Homeಕರ್ನಾಟಕಕೊರಗ ತನಿಯ ಹಿಂದೂ ಧರ್ಮದ ಸಂಕೇತವಲ್ಲ: ಕೊರಗ ಮುಖಂಡ ಶ್ರೀಧರ ನಾಡ ಸ್ಪಷ್ಟನೆ

ಕೊರಗ ತನಿಯ ಹಿಂದೂ ಧರ್ಮದ ಸಂಕೇತವಲ್ಲ: ಕೊರಗ ಮುಖಂಡ ಶ್ರೀಧರ ನಾಡ ಸ್ಪಷ್ಟನೆ

"ಇಡೀ ಕೊರಗ ಸಮುದಾಯದ ಅಸ್ತಿತ್ವವನ್ನು ಬುಡಮೇಲು ಮಾಡಿದವರು ಕೊರಗ ತನಿಯನ ಹೆಸರಿನಲ್ಲಿ ರಾಜಕೀಯ ಮಾಡುವುದನ್ನು ನಿಲ್ಲಿಸಬೇಕು"

- Advertisement -
- Advertisement -

ಕೊರಗ ತನಿಯನಿಗೆ ಸಂಬಂಧಿಸದೆ ಇರುವ ವೇಷವನ್ನು ಕೊರಗ ತನಿಯನ ವೇಷವೆಂದು ಬಣ್ಣಿಸಿ ಜನರ ನಂಬಿಕೆಯನ್ನು ದುರುಪಯೋಗ ಮಾಡಿಕೊಂಡು ಪದೇ ಪದೇ ಕೊರಗಜ್ಜ ಮತ್ತು ಕೊರಗ ಸಮುದಾಯವನ್ನು ಅಪಮಾನ ಮಾಡಲಾಗುತ್ತಿದೆ ಎಂದು ಕೊರಗ ಸಮುದಾಯದ ಮುಖಂಡ, ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಉಡುಪಿ ಜಿಲ್ಲಾ ಸಂಚಾಲಕರಾದ ಶ್ರೀಧರ ನಾಡ ಬೇಸರ ವ್ಯಕ್ತಪಡಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, “ಕರಾವಳಿ ಜಿಲ್ಲೆಗಳ ಮೂಲನಿವಾಸಿಗಳಾದ ಕೊರಗ ಸಮುದಾಯ ಮತ್ತು ನಮ್ಮ ಗುರಿಕಾರ ಕೊರಗ ತನಿಯನ ಮೇಲೆ ಇತ್ತೀಚೆಗೆ ಪ್ರೀತಿ, ಅಭಿಮಾನ ಉಕ್ಕಿಹರಿದಂತೆ ಕಾಣುತ್ತಿದೆ. ಕೊರಗ ಸಮುದಾಯದ ನಾವು ಹೇಳುತ್ತೇವೆ- ಕೊರಗ ತನಿಯ ದೇವರು ಅಲ್ಲಾ, ದೈವವು ಅಲ್ಲಾ, ನಮ್ಮ ಸಮುದಾಯದ ಒಬ್ಬ ಗುರಿಕಾರ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ನಿಮ್ಮ ಮಡಿವಂತಿಕೆಯ ಮೋಸ ಕುತಂತ್ರಕ್ಕೆ ಬಲ್ಲಿಯಾದ ಕೊರಗ ತನಿಯನು ಸಾಮಾಜಿಕ ನ್ಯಾಯದ ಪ್ರತೀಕ. ಹುಭಾಶಿಕನ್ನು ನೇರವಾಗಿ ಎದುರಿಸಲು ಸಾಧ್ಯವಾಗದೆ ಮೋಸದಿಂದ ಸಾಯಿಸಿ ಇಡೀ ಸಮುದಾಯವನ್ನು ನಿರ್ಗತಿಕ ಪರಿಸ್ಥಿತಿಗೆ ದೂಡಿದಿರಿ. ಹಾಗೆಯೇ ಕೊರಗ ತನಿಯನ ಬದುಕು ಸಹ ದುರಂತ ಕಥೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಒಂದು ಪಾಡ್ದಾನದ ಪ್ರಕಾರ ಮೈರಕ್ಕನ ಆಶ್ರಮದಲ್ಲಿ ಬೆಳೆದ ತನಿಯ ದೊಡ್ಡವನಾದ ಬಳಿಕ ಎಣಸೂರು ಬಾಳಿಕೆಯ ರಾಜ ದೈವಗಳ ನೇಮಕ್ಕೆ ತೆಂಗಿನ ಎಳೆ ಗರಿ, ಸೀಯಾಳ, ಬಾಳೆದಿಂಡು, ಸಿಂಗಾರ ಇತ್ಯಾದಿ ಹೊರೆಯನ್ನು ಹೊರಲು ಏಳು ಮಂದಿ ಕೆಲಸದವರು ಬರದೆ ಇದ್ದಾಗ ತನಿಯ ಒಬ್ಬನೇ ತಂದು ಕೊಡುತ್ತಾನೆ. ಆದರೆ ಕಾಡು ಕೊರಗ ಎನ್ನುವ ಕಾರಣಕ್ಕೆ ಅವನನ್ನು ದೇವಸ್ಥಾನದ ಒಳಗೆ ಬರಲು ನಿರಾಕರಿಸಲಾಗಿದೆ. ಇದನ್ನು ತನಿಯ ಪ್ರತಿಭಟಿಸುತ್ತಾನೆ. ತಾನು ತಂದ ವಸ್ತುಗಳು ಆಗುತ್ತದೆ, ಆದರೆ ನಾನು ಆಗುವುದಿಲ್ಲವೆ ಎಂದು ಪ್ರಶ್ನಿಸುತ್ತಾನೆ. ಅಲ್ಲೇ ಪಕ್ಕದಲ್ಲಿ ಇರುವ ಮರದಿಂದ ತನ್ನ ಹೆಂಡತಿಗೆ ಮಾಪಲ ಹಣ್ಣು ಕೊಯ್ದು ತರುತ್ತಾನೆ. ಆಗ ಅಲ್ಲಿನ ಮೈಸಂದಾ ಮತ್ತು ಕೊಡಂಗೆನಾರ್ ದೈವಗಳ ಕೆಂಗಣ್ಣಿಗೆ ಗುರಿಯಾಗಿ ಮಾಯವಾದನು. ಈಗಲೂ ಆ ದೈವಗಳು ಶ್ರೇಣೀಕಣದಲ್ಲಿ ಕೊರಗ ತನಿಯನಿಗಿಂತ ಮೇಲಿವೆ ಎಂಬುದನ್ನು ಗಮನಿಸಬೇಕು ಎಂದು ಅವರು ಹೇಳಿದ್ದಾರೆ.

ಇನ್ನೊಂದು ಪಾಡ್ದಾನದಲ್ಲಿ ದೇವಸ್ಥಾನದ ಪ್ರಾಂಗಣದಲ್ಲಿ ಇರುವ ಮಾಫಲ ಹುಳಿ ಕೊಯ್ಯಲು ಹೋಗುವಾಗ ಆತನನ್ನು ಬ್ರಾಹ್ಮಣರು ಕಡಿದು ಕೊಲ್ಲುತ್ತಾರೆ. ಕೊರಗ ತನಿಯ ಯಾವತ್ತೂ ಹಿಂದೂ ಧರ್ಮದ ಸಂಕೇತವಲ್ಲ. ಆತ ಕರಾವಳಿ ಜಿಲ್ಲೆಗಳ ಕೊರಗ ಸಮುದಾಯ ಮತ್ತು ಆದಿಮ ಸಂಸ್ಕೃತಿಯ ಪ್ರತೀಕ. ಕೊರಗ ತನಿಯನ ಕುರಿತು ಮಾತನಾಡುವ ಮೊದಲು ನಿಮ್ಮವರು ಹಾಗೂ ನೀವು ಮಾಡಿದ, ಮಾಡುತ್ತಿರುವ ಮಹಾ ಮೋಸಗಳ ಬಗ್ಗೆ ಒಮ್ಮೆ ಆತ್ಮ ವಿಮರ್ಶೆ ಮಾಡಿಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಹಿಂದೂ ಇರಲಿ ಮುಸ್ಲಿಂ ಇರಲಿ ಮದುವೆ, ಜಾತ್ರೆ, ತಂಬಿಲದಲ್ಲಿ ನಮ್ಮ ಗುರಿಕಾರ ಕೊರಗ ತನಿಯನ ವೇಷ ಹಾಕಲು ನಿಮಗೆ ಒಪ್ಪಿಗೆ ಕೊಟ್ಟವರು ಯಾರು? ಕೊರಗರ ವೇಷದಲ್ಲಿ ಕೊರಗ ಸಮುದಾಯದ ಘನತೆ ಗೌರವದ ಬದುಕಿಗೆ ಅವಮಾನ ಮಾಡಿ ಪದ ಪ್ರಯೋಗ ಮಾಡುವುದು ಎಷ್ಟು ಸರಿ? ಯಕ್ಷಗಾನದಲ್ಲಿ ಬ್ರಾಹ್ಮಣ ವೇಷ, ಮುಸ್ಲಿಂ ವೇಷ ಹಾಕಿದಕ್ಕೆ ತಾವೇಲ್ಲರೂ ಬಹಳ ಪ್ರತಿಕ್ರಿಯೆ ನೀಡುವವರು, ವಿರೋಧಿಸುವವರು, ಕೊರಗರ ವೇಷ ಹಾಕಿ ನಮ್ಮನ್ನು ಹೀಯಾಳಿಸುವಿರಲ್ಲ ಆಗ ನಿಮ್ಮ ಹಿಂದೂ ಧರ್ಮದಲ್ಲಿ ಮತ್ತು ಈ ಪ್ರಜಾಪ್ರಭುತ್ವದ ನ್ಯಾಯಯುತ ಸಮಾಜದಲ್ಲಿ ಕೊರಗರು ಇರುವುದಿಲ್ಲವೇ? ಎಂದು ಶ್ರೀಧರ್‌ ನಾಡಾ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

ಇಡೀ ಕೊರಗ ಸಮುದಾಯದ ಅಸ್ತಿತ್ವವನ್ನು ಬುಡಮೇಲು ಮಾಡಿದವರು ಕೊರಗ ತನಿಯನ ಹೆಸರಿನಲ್ಲಿ ರಾಜಕೀಯ ಮಾಡುವುದನ್ನು ನಿಲ್ಲಿಸಬೇಕು. ವಿನಾಶದಂಚಿಗೆ ಬಂದಿರುವ ಕೊರಗ ಸಮುದಾಯದ ಉಳಿಯುವಿಗೆ ನಿಮ್ಮ ಕೊಡುಗೆ ಏನು ತಿಳಿಸಿ. ಕೊರಗ ತನಿಯ ಮತ್ತು ಕೊರಗ ಸಮುದಾಯವನ್ನು ರಾಜಕೀಯಕ್ಕೆ ಬಳಸಿ ಅಪಮಾನ ಮಾಡಿರುವುದನ್ನು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಖಂಡಿಸುತ್ತದೆ. ಹಾಗೆ ಎಲ್ಲರೂ ಸಾಲೆತ್ತೂರಿನ ಕೊರಗಜ್ಜ ವೇಷದ ವಿವಾದಕ್ಕೆ ಸಂಬಂಧಿಸಿದಂತೆ ದ್ವೇಷ ಹರಡಲು ಮಾಡಿರುವ ಹುನ್ನಾರಗಳನ್ನು ವಿಫಲಗೊಳಿಸಿ ಶಾಂತಿ ಸೌಹಾರ್ದತೆ ಕಾಪಾಡಬೇಕು ಎಂದು ಅವರು ಕೋರಿದ್ದಾರೆ.


ಇದನ್ನೂ ಓದಿರಿ: ಕ್ಷಮೆ ಕೇಳಿದರೂ ಮುಗಿಯದ ಕೊರಗಜ್ಜ ಪ್ರಕರಣ: ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...