Homeಮುಖಪುಟವಿಶ್ಲೇಷಣೆ: ಯುಪಿಯಲ್ಲಿ ಒಬಿಸಿ ನಾಯಕರು ಬಿಜೆಪಿ ತೊರೆಯುತ್ತಿರುವುದು ಏತಕ್ಕೆ? ಎಸ್‌ಪಿಗೆ ಗೆಲುವು ಸುಲಭವೇ?

ವಿಶ್ಲೇಷಣೆ: ಯುಪಿಯಲ್ಲಿ ಒಬಿಸಿ ನಾಯಕರು ಬಿಜೆಪಿ ತೊರೆಯುತ್ತಿರುವುದು ಏತಕ್ಕೆ? ಎಸ್‌ಪಿಗೆ ಗೆಲುವು ಸುಲಭವೇ?

- Advertisement -
- Advertisement -

ಉತ್ತರ ಪ್ರದೇಶದ ಚುನಾವಣಾ ಚರ್ಚೆಯಲ್ಲಿ ದೊಡ್ಡ ಪ್ರಶ್ನೆಯೊಂದು ಮುನ್ನಲೆಗೆ ಬಂದಿದೆ. ಯಾದವೇತರ ಇತರೆ ಹಿಂದುಳಿದ ವರ್ಗದ ಸಮುದಾಯಗಳನ್ನು ಬಿಜೆಪಿಯಿಂದ ದೂರವಿಡುವ ಪ್ರಯತ್ನದಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಅಂತಿಮವಾಗಿ ಯಶಸ್ಸು ಪಡೆಯಬಹುದೇ?- ಎಂಬುದು ಸದ್ಯದ ಪ್ರಶ್ನೆ.

ರಾಜ್ಯದ ಚುನಾವಣಾ ಫಲಿತಾಂಶವು ಈ ನಿರ್ಣಾಯಕ ಅಂಶದ ಮೇಲೆ ಅವಲಂಬಿತವಾಗಿದೆ ಎಂದು ರಾಜಕೀಯ ವಿಶ್ಲೇಷಕರು ನಿರೀಕ್ಷಿಸಿದ್ದಾರೆ.

ಕಳೆದ ಕೆಲವು ಚುನಾವಣೆಗಳಲ್ಲಿ ಅತ್ಯಂತ ಹಿಂದುಳಿದ ವರ್ಗಗಳನ್ನು ಒಟ್ಟುಗೂಡಿಸುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಈ ವರ್ಗಗಳಲ್ಲಿ ಬಹುದೊಡ್ಡ ಮತದಾರರಿದ್ದಾರೆ. ಆ ಸಂಖ್ಯೆ ಒಟ್ಟು ಮತದಾರರ ಪೈಕಿ ಶೇ.30 ಎನ್ನಲಾಗುತ್ತದೆ. ಯಾದವರ ವಿರುದ್ಧ ಈ ವರ್ಗಗಳನ್ನು ಬಿಜೆಪಿ ಸಂಘಟಿಸಿತ್ತು.

ಇದನ್ನೂ ಓದಿ:ಉತ್ತರ ಪ್ರದೇಶ ಚುನಾವಣೆ: ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಾಯಿಗೆ ಕಾಂಗ್ರೆಸ್‌ನಿಂದ ಟಿಕೆಟ್

ರಾಜ್ಯ ರಾಜಕೀಯದಲ್ಲಿ ಇಲ್ಲಿಯವರೆಗೆ ಕಡಿಮೆ ಪ್ರಾತಿನಿಧ್ಯವನ್ನು ಹೊಂದಿದ್ದ ಕುರ್ಮಿ, ಲೋಧ್ ರಜಪೂತ್, ಪಾಲ್ಸ್, ಸೈನಿ, ಕಶ್ಯಪ್, ಮೌರ್ಯ ಥರದ ಅತ್ಯಂತ ಹಿಂದುಳಿದ ವರ್ಗಗಳು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯಲ್ಲಿ ಹೆಚ್ಚು ನಿರೀಕ್ಷೆಯನ್ನು ಹೊಂದಿದ್ದವು. ಅಲ್ಲದೆ ನರೇಂದ್ರ ಮೋದಿ ಅವರು ಕೂಡ ಪ್ರಬಲವಲ್ಲದ ಒಬಿಸಿ ಸಮುದಾಯಕ್ಕೆ ಸೇರಿದವರು.

ಬಿಜೆಪಿಯು ಈ ಸಮುದಾಯಗಳ ನಾಯಕರಿಗೆ ಚುನಾವಣಾ ಕಣದಲ್ಲಿ ಇತರ ಪಕ್ಷಗಳಿಗಿಂತ ಹೆಚ್ಚಿನ ಪ್ರಾತಿನಿಧ್ಯವನ್ನು ನೀಡಿತು. ಭಾರೀ ಅಂತರದಿಂದ ಗೆಲುವು ಸಾಧಿಸಿ ಅಧಿಕಾರಕ್ಕೆ ಬಂತು. ಆದರೆ ಕಳೆದ ಕೆಲವು ವರ್ಷಗಳಲ್ಲಿ ಅತ್ಯಂತ ಹಿಂದುಳಿದ ಸಮುದಾಯಗಳು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಾಯಕತ್ವವನ್ನು ನೋಡಿದ ರೀತಿ ಬೇರೆಯಾಗಿತ್ತು.

ಬಿಜೆಪಿ ನಾಯಕರ ಇತ್ತೀಚಿನ ವಲಸೆಯು ಬಹುಶಃ ಇದನ್ನು ಎತ್ತಿ ಹಿಡಿಯುತ್ತದೆ. ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ ಎಲ್ಲಾ ಹಾಲಿ ಬಿಜೆಪಿ ಶಾಸಕರು (ಸಚಿವರು ಸೇರಿದಂತೆ ಒಟ್ಟು 15 ಮಂದಿ) ಪ್ರಾಬಲ್ಯವಿಲ್ಲದ ಹಿಂದುಳಿದ ಸಮುದಾಯಗಳಿಗೆ ಸೇರಿದವರು. ರಾಜ್ಯದ ಕಾರ್ಮಿಕ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಮತ್ತು ಅವರ ನಾಲ್ಕು ಸಹೋದ್ಯೋಗಿಗಳ ರಾಜೀನಾಮೆಗಳು ಹೆಚ್ಚಿನ ಗಮನ ಸೆಳೆದಿವೆ. ಆದರೆ ಹೆಚ್ಚಿನ ಹಿಂದುಳಿದ ವರ್ಗಗಳ ನಾಯಕರಲ್ಲಿ ಬಂಡಾಯ ಪ್ರವೃತ್ತಿ ಕೋವಿಡ್‌ ಎರಡನೇ ಅಲೆಯ ಸಮಯದಲ್ಲಿಯೇ ವ್ಯಕ್ತವಾಗಿತ್ತು.

ಇದನ್ನೂ ಓದಿ: ಉತ್ತರ ಪ್ರದೇಶ ಚುನಾವಣೆ: ಸಚಿವ ಸ್ಥಾನ ತೊರೆದು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾದ ಬಿಜೆಪಿಯ ಸ್ವಾಮಿ ಪ್ರಸಾದ್ ಮೌರ್ಯ

ಸಾಂಕ್ರಾಮಿಕ ರೋಗವನ್ನು ಸರಿಯಾಗಿ ನಿಭಾಯಿಸದಿರುವ ಬಗ್ಗೆ ಭಿನ್ನಾಭಿಪ್ರಾಯಗಳು ವ್ಯಕ್ತವಾದವು. ರಾಜ್ಯ ಸರ್ಕಾರದ ವಿರುದ್ಧದ ಹೆಚ್ಚಿನ ಭಿನ್ನಾಭಿಪ್ರಾಯವು ಯಾದವೇತರ ಒಬಿಸಿ ಸಮುದಾಯಗಳಿಗೆ ಸೇರಿದ ನಾಯಕರಿಂದ, ಸ್ವಲ್ಪ ಮಟ್ಟಿಗೆ ಬ್ರಾಹ್ಮಣ, ಜಾಟರು ಅಲ್ಲದ ದಲಿತರಿಂದ ಹೊರಹೊಮ್ಮಿದೆ. ಎಲ್ಲಾ ಜಾತಿ ಗುಂಪುಗಳು ಆದಿತ್ಯನಾಥ್ ವಿರುದ್ಧ ಅಸಮಾಧಾನ ಹೊಂದಿವೆ. ಬಿಜೆಪಿಯ ಇಬ್ಬರು ಶಾಸಕರಾದ ರಾಕೇಶ್ ರಾಥೋಡ್ (ತೇಲಿ ಸಮುದಾಯ) ಮತ್ತು ಮಾಧುರಿ ವರ್ಮಾ (ಕುರ್ಮಿ ​​ಸಮುದಾಯ) ಈಗಾಗಲೇ ಸಮಾಜವಾದಿ ಪಕ್ಷಕ್ಕೆ ಸೇರಿದ್ದರು. ಮೌರ್ಯ ಮತ್ತು ಅವರ ಅನುಯಾಯಿಗಳು ಬಿಜೆಪಿ ಪಾಳಯದಲ್ಲಿ ಎಲ್ಲವೂ ಸರಿಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬಿಜೆಪಿ ತೊರೆದ ಶಾಸಕರು ಹಿಂದುಳಿದ ಸಮುದಾಯಗಳಲ್ಲಿನ ಬೇಸರವನ್ನು ಸ್ಪಷ್ಟವಾಗಿ ಹೇಳಲು ಯತ್ನಿಸಿದ್ದಾರೆ.

ಮೌರ್ಯ ಮತ್ತು ಅವರ ಅನುಯಾಯಿಗಳ ರಾಜೀನಾಮೆ ಪತ್ರಗಳು ಹಿಂದುಳಿದ ಸಮುದಾಯಗಳಿಗೆ ರಾಜಕೀಯ ಸಂದೇಶವನ್ನು ನೀಡಲೆಂದೇ ಒಂದೇ ರೀತಿ ಇವೆ. “ಕಳೆದ ನಾಲ್ಕು ವರ್ಷಗಳಲ್ಲಿ ಬಿಜೆಪಿ ಸರ್ಕಾರವು ದಲಿತ, ಹಿಂದುಳಿದ ಸಮುದಾಯಗಳು ಮತ್ತು ಅಲ್ಪಸಂಖ್ಯಾತರಿಗೆ ಸೇರಿದ ನಾಯಕರನ್ನು ನಿರ್ಲಕ್ಷಿಸಿದೆ. ದಲಿತರು, ಹಿಂದುಳಿದ ಸಮುದಾಯಗಳು, ನಿರುದ್ಯೋಗಿ ಯುವಕರು, ಸಣ್ಣ ಮತ್ತು ಮಧ್ಯಮ ಉದ್ಯಮಿಗಳ ಕಳವಳಗಳನ್ನು ನಿರ್ಲಕ್ಷಿಸಲಾಗಿದೆ” ಎಂದು ಅವರ ಪತ್ರಗಳಲ್ಲಿ ಹೇಳಲಾಗಿದೆ.

ಇದನ್ನೂ ಓದಿ:ಉತ್ತರ ಪ್ರದೇಶ: ಪೊಲೀಸರರು ಅತ್ಯಂತ ಪ್ರಾಮಾಣಿಕರು, ಹಣ ತೆಗೆದುಕೊಂಡರೆ ಕೆಲಸ ಮಾಡುತ್ತಾರೆ ಎಂದು ಲಂಚಕ್ಕೆ ಉತ್ತೇಜಿಸಿದ್ದ ಪೊಲೀಸ್ ಅಮಾನತು

ರಾಜಕೀಯ ತಜ್ಞರು ಹೇಳುವ ಪ್ರಕಾರ ಹಿಂದುಳಿದ ಸಮುದಾಯಗಳ ಬೇಸರಕ್ಕೆ ಎರಡು ಕಾರಣಗಳಿವೆ.

ಮೊದಲನೆಯದಾಗಿ, ಬಿಜೆಪಿಯು ಎಲ್ಲರನ್ನೂ ಒಳಗೊಳ್ಳುವ ವರ್ಚಸ್ಸಿಗೆ ತಕ್ಕಂತೆ ಉಳಿಯಲಿಲ್ಲ. “ಸಬ್ಕಾ ಸಾಥ್, ಸಬ್ಕಾ ವಿಶ್ವಾಸ್ [ಎಲ್ಲರಿಗಾಗಿ ಮತ್ತು ಅಭಿವೃದ್ಧಿ] ಎಂದ ಬಿಜೆಪಿಯು ಅದರಂತೆ ನಡೆದುಕೊಳ್ಳಲಿಲ್ಲ. ಬಿಜೆಪಿಯು ಕೇವಲ ಮೇಲ್ಜಾತಿ ಗುಂಪುಗಳ ನೇತೃತ್ವದ ಪಕ್ಷವಾಯಿತು. ಠಾಕೂರ್ ನಾಯಕ ಆದಿತ್ಯನಾಥ್ ಅವರು ಆಡಳಿತದ ಚುಕ್ಕಾಣಿ ಹಿಡಿಯುವ ಮೂಲಕ ಇದು ಮೇಲ್ಜಾತಿ ಪ್ರಣೀತ ಪಕ್ಷವೆಂಬ ಗ್ರಹಿಕೆಯನ್ನು ಹಿಂದುಳಿದ ಸಮುದಾಯಗಳಲ್ಲಿ ಬಿಜೆಪಿ ಮತ್ತೆ ಮೂಡಿಸಿತು. ಆದಿತ್ಯನಾಥ್ ಸ್ವತಃ ಠಾಕೂರ್ ನಾಯಕ ಎಂದು ಬಿಂಬಿಸಿಕೊಳ್ಳಲು ಹಿಂದೆ ಸರಿಯಲಿಲ್ಲ” ಎಂದು ಗೋರಖ್‌ಪುರ ಮೂಲದ ಹಿರಿಯ ಪತ್ರಕರ್ತ ಮನೋಜ್ ಸಿಂಗ್ ಹೇಳುತ್ತಾರೆ.

ಯಾದವರು ಮತ್ತು ಮುಸ್ಲಿಮರ ನೇತೃತ್ವದ ಪಕ್ಷವಾಗಿ ಎಸ್‌ಪಿ ಬೆಳೆದಿತ್ತು. ಬಹುಜನ ಸಮಾಜ ಪಕ್ಷವು ಜಾಠವರಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿತ್ತು. ಹೀಗಾಗಿ ಬಿಜೆಪಿಯು ಇತರ ಹಿಂದುಳಿದ ಸಮುದಾಯಗಳ ಆಕಾಂಕ್ಷೆಗಳನ್ನು ಈಡೇರಿಸಬಹುದೆಂದು ಈ ಸಮುದಾಯಗಳು ಮತ್ತು ಜಾಠವೇತರರು ನಿರೀಕ್ಷಿಸಿದ್ದರು. ಈ ಸಮುದಾಯಗಳ ನಡುವೆ ವ್ಯಾಪಕ ಪ್ರಚಾರ ಕಾರ್ಯಕ್ರಮವನ್ನು ಬಿಜೆಪಿ ನಡೆಸಿತು. ಆದರೆ ಬಿಜೆಪಿ ಸರ್ಕಾರವನ್ನು ರಚಿಸಿದ ನಂತರ, ಈ ಗುಂಪುಗಳನ್ನು ಪ್ರತಿನಿಧಿಸುವ ನಾಯಕರಿಗೆ ಸರಿಯಾದ ಸ್ಥಾನ ಮಾನ ನೀಡಲಿಲ್ಲ. ಪ್ರಮುಖವಲ್ಲದ ಖಾತೆಗಳು ಮತ್ತು ಸ್ಥಾನಗಳಿಗೆ ‌ಈ ಸಮುದಾಯಗಳ ನಾಯಕರನ್ನು ಕೂರಿಸಿತು.

ಎರಡನೆಯದಾಗಿ, ಸಂಘಪರಿವಾರದ ಹಿಂದುತ್ವದ ರಾಜಕೀಯ ಮಾರ್ಗವನ್ನು ಮುನ್ನೆಲೆಗೆ ತರುವ ಪ್ರಯತ್ನದಲ್ಲಿ ಪ್ರಾತಿನಿಧ್ಯ ಮತ್ತು ಸಾಮಾಜಿಕ ನ್ಯಾಯದ ಎಲ್ಲಾ ಕಾಳಜಿಗಳನ್ನು ಕಟ್ಟರ್ ಹಿಂದುತ್ವದ ನಾಯಕ ಎಂದೇ ಬಿಂಬಿತವಾಗಿರುವ ಆದಿತ್ಯನಾಥ್‌ ಮರೆತರು. ಆದಿತ್ಯನಾಥ್ ಅವರ ಹಿಂದುತ್ವದ ಕಾರ್ಯಚಟುವಟಿಕೆ ಸಾಮಾಜಿಕ ನ್ಯಾಯದ ಕಾಳಜಿಯನ್ನು ಸಂಪೂರ್ಣವಾಗಿ ಹಿಮ್ಮೆಟ್ಟಿಸುತ್ತದೆ ಎಂದು ಹಿಂದುಳಿದ ಸಮುದಾಯಗಳು ಗ್ರಹಿಸಿವೆ.

ಮೇಲ್ಜಾತಿ ಗುಂಪುಗಳು, ಯಾದವೇತರ ಒಬಿಸಿಗಳು ಮತ್ತು ಜಾಠವೇತರ ದಲಿತರಿಂದ ಕೂಡಿದ ಬಿಜೆಪಿಯ ಸಾಮಾಜಿಕ ತಳಹದಿಯು ಕುಸಿಯುತ್ತಿರುವುದು ಖಚಿತ.

ಇದನ್ನೂ ಓದಿ:ಚುನಾವಣಾ ದಿನಾಂಕ ಘೋಷಣೆ: ಉತ್ತರ ಪ್ರದೇಶದ ನಾಲ್ಕು ಪ್ರಮುಖ ಪಕ್ಷಗಳ ಫಸ್ಟ್ ರಿಯಾಕ್ಷನ್ ಏನು?

ಸಮಾಜವಾದಿ ಪಾರ್ಟಿ ಮುಂದಿವೆ ಸವಾಲು

ಆದರೆ ಸಮಾಜವಾದಿ ಪಕ್ಷದ ನಾಯಕರು ಗೆಲುವು ಸಾಧಿಸುವುದೂ ಸವಾಲಿನ ಸಂಗತಿಯೇ ಸರಿ. ಅತ್ಯಂತ ಹಿಂದುಳಿದ ಸಮುದಾಯಗಳ ನಾಯಕರು ಎಸ್‌ಪಿಗೆ ಸೇರುವ ಸಾಧ್ಯತೆಯಿದೆಯಾದರೂ, ಯಾದವೇತರ ಒಬಿಸಿಗಳು ಮತ್ತು ದಲಿತರಿಗೆ ತಮ್ಮ ಹಾವಭಾವಗಳು ಪ್ರಾಮಾಣಿಕವೆಂದು ಮನವರಿಕೆ ಮಾಡುವ ಪ್ರಯತ್ನವನ್ನು ಅಖಿಲೇಶ್ ದೊಡ್ಡ ಮಟ್ಟದಲ್ಲಿ ಮಾಡಬೇಕಿದೆ.

ದಿ ವೈರ್‌ ಜಾಲತಾಣ ಅತ್ಯಂತ ಹಿಂದುಳಿದ ಸಮುದಾಯಗಳ ಜನರನ್ನು ಮಾತನಾಡಿಸಿ ವಾಸ್ತವಾಂಶಗಳನ್ನು ವರದಿ ಮಾಡಿದೆ. “ನಮ್ಮ ಮತಕ್ಕಾಗಿ ಬಿಜೆಪಿಯವರು ನಮ್ಮನ್ನು ಬಳಸಿಕೊಂಡಿದ್ದಾರೆ ಎಂದು ಭಾವಿಸುತ್ತೇವೆ. ಆದರೆ ನಮಗೆ ಉತ್ತಮ ಪರ್ಯಾಯವೂ ಕಾಣುತ್ತಿಲ್ಲ” ಎಂದು ಕನೌಜ್‌ನ ತಿರ್ವಾ ವಿಧಾನಸಭಾ ಕ್ಷೇತ್ರದಲ್ಲಿನ ಲೋಧ್ ಸಮುದಾಯಕ್ಕೆ ಸೇರಿದ ಅರವಿಂದ್ ಕುಮಾರ್ ಹೇಳುತ್ತಾರೆ.

“ಕನಿಷ್ಠ ಈ ಆಡಳಿತದಲ್ಲಿ ಪೊಲೀಸರು ನಮ್ಮಿಂದ ಸುಲಿಗೆ ಮಾಡುವುದನ್ನು ನಿಲ್ಲಿಸಿದ್ದಾರೆ. ಎಸ್ಪಿ ಆಡಳಿತಾವಧಿಯಲ್ಲಿ ಪೊಲೀಸರು ಬಡವರಿಂದ ಹಣ ವಸೂಲಿ ಮಾಡುವ ಕುಖ್ಯಾತಿಗೆ ಹೆಸರಾಗಿದ್ದರು. ನೀವು ಯಾದವರಾಗಿದ್ದರೆ ಮಾತ್ರ ಪೊಲೀಸರು ನಿಮ್ಮಿಂದ ದೂರ ಉಳಿಯುತ್ತಿದ್ದರು. ಆ ಅಭ್ಯಾಸಗಳು ಈಗ ನಿಂತುಹೋಗಿವೆ” ಎನ್ನುತ್ತಾರೆ.

ಇದನ್ನೂ ಓದಿ:ಉತ್ತರ ಪ್ರದೇಶದ ಬಿಜೆಪಿ ಶಾಸಕನ ಕೆನ್ನೆಗೆ ಬಾರಿಸಿದ ರೈತ: ಕಾರಣವೇನು?

ಬಿಲ್ಹೌರ್ ವಿಧಾನಸಭಾ ಕ್ಷೇತ್ರದಲ್ಲಿ ಮತ್ತೊಬ್ಬ ಕುರ್ಮಿ ಸಮುದಾಯದ ​​ವ್ಯಕ್ತಿ ಶಶಾಂಕ್ ವರ್ಮಾ ಹೀಗೆ ಹೇಳುತ್ತಾರೆ: “ಅಖಿಲೇಶ್ ಅವರು ಸಾಫ್ ಚಾವಿ ವಾಲಾ ನೇತಾ (ಕ್ಲೀನ್ ಇಮೇಜ್ ಹೊಂದಿರುವ ನಾಯಕ). ಆದರೆ ಪಕ್ಷದಲ್ಲಿ ಅವರಿಗಿಂತ ಕೆಳಗಿರುವವರು ನಿಜವಾದ ದಂಗೆಕೋರರು. ಎಸ್‌ಪಿ ನಾಯಕರು ಈಗ ಕೆಳಗಿಳಿದು ಮಾತನಾಡಿಸುತ್ತಾರೆ. ಆದರೆ ಅವರು ಅಧಿಕಾರಕ್ಕೆ ಬಂದ ಮರುಕ್ಷಣವೇ ಗೂಂಡಾಗಿರಿ ತೋರಿಸುತ್ತಾರೆ ಎಂಬುದು ನಮಗೆ ಗೊತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ತಳ್ಳೋ ಗಾಡಿಯಲ್ಲಿ ಆಹಾರವನ್ನು ಮಾರುತ್ತಾ ಜೀವನ ನಡೆಸುತ್ತಿರುವ ಲಖೀಂಪುರದ ತೇಲಿ ಜಾತಿಯ ಪ್ರಶಾಂತ್ ರಾಥೋಡ್ ಹೀಗೆ ಹೇಳುತ್ತಾರೆ: “ಕಳೆದ ಐದು ವರ್ಷಗಳಲ್ಲಿ ಆದಿತ್ಯನಾಥ್ ಸರ್ಕಾರದಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಅಖಿಲೇಶ್ ಸರ್ಕಾರ ಉತ್ತಮ ದಾಖಲೆ ಹೊಂದಿದೆ. ಆದರೆ ನನ್ನ ಮತ ಇನ್ನೂ ಬಿಜೆಪಿಗೆ. ಅಖಿಲೇಶ್‌ ಆಡಳಿತಕ್ಕೆ ಹೋಲಿಸಿದರೆ ಈಗ ಶಾಂತಿ ಇದೆ. ಈಗ ಯಾರೂ ಬಂದು ಉಚಿತವಾಗಿ ತಿನ್ನುವುದಿಲ್ಲ.”

ಅದೇನೇ ಇದ್ದರೂ, ಅಖಿಲೇಶ್ ಯಾದವ್‌‌ ಜಾತಿಗಳಾದ್ಯಂತ ಜನಪ್ರಿಯವಾಗಿದ್ದಾರೆ. ಅಖಿಲೇಶ್ ಅಧಿಕಾರಾವಧಿಯಲ್ಲಿ ರಾಜ್ಯದಲ್ಲಿ ಹೆಚ್ಚಿನ ಅಭಿವೃದ್ಧಿ ಕಾರ್ಯಗಳಾಗಿವೆ ಎಂಬುದನ್ನು ಎಲ್ಲ ಜಾತಿಯ ಗುಂಪುಗಳು ಒಪ್ಪುತ್ತವೆ. ಆದರೆ ಅದು ಸಾಕಾಗದೇ ಇರಬಹುದು, ಏಕೆಂದರೆ ಯುಪಿ ಚುನಾವಣೆಯಲ್ಲಿ ಜಾತಿ ಧ್ರುವೀಕರಣಕ್ಕೆ ಐತಿಹಾಸಿಕ ಮಹತ್ವವಿದೆ. ಸಮಾಜವಾದಿ ಪಕ್ಷ ಗೆಲ್ಲಬೇಕಾದರೆ ಬಿಜೆಪಿಯ ಸಾಮಾಜಿಕ ತಳಹದಿಯನ್ನು ತೀವ್ರವಾಗಿ ಕೆಡಿಸಬೇಕು. ಎಲ್ಲಕ್ಕಿಂತ ಮುಖ್ಯವಾಗಿ ಸಮಾಜವಾದಿ ಪಾರ್ಟಿಯು ಪ್ರಬಲ ಒಬಿಸಿಗಳ ಕೈ ಮೇಲಾಗದಂತೆ ಎಚ್ಚರಿಕೆ ವಹಿಸಿದೆ ಎಂಬುದನ್ನು ಮನವರಿಕೆ ಮಾಡಿಕೊಡಬೇಕು.

ಮೂಲ: ದಿ ವೈರ್ (ಅಜಯ್ ಆಶೀರ್ವಾದ್ ಮಹಾಪ್ರಶಾಸ್ತಾ)

ಇದನ್ನೂ ಓದಿರಿ: ದ್ವೇಷ ಭಾಷಣ ಕೇಸ್: ’ನೀವೆಲ್ಲರೂ ಸಾಯುತ್ತೀರಿ’ ಎಂದು ಪೊಲೀಸರಿಗೆ ಯತಿ ನರಸಿಂಗಾನಂದ ಬೆದರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...