Homeಸಿನಿಮಾಕ್ರೀಡೆಬ್ಯಾಡ್ಮಿಂಟನ್‌ನಲ್ಲಿ ಭಾರತಕ್ಕೊಂದು ಭರವಸೆ: 16 ನೇ ವರ್ಷಕ್ಕೆ ಜೂನಿಯರ್ ನಂ 1 ಪಟ್ಟಕ್ಕೇರಿದ ತಸ್ನಿಮ್...

ಬ್ಯಾಡ್ಮಿಂಟನ್‌ನಲ್ಲಿ ಭಾರತಕ್ಕೊಂದು ಭರವಸೆ: 16 ನೇ ವರ್ಷಕ್ಕೆ ಜೂನಿಯರ್ ನಂ 1 ಪಟ್ಟಕ್ಕೇರಿದ ತಸ್ನಿಮ್ ಮಿರ್

- Advertisement -
- Advertisement -

ಕ್ರಿಕೆಟ್‌ ಅನ್ನೇ ಧರ್ಮ ಎಂಬಂತೆ ಭಾವಿಸಿರುವ ಭಾರತದಲ್ಲಿ ಕ್ರಿಕೆಟ್‌ ಹೊರತಾದ ಕ್ರೀಡೆಗಳಿಗೆ ಪ್ರಾತಿನಿಧ್ಯತೆ ಅಷ್ಟಕಷ್ಟೇ. ಇನ್ನೂ ಬೇರೆ ಕ್ರೀಡೆಗಳ ಸಾಧಕರನ್ನು ಗುರುತಿಸುವುದು ಸಹ ಅಪರೂಪವೇ. ಇಂತಹ ಸಂದಿಗ್ಧತೆಯ ನಡುವೆಯೇ ಯುವ ಶಟ್ಲರ್‌ ತಸ್ನಿಮ್ ಮೀರ್‌ ಇದೀಗ ಬಿಡಬ್ಲ್ಯುಎಫ್ ಜೂನಿಯರ್ ರ್ಯಾಂಕಿಂಗ್ನಲ್ಲಿ 19 ವರ್ಷದೊಳಗಿನ ಬಾಲಕಿಯರ ಸಿಂಗಲ್ಸ್‌ ವಿಭಾಗದಲ್ಲಿ ವಿಶ್ವದ ನಂಬರ್​ 1 ಸ್ಥಾನವನ್ನು ಪಡೆದಿದ್ದಾರೆ. ಅಲ್ಲದೆ, ಈ ಸಾಧನೆ ಮಾಡಿದ ಭಾರತದ ಮೊದಲ U-19 ಬ್ಯಾಡ್ಮಿಂಟನ್ ಆಟಗಾರ್ತಿ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿರುವುದು ವಿಶೇಷ.

ಗುಜರಾತ್​​​ ಮೂಲದ ತಸ್ನಿಮ್ ಮಿರ್ (16) 2017 ರಲ್ಲಿ ಹೈದರಾಬಾದ್​ನ ಪುಲ್ಲೇಲಾ ಗೋಪಿಚಂದ್ ಅಕಾಡೆಮಿಯಲ್ಲಿ ತರಬೇತಿಯನ್ನು ಪ್ರಾರಂಭಿಸಿದರು. 2020 ರಲ್ಲಿ ಮಿಶ್ರ ಡಬಲ್ಸ್ ತರಬೇತಿಗಾಗಿ ಗುವಾಹಟಿಯಲ್ಲಿರುವ ಅಸ್ಸೋಂ ಬ್ಯಾಡ್ಮಿಂಟನ್ ಅಕಾಡೆಮಿ ಸೇರಿಕೊಂಡಿದ್ದು, ಪ್ರಸ್ತುತ ಇಲ್ಲಿಯೇ ತರಬೇತಿ ಮುಂದುವರೆಸಿದ್ದಾರೆ.

ತಸ್ನಿಮ್ ಮಿರ್ ತಮ್ಮ ಅದ್ಭುತ ಆಟದ ಪ್ರದರ್ಶನದಿಂದಾಗಿ ಮೂರು ಜೂನಿಯರ್ ಅಂತಾರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದರು. ಇದೀಗ ಜೂನಿಯರ್ ವಿಶ್ವ ಶ್ರೇಯಾಂಕದಲ್ಲಿ ಅಗ್ರ ಸ್ಥಾನವನ್ನು ಗಳಿಸಿದ್ದಾರೆ. ತಸ್ನಿಮ್​ಗೂ ಮುನ್ನ ಎರಡು ಬಾರಿ ಒಲಿಂಪಿಕ್ ಪದಕ ವಿಜೇತೆಯಾಗಿರುವ ಪಿ ವಿ ಸಿಂಧು ತಮ್ಮ ಅಂಡರ್-19 ದಿನಗಳಲ್ಲಿ ವಿಶ್ವದ ನಂ 2 ಸ್ಥಾನವನ್ನು ಪಡೆದುಕೊಂಡಿದ್ದರು.

ಈ ಬಗ್ಗೆ ತನ್ನ ಸಂತೋಷವನ್ನು ಹಂಚಿಕೊಂಡಿರುವ ತಸ್ನಿಂ ಮೀರ್‌, “ಒಲಿಂಪಿಕ್ ಪದಕ ವಿಜೇತೆ ಪಿ.ವಿ. ಸಿಂಧು ಮತ್ತು ಸೈನಾ ನೆಹ್ವಾಲ್  ಅವರು ನನಗೆ ಸದಾ ಸ್ಪೂರ್ತಿ. ಶಟಲ್ ಆಟದಲ್ಲಿ ಅವರನ್ನು ಅನುಸರಿಸಲು ನಾನು ಬಯಸುತ್ತೇನೆ. ಮುಂದಿನ ಒಲಂಪಿಕ್ಸ್ ನಲ್ಲಿ ಭಾರತವನ್ನು ಪ್ರತಿನಿದಿಸಿ ಪದಕ ಗೆಲ್ಲುವುದು ನನ್ನ ಗುರಿ. ನನ್ನ ಪೋಷಕರು ನನ್ನ ಆಸಕ್ತಿಗಾಗಿ ಸಾಕಷ್ಟು ತ್ಯಾಗ ಮಾಡಿದ್ದಾರೆ. ಹಾಗಾಗಿ ಆ ತ್ಯಾಗಕ್ಕೆ ಹೆಚ್ಚು ಬೆಲೆ ಬರುವಂತೆ ಮಾಡುವ ಆಸೆ ಇದೆ” ಎಂದು ತಿಳಿಸಿದ್ದಾರೆ.

ತಸ್ನಿಮ್ ಅವರು ಆರು ವರ್ಷ ಇದ್ದಾಗಿನಿಂದ ಬ್ಯಾಡ್ಮಿಂಟನ್‌ ನಲ್ಲಿ ಆಸಕ್ತಿವಹಿಸಿ ಆಡಲು ಪ್ರಾರಂಭಿಸಿದರಂತೆ, ಆಗ ಕೆಲವರು ಈಗಲೆ ಆಟ ಆಡುವುದು ಬೇಡ ಎಂದಿದ್ದರು. ಆದರೆ ಛಲ ಬಿಡದ ತಸ್ನಿಮ್ ಆಟ ಮುಂದುವರೆಸಿ ಇದುವರೆಗೂ ವಿವಿಧ ವಿಭಾಗಗಳಲ್ಲಿ  ಒಟ್ಟು 22 ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಈಗ ಹಿರಿಯರ ವಿಭಾಗದಲ್ಲಿ ಚಾಂಪಿಯನ್ ಆಗುವ, ಒಲಂಪಿಕ್ಸ್ ನಲ್ಲಿ ಪದಕ ಗೆಲ್ಲುವ ಗುರಿ ಹೊಂದಿದ್ದಾಳೆ ಎನ್ನುತ್ತಾ ಮಗಳು ತಸ್ನಿಮ್ ಬಗ್ಗೆ ವಿಶ್ವಾಸದ ಮಾತುಗಳನ್ನಾಡುತ್ತಾರೆ ತಂದೆ ಇರ್ಫಾನ್.


ಇದನ್ನೂ ಓದಿ: ‘ನನ್ನ ತಂಡಕ್ಕೆ ಅಪ್ರಾಮಾಣಿಕನಾಗಿರಲು ಸಾಧ್ಯವಿಲ್ಲ!’: ಟೆಸ್ಟ್‌‌ ನಾಯಕತ್ವಕ್ಕೆ ಕೊಹ್ಲಿ ರಾಜೀನಾಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...