Homeಕರ್ನಾಟಕನೈಟ್-ವೀಕೆಂಡ್ ಕರ್ಫ್ಯೂ: ಲೈಟೆ ಇಲ್ಲದ ಕಂಬಗಳಾಗಿರುವ ಸರಕಾರದ ರೂಲ್ಸುಗಳು!

ನೈಟ್-ವೀಕೆಂಡ್ ಕರ್ಫ್ಯೂ: ಲೈಟೆ ಇಲ್ಲದ ಕಂಬಗಳಾಗಿರುವ ಸರಕಾರದ ರೂಲ್ಸುಗಳು!

- Advertisement -
- Advertisement -

ಮಾರಣಾಂತಿಕ ಕೊರೊನಾ ಕಳೆದ ಎರಡು ವರ್ಷಗಳಿಂದ ಇಡೀ ಮನುಕುಲವನ್ನು ಕಾಡುತ್ತಿದೆ ನಿಜ. ಆದರೆ, ಸಾಮಾನ್ಯ ಜನ ಮಾತ್ರ ಕೊರೊನಾ ಸೋಂಕಿಗೆ ಕಂಗೆಟ್ಟಿದ್ದಕ್ಕಿಂತ ಸರ್ಕಾರದ ಲಾಕ್ಡೌನ್ ಅಸ್ತ್ರಕ್ಕೆ ಬೆದರಿದ್ದೇ ಹೆಚ್ಚು. ಒಕ್ಕೂಟ ಸರ್ಕಾರದ ಲಾಕ್ಡೌನ್ ಅಕ್ಷರಶಃ ಬಡಜನ ವಲಸೆ ಕಾರ್ಮಿಕ ಮತ್ತು ದಿನಗೂಲಿ ನೌಕರರನ್ನು ಹಿಂಡಿಹಿಪ್ಪೆ ಮಾಡಿದ್ದು, ಜನ ತಮ್ಮ ಮನೆಗಾಗಿ ಸಾವಿರಾರು ಕಿಲೋ ಮೀಟರ್ ಕ್ರಮಿಸಿ ದಾರಿ ನಡುವೆ ಜೀವ ಬಿಟ್ಟಿದ್ದನ್ನು ಭಾಗಶಃ ದೇಶ ಇನ್ನೂ ಮರೆತಿಲ್ಲ.

ಇಷ್ಟಾಗಿಯೂ, ದೇಶದ ಒಳಿತಿಗಾಗಿ ಎಂಬ ಹಣೆಪಟ್ಟಿಯ ಅಡಿಯಲ್ಲಿ ಬಡಜನ ಲಾಕ್ಡೌನ್ ಅನ್ನು ಸಹಿಸಿಕೊಂಡಿದ್ದರು. ಹೀಗಿದ್ದೂ ಕೊರೊನಾ ಏನು ಕಡಿಮೆಯಾಗಿರಲಿಲ್ಲ. ಪರಿಣಾಮ ಜನ ಕೊರೊನಾ ಜೊತೆಗೆ ಬದುಕುವುದನ್ನು ಕಲಿಯಬೇಕು ಎಂಬ ಕಿವಿಮಾತು ಒಕ್ಕೂಟ ಸರ್ಕಾರದಿಂದಲೇ ಕೇಳಿ ಬಂದಿತ್ತು. ಜನರೂ ಅದಕ್ಕೆ ಒಗ್ಗಿಕೊಂಡಿದ್ದರು.

ಇದನ್ನೂ ಓದಿ:ಯುಪಿ ಚುನಾವಣೆ: ಹೋರಾಟಗಾರರು, ಸಂತ್ರಸ್ತರು ಸೇರಿ 40% ಮಹಿಳೆಯರಿಗೆ ಕಾಂಗ್ರೆಸ್ ಟಿಕೆಟ್

ಇದಾಗಿಯೂ, ಈಗ ಇದೇನಿದು ಮತ್ತೆ ತಲೆಬುಡವಿಲ್ಲದ ವೀಕೆಂಡ್ ಕರ್ಫ್ಯೂ? ಇದರಿಂದ ನಿಜಕ್ಕೂ ಕೊರೊನಾವನ್ನು ಓಡಿಸೋಕೆ ಸಾಧ್ಯಾವೇ? ಅಥವಾ ಇದು ಕೇವಲ ಸರ್ಕಾರದ ಬೂಟಾಟಿಕೆಯಾ? ಇವರ ಬೂಟಾಟಿಕೆಗಾಗಿ ದಿನಗೂಲಿ ಮತ್ತು ಬಡಜನರ ಹೊಟ್ಟೆ ಮೇಲೆ ಏಕೆ ಎಂಬ ಪ್ರಶ್ನೆ ಇದೀಗ ಜನಮಾನಸದಲ್ಲಿ ಮೂಡಿದೆ.

ತಲೆಬುಡವಿಲ್ಲದ ರೂಲ್ಸುಗಳು:

ಭಾರತದಲ್ಲಿ ಕೊರೊನಾ ವಿಪರೀತ ಹಂತಕ್ಕೆ ತಲುಪಿದ್ದ ಸಂದರ್ಭದಲ್ಲಿ ಲಕ್ಷಾಂತರ ಜನ ಈ ಸೋಂಕಿಗೆ ಒಳಗಾಗಿ ಸಾಕಷ್ಟು ನೋವುಗಳನ್ನು ಅನುಭವಿಸಿದ್ದರೆ, ಅಸಂಖ್ಯಾತ ಜನ ಮೃತಪಟ್ಟಿದ್ದಾರೆ. ಕೊರೊನಾ ಸೋಂಕಿನಿಂದ ಮೃತಪಟ್ಟವರಿಗೆ ಕನಿಷ್ಟ ಒಂದು ಗೌರವಾನ್ವಿತ ಅಂತ್ಯ ಸಂಸ್ಕಾರವೂ ಸಿಗದೆ ಹೋದದ್ದನ್ನು ಸ್ಮಶಾನಗಳ ಎದುರು ಶವಗಳು ಸಾಲುಗಟ್ಟಿನಿಂತ, ಗಂಗೆಯಲ್ಲಿ ಹೆಣಗಳನ್ನು ಬಿಸಾಡಿ ಹೋದ ಹತ್ತಾರು ಅಮಾನವೀಯ ಘಟನೆಗಳಿಗೆ ಭಾರತ ಸಾಕ್ಷಿಯಾಗಿತ್ತು.

ಪರಿಣಾಮ 2021 ರಲ್ಲಿ ದೇಶದಾದ್ಯಂತ ಸಾಲು ಸಾಲು ಲಾಕ್ಡೌನ್ ಹೇರಲಾಗಿತ್ತು. ಹತ್ತಾರು ಕಷ್ಟದ ನಿಯಮಗಳನ್ನು ರೂಪಿಸಲಾಗಿತ್ತು. ಆದರೂ, ಸಹ ಯಾವ ಪ್ರಯತ್ನವೂ ಫಲ ನೀಡಿರಲಿಲ್ಲ. ಕನಿಷ್ಟ 4.85 ಲಕ್ಷ ಜನ ಈ ಸೋಂಕಿಗೆ ಬಲಿಯಾಗಿದ್ದರು. ಸಾವುಗಳು ಹೆಚ್ಚುತ್ತಿದ್ದ ಅದೇ ಸಂದರ್ಭದಲ್ಲೇ ಮತ್ತೊಂದೆಡೆ ಜನರಲ್ಲಿ ಸಾಮೂಹಿಕ ರೋಗ ನಿರೋಧಕ ಶಕ್ತಿಯೂ ವೃದ್ಧಿಸಿತ್ತು ಎನ್ನುತ್ತಿವೆ ಹಲವು ಅಧ್ಯಯನಗಳು.

ಇದನ್ನೂ ಓದಿ:‘ಅಳಿಯ ಅಲ್ಲ, ಮಗಳ ಗಂಡ’: ಸರ್ಕಾರದ ಹೊಸ ಆದೇಶದ ಬಗ್ಗೆ ಅತಿಥಿ ಉಪನ್ಯಾಸಕರ ಆಕ್ರೋಶ

ಇದಕ್ಕೆ ಪೂರಕವಾಗಿ ಕೊರೊನಾ ಬೆನ್ನಿಗೆ ದಾಳಿಯಿಟ್ಟ ಡೆಲ್ಟಾ ಪ್ಲಸ್, ಬ್ಯ್ಲಾಕ್ ಫಂಗಸ್ ಸಹ ಅಷ್ಟೇನೂ ದೊಡ್ಡ ಅಪಾಯವನ್ನು ತಂದಿಟ್ಟಿರಲಿಲ್ಲ. ಪರಿಣಾಮ ಜನ ಸಾಮಾನ್ಯವಾಗಿಯೇ ಈ ವೈರಸ್‌ಗೆ ಹೆದರುವುದನ್ನು ಬಿಟ್ಟಿದ್ದರು. ಸರ್ಕಾರವೂ ಸಹ ಲಾಕ್ಡೌನ್ ಅನ್ನು ಸಿಡಿಲಿಸಿ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂವನ್ನು ಹೇರಿತ್ತು. ಈ ನಿಯಮಗಳು ಅಷ್ಟೇನು ಪರಿಣಾಮಕಾರಿ ಅಲ್ಲ ಎಂಬ ವಿವಾದದಿಂದಾಗಿಯೇ ಕೊನೆಗೆ ಅದನ್ನೂ ಕೈಬಿಡಲಾಗಿತ್ತು. ಆದರೆ, ಸರ್ಕಾರ ಈಗ ಮತ್ತೆ ಅದೇ ವೀಕೆಂಡ್ ಕರ್ಫ್ಯೂವನ್ನು ಹೇರಿದೆ. ಈ ಮೂಲಕ ಕೊರೊನಾವನ್ನು ನಿಯಂತ್ರಿಸಬಹುದು ಎನ್ನುತ್ತಿದೆ. ಹಾಗಾದರೆ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಮೂಲಕ ಕೊರೊನಾ ನಿಯಂತ್ರಣ ಸಾಧ್ಯವೇ? ಏನನ್ನುತ್ತಿವೆ ಅಂಕಿಅಂಶಗಳು.

ವೀಕೆಂಡ್ ಕರ್ಫ್ಯೂ ಪರಿಣಾಮಕಾರಿಯೇ?:

ಕರ್ನಾಟಕದಲ್ಲಿ ಈವರೆಗೆ ಒಟ್ಟು 16,46,193 ಕೊರೊನಾ ಕೇಸ್‌ಗಳು ದಾಖಲಾಗಿವೆ. ಈ ಪೈಕಿ ಸಕ್ರೀಯ ಪ್ರಕರಣಗಳು ಕೇವಲ 2334. 4,12,266 ಜನ ಸೋಂಕಿನಿಂದ ಚೇತರಿಸಿಕೊಳ್ಳುತ್ತಿದ್ದರೆ, ಮೃತಪಟ್ಟವರ ಸಂಖ್ಯೆ ಕೇವಲ 8 ಮಾತ್ರ. ಇನ್ನೂ ವೀಕೆಂಡ್ ಕರ್ಫ್ಯೂ ಹೆಸರಿನಲ್ಲಿ ಜನವರಿ 1 ಮತ್ತು 2 ರಂದು ಇಡೀ ಬೆಂಗಳೂರು ಮಹಾನಗರವನ್ನು ಬಂದ್ ಮಾಡಲಾಗಿತ್ತು. ಆದರೆ, ಈ ವೇಳೆ ಸೋಂಕು ಹರಡುವ ಪ್ರಮಾಣ ಇತರೆ ದಿನಕ್ಕಿಂತ ಶೇ. 5ರಿಂದ 6ರಷ್ಟು ಮಾತ್ರ ಕಡಿಮೆಯಾಗಿದೆಯೇ ಹೊರತು ಹೆಚ್ಚು ಲಾಭವೇನಿಲ್ಲ.

ಆದರೆ, ವಾರಾಂತ್ಯದ ಹೊರತಾಗಿ ಉಳಿದ ದಿನಗಳಲ್ಲಿ ಜನ ಸಾಮಾನ್ಯರ ಓಡಾಟಕ್ಕೆ ಎಂದಿನಂತೆ ಅವಕಾಶ ನೀಡಲಾಗಿದೆ. ಆದರೆ, ಈ ದಿನಗಳಲ್ಲಿ ಜನರಿಗೆ ಸೋಂಕು ಹರಡುವುದಿಲ್ಲವೇ? ಕೇವಲ ವಾರಾಂತ್ಯಗಳಲ್ಲಿ ಮಾತ್ರ ಸೋಂಕು ಹರಡುತ್ತದೆಯೇ? ಎಂದು ಜನ ಸಾಮಾನ್ಯರು ತಲೆಬುಡವಿಲ್ಲದ ಸರ್ಕಾರದ ಈ ನಿಯಮಗಳ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. ಅದಕ್ಕೂ ಕಾರಣಗಳು ಇಲ್ಲದೆ ಏನಿಲ್ಲ.

ಇದನ್ನೂ ಓದಿ:ತಮಿಳುನಾಡಿನಲ್ಲಿ ಸಂಪೂರ್ಣ ಲಾಕ್‌ಡೌನ್ ಅಗತ್ಯವಿಲ್ಲ: ಆರೋಗ್ಯ ಸಚಿವ ಮಾ ಸುಬ್ರಮಣಿಯನ್

ಸರ್ಕಾರದ ವಿರುದ್ಧ ಜನಾಕ್ರೋಶ:

2021ರಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿ ಲಾಕ್ಡೌನ್ ಘೋಷಿಸಿದ್ದಾಗ ಅತಿ ಹೆಚ್ಚು ಸಂಕಷ್ಟಕ್ಕೆ ಒಳಗಾದವರು ದಿನಗೂಲಿ ಮತ್ತು ವಲಸೆ ಕಾರ್ಮಿಕರು. ಈ ವೇಳೆ ಜನ ಕೆಲಸ ಇಲ್ಲದೆ, ಕೂಲಿಯೂ ಇಲ್ಲದೆ ಹಸಿವಿನಿಂದ ಸಾಯುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ವಿರೋಧ ಪಕ್ಷಗಳ ಸತತ ವಾಗ್ದಾಳಿಯ ನಂತರ ಕೇಂದ್ರ ಸರ್ಕಾರ 20 ಲಕ್ಷ ರೂ. ಪ್ಯಾಕೇಜ್ ಘೋಷಣೆ ಮಾಡಿತ್ತಾದರೂ ಲಕ್ಷಾಂತರ ಫಲಾನುಭವಿಗಳಿಗೆ ಇನ್ನೂ ಆ ಹಣ ಸಿಕ್ಕೇ ಇಲ್ಲ. ಆಗ ಅನುಭವಿಸಿದ್ದ ಕಷ್ಟಗಳಿಂದಲೇ ಬಡ ಜನ ಇನ್ನೂ ಚೇತರಿಸಿಕೊಂಡಿಲ್ಲ. ಅಷ್ಟರಲ್ಲೇ ಮತ್ತೊಂದು ವೀಕೆಂಡ್ ಕರ್ಫ್ಯೂ ಜಾರಿಯಾಗಿದೆ.

ಈ ವೀಕೆಂಡ್ ಕರ್ಫ್ಯೂನಿಂದ ದಿನಗೂಲಿ ನೌಕರರು, ಕಾರ್ಮಿಕರು ಅದರಲ್ಲೂ ಮುಖ್ಯವಾಗಿ ಆಟೋ ಮತ್ತು ಕ್ಯಾಬ್ ಚಾಲಕರು ಸಾಕಷ್ಟು ತೊಂದರೆಗೆ ಈಡಾಗುತ್ತಾರೆ. ದಿನದ ದುಡಿಮೆ ಇಲ್ಲದೆ ಸಂಕಷ್ಟಕ್ಕೆ ಒಳಗಾಗುತ್ತಾರೆ. ಆದರೆ, ಇದ್ಯಾವುದರ ಬಗ್ಗೆಯೂ ಪರಿವೆಯೇ ಇಲ್ಲದ ಸರ್ಕಾರ ಬಡ ಜನರಿಗೆ ಕನಿಷ್ಟ ಪರಿಹಾರ ಅಥವಾ ಪಡಿತರವೂ ನೀಡದೆ ಕರ್ಫ್ಯೂ ಹೇರಿರುವುದು ನಿಜಕ್ಕೂ ಅಮಾನವೀಯತೆಯ ಪರಮಾವಧಿ. ಇಷ್ಟಕ್ಕೂ ಪಂಚ ರಾಜ್ಯಗಳ ಚುನಾವಣೆ ಎದುರಾಗಿದ್ದು ಬಿಜೆಪಿ ಎಲ್ಲೆಡೆ ಸಾಲು ಸಾಲು ಚುನಾವಣಾ ರ್ಯಾಲಿಗಳನ್ನು ಆಯೋಜಿಸಿದೆ. ಈ ರ್‍ಯಾಲಿಗಳಲ್ಲಿ ಆವರಿಸದ ಕೊರೊನಾ ಕರ್ನಾಟಕಕ್ಕೆ ಮಾತ್ರ ಕಂಟಕವಾಗಲಿದೆ ಎಂದು ಸರ್ಕಾರ ಅಂದಾಜಿಸಿರುವುದು ದುರದೃಷ್ಟಕರ.

ಇದನ್ನೂ ಓದಿ:ನಟಿಯ ಬಗ್ಗೆ ಅಸಂಬದ್ದ ಸುದ್ದಿ ಪ್ರಕಟಿಸಿ ‘ವಿಕೃತಿ’ ಮೆರೆದ ವಿಜಯವಾಣಿ.ನೆಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...

1.50 ಕೋಟಿ ರೂ. ಐಟಿ ದಂಡ ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ 

ಚೆನ್ನೈ: 2015–16ರ ಮೌಲ್ಯಮಾಪನ ವರ್ಷದಲ್ಲಿ ಆದಾಯ ಬಹಿರಂಗಪಡಿಸದಿದ್ದಕ್ಕಾಗಿ 1.50 ಕೋಟಿ ರೂ. ದಂಡ ವಿಧಿಸಿದ ಆದಾಯ ತೆರಿಗೆ ಇಲಾಖೆಯ ಆದೇಶವನ್ನು ಪ್ರಶ್ನಿಸಿ ನಟ-ರಾಜಕಾರಣಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆದಾಯ...

ಮೇಘಾಲಯ ಗಣಿ ಸ್ಫೋಟ: ಸಾವನ್ನಪ್ಪಿದ ಮೂವರು ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಗುವಾಹಟಿ: ಮೇಘಾಲಯದ ಪಕ್ಕದ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಸಾವನ್ನಪ್ಪಿದ ಅಸ್ಸಾಂ ರಾಜ್ಯದ ಮೂವರು ಕಾರ್ಮಿಕರ ಕುಟುಂಬಗಳಿಗೆ  ಸರ್ಕಾರ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.  ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ, ಸಂತ್ರಸ್ತರು...

ದೆಹಲಿಯಲ್ಲಿ ಹೆಣ್ಣು ಮಕ್ಕಳು ನಾಪತ್ತೆ ಪ್ರಕರಣ ಹೆಚ್ಚಳವಾಗುತ್ತಿರುವ ವರದಿ ನಿರಾಕರಿಸಿದ ಪೊಲೀಸರು: ಕಠಿಣ ಕ್ರಮದ ಎಚ್ಚರಿಕೆ

ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಹುಡುಗಿಯರು ಕಾಣೆಯಾಗುವ ಪ್ರಕರಣಗಳು ಹೆಚ್ಚಳವಾಗುತ್ತಿವೆ ಎಂಬ ವರದಿಗಳನ್ನು ದೆಹಲಿ ಪೊಲೀಸರು ತಿರಸ್ಕರಿಸಿದ್ದಾರೆ. ಈ ಆರೋಪಗಳು ದಾರಿತಪ್ಪಿಸುವಂತಿದ್ದು, ಭೀತಿ ಸೃಷ್ಟಿಸುವ ಗುರಿಯನ್ನು ಹೊಂದಿರುವ ಪಾವತಿಸಿದ ಆನ್‌ಲೈನ್ ಪ್ರಚಾರದಿಂದ ನಡೆಸಲ್ಪಡುತ್ತಿದೆ ಎಂದು ಅವರು...

ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆ, ಪ್ರಧಾನಿ ಪ್ರತಿಕ್ರಿಯೆ ಇಲ್ಲದೆ ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಇಂದು (ಫೆ.5, ಗುರುವಾರ) ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆಯಾಯಿತು. ಆದರೂ, ಗದ್ದಲ ಕಡಿಮೆಯಾಗದ ಕಾರಣ ಅಂತಿಮವಾಗಿ ಸ್ಪೀಕರ್ ಓಂ ಬಿರ್ಲಾ ಕಲಾಪವನ್ನು ಒಂದು ದಿನದ ಮಟ್ಟಿಗೆ,...

ಮಾಲೂರು ಮರು ಮತ ಎಣಿಕೆ : ಕಾಂಗ್ರೆಸ್‌ನ ನಂಜೇಗೌಡ ಗೆಲುವು ಎತ್ತಿಹಿಡಿದ ಸುಪ್ರೀಂ ಕೋರ್ಟ್

ರಾಜ್ಯ ವಿಧಾನಸಭೆಯ 2023ರ ಚುನಾವಣೆಯಲ್ಲಿ ಕೋಲಾರ ಜಿಲ್ಲೆ ಮಾಲೂರು ಕ್ಷೇತ್ರದಿಂದ ಕಾಂಗ್ರೆಸ್‌ನ ಕೆ.ವೈ ನಂಜೇಗೌಡ ಗೆಲುವು ಸಾಧಿಸಿರುವುದನ್ನು ಸುಪ್ರೀಂ ಕೋರ್ಟ್ ಗುರುವಾರ (ಫೆ.5) ಎತ್ತಿ ಹಿಡಿದಿದೆ. ಮತಗಳ ಮರುಎಣಿಕೆಯ ನಂತರವೂ, ನಂಜೇಗೌಡರು ತಮ್ಮ ಎದುರಾಳಿ...

ಅತ್ಯಾಚಾರಿ ಅಸಾರಾಂ ಆಶ್ರಮದ ಭೂಮಿ ವಶಕ್ಕೆ ಪಡೆಯಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ

ಅತ್ಯಾಚಾರ ಪ್ರಕರಣದ ಅಪರಾಧಿ ಮತ್ತು ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುನ ಅಹಮದಾಬಾದ್‌ನ ಮೊಟೇರಾದಲ್ಲಿರುವ ಆಶ್ರಮದಿಂದ 45,000 ಚದರ ಮೀಟರ್‌ಗೂ ಹೆಚ್ಚು ಭೂಮಿಯನ್ನು ವಾಪಸ್ ಪಡೆಯಲು ಗುಜರಾತ್ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಅನುಮತಿ...