Homeಮುಖಪುಟಕೇರಳ: ಕ್ರೈಸ್ತ ಸನ್ಯಾಸಿನಿ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ಬಿಷಪ್ ಫ್ರಾಂಕೋ ಖುಲಾಸೆ

ಕೇರಳ: ಕ್ರೈಸ್ತ ಸನ್ಯಾಸಿನಿ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ಬಿಷಪ್ ಫ್ರಾಂಕೋ ಖುಲಾಸೆ

- Advertisement -
- Advertisement -

ಎರಡು ವರ್ಷಗಳಲ್ಲಿ ಸನ್ಯಾಸಿನಿಯೊಬ್ಬರ ಮೇಲೆ ಹಲವು ಬಾರಿ ಅತ್ಯಾಚಾರವೆಸಗಿದ ಆರೋಪ ಹೊತ್ತಿದ್ದ ಮಾಜಿ ಪಾದ್ರಿ ಬಿಷಪ್ ಫ್ರಾಂಕೋ ಮುಲಕ್ಕಲ್ ಅವರನ್ನು ನ್ಯಾಯಾಲಯ ದೋಷಮುಕ್ತಗೊಳಿಸಿದೆ. ಈ ಪ್ರಕರಣ ಕೇರಳದಲ್ಲಿ ಭಾರೀ ಆಕ್ರೋಶ ಮತ್ತು ಪ್ರತಿಭಟನೆಗಳಿಗೆ ಕಾರಣವಾಗಿತ್ತು.

57 ವರ್ಷದ ಫ್ರಾಂಕೋ ಮುಲಕ್ಕಲ್ ಅವರು ಸನ್ಯಾಸಿನಿಯೊಬ್ಬರ ದೂರಿನ ಮೇರೆಗೆ ಅತ್ಯಾಚಾರ ಪ್ರಕರಣದಲ್ಲಿ ವಿಚಾರಣೆಗೆ ಒಳಗಾದ ಭಾರತದ ಮೊದಲ ಕ್ಯಾಥೋಲಿಕ್ ಬಿಷಪ್ ಆಗಿದ್ದರು. 100 ದಿನಗಳಿಗಿಂತ ಹೆಚ್ಚು ನಡೆದ ವಿಚಾರಣೆಯ ನಂತರ, ಕೊಟ್ಟಾಯಂನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಅವರನ್ನು ತಪ್ಪಿತಸ್ಥರಲ್ಲ ಎಂದು ಹೇಳಿ ಖುಲಾಸೆಗೊಳಿಸಿದೆ.

ನ್ಯಾಯಾಧೀಶ ಜಿ.ಗೋಪಕುಮಾರ್ ಶುಕ್ರವಾರ ‘ಆರೋಪಿಯನ್ನು ಖುಲಾಸೆಗೊಳಿಸಲಾಗಿದೆ’ ಎಂಬ ಒಂದು ಸಾಲಿನೊಂದಿಗೆ ತೀರ್ಪು ನೀಡಿದ್ದಾರೆ. “ಅಂತಿಮವಾಗಿ ಸತ್ಯ ಗೆದ್ದಿದೆ” ಎಂದ ಬಿಷಪ್, ನಗುಮೊಗದಿಂದ ಕೊಟ್ಟಾಯಂನ ನ್ಯಾಯಾಲಯದಿಂದ ನಿರ್ಗಮಿಸಿದ್ದಾರೆ.

ಆಗ ಕೊಟ್ಟಾಯಂ ಪೊಲೀಸ್ ಮುಖ್ಯಸ್ಥರಾಗಿದ್ದ ಎಸ್ ಹರಿ ಶಂಕರ್ ಅವರು ಇಂದಿನ ತೀರ್ಪಿಗೆ ಆಘಾತ ವ್ಯಕ್ತಪಡಿಸಿದ್ದಾರೆ. “ಈ ಪ್ರಕರಣದಲ್ಲಿ ಬಲವಾದ ಪುರಾವೆಗಳಿವೆ. ಯಾವುದೇ ಸಾಕ್ಷಿಗಳು ಪ್ರತಿಕೂಲವಾಗಿರಲಿಲ್ಲ” ಎಂದಿದ್ದಾರೆ ಎಂದು NDTV ಉಲ್ಲೇಖಿಸಿದೆ.

ಇದನ್ನೂ ಓದಿ: ಕ್ರೈಸ್ತ ಸನ್ಯಾಸಿನಿ ಅತ್ಯಾಚಾರ ಪ್ರಕರಣ: ಜನವರಿ 14 ರಂದು ತೀರ್ಪು ಪ್ರಕಟ

ಘಟನೆಯ ಹಿನ್ನೆಲೆ

ಜಲಂಧರ್ ಡಯಾಸಿಸ್‌ನ ಬಿಷಪ್ ಆಗಿ ಸೇವೆ ಸಲ್ಲಿಸುತ್ತಿದ್ದಾಗ, ಮಿಷನರೀಸ್ ಆಫ್ ಜೀಸಸ್ ಸಭೆಗೆ ಸೇರಿದ ಸನ್ಯಾಸಿನಿಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪವನ್ನು ಫ್ರಾಂಕೋ ಮೇಲೆ ಹೊರಿಸಲಾಗಿತ್ತು. 2014 ಮತ್ತು 2016 ರ ನಡುವೆ ಕೇರಳಕ್ಕೆ ಭೇಟಿ ನೀಡಿದಾಗ, 43 ವರ್ಷದ ಸನ್ಯಾಸಿನಿಯ ಮೇಲೆ 13 ಬಾರಿ ಅತ್ಯಾಚಾರ ನಡೆಸಲಾಗಿದೆ ಎಂದು ಆರೋಪ ಹೊರಿಸಲಾಗಿತ್ತು. ಈ ಆರೋಪದ ನಂತರ ಫ್ರಾಂಕೊ ಅವರನ್ನು ಜಲಂಧರ್ ಡಯಾಸಿಸ್ ಉಸ್ತುವಾರಿಯಿಂದ ತೆಗೆದುಹಾಕಲಾಗಿತ್ತು.

ಕ್ರೈಸ್ತ ಸನ್ಯಾಸಿನಿಯರು ತೀವ್ರ ರಸ್ತೆ ಪ್ರತಿಭಟನೆಗಳನ್ನು ನಡೆಸಿದ್ದರು. ಚರ್ಚ್, ಪೊಲೀಸರು ಮತ್ತು ಕೇರಳ ಸರ್ಕಾರದಿಂದ ಕ್ರಮಕ್ಕೆ ಒತ್ತಾಯಿಸಿದ್ದರು. ಬಿಷಪ್ ವಿರುದ್ಧದ ಅತ್ಯಾಚಾರ ಪ್ರಕರಣವನ್ನು ಜೂನ್ 2018 ರಲ್ಲಿ ಕೇರಳದ ಕೊಟ್ಟಾಯಂ ಜಿಲ್ಲೆಯಲ್ಲಿ ದಾಖಲಿಸಲಾಗಿತ್ತು. ಇದರ ನಂತರ ಆರೋಪಿಯನ್ನು ಸೆಪ್ಟೆಂಬರ್ 21, 2018 ರಂದು ಬಂಧಿಸಲಾಯಿತು. ಅಕ್ಟೋಬರ್ 16, 2018 ರಂದು ಜಾಮೀನು ಪಡೆದಿದ್ದರು.

ಪ್ರಕರಣದ ತನಿಖೆ ನಡೆಸಿದ ವಿಶೇಷ ತನಿಖಾ ತಂಡವು ಬಿಷಪ್ ಅವರನ್ನು ಬಂಧಿಸಿ ಅಕ್ರಮ ಬಂಧನ, ಅತ್ಯಾಚಾರ, ಅಸ್ವಾಭಾವಿಕ ಲೈಂಗಿಕತೆ ಮತ್ತು ಕ್ರಿಮಿನಲ್ ಬೆದರಿಕೆಯ ಆರೋಪವನ್ನು ಹೊರಿಸಿತ್ತು. ಪ್ರಕರಣದ ವಿಚಾರಣೆಗೆ ಸಂಬಂಧಿಸಿದ ಯಾವುದೇ ವಿಷಯವನ್ನು ತನ್ನ ಅನುಮತಿಯಿಲ್ಲದೆ ಪ್ರಕಟಿಸದಂತೆ ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳಿಗೆ ನ್ಯಾಯಾಲಯ ನಿರ್ಬಂಧ ವಿಧಿಸಿದೆ.

ಪ್ರಕರಣದ ವಿಚಾರಣೆ ನವೆಂಬರ್ 2019 ರಲ್ಲಿ ಪ್ರಾರಂಭವಾಯಿತು. ಸಿರೋ-ಮಲಬಾರ್ ಕ್ಯಾಥೋಲಿಕ್ ಚರ್ಚ್‌ನ ಕಾರ್ಡಿನಲ್ ಮಾರ್ ಜಾರ್ಜ್ ಅಲೆಂಚೇರಿ, ಮೂವರು ಬಿಷಪ್‌ಗಳು, 11 ಪಾದ್ರಿಗಳು ಮತ್ತು 22 ಸನ್ಯಾಸಿನಿಯರು ಸೇರಿದಂತೆ 83 ಸಾಕ್ಷಿಗಳನ್ನು ಚಾರ್ಜ್‌ಶೀಟ್‌‌ ಹೆಸರಿಸಿದೆ. 83 ಸಾಕ್ಷಿಗಳ ಪೈಕಿ 39 ಮಂದಿಯನ್ನು ಕರೆಸಿ ವಿಚಾರಣೆ ನಡೆಸಲಾಯಿತು.

ಈ ಮಧ್ಯೆ, ಫ್ರಾಂಕೋ ತನ್ನ ವಿರುದ್ಧದ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಕೇರಳ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದರು. ಆದರೆ ಎರಡೂ ನ್ಯಾಯಾಲಯಗಳು ಇದನ್ನು ನಿರಾಕರಿಸಿದ್ದವು.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನ್ಯಾಯಾಲಯ ನಿನ್ನನ್ನು ನಿರ್ಧೋಷಿ ಎಂದು ಖುಲಾಸೆ ಮಾಡಿರಬಹುದು. ಆದರೆ ನೀನು ಮಾಡಿರುವ ಕೃತ್ಯ ಸುಳ್ಳಾಗಲು ಸಾಧ್ಯವಿಲ್ಲ. ಏಕೆಂದರೆ ಒಬ್ಬ ಸನ್ಯಾಸಿನಿ ತನ್ನ ಮಾನವನ್ನು ಪಣಕ್ಕಿಟ್ಟು ತನ್ನ ಮೇಲೆ ಮಾನಭಂಗದಂತಹ ಕೃತ್ಯ ಹೊತ್ತುಕೊಳ್ಳಲಾರಳು. ಘನ ನ್ಯಾಯಾಲಯ ಸಾಕ್ಷಿಯ ಮೇಲೆ ತೀರ್ಪು ಕೊಟ್ಟಿರುತ್ತದೆ. ಆ ಸಾಕ್ಷಿಗಳನ್ನೇ ನೀನು ಕೊಂಡುಕೊಂಡಿರಲಿಕ್ಕೆ ಸಾಧ್ಯ. ನೀನು ಸಮಾಜದ ದೃಷ್ಟಿಯಲ್ಲಿ ನೀನು ಹತ್ಯಾಚಾರಿಯೆ. ನಿನ್ನ ಕೃತ್ಯದಿಂದ ಧರ್ಮವನ್ನು ಅಪವಿತ್ರಗೊಳಿಸಿದೆ. ನಿನಗೆ ಯಾವತ್ತೂ ಕ್ಷಮೆ ಇಲ್ಲ.

LEAVE A REPLY

Please enter your comment!
Please enter your name here

- Advertisment -

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...