Homeಮುಖಪುಟಅಖಿಲೇಶ್‌‌‌ ಜೊತೆಗೆ ಮೈತ್ರಿ ಸಾಧ್ಯವಿಲ್ಲ: ಚಂದ್ರಶೇಖರ್ ಅಜಾದ್‌

ಅಖಿಲೇಶ್‌‌‌ ಜೊತೆಗೆ ಮೈತ್ರಿ ಸಾಧ್ಯವಿಲ್ಲ: ಚಂದ್ರಶೇಖರ್ ಅಜಾದ್‌

- Advertisement -
- Advertisement -

ಉತ್ತರ ಪ್ರದೇಶ ಚುನಾವಣೆಯಲ್ಲಿ ಅಖಿಲೇಶ್‌‌‌ ಯಾದವ್‌ ಅವರ ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರು ಶನಿವಾರ ಹೇಳಿದ್ದಾರೆ.

“ಅಖಿಲೇಶ್‌ ಅವರು ದಲಿತ ಮತ ಬ್ಯಾಂಕ್‌ ಅನ್ನು ಬಯಸುತ್ತಾರೆಯೇ ಹೊರತು ದಲಿತ ನಾಯಕರಲ್ಲ. ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ಒಂದು ತಿಂಗಳಿನಿಂದ ಪ್ರಯತ್ನಿಸಿದರೂ ಅದು ಫಲ ನೀಡಲಿಲ್ಲ, ಅಖಿಲೇಶ್ ಯಾದವ್ ಬಹುಜನ ಸಮಾಜದ ಜನರನ್ನು ಅವಮಾನಿಸಿದ್ದಾರೆ” ಎಂದು ಚಂದ್ರಶೇಖರ್‌ ಆರೋಪಿಸಿದ್ದಾರೆ.

ಇದನ್ನೂ ಓದಿ:ಸಂವಿಧಾನ, ಸುಪ್ರೀಂ ಕೋರ್ಟ್ ಮೇಲೆ ನಂಬಿಕೆ ಇಲ್ಲ: ಮತ್ತೆ ನಾಲಿಗೆ ಹರಿಬಿಟ್ಟ ಯತಿ ನರಸಿಂಗಾನಂದ

“ಎಲ್ಲಾ ಚರ್ಚೆಗಳ ನಂತರ, ಅಂತಿಮವಾಗಿ, ಅಖಿಲೇಶ್ ಯಾದವ್ ಅವರಿಗೆ ಈ ಮೈತ್ರಿಯಲ್ಲಿ ದಲಿತರು ಬೇಡ, ಅವರಿಗೆ ದಲಿತ ಮತ ಬ್ಯಾಂಕ್ ಬೇಕು ಎಂದು ನನಗೆ ಅನಿಸಿತು. ಅವರು ಬಹುಜನ ಸಮಾಜದ ಜನರನ್ನು ಅವಮಾನಿಸಿದ್ದಾರೆ. ನಾನು 1 ತಿಂಗಳು 3 ದಿನಗಳ ಕಾಲ ಪ್ರಯತ್ನಿಸಿದೆ ಆದರೆ ಮೈತ್ರಿ ಸಾಧ್ಯವಾಗಲಿಲ್ಲ” ಎಂದು ಚಂದ್ರಶೇಖರ್‌ ಆಜಾದ್ ಹೇಳಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

“ಶಕ್ತಿ ಮತ್ತು ಒಗ್ಗಟ್ಟು ಇಲ್ಲದೆ ಭಾರತೀಯ ಜನತಾ ಪಕ್ಷವನ್ನು ಸೋಲಿಸುವುದು ಸುಲಭವಲ್ಲ. ಸಮಾಜದ ಎಲ್ಲ ವರ್ಗಗಳ ಪ್ರಾತಿನಿಧ್ಯವನ್ನು ಗೌರವಿಸುವುದು ಮತ್ತು ಕಾಳಜಿ ವಹಿಸುವುದು ಒಕ್ಕೂಟದ ನಾಯಕನ ಜವಾಬ್ದಾರಿಯಾಗಿದೆ. ಇಂದು ಯುಪಿಯಲ್ಲಿರುವ ದಲಿತ ವರ್ಗ ಅಖಿಲೇಶ್ ಅವರು ಈ ಜವಾಬ್ದಾರಿಯನ್ನು ಪೂರೈಸಬೇಕೆಂದು ನಿರೀಕ್ಷಿಸುತ್ತಾರೆ” ಎಂದು ಆಜಾದ್‌ ಅವರು ಶುಕ್ರವಾರ ಟ್ವೀಟ್ ಮಾಡಿದ್ದರು.

ಅಖಿಲೇಶ್‌‌ ಯಾದವ್ ಅವರ ಸಮ್ಮುಖದಲ್ಲಿ ಶುಕ್ರವಾರ ನಡೆದ ವರ್ಚುವಲ್ ರ್‍ಯಾಲಿಯಲ್ಲಿ ಆದಿತ್ಯನಾಥ್ ಸರ್ಕಾರದ ಹಲವಾರು ಬಿಜೆಪಿ ಶಾಸಕರು ಮತ್ತು ಇಬ್ಬರು ಸಚಿವರು ಸಮಾಜವಾದಿ ಪಕ್ಷಕ್ಕೆ ಸೇರಿದ್ದಾರೆ. ಈ ಸೇರಿರುವವರಲ್ಲಿ ಹೆಚ್ಚಿನವರು ಹಿಂದುಳಿದ ಜಾತಿಗಳ ನಾಯಕರಾಗಿದ್ದಾರೆ. ರಾಜೀನಾಮೆ ನೀಡಿರುವ ಶಾಸಕರು, ‘ರಾಜ್ಯ ಸರ್ಕಾರವು ಹಿಂದುಳಿದವರು ಮತ್ತು ದಲಿತರ ಹಿತಾಸಕ್ತಿಗಳನ್ನು ನಿರ್ಲಕ್ಷಿಸಿದೆ’ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ:‘ಅಳಿಯ ಅಲ್ಲ, ಮಗಳ ಗಂಡ’: ಸರ್ಕಾರದ ಹೊಸ ಆದೇಶದ ಬಗ್ಗೆ ಅತಿಥಿ ಉಪನ್ಯಾಸಕರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...