Homeಮುಖಪುಟಸನ್ಯಾಸಿನಿ ಅತ್ಯಾಚಾರ ಪ್ರಕರಣ: ಬಿಷಪ್ ಫ್ರಾಂಕೋ ಖುಲಾಸೆ ವಿರುದ್ಧ ಮೇಲ್ಮನವಿಗೆ ಯೋಜಿಸಿದ ಕೇರಳ ಪೊಲೀಸ್‌‌

ಸನ್ಯಾಸಿನಿ ಅತ್ಯಾಚಾರ ಪ್ರಕರಣ: ಬಿಷಪ್ ಫ್ರಾಂಕೋ ಖುಲಾಸೆ ವಿರುದ್ಧ ಮೇಲ್ಮನವಿಗೆ ಯೋಜಿಸಿದ ಕೇರಳ ಪೊಲೀಸ್‌‌

- Advertisement -
- Advertisement -

ಕೇರಳದ ಕೊಟ್ಟಾಯಂ ಸೆಷನ್ಸ್‌ ನ್ಯಾಯಾಲಯವು ಬಿಷಪ್‌ ಫ್ರಾಂಕೋ ಮುಲಕ್ಕಲ್‌ ಅವರನ್ನು ರಾಜ್ಯದ ಕಾನ್ವೆಂಟ್‌ನಲ್ಲಿ ಸನ್ಯಾಸಿನಿಯೊಬ್ಬರ ಮೇಲೆ ಅತ್ಯಾಚಾರದ ಆರೋಪದಿಂದ ಇತ್ತಿಚೆಗೆ ಖುಲಾಸೆಗೊಳಿಸಿತ್ತು. ಇದಾಗಿ ಒಂದು ದಿನದ ನಂತರ, ಕೇರಳ ಪೊಲೀಸರು ಶನಿವಾರ ಹೈಕೋರ್ಟ್‌ನಲ್ಲಿ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಕಾನೂನು ಸಲಹೆಯನ್ನು ಕೋರಿದ್ದಾರೆ.

ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಪೊಲೀಸರು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್‌ನಿಂದ ಕಾನೂನು ಅಭಿಪ್ರಾಯ ಕೇಳಿದ್ದಾರೆ ಎಂದು ಕೊಟ್ಟಾಯಂ ಎಸ್‌ಪಿಡಿ ಶಿಲ್ಪಾ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. “ನಾವು ಶುಕ್ರವಾರದಂದು ತಡವಾಗಿ ವಿವರವಾದ ತೀರ್ಪನ್ನು ಪಡೆದುಕೊಂಡಿದ್ದೇವೆ. ಮೇಲ್ಮನವಿ ಸಲ್ಲಿಸಲು ನಾವು ಕಾನೂನು ಅಭಿಪ್ರಾಯವನ್ನು ಕೇಳಿದ್ದೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಕೇರಳ: ಕ್ರೈಸ್ತ ಸನ್ಯಾಸಿನಿ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ಬಿಷಪ್ ಫ್ರಾಂಕೋ ಖುಲಾಸೆ

ಈ ಮಧ್ಯೆ, ಬಿಷಪ್ ವಿವಿಧ ಚರ್ಚ್‌ಗಳಿಗೆ ಭೇಟಿ ನೀಡಿ ಮಾಜಿ ಶಾಸಕ ಪಿ ಸಿ ಜಾರ್ಜ್ ಅವರನ್ನು ಭೇಟಿಯಾಗಿದ್ದಾರೆ. ಆರೋಪದಿಂದ ಖುಲಾಸೆಗೊಂಡ ನಂತರ ಪಿಸಿ ಜಾರ್ಜ್ ಅವರು ಪ್ರಾಂಕೋ ಅವರನ್ನು ಬೆಂಬಲಿಸಿದ್ದಾರೆ.

ಬಿಷಪ್‌ ಪ್ರಾಂಕೋ ಅವರು ಪಿಸಿ ಜಾರ್ಜ್ ಅವರೊಂದಿಗಿನ ಸಭೆ ನಡೆಸಿ, ಹತ್ತಿರದ ಚರ್ಚ್‌ಗಳಿಗೆ ಭೇಟಿ ಮಾಡಿದ್ದಾರೆ. ಆದರೆ ಈ ವೇಳೆ ಅವರು ಮಾಧ್ಯಮಕ್ಕೆ ಪ್ರತಿಕ್ರಿಯಿಸಲು ನಿರಾಕರಿಸಿದ್ದರು. ಈ ಸಭೆಯ ನಂತರ ಮಾಧ್ಯಮದ ಜೊತಗೆ ಮಾತನಾಡಿದ ಅವರು, “ಈ ಪ್ರಕರಣವು ಚರ್ಚ್‌ ಮತ್ತು ಭಕ್ತರನ್ನು ಗುರಿಯಾಗಿಸುವ ಪಿತೂರಿಯ ಭಾಗವಾಗಿ ಮಾಡಿದ ಪ್ರಯತ್ನವಾಗಿದೆ” ಎಂದು ಹೇಳಿದ್ದಾರೆ.

ಜಲಂಧರ್ ಡಯಾಸಿಸ್‌ನ ಬಿಷಪ್ ಆಗಿ ಸೇವೆ ಸಲ್ಲಿಸುತ್ತಿದ್ದಾಗ, ಮಿಷನರೀಸ್ ಆಫ್ ಜೀಸಸ್ ಸಭೆಗೆ ಸೇರಿದ ಸನ್ಯಾಸಿನಿಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪವನ್ನು ಫ್ರಾಂಕೋ ಮೇಲೆ ಹೊರಿಸಲಾಗಿತ್ತು. 2014 ಮತ್ತು 2016 ರ ನಡುವೆ ಕೇರಳಕ್ಕೆ ಭೇಟಿ ನೀಡಿದಾಗ, 43 ವರ್ಷದ ಸನ್ಯಾಸಿನಿಯ ಮೇಲೆ 13 ಬಾರಿ ಅತ್ಯಾಚಾರ ನಡೆಸಲಾಗಿದೆ ಎಂದು ಆರೋಪ ಹೊರಿಸಲಾಗಿತ್ತು. ಈ ಆರೋಪದ ನಂತರ ಫ್ರಾಂಕೊ ಅವರನ್ನು ಜಲಂಧರ್ ಡಯಾಸಿಸ್ ಉಸ್ತುವಾರಿಯಿಂದ ತೆಗೆದುಹಾಕಲಾಗಿತ್ತು.

ಇದನ್ನೂ ಓದಿ:ಪಾದ್ರಿಯಿಂದ ಮುಸ್ಲಿಂ ವಿರೋಧಿ ಭಾಷಣ – ಪ್ರಾರ್ಥನಾ ಸಭೆಯಿಂದ ಹೊರನಡೆದ ಕ್ರೈಸ್ತ ಸನ್ಯಾಸಿನಿಯರು!

ಬಿಷಪ್ ವಿರುದ್ಧದ ಅತ್ಯಾಚಾರ ಪ್ರಕರಣವನ್ನು ಜೂನ್ 2018 ರಲ್ಲಿ ಕೇರಳದ ಕೊಟ್ಟಾಯಂ ಜಿಲ್ಲೆಯಲ್ಲಿ ದಾಖಲಿಸಲಾಗಿತ್ತು. ಇದರ ನಂತರ ಆರೋಪಿಯನ್ನು ಸೆಪ್ಟೆಂಬರ್ 21, 2018 ರಂದು ಬಂಧಿಸಲಾಯಿತು. ಅಕ್ಟೋಬರ್ 16, 2018 ರಂದು ಜಾಮೀನು ಪಡೆದಿದ್ದರು. ಪ್ರಕರಣದ ತನಿಖೆ ನಡೆಸಿದ ವಿಶೇಷ ತನಿಖಾ ತಂಡವು ಬಿಷಪ್ ಅವರನ್ನು ಬಂಧಿಸಿ ಅಕ್ರಮ ಬಂಧನ, ಅತ್ಯಾಚಾರ, ಅಸ್ವಾಭಾವಿಕ ಲೈಂಗಿಕತೆ ಮತ್ತು ಕ್ರಿಮಿನಲ್ ಬೆದರಿಕೆಯ ಆರೋಪವನ್ನು ಹೊರಿಸಿತ್ತು.

ಪ್ರಕರಣದ ವಿಚಾರಣೆ ನವೆಂಬರ್ 2019 ರಲ್ಲಿ ಪ್ರಾರಂಭವಾಯಿತು. ಸಿರೋ-ಮಲಬಾರ್ ಕ್ಯಾಥೋಲಿಕ್ ಚರ್ಚ್‌ನ ಕಾರ್ಡಿನಲ್ ಮಾರ್ ಜಾರ್ಜ್ ಅಲೆಂಚೇರಿ, ಮೂವರು ಬಿಷಪ್‌ಗಳು, 11 ಪಾದ್ರಿಗಳು ಮತ್ತು 22 ಸನ್ಯಾಸಿನಿಯರು ಸೇರಿದಂತೆ 83 ಸಾಕ್ಷಿಗಳನ್ನು ಚಾರ್ಜ್‌ಶೀಟ್‌‌ ಹೆಸರಿಸಿದೆ. 83 ಸಾಕ್ಷಿಗಳ ಪೈಕಿ 39 ಮಂದಿಯನ್ನು ಕರೆಸಿ ವಿಚಾರಣೆ ನಡೆಸಲಾಯಿದೆ.

ಈ ಮಧ್ಯೆ, ಫ್ರಾಂಕೋ ತನ್ನ ವಿರುದ್ಧದ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಕೇರಳ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದರು. ಆದರೆ ಎರಡೂ ನ್ಯಾಯಾಲಯಗಳು ಇದನ್ನು ನಿರಾಕರಿಸಿದ್ದವು. ಅಂತಿಮವಾಗಿ ಜನವರಿ 14 ರಂದು ಕೊಟ್ಟಾಯಂ ಸೆಷನ್ಸ್‌ ನ್ಯಾಯಾಲಯವು ಅವರನ್ನು ನ್ಯಾಯಾಲಯ ದೋಷಮುಕ್ತಗೊಳಿಸಿದೆ.

ಇದನ್ನೂ ಓದಿ:ಅತ್ಯಾಚಾರ ಆರೋಪಿ ಬಿಷಪ್‌ ಫ್ರಾಂಕೊ ಮುಲಕ್ಕಲ್‌ನ ಅರ್ಜಿ ವಜಾ ಮಾಡಿದ ಸುಪ್ರೀಂ‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...