ನಿಶಾದ್ ಎರಡಂಕಿಯ ಸೀಟುಗಳನ್ನು ಕೇಳಿದ್ದಾರೆ. “ನಾವು ನಮ್ಮ ಬೇಡಿಕೆಯನ್ನು ಬಿಜೆಪಿಗೆ ರವಾನಿಸಿದ್ದೇವೆ. ನಾವು ಎರಡಂಕಿಯಲ್ಲಿ ಸೀಟುಗಳನ್ನು ಪಡೆಯುತ್ತೇವೆ ಎಂದು ನಂಬಿದ್ದೇವೆ. ಸೀಟು ಹಂಚಿಕೆಯು ಒಂದೆರೆಡು ದಿನದಲ್ಲಿ ಅಂತಿಮಗೊಳ್ಳಲಿದೆ ಎಂದು ನನಗೆ ವಿಶ್ವಾಸವಿದೆ” ಎಂದಿದ್ದಾರೆ.

ಅಠಾವಳೆ ಅವರ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಕನಿಷ್ಠ 10 ಸ್ಥಾನಗಳಿಗೆ ಬೇಡಿಕೆ ಇಟ್ಟಿದ್ದು, ಬಿಹಾರದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಜನತಾ ದಳ (ಯು) 3 ರಿಂದ 4 ಸ್ಥಾನಗಳಲ್ಲಿ ಸ್ಪರ್ಧಿಸಲು ಬಯಸಿದೆ.


ಇದನ್ನೂ ಓದಿ: ಯುಪಿ ಚುನಾವಣೆ: ಯೋಗಿ ಆದಿತ್ಯನಾಥ್ ಸಂಪುಟದ ಮೂರನೇ ಸಚಿವ ರಾಜೀನಾಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....