Homeಕರ್ನಾಟಕಮಂಗಳೂರು: ಮುಸ್ಲಿಮರ ನರಮೇಧಕ್ಕೆ ಪ್ರಚೋದಿಸಿದ ಬ್ಯಾಂಕ್ ಅಧಿಕಾರಿ- ಕ್ರಮಕ್ಕೆ ಮುಂದಾದ ಬ್ಯಾಂಕ್ ಆಡಳಿತ

ಮಂಗಳೂರು: ಮುಸ್ಲಿಮರ ನರಮೇಧಕ್ಕೆ ಪ್ರಚೋದಿಸಿದ ಬ್ಯಾಂಕ್ ಅಧಿಕಾರಿ- ಕ್ರಮಕ್ಕೆ ಮುಂದಾದ ಬ್ಯಾಂಕ್ ಆಡಳಿತ

- Advertisement -
- Advertisement -

ದಕ್ಷಿಣ ಕನ್ನಡದಲ್ಲಿ ಮುಸ್ಲಿಮರನ್ನು ಸಾಮೂಹಿಕವಾಗಿ ಹತ್ಯೆ ಮಾಡಲು ಫೇಸ್‌ಬುಕ್ ಪೋಸ್ಟ್ ಮೂಲಕ ಕರೆ ಕೊಟ್ಟಿದ್ದ ಫೆಡರಲ್ ಬ್ಯಾಂಕಿನ ವ್ಯವಹಾರಿಕ ಮುಖ್ಯಸ್ಥನೆನ್ನಲಾದ ವಿಷ್ಣಪ್ರಸಾದ್ ನಿಡ್ಡಾಜೆ ವಿರುದ್ಧ ವಿಟ್ಲ ಠಾಣೆಯಲ್ಲಿ ದೂರು ದಾಖಲಾಗಿದೆ. ಇದೇ ವೇಲೆಯಲ್ಲಿ ಪ್ರಕರಣದ ತನಿಖೆ ನಡೆಸಿ ಸೂಕ್ತ ಕ್ರಮಕೈಗೊಳ್ಳುವುದಾಗಿ ಫೆಡರಲ್ ಬ್ಯಾಂಕ್ ತಿಳಿಸಿದೆ.

ತಾನು ಫೆಡರಲ್ ಬ್ಯಾಂಕಿನ ಅಧಿಕಾರಿಯೆಂದು ತನ್ನ ಫೇಸ್ ಬುಕ್ ಪ್ರೋಫೈಲ್‌ನಲ್ಲಿ ಹೇಳಿಕೊಂಡಿರುವ ವಿಷ್ಣುಪ್ರಸಾದ್ ಎಂಬುವವರು ವಿಟ್ಲದ ಬಳಿಯ ಸಾಲೆತ್ತೂರಿನಲ್ಲಿ ಮುಸ್ಲಿಮ್ ಮದುಮಗನೊಬ್ಬ ಕೊರಗರ ಆರಾದ್ಯ ದೈವ ಕೊರಗಜ್ಜನ ಅಣಕಿಸುವ ವೇಷ ತೊಟ್ಟಿದ್ದನೆಂಬ ಆರೋಪಕ್ಕೆ ಸಂಬಂಧಿಸಿ ಪ್ರಚೋದನಕಾರಿ ಪೋಸ್ಟ್ ಹಾಕಿದ್ದ. ಇದರ ವಿರುದ್ದ ನೆಟ್ಟಿಗರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಟ್ವಿಟರ್ ಬಳಕೆದಾರರೊಬ್ಬರು ಫೆಡರಲ್ ಬ್ಯಾಂಕ್‌ನ್ನು ತರಾಟೆಗೆ ತೆಗೆದುಕೊಂಡಿದ್ದರು. ಅಲ್ಲದೆ ಆರೋಪಿ ವಿರುದ್ದ ಪಿಎಫ್‌ಐ ಸಂಘಟನೆಯು ವಿಟ್ಲ ಠಾಣೆಯಲ್ಲಿ ದೂರು ದಾಖಲಿಸಿತ್ತು.

ನಮ್ಮದು ಕೃಷ್ಣನ ತತ್ವ, ಶಿಶುಪಾಲನ ನೂರು ಪೆಟ್ಟುಗಳನ್ನು ಸಹಿಸೋದು, ನೂರೊಂದನೆ ಪೆಟ್ಟಿಗೆ ಢಿಮ್… ಬಾಂಧವರ ಸಾವಿರ ಪೆಟ್ಟು ಸಹಿಸೋದು, ನಂತರ ಗೋಧ್ರಾ ತರದ ಒಂದು ಪೆಟ್ಟಿನಲ್ಲಿ 20 ವರ್ಷ ಗಪ್ ಚುಪ್… ಗುಜರಾತಿನ ಕೊನೆಯ ಕೋಮುಗಲಭೆ ಯಾವಾಗ ಎಲ್ಲಿ ಹೇಗೆ ನಡೆಯಿತು ಅನ್ನೂದನ್ನ ಸ್ವಲ್ಪ ಯೋಚಿಸಿ ನೋಡಿದರೆ ಇದು ಅರ್ಥವಾದೀತು… ಬಹುಶಃ ವಿಟ್ಲ, ಮಂಗಳೂರು ಕಡೆ ಇನ್ನೂ ಅವುಗಳ ಕೌಂಟ್ ಪೂರ್ತಿ ಆಗಿಲ್ಲ ಅನ್ಸುತ್ತೆ… ಬಂದೂ ಬಂದೂ ಕೆಣಕುತ್ತಿವೆ… ಎಂದು ಹಿಂಸಾತ್ಮಕ ಬರಹ ವಿಷ್ಣುಪ್ರಸಾದ್ ತನ್ನ ಫೇಸ್‌ಬುಕ್ ಖಾತೆಯಲ್ಲಿ ಹಾಕಿಕೊಂಡಿದ್ದ. ಮತ್ತೊಂದು ಪೋಸ್ಟ್‌ನಲ್ಲಿ-ಕೊರಗಜ್ಜನ ವೇಷ ಹಾಕಿದ್ದಾನೆಂದು ಆರೋಪಿಸಲಾಗಿರುವ ಮುಸ್ಲಿಮರ ಮದುಮಗನ ಮನೆ, ಕಾರು, ಅಂಗಡಿ ಧ್ವಂಸ ಮಾಡಬೇಕೆಂಬರ್ಥದಲ್ಲಿ ಬರೆದಿದ್ದ. ಈಗ ವಿಷ್ಣುಪ್ರಸಾದ್ ಫೇಸ್‌ಬುಕ್ ಖಾತೆ ಡಿಲೀಟ್ ಆಗಿದೆ.

ಇದೆಲ್ಲವನ್ನು ಜಾಲತಾಣಿಗರು ಟ್ವೀಟ್ ಮೂಲಕ ಫೆಡರಲ್ ಬ್ಯಾಂಕ್ ಗಮನಕ್ಕೆ ತಂದಿದ್ದರು. ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಮುಜುಗರಕ್ಕೀಡಾಗಿದ್ದ ಫೆಡರಲ್ ಬ್ಯಾಂಕ್ ಆಡಳಿತಗಾರರು ಪ್ರತಿಕಿಯಿಸುವುದು ಅನಿವಾರ್ಯವಾಯಿತು. ಒಂದು ಜವಾಬ್ದಾರಿಯುತ ಸಂಸ್ಥೆಯಾಗಿ ನಮ್ಮ ಉದ್ಯೋಗಿಗಳ ಕಡೆಯಿಂದ ಯಾವುದೆ ಅಸಭ್ಯ, ಅನಪೇಕ್ಷಿತ ಅಥವಾ ಹಿಂಸಾತ್ಮಕ, ಪ್ರಶ್ನಾತ್ಮಕ ಕೃತ್ಯಗಳನ್ನು ಎಂದಿಗೂ ಪ್ರೋತ್ಸಾಹಿಸುವುದಿಲ್ಲ. ಅಂತಹ ವರ್ತನೆಯನ್ನು ಸಂಸ್ಥೆ ಎಂದು ಸಹಿಸುವುದಿಲ್ಲ. ಇಂತಹ ಯಾವುದೇ ಪ್ರಚೋದನೆಗೂ ಸಂಸ್ಥೆಗೂ ಸಂಬಂಧವಿಲ್ಲ. ಈ ಕುರಿತು ಸೂಕ್ತ ಕ್ರಮಕ್ಕಾಗಿ ವಿಚಾರಣೆ ಪ್ರಾರಂಭಿಸಲಾಗಿದೆ ಎಂದು ಫೆಡರಲ್ ಬ್ಯಾಂಕ್ ಹೇಳಿದೆ.


ಇದನ್ನೂ ಓದಿ: ಕ್ಷಮೆ ಕೇಳಿದರೂ ಮುಗಿಯದ ಕೊರಗಜ್ಜ ಪ್ರಕರಣ: ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...