Homeಸಿನಿಮಾಕ್ರೀಡೆಬ್ಯಾಡ್ಮಿಂಟನ್‌ನಲ್ಲಿ ಭಾರತಕ್ಕೊಂದು ಭರವಸೆ: 16 ನೇ ವರ್ಷಕ್ಕೆ ಜೂನಿಯರ್ ನಂ 1 ಪಟ್ಟಕ್ಕೇರಿದ ತಸ್ನಿಮ್...

ಬ್ಯಾಡ್ಮಿಂಟನ್‌ನಲ್ಲಿ ಭಾರತಕ್ಕೊಂದು ಭರವಸೆ: 16 ನೇ ವರ್ಷಕ್ಕೆ ಜೂನಿಯರ್ ನಂ 1 ಪಟ್ಟಕ್ಕೇರಿದ ತಸ್ನಿಮ್ ಮಿರ್

- Advertisement -
- Advertisement -

ಕ್ರಿಕೆಟ್‌ ಅನ್ನೇ ಧರ್ಮ ಎಂಬಂತೆ ಭಾವಿಸಿರುವ ಭಾರತದಲ್ಲಿ ಕ್ರಿಕೆಟ್‌ ಹೊರತಾದ ಕ್ರೀಡೆಗಳಿಗೆ ಪ್ರಾತಿನಿಧ್ಯತೆ ಅಷ್ಟಕಷ್ಟೇ. ಇನ್ನೂ ಬೇರೆ ಕ್ರೀಡೆಗಳ ಸಾಧಕರನ್ನು ಗುರುತಿಸುವುದು ಸಹ ಅಪರೂಪವೇ. ಇಂತಹ ಸಂದಿಗ್ಧತೆಯ ನಡುವೆಯೇ ಯುವ ಶಟ್ಲರ್‌ ತಸ್ನಿಮ್ ಮೀರ್‌ ಇದೀಗ ಬಿಡಬ್ಲ್ಯುಎಫ್ ಜೂನಿಯರ್ ರ್ಯಾಂಕಿಂಗ್ನಲ್ಲಿ 19 ವರ್ಷದೊಳಗಿನ ಬಾಲಕಿಯರ ಸಿಂಗಲ್ಸ್‌ ವಿಭಾಗದಲ್ಲಿ ವಿಶ್ವದ ನಂಬರ್​ 1 ಸ್ಥಾನವನ್ನು ಪಡೆದಿದ್ದಾರೆ. ಅಲ್ಲದೆ, ಈ ಸಾಧನೆ ಮಾಡಿದ ಭಾರತದ ಮೊದಲ U-19 ಬ್ಯಾಡ್ಮಿಂಟನ್ ಆಟಗಾರ್ತಿ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿರುವುದು ವಿಶೇಷ.

ಗುಜರಾತ್​​​ ಮೂಲದ ತಸ್ನಿಮ್ ಮಿರ್ (16) 2017 ರಲ್ಲಿ ಹೈದರಾಬಾದ್​ನ ಪುಲ್ಲೇಲಾ ಗೋಪಿಚಂದ್ ಅಕಾಡೆಮಿಯಲ್ಲಿ ತರಬೇತಿಯನ್ನು ಪ್ರಾರಂಭಿಸಿದರು. 2020 ರಲ್ಲಿ ಮಿಶ್ರ ಡಬಲ್ಸ್ ತರಬೇತಿಗಾಗಿ ಗುವಾಹಟಿಯಲ್ಲಿರುವ ಅಸ್ಸೋಂ ಬ್ಯಾಡ್ಮಿಂಟನ್ ಅಕಾಡೆಮಿ ಸೇರಿಕೊಂಡಿದ್ದು, ಪ್ರಸ್ತುತ ಇಲ್ಲಿಯೇ ತರಬೇತಿ ಮುಂದುವರೆಸಿದ್ದಾರೆ.

ತಸ್ನಿಮ್ ಮಿರ್ ತಮ್ಮ ಅದ್ಭುತ ಆಟದ ಪ್ರದರ್ಶನದಿಂದಾಗಿ ಮೂರು ಜೂನಿಯರ್ ಅಂತಾರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದರು. ಇದೀಗ ಜೂನಿಯರ್ ವಿಶ್ವ ಶ್ರೇಯಾಂಕದಲ್ಲಿ ಅಗ್ರ ಸ್ಥಾನವನ್ನು ಗಳಿಸಿದ್ದಾರೆ. ತಸ್ನಿಮ್​ಗೂ ಮುನ್ನ ಎರಡು ಬಾರಿ ಒಲಿಂಪಿಕ್ ಪದಕ ವಿಜೇತೆಯಾಗಿರುವ ಪಿ ವಿ ಸಿಂಧು ತಮ್ಮ ಅಂಡರ್-19 ದಿನಗಳಲ್ಲಿ ವಿಶ್ವದ ನಂ 2 ಸ್ಥಾನವನ್ನು ಪಡೆದುಕೊಂಡಿದ್ದರು.

ಈ ಬಗ್ಗೆ ತನ್ನ ಸಂತೋಷವನ್ನು ಹಂಚಿಕೊಂಡಿರುವ ತಸ್ನಿಂ ಮೀರ್‌, “ಒಲಿಂಪಿಕ್ ಪದಕ ವಿಜೇತೆ ಪಿ.ವಿ. ಸಿಂಧು ಮತ್ತು ಸೈನಾ ನೆಹ್ವಾಲ್  ಅವರು ನನಗೆ ಸದಾ ಸ್ಪೂರ್ತಿ. ಶಟಲ್ ಆಟದಲ್ಲಿ ಅವರನ್ನು ಅನುಸರಿಸಲು ನಾನು ಬಯಸುತ್ತೇನೆ. ಮುಂದಿನ ಒಲಂಪಿಕ್ಸ್ ನಲ್ಲಿ ಭಾರತವನ್ನು ಪ್ರತಿನಿದಿಸಿ ಪದಕ ಗೆಲ್ಲುವುದು ನನ್ನ ಗುರಿ. ನನ್ನ ಪೋಷಕರು ನನ್ನ ಆಸಕ್ತಿಗಾಗಿ ಸಾಕಷ್ಟು ತ್ಯಾಗ ಮಾಡಿದ್ದಾರೆ. ಹಾಗಾಗಿ ಆ ತ್ಯಾಗಕ್ಕೆ ಹೆಚ್ಚು ಬೆಲೆ ಬರುವಂತೆ ಮಾಡುವ ಆಸೆ ಇದೆ” ಎಂದು ತಿಳಿಸಿದ್ದಾರೆ.

ತಸ್ನಿಮ್ ಅವರು ಆರು ವರ್ಷ ಇದ್ದಾಗಿನಿಂದ ಬ್ಯಾಡ್ಮಿಂಟನ್‌ ನಲ್ಲಿ ಆಸಕ್ತಿವಹಿಸಿ ಆಡಲು ಪ್ರಾರಂಭಿಸಿದರಂತೆ, ಆಗ ಕೆಲವರು ಈಗಲೆ ಆಟ ಆಡುವುದು ಬೇಡ ಎಂದಿದ್ದರು. ಆದರೆ ಛಲ ಬಿಡದ ತಸ್ನಿಮ್ ಆಟ ಮುಂದುವರೆಸಿ ಇದುವರೆಗೂ ವಿವಿಧ ವಿಭಾಗಗಳಲ್ಲಿ  ಒಟ್ಟು 22 ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಈಗ ಹಿರಿಯರ ವಿಭಾಗದಲ್ಲಿ ಚಾಂಪಿಯನ್ ಆಗುವ, ಒಲಂಪಿಕ್ಸ್ ನಲ್ಲಿ ಪದಕ ಗೆಲ್ಲುವ ಗುರಿ ಹೊಂದಿದ್ದಾಳೆ ಎನ್ನುತ್ತಾ ಮಗಳು ತಸ್ನಿಮ್ ಬಗ್ಗೆ ವಿಶ್ವಾಸದ ಮಾತುಗಳನ್ನಾಡುತ್ತಾರೆ ತಂದೆ ಇರ್ಫಾನ್.


ಇದನ್ನೂ ಓದಿ: ‘ನನ್ನ ತಂಡಕ್ಕೆ ಅಪ್ರಾಮಾಣಿಕನಾಗಿರಲು ಸಾಧ್ಯವಿಲ್ಲ!’: ಟೆಸ್ಟ್‌‌ ನಾಯಕತ್ವಕ್ಕೆ ಕೊಹ್ಲಿ ರಾಜೀನಾಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...