Homeಚಳವಳಿಒಡಿಶಾ: ಜಿಂದಾಲ್ ಸ್ಟೀಲ್ ವರ್ಕ್ಸ್ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ- ಪೊಲೀಸರಿಂದ ಮಾರಣಾಂತಿಕ ಹಲ್ಲೆ

ಒಡಿಶಾ: ಜಿಂದಾಲ್ ಸ್ಟೀಲ್ ವರ್ಕ್ಸ್ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ- ಪೊಲೀಸರಿಂದ ಮಾರಣಾಂತಿಕ ಹಲ್ಲೆ

- Advertisement -
- Advertisement -

ತಮ್ಮ ಭೂಮಿ ಮತ್ತು ವೀಳ್ಯದೆಲೆ ತೋಟಗಳನ್ನು ಉಳಿಸಿಕೊಳ್ಳಲು ಜಿಂದಾಲ್ ಸ್ಟೀಲ್ ವರ್ಕ್ಸ್ (ಜೆಎಸ್‌ಡಬ್ಲ್ಯು) ಲಿಮಿಟೆಡ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಗ್ರಾಮಸ್ಥರ ಮೇಲೆ ಪೊಲೀಸರು ಮಾರಣಾಂತಿಕವಾಗಿ ಲಾಠಿ ಚಾರ್ಜ್ ನಡೆಸಿರುವ ಘಟನೆ ಒಡಿಶಾದ ಜಗತ್‌ಸಿಂಗ್‌ಪುರ ಜಿಲ್ಲೆಯ ಧಿಂಕಿಯಾ ಗ್ರಾಮದಲ್ಲಿ ನಡೆದಿದೆ.

ಧಿಂಕಿಯಾ, ನುಗಾಂವ್ ಮತ್ತು ಗಡಕುಜಾಂಗ್‌ನ ಕಡಲತೀರದ ಗ್ರಾಮ ಪಂಚಾಯತ್‌ಗಳಲ್ಲಿ ಉಕ್ಕಿನ ಸ್ಥಾವರವನ್ನು ಸ್ಥಾಪಿಸಲು ಜೆಎಸ್‌ಡಬ್ಲ್ಯೂಗೆ ಭೂಮಿ ಮತ್ತು ವೀಳ್ಯದೆಲೆ ತೋಟಗಳನ್ನು ನೀಡುವ ಒಡಿಶಾ ಸರ್ಕಾರದ ಯೋಜನೆಯನ್ನು ಹಲವಾರು ಗ್ರಾಮಸ್ಥರು ವಿರೋಧಿಸುತ್ತಿದ್ದಾರೆ. ಜನವರಿ 14 ರಂದು ಒಡಿಶಾದ ಜಗತ್‌ಸಿಂಗ್‌ಪುರ ಜಿಲ್ಲೆಯ ಧಿಂಕಿಯಾದಲ್ಲಿ ತೋಟಗಳನ್ನು ಕೆಡವದಂತೆ ಪ್ರತಿಭಟನೆ ನಡೆಸುತ್ತಿದ್ದ ಗ್ರಾಮಸ್ಥರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದು, ಮಹಿಳೆಯರು ಸೇರಿದಂತೆ ಸುಮಾರು 40ಕ್ಕೂ ಹೆಚ್ಚು ಗ್ರಾಮಸ್ಥರು ತೀವ್ರವಾಗಿ ಗಾಯಗೊಂಡಿದ್ದಾರೆ.

ಹೆಚ್ಚಿನ ಸಂಖ್ಯೆಯ ಶಸ್ತ್ರಸಜ್ಜಿತ ಪೊಲೀಸರು ಜನವರಿ 14 ರಂದು ಗ್ರಾಮಸ್ಥರು ನಿರ್ಮಿಸಿದ್ದ ಮರದ ಬ್ಯಾರಿಕೇಡ್‌ಗಳನ್ನು ಮುರಿದು ಧಿಂಕಿಯಾ ಗ್ರಾಮವನ್ನು ಪ್ರವೇಶಿಸಿದ್ದರು. ಪೊಲೀಸರು ಮತ್ತು ಅಧಿಕಾರಿಗಳ ಗ್ರಾಮ ಪ್ರವೇಶವನ್ನು ತಡೆಯಲು ಜೆಎಸ್‌ಡಬ್ಲ್ಯೂ ಪ್ರತಿರೋಧ್ ಸಂಗ್ರಾಮ್ ಸಮಿತಿಯ ಮುಖಂಡರು ಮಹಿಳೆಯರು ಮತ್ತು ಮಕ್ಕಳನ್ನು ಮುಂದೆ ನಿಲ್ಲಿಸಿದ್ದರು.

ಇದನ್ನೂ ಓದಿ: ಮಂಡ್ಯ: ಅಂಗಡಿ ಮುಂದೆ ದಲಿತರು ನಡೆದಾಡಿದ್ದಕ್ಕೆ ಮೈಲಿಗೆಯಾಯಿತೆಂದು ಸವರ್ಣೀಯರಿಂದ ಹಲ್ಲೆ

ಆದರೆ, ಪ್ರತಿಭಟನಾಕಾರರನ್ನು ಚದುರಿಸಲು ಸಶಸ್ತ್ರ ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಇದರಿಂದ ಹಲವರು ಗಾಯಗೊಂಡಿದ್ದಾರೆ ಎಂದು ಧಿಂಕಿಯಾ ನಿವಾಸಿ ಗಣೇಶ್ ದಾಸ್ ತಿಳಿಸಿದ್ದಾರೆ.

“ರಾಜ್ಯ ಸರ್ಕಾರ ಮತ್ತು ಅದರ ಶಸ್ತ್ರಸಜ್ಜಿತ ಪೊಲೀಸರು ಜೆಎಸ್‌ಡಬ್ಲ್ಯೂ ಜನರೊಂದಿಗೆಗೆ ಕೈಜೋಡಿಸಿ ಈ ಪ್ರದೇಶದಲ್ಲಿ ಜನರನ್ನು ಭಯಭೀತಗೊಳಿಸುತ್ತಿದ್ದಾರೆ. ಅವರು ಅನೇಕ ಹಳ್ಳಿಗರ ವೀಳ್ಯದೆಲೆ ತೋಟಗಳನ್ನು ಅಕ್ರಮವಾಗಿ ನೆಲಸಮಗೊಳಿಸಿದ್ದಾರೆ. ಆದರೆ ಉಕ್ಕಿನ ಸ್ಥಾವರವನ್ನು ಸ್ಥಾಪಿಸಲು ಜೆಎಸ್‌ಡಬ್ಲ್ಯುಗೆ ನಾವು ನಮ್ಮ ಒಂದು ಇಂಚು ಭೂಮಿಯನ್ನು ನೀಡುವುದಿಲ್ಲ” ಎಂದು ಧಿಂಕಿಯಾದ ರೈತ ಅನಿಲ್ ಬೆಹೆರಾ ಹೇಳಿದ್ದಾರೆ. ಪೋಲೀಸರ ದೌರ್ಜನ್ಯದ ವಿರುದ್ಧ ಕಿಡಿಕಾರಿದ್ದಾರೆ.

“ಜನವರಿ 14 ರಂದು, ಕನಿಷ್ಠ 500 ಗ್ರಾಮಸ್ಥರು ಅದರಲ್ಲೂ ಹೆಚ್ಚಾಗಿ ಮಹಿಳೆಯರು, ಪೊಲೀಸರು ಮತ್ತು ಅಧಿಕಾರಿಗಳ ಮೇಲೆ ದಾಳಿ ಮಾಡಲು ಪ್ರಯತ್ನಿಸಿದರು, ಪೊಲೀಸರು ಅವರನ್ನು ಚದುರಿಸಲು ಲಾಠಿ ಪ್ರಹಾರ ನಡೆಸಿದರು. ವೀಳ್ಯದೆಲೆ ಬಳ್ಳಿ ಕಿತ್ತು ಹಾಕುವುದನ್ನು ತಾತ್ಕಾಲಿಕವಾಗಿ ನಿಲ್ಲಿಸಿದ್ದೇವೆ. ಈ ಭಾಗದಲ್ಲಿ ಸ್ಟೀಲ್ ಪ್ಲಾಂಟ್ ಸ್ಥಾಪನೆಗೆ ಹಲವರು ಒಲವು ತೋರಿದ್ದಾರೆ. ಆದರೆ ಕೆಲವು ಜನರು ಧಿಂಕಿಯಾದಲ್ಲಿ ತೊಂದರೆಯನ್ನುಂಟುಮಾಡಲು ಪ್ರಯತ್ನಿಸುತ್ತಿದ್ದಾರೆ” ಎಂದು ಎರಸಮ ಬ್ಲಾಕ್‌ನ ತಹಸೀಲ್ದಾರ್ ಪ್ರಜ್ಞಾನಂದ ದಾಸ್ ಹೇಳಿದ್ದಾರೆ.

ಜಗತ್‌ಸಿಂಗ್‌ಪುರದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಉಮೇಶ್ ಪಾಂಡಾ ಮಾತನಾಡಿ, ಸರ್ಕಾರಿ ಜಮೀನುಗಳಲ್ಲಿರುವ ವೀಳ್ಯದೆಲೆ ತೋಟಗಳನ್ನು ಸ್ವಾಧೀನಪಡಿಸಿಕೊಳ್ಳಲು ಅವಕಾಶ ನೀಡುವಂತೆ ಆಡಳಿತವು ಎಲ್ಲಾ ವೀಳ್ಯದೆಲೆ ರೈತರಿಗೆ ಜನವರಿ 14 ರಂದು ಮನವಿ ಮಾಡಿದೆ. ದಿಂಕಿಯಾದಲ್ಲಿ ನಡೆಯುತ್ತಿದ್ದ ಭೂಸ್ವಾಧೀನ ಕಾಮಗಾರಿಯನ್ನು ಕೆಲವು ದುರುದ್ದೇಶದಿಂದ ವಿರೋಧಿಸಿದ್ದಾರೆ, ಇದಕ್ಕಾಗಿ ಪೊಲೀಸರು ಅವರನ್ನು ಚದುರಿಸಲು ಲಾಠಿ ಪ್ರಹಾರ ನಡೆಸಿದ್ದಾರೆ. ಪ್ರತಿಭಟನಾಕಾರರು ದಳಿ ನಡೆಸಿದ್ದರಿಂದ ಕೆಲವು ಪೊಲೀಸರಿಗೆ ಗಾಯಗಳಾಗಿವೆ” ಎಂದಿದ್ದಾರೆ.

ಗ್ರಾಮಸ್ಥರು ಮತ್ತು ಪೊಲೀಸರ ನಡುವಿನ ಹಿಂಸಾತ್ಮಕ ಘರ್ಷಣೆಗಳ ಬಳಿಕ ಶನಿವಾರದಿಂದ ಗ್ರಾಮದಲ್ಲಿ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕೆಲವು ಭೂಸ್ವಾಧೀನ ವಿರೋಧಿ ಗ್ರಾಮಸ್ಥರ ಬೆದರಿಕೆಯ ದೃಷ್ಟಿಯಿಂದ ಸುಗಮವಾಗಿ ಭೂಸ್ವಾಧೀನ ಕಾರ್ಯ ನಡೆಸಲು ಮತ್ತು ಯಾವುದೇ ಅಹಿತಕರ ಘಟನೆಯನ್ನು ತಡೆಗಟ್ಟಲು ಉದ್ದೇಶಿತ ಉಕ್ಕಿನ ಸ್ಥಾವರದ ಸ್ಥಳದಲ್ಲಿ 12 ಪೊಲೀಸರ ತುಕಡಿಗಳನ್ನು ನಿಯೋಜಿಸಲಾಗಿದೆ ಎಂದು ಪಾಂಡಾ ಹೇಳಿದ್ದಾರೆ.


ಇದನ್ನೂ ಓದಿ: ಕಾವೇರಿಯ ಉಳಿವಿಗೆ ‘ಮೇಕೆದಾಟು ಅಣೆಕಟ್ಟು’ ಪ್ರಸ್ತಾಪ ಕೈಬಿಡಬೇಕು: ಮೇಧಾ ಪಾಟ್ಕರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...