Homeಕರ್ನಾಟಕನೈಟ್-ವೀಕೆಂಡ್ ಕರ್ಫ್ಯೂ: ಲೈಟೆ ಇಲ್ಲದ ಕಂಬಗಳಾಗಿರುವ ಸರಕಾರದ ರೂಲ್ಸುಗಳು!

ನೈಟ್-ವೀಕೆಂಡ್ ಕರ್ಫ್ಯೂ: ಲೈಟೆ ಇಲ್ಲದ ಕಂಬಗಳಾಗಿರುವ ಸರಕಾರದ ರೂಲ್ಸುಗಳು!

- Advertisement -
- Advertisement -

ಮಾರಣಾಂತಿಕ ಕೊರೊನಾ ಕಳೆದ ಎರಡು ವರ್ಷಗಳಿಂದ ಇಡೀ ಮನುಕುಲವನ್ನು ಕಾಡುತ್ತಿದೆ ನಿಜ. ಆದರೆ, ಸಾಮಾನ್ಯ ಜನ ಮಾತ್ರ ಕೊರೊನಾ ಸೋಂಕಿಗೆ ಕಂಗೆಟ್ಟಿದ್ದಕ್ಕಿಂತ ಸರ್ಕಾರದ ಲಾಕ್ಡೌನ್ ಅಸ್ತ್ರಕ್ಕೆ ಬೆದರಿದ್ದೇ ಹೆಚ್ಚು. ಒಕ್ಕೂಟ ಸರ್ಕಾರದ ಲಾಕ್ಡೌನ್ ಅಕ್ಷರಶಃ ಬಡಜನ ವಲಸೆ ಕಾರ್ಮಿಕ ಮತ್ತು ದಿನಗೂಲಿ ನೌಕರರನ್ನು ಹಿಂಡಿಹಿಪ್ಪೆ ಮಾಡಿದ್ದು, ಜನ ತಮ್ಮ ಮನೆಗಾಗಿ ಸಾವಿರಾರು ಕಿಲೋ ಮೀಟರ್ ಕ್ರಮಿಸಿ ದಾರಿ ನಡುವೆ ಜೀವ ಬಿಟ್ಟಿದ್ದನ್ನು ಭಾಗಶಃ ದೇಶ ಇನ್ನೂ ಮರೆತಿಲ್ಲ.

ಇಷ್ಟಾಗಿಯೂ, ದೇಶದ ಒಳಿತಿಗಾಗಿ ಎಂಬ ಹಣೆಪಟ್ಟಿಯ ಅಡಿಯಲ್ಲಿ ಬಡಜನ ಲಾಕ್ಡೌನ್ ಅನ್ನು ಸಹಿಸಿಕೊಂಡಿದ್ದರು. ಹೀಗಿದ್ದೂ ಕೊರೊನಾ ಏನು ಕಡಿಮೆಯಾಗಿರಲಿಲ್ಲ. ಪರಿಣಾಮ ಜನ ಕೊರೊನಾ ಜೊತೆಗೆ ಬದುಕುವುದನ್ನು ಕಲಿಯಬೇಕು ಎಂಬ ಕಿವಿಮಾತು ಒಕ್ಕೂಟ ಸರ್ಕಾರದಿಂದಲೇ ಕೇಳಿ ಬಂದಿತ್ತು. ಜನರೂ ಅದಕ್ಕೆ ಒಗ್ಗಿಕೊಂಡಿದ್ದರು.

ಇದನ್ನೂ ಓದಿ:ಯುಪಿ ಚುನಾವಣೆ: ಹೋರಾಟಗಾರರು, ಸಂತ್ರಸ್ತರು ಸೇರಿ 40% ಮಹಿಳೆಯರಿಗೆ ಕಾಂಗ್ರೆಸ್ ಟಿಕೆಟ್

ಇದಾಗಿಯೂ, ಈಗ ಇದೇನಿದು ಮತ್ತೆ ತಲೆಬುಡವಿಲ್ಲದ ವೀಕೆಂಡ್ ಕರ್ಫ್ಯೂ? ಇದರಿಂದ ನಿಜಕ್ಕೂ ಕೊರೊನಾವನ್ನು ಓಡಿಸೋಕೆ ಸಾಧ್ಯಾವೇ? ಅಥವಾ ಇದು ಕೇವಲ ಸರ್ಕಾರದ ಬೂಟಾಟಿಕೆಯಾ? ಇವರ ಬೂಟಾಟಿಕೆಗಾಗಿ ದಿನಗೂಲಿ ಮತ್ತು ಬಡಜನರ ಹೊಟ್ಟೆ ಮೇಲೆ ಏಕೆ ಎಂಬ ಪ್ರಶ್ನೆ ಇದೀಗ ಜನಮಾನಸದಲ್ಲಿ ಮೂಡಿದೆ.

ತಲೆಬುಡವಿಲ್ಲದ ರೂಲ್ಸುಗಳು:

ಭಾರತದಲ್ಲಿ ಕೊರೊನಾ ವಿಪರೀತ ಹಂತಕ್ಕೆ ತಲುಪಿದ್ದ ಸಂದರ್ಭದಲ್ಲಿ ಲಕ್ಷಾಂತರ ಜನ ಈ ಸೋಂಕಿಗೆ ಒಳಗಾಗಿ ಸಾಕಷ್ಟು ನೋವುಗಳನ್ನು ಅನುಭವಿಸಿದ್ದರೆ, ಅಸಂಖ್ಯಾತ ಜನ ಮೃತಪಟ್ಟಿದ್ದಾರೆ. ಕೊರೊನಾ ಸೋಂಕಿನಿಂದ ಮೃತಪಟ್ಟವರಿಗೆ ಕನಿಷ್ಟ ಒಂದು ಗೌರವಾನ್ವಿತ ಅಂತ್ಯ ಸಂಸ್ಕಾರವೂ ಸಿಗದೆ ಹೋದದ್ದನ್ನು ಸ್ಮಶಾನಗಳ ಎದುರು ಶವಗಳು ಸಾಲುಗಟ್ಟಿನಿಂತ, ಗಂಗೆಯಲ್ಲಿ ಹೆಣಗಳನ್ನು ಬಿಸಾಡಿ ಹೋದ ಹತ್ತಾರು ಅಮಾನವೀಯ ಘಟನೆಗಳಿಗೆ ಭಾರತ ಸಾಕ್ಷಿಯಾಗಿತ್ತು.

ಪರಿಣಾಮ 2021 ರಲ್ಲಿ ದೇಶದಾದ್ಯಂತ ಸಾಲು ಸಾಲು ಲಾಕ್ಡೌನ್ ಹೇರಲಾಗಿತ್ತು. ಹತ್ತಾರು ಕಷ್ಟದ ನಿಯಮಗಳನ್ನು ರೂಪಿಸಲಾಗಿತ್ತು. ಆದರೂ, ಸಹ ಯಾವ ಪ್ರಯತ್ನವೂ ಫಲ ನೀಡಿರಲಿಲ್ಲ. ಕನಿಷ್ಟ 4.85 ಲಕ್ಷ ಜನ ಈ ಸೋಂಕಿಗೆ ಬಲಿಯಾಗಿದ್ದರು. ಸಾವುಗಳು ಹೆಚ್ಚುತ್ತಿದ್ದ ಅದೇ ಸಂದರ್ಭದಲ್ಲೇ ಮತ್ತೊಂದೆಡೆ ಜನರಲ್ಲಿ ಸಾಮೂಹಿಕ ರೋಗ ನಿರೋಧಕ ಶಕ್ತಿಯೂ ವೃದ್ಧಿಸಿತ್ತು ಎನ್ನುತ್ತಿವೆ ಹಲವು ಅಧ್ಯಯನಗಳು.

ಇದನ್ನೂ ಓದಿ:‘ಅಳಿಯ ಅಲ್ಲ, ಮಗಳ ಗಂಡ’: ಸರ್ಕಾರದ ಹೊಸ ಆದೇಶದ ಬಗ್ಗೆ ಅತಿಥಿ ಉಪನ್ಯಾಸಕರ ಆಕ್ರೋಶ

ಇದಕ್ಕೆ ಪೂರಕವಾಗಿ ಕೊರೊನಾ ಬೆನ್ನಿಗೆ ದಾಳಿಯಿಟ್ಟ ಡೆಲ್ಟಾ ಪ್ಲಸ್, ಬ್ಯ್ಲಾಕ್ ಫಂಗಸ್ ಸಹ ಅಷ್ಟೇನೂ ದೊಡ್ಡ ಅಪಾಯವನ್ನು ತಂದಿಟ್ಟಿರಲಿಲ್ಲ. ಪರಿಣಾಮ ಜನ ಸಾಮಾನ್ಯವಾಗಿಯೇ ಈ ವೈರಸ್‌ಗೆ ಹೆದರುವುದನ್ನು ಬಿಟ್ಟಿದ್ದರು. ಸರ್ಕಾರವೂ ಸಹ ಲಾಕ್ಡೌನ್ ಅನ್ನು ಸಿಡಿಲಿಸಿ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂವನ್ನು ಹೇರಿತ್ತು. ಈ ನಿಯಮಗಳು ಅಷ್ಟೇನು ಪರಿಣಾಮಕಾರಿ ಅಲ್ಲ ಎಂಬ ವಿವಾದದಿಂದಾಗಿಯೇ ಕೊನೆಗೆ ಅದನ್ನೂ ಕೈಬಿಡಲಾಗಿತ್ತು. ಆದರೆ, ಸರ್ಕಾರ ಈಗ ಮತ್ತೆ ಅದೇ ವೀಕೆಂಡ್ ಕರ್ಫ್ಯೂವನ್ನು ಹೇರಿದೆ. ಈ ಮೂಲಕ ಕೊರೊನಾವನ್ನು ನಿಯಂತ್ರಿಸಬಹುದು ಎನ್ನುತ್ತಿದೆ. ಹಾಗಾದರೆ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಮೂಲಕ ಕೊರೊನಾ ನಿಯಂತ್ರಣ ಸಾಧ್ಯವೇ? ಏನನ್ನುತ್ತಿವೆ ಅಂಕಿಅಂಶಗಳು.

ವೀಕೆಂಡ್ ಕರ್ಫ್ಯೂ ಪರಿಣಾಮಕಾರಿಯೇ?:

ಕರ್ನಾಟಕದಲ್ಲಿ ಈವರೆಗೆ ಒಟ್ಟು 16,46,193 ಕೊರೊನಾ ಕೇಸ್‌ಗಳು ದಾಖಲಾಗಿವೆ. ಈ ಪೈಕಿ ಸಕ್ರೀಯ ಪ್ರಕರಣಗಳು ಕೇವಲ 2334. 4,12,266 ಜನ ಸೋಂಕಿನಿಂದ ಚೇತರಿಸಿಕೊಳ್ಳುತ್ತಿದ್ದರೆ, ಮೃತಪಟ್ಟವರ ಸಂಖ್ಯೆ ಕೇವಲ 8 ಮಾತ್ರ. ಇನ್ನೂ ವೀಕೆಂಡ್ ಕರ್ಫ್ಯೂ ಹೆಸರಿನಲ್ಲಿ ಜನವರಿ 1 ಮತ್ತು 2 ರಂದು ಇಡೀ ಬೆಂಗಳೂರು ಮಹಾನಗರವನ್ನು ಬಂದ್ ಮಾಡಲಾಗಿತ್ತು. ಆದರೆ, ಈ ವೇಳೆ ಸೋಂಕು ಹರಡುವ ಪ್ರಮಾಣ ಇತರೆ ದಿನಕ್ಕಿಂತ ಶೇ. 5ರಿಂದ 6ರಷ್ಟು ಮಾತ್ರ ಕಡಿಮೆಯಾಗಿದೆಯೇ ಹೊರತು ಹೆಚ್ಚು ಲಾಭವೇನಿಲ್ಲ.

ಆದರೆ, ವಾರಾಂತ್ಯದ ಹೊರತಾಗಿ ಉಳಿದ ದಿನಗಳಲ್ಲಿ ಜನ ಸಾಮಾನ್ಯರ ಓಡಾಟಕ್ಕೆ ಎಂದಿನಂತೆ ಅವಕಾಶ ನೀಡಲಾಗಿದೆ. ಆದರೆ, ಈ ದಿನಗಳಲ್ಲಿ ಜನರಿಗೆ ಸೋಂಕು ಹರಡುವುದಿಲ್ಲವೇ? ಕೇವಲ ವಾರಾಂತ್ಯಗಳಲ್ಲಿ ಮಾತ್ರ ಸೋಂಕು ಹರಡುತ್ತದೆಯೇ? ಎಂದು ಜನ ಸಾಮಾನ್ಯರು ತಲೆಬುಡವಿಲ್ಲದ ಸರ್ಕಾರದ ಈ ನಿಯಮಗಳ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. ಅದಕ್ಕೂ ಕಾರಣಗಳು ಇಲ್ಲದೆ ಏನಿಲ್ಲ.

ಇದನ್ನೂ ಓದಿ:ತಮಿಳುನಾಡಿನಲ್ಲಿ ಸಂಪೂರ್ಣ ಲಾಕ್‌ಡೌನ್ ಅಗತ್ಯವಿಲ್ಲ: ಆರೋಗ್ಯ ಸಚಿವ ಮಾ ಸುಬ್ರಮಣಿಯನ್

ಸರ್ಕಾರದ ವಿರುದ್ಧ ಜನಾಕ್ರೋಶ:

2021ರಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿ ಲಾಕ್ಡೌನ್ ಘೋಷಿಸಿದ್ದಾಗ ಅತಿ ಹೆಚ್ಚು ಸಂಕಷ್ಟಕ್ಕೆ ಒಳಗಾದವರು ದಿನಗೂಲಿ ಮತ್ತು ವಲಸೆ ಕಾರ್ಮಿಕರು. ಈ ವೇಳೆ ಜನ ಕೆಲಸ ಇಲ್ಲದೆ, ಕೂಲಿಯೂ ಇಲ್ಲದೆ ಹಸಿವಿನಿಂದ ಸಾಯುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ವಿರೋಧ ಪಕ್ಷಗಳ ಸತತ ವಾಗ್ದಾಳಿಯ ನಂತರ ಕೇಂದ್ರ ಸರ್ಕಾರ 20 ಲಕ್ಷ ರೂ. ಪ್ಯಾಕೇಜ್ ಘೋಷಣೆ ಮಾಡಿತ್ತಾದರೂ ಲಕ್ಷಾಂತರ ಫಲಾನುಭವಿಗಳಿಗೆ ಇನ್ನೂ ಆ ಹಣ ಸಿಕ್ಕೇ ಇಲ್ಲ. ಆಗ ಅನುಭವಿಸಿದ್ದ ಕಷ್ಟಗಳಿಂದಲೇ ಬಡ ಜನ ಇನ್ನೂ ಚೇತರಿಸಿಕೊಂಡಿಲ್ಲ. ಅಷ್ಟರಲ್ಲೇ ಮತ್ತೊಂದು ವೀಕೆಂಡ್ ಕರ್ಫ್ಯೂ ಜಾರಿಯಾಗಿದೆ.

ಈ ವೀಕೆಂಡ್ ಕರ್ಫ್ಯೂನಿಂದ ದಿನಗೂಲಿ ನೌಕರರು, ಕಾರ್ಮಿಕರು ಅದರಲ್ಲೂ ಮುಖ್ಯವಾಗಿ ಆಟೋ ಮತ್ತು ಕ್ಯಾಬ್ ಚಾಲಕರು ಸಾಕಷ್ಟು ತೊಂದರೆಗೆ ಈಡಾಗುತ್ತಾರೆ. ದಿನದ ದುಡಿಮೆ ಇಲ್ಲದೆ ಸಂಕಷ್ಟಕ್ಕೆ ಒಳಗಾಗುತ್ತಾರೆ. ಆದರೆ, ಇದ್ಯಾವುದರ ಬಗ್ಗೆಯೂ ಪರಿವೆಯೇ ಇಲ್ಲದ ಸರ್ಕಾರ ಬಡ ಜನರಿಗೆ ಕನಿಷ್ಟ ಪರಿಹಾರ ಅಥವಾ ಪಡಿತರವೂ ನೀಡದೆ ಕರ್ಫ್ಯೂ ಹೇರಿರುವುದು ನಿಜಕ್ಕೂ ಅಮಾನವೀಯತೆಯ ಪರಮಾವಧಿ. ಇಷ್ಟಕ್ಕೂ ಪಂಚ ರಾಜ್ಯಗಳ ಚುನಾವಣೆ ಎದುರಾಗಿದ್ದು ಬಿಜೆಪಿ ಎಲ್ಲೆಡೆ ಸಾಲು ಸಾಲು ಚುನಾವಣಾ ರ್ಯಾಲಿಗಳನ್ನು ಆಯೋಜಿಸಿದೆ. ಈ ರ್‍ಯಾಲಿಗಳಲ್ಲಿ ಆವರಿಸದ ಕೊರೊನಾ ಕರ್ನಾಟಕಕ್ಕೆ ಮಾತ್ರ ಕಂಟಕವಾಗಲಿದೆ ಎಂದು ಸರ್ಕಾರ ಅಂದಾಜಿಸಿರುವುದು ದುರದೃಷ್ಟಕರ.

ಇದನ್ನೂ ಓದಿ:ನಟಿಯ ಬಗ್ಗೆ ಅಸಂಬದ್ದ ಸುದ್ದಿ ಪ್ರಕಟಿಸಿ ‘ವಿಕೃತಿ’ ಮೆರೆದ ವಿಜಯವಾಣಿ.ನೆಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...