Homeಮುಖಪುಟಕೇರಳ: ಕ್ರೈಸ್ತ ಸನ್ಯಾಸಿನಿ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ಬಿಷಪ್ ಫ್ರಾಂಕೋ ಖುಲಾಸೆ

ಕೇರಳ: ಕ್ರೈಸ್ತ ಸನ್ಯಾಸಿನಿ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ಬಿಷಪ್ ಫ್ರಾಂಕೋ ಖುಲಾಸೆ

- Advertisement -
- Advertisement -

ಎರಡು ವರ್ಷಗಳಲ್ಲಿ ಸನ್ಯಾಸಿನಿಯೊಬ್ಬರ ಮೇಲೆ ಹಲವು ಬಾರಿ ಅತ್ಯಾಚಾರವೆಸಗಿದ ಆರೋಪ ಹೊತ್ತಿದ್ದ ಮಾಜಿ ಪಾದ್ರಿ ಬಿಷಪ್ ಫ್ರಾಂಕೋ ಮುಲಕ್ಕಲ್ ಅವರನ್ನು ನ್ಯಾಯಾಲಯ ದೋಷಮುಕ್ತಗೊಳಿಸಿದೆ. ಈ ಪ್ರಕರಣ ಕೇರಳದಲ್ಲಿ ಭಾರೀ ಆಕ್ರೋಶ ಮತ್ತು ಪ್ರತಿಭಟನೆಗಳಿಗೆ ಕಾರಣವಾಗಿತ್ತು.

57 ವರ್ಷದ ಫ್ರಾಂಕೋ ಮುಲಕ್ಕಲ್ ಅವರು ಸನ್ಯಾಸಿನಿಯೊಬ್ಬರ ದೂರಿನ ಮೇರೆಗೆ ಅತ್ಯಾಚಾರ ಪ್ರಕರಣದಲ್ಲಿ ವಿಚಾರಣೆಗೆ ಒಳಗಾದ ಭಾರತದ ಮೊದಲ ಕ್ಯಾಥೋಲಿಕ್ ಬಿಷಪ್ ಆಗಿದ್ದರು. 100 ದಿನಗಳಿಗಿಂತ ಹೆಚ್ಚು ನಡೆದ ವಿಚಾರಣೆಯ ನಂತರ, ಕೊಟ್ಟಾಯಂನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಅವರನ್ನು ತಪ್ಪಿತಸ್ಥರಲ್ಲ ಎಂದು ಹೇಳಿ ಖುಲಾಸೆಗೊಳಿಸಿದೆ.

ನ್ಯಾಯಾಧೀಶ ಜಿ.ಗೋಪಕುಮಾರ್ ಶುಕ್ರವಾರ ‘ಆರೋಪಿಯನ್ನು ಖುಲಾಸೆಗೊಳಿಸಲಾಗಿದೆ’ ಎಂಬ ಒಂದು ಸಾಲಿನೊಂದಿಗೆ ತೀರ್ಪು ನೀಡಿದ್ದಾರೆ. “ಅಂತಿಮವಾಗಿ ಸತ್ಯ ಗೆದ್ದಿದೆ” ಎಂದ ಬಿಷಪ್, ನಗುಮೊಗದಿಂದ ಕೊಟ್ಟಾಯಂನ ನ್ಯಾಯಾಲಯದಿಂದ ನಿರ್ಗಮಿಸಿದ್ದಾರೆ.

ಆಗ ಕೊಟ್ಟಾಯಂ ಪೊಲೀಸ್ ಮುಖ್ಯಸ್ಥರಾಗಿದ್ದ ಎಸ್ ಹರಿ ಶಂಕರ್ ಅವರು ಇಂದಿನ ತೀರ್ಪಿಗೆ ಆಘಾತ ವ್ಯಕ್ತಪಡಿಸಿದ್ದಾರೆ. “ಈ ಪ್ರಕರಣದಲ್ಲಿ ಬಲವಾದ ಪುರಾವೆಗಳಿವೆ. ಯಾವುದೇ ಸಾಕ್ಷಿಗಳು ಪ್ರತಿಕೂಲವಾಗಿರಲಿಲ್ಲ” ಎಂದಿದ್ದಾರೆ ಎಂದು NDTV ಉಲ್ಲೇಖಿಸಿದೆ.

ಇದನ್ನೂ ಓದಿ: ಕ್ರೈಸ್ತ ಸನ್ಯಾಸಿನಿ ಅತ್ಯಾಚಾರ ಪ್ರಕರಣ: ಜನವರಿ 14 ರಂದು ತೀರ್ಪು ಪ್ರಕಟ

ಘಟನೆಯ ಹಿನ್ನೆಲೆ

ಜಲಂಧರ್ ಡಯಾಸಿಸ್‌ನ ಬಿಷಪ್ ಆಗಿ ಸೇವೆ ಸಲ್ಲಿಸುತ್ತಿದ್ದಾಗ, ಮಿಷನರೀಸ್ ಆಫ್ ಜೀಸಸ್ ಸಭೆಗೆ ಸೇರಿದ ಸನ್ಯಾಸಿನಿಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪವನ್ನು ಫ್ರಾಂಕೋ ಮೇಲೆ ಹೊರಿಸಲಾಗಿತ್ತು. 2014 ಮತ್ತು 2016 ರ ನಡುವೆ ಕೇರಳಕ್ಕೆ ಭೇಟಿ ನೀಡಿದಾಗ, 43 ವರ್ಷದ ಸನ್ಯಾಸಿನಿಯ ಮೇಲೆ 13 ಬಾರಿ ಅತ್ಯಾಚಾರ ನಡೆಸಲಾಗಿದೆ ಎಂದು ಆರೋಪ ಹೊರಿಸಲಾಗಿತ್ತು. ಈ ಆರೋಪದ ನಂತರ ಫ್ರಾಂಕೊ ಅವರನ್ನು ಜಲಂಧರ್ ಡಯಾಸಿಸ್ ಉಸ್ತುವಾರಿಯಿಂದ ತೆಗೆದುಹಾಕಲಾಗಿತ್ತು.

ಕ್ರೈಸ್ತ ಸನ್ಯಾಸಿನಿಯರು ತೀವ್ರ ರಸ್ತೆ ಪ್ರತಿಭಟನೆಗಳನ್ನು ನಡೆಸಿದ್ದರು. ಚರ್ಚ್, ಪೊಲೀಸರು ಮತ್ತು ಕೇರಳ ಸರ್ಕಾರದಿಂದ ಕ್ರಮಕ್ಕೆ ಒತ್ತಾಯಿಸಿದ್ದರು. ಬಿಷಪ್ ವಿರುದ್ಧದ ಅತ್ಯಾಚಾರ ಪ್ರಕರಣವನ್ನು ಜೂನ್ 2018 ರಲ್ಲಿ ಕೇರಳದ ಕೊಟ್ಟಾಯಂ ಜಿಲ್ಲೆಯಲ್ಲಿ ದಾಖಲಿಸಲಾಗಿತ್ತು. ಇದರ ನಂತರ ಆರೋಪಿಯನ್ನು ಸೆಪ್ಟೆಂಬರ್ 21, 2018 ರಂದು ಬಂಧಿಸಲಾಯಿತು. ಅಕ್ಟೋಬರ್ 16, 2018 ರಂದು ಜಾಮೀನು ಪಡೆದಿದ್ದರು.

ಪ್ರಕರಣದ ತನಿಖೆ ನಡೆಸಿದ ವಿಶೇಷ ತನಿಖಾ ತಂಡವು ಬಿಷಪ್ ಅವರನ್ನು ಬಂಧಿಸಿ ಅಕ್ರಮ ಬಂಧನ, ಅತ್ಯಾಚಾರ, ಅಸ್ವಾಭಾವಿಕ ಲೈಂಗಿಕತೆ ಮತ್ತು ಕ್ರಿಮಿನಲ್ ಬೆದರಿಕೆಯ ಆರೋಪವನ್ನು ಹೊರಿಸಿತ್ತು. ಪ್ರಕರಣದ ವಿಚಾರಣೆಗೆ ಸಂಬಂಧಿಸಿದ ಯಾವುದೇ ವಿಷಯವನ್ನು ತನ್ನ ಅನುಮತಿಯಿಲ್ಲದೆ ಪ್ರಕಟಿಸದಂತೆ ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳಿಗೆ ನ್ಯಾಯಾಲಯ ನಿರ್ಬಂಧ ವಿಧಿಸಿದೆ.

ಪ್ರಕರಣದ ವಿಚಾರಣೆ ನವೆಂಬರ್ 2019 ರಲ್ಲಿ ಪ್ರಾರಂಭವಾಯಿತು. ಸಿರೋ-ಮಲಬಾರ್ ಕ್ಯಾಥೋಲಿಕ್ ಚರ್ಚ್‌ನ ಕಾರ್ಡಿನಲ್ ಮಾರ್ ಜಾರ್ಜ್ ಅಲೆಂಚೇರಿ, ಮೂವರು ಬಿಷಪ್‌ಗಳು, 11 ಪಾದ್ರಿಗಳು ಮತ್ತು 22 ಸನ್ಯಾಸಿನಿಯರು ಸೇರಿದಂತೆ 83 ಸಾಕ್ಷಿಗಳನ್ನು ಚಾರ್ಜ್‌ಶೀಟ್‌‌ ಹೆಸರಿಸಿದೆ. 83 ಸಾಕ್ಷಿಗಳ ಪೈಕಿ 39 ಮಂದಿಯನ್ನು ಕರೆಸಿ ವಿಚಾರಣೆ ನಡೆಸಲಾಯಿತು.

ಈ ಮಧ್ಯೆ, ಫ್ರಾಂಕೋ ತನ್ನ ವಿರುದ್ಧದ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಕೇರಳ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದರು. ಆದರೆ ಎರಡೂ ನ್ಯಾಯಾಲಯಗಳು ಇದನ್ನು ನಿರಾಕರಿಸಿದ್ದವು.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನ್ಯಾಯಾಲಯ ನಿನ್ನನ್ನು ನಿರ್ಧೋಷಿ ಎಂದು ಖುಲಾಸೆ ಮಾಡಿರಬಹುದು. ಆದರೆ ನೀನು ಮಾಡಿರುವ ಕೃತ್ಯ ಸುಳ್ಳಾಗಲು ಸಾಧ್ಯವಿಲ್ಲ. ಏಕೆಂದರೆ ಒಬ್ಬ ಸನ್ಯಾಸಿನಿ ತನ್ನ ಮಾನವನ್ನು ಪಣಕ್ಕಿಟ್ಟು ತನ್ನ ಮೇಲೆ ಮಾನಭಂಗದಂತಹ ಕೃತ್ಯ ಹೊತ್ತುಕೊಳ್ಳಲಾರಳು. ಘನ ನ್ಯಾಯಾಲಯ ಸಾಕ್ಷಿಯ ಮೇಲೆ ತೀರ್ಪು ಕೊಟ್ಟಿರುತ್ತದೆ. ಆ ಸಾಕ್ಷಿಗಳನ್ನೇ ನೀನು ಕೊಂಡುಕೊಂಡಿರಲಿಕ್ಕೆ ಸಾಧ್ಯ. ನೀನು ಸಮಾಜದ ದೃಷ್ಟಿಯಲ್ಲಿ ನೀನು ಹತ್ಯಾಚಾರಿಯೆ. ನಿನ್ನ ಕೃತ್ಯದಿಂದ ಧರ್ಮವನ್ನು ಅಪವಿತ್ರಗೊಳಿಸಿದೆ. ನಿನಗೆ ಯಾವತ್ತೂ ಕ್ಷಮೆ ಇಲ್ಲ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...