Homeಚಳವಳಿಒಡಿಶಾ: ಜಿಂದಾಲ್ ಸ್ಟೀಲ್ ವರ್ಕ್ಸ್ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ- ಪೊಲೀಸರಿಂದ ಮಾರಣಾಂತಿಕ ಹಲ್ಲೆ

ಒಡಿಶಾ: ಜಿಂದಾಲ್ ಸ್ಟೀಲ್ ವರ್ಕ್ಸ್ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ- ಪೊಲೀಸರಿಂದ ಮಾರಣಾಂತಿಕ ಹಲ್ಲೆ

- Advertisement -
- Advertisement -

ತಮ್ಮ ಭೂಮಿ ಮತ್ತು ವೀಳ್ಯದೆಲೆ ತೋಟಗಳನ್ನು ಉಳಿಸಿಕೊಳ್ಳಲು ಜಿಂದಾಲ್ ಸ್ಟೀಲ್ ವರ್ಕ್ಸ್ (ಜೆಎಸ್‌ಡಬ್ಲ್ಯು) ಲಿಮಿಟೆಡ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಗ್ರಾಮಸ್ಥರ ಮೇಲೆ ಪೊಲೀಸರು ಮಾರಣಾಂತಿಕವಾಗಿ ಲಾಠಿ ಚಾರ್ಜ್ ನಡೆಸಿರುವ ಘಟನೆ ಒಡಿಶಾದ ಜಗತ್‌ಸಿಂಗ್‌ಪುರ ಜಿಲ್ಲೆಯ ಧಿಂಕಿಯಾ ಗ್ರಾಮದಲ್ಲಿ ನಡೆದಿದೆ.

ಧಿಂಕಿಯಾ, ನುಗಾಂವ್ ಮತ್ತು ಗಡಕುಜಾಂಗ್‌ನ ಕಡಲತೀರದ ಗ್ರಾಮ ಪಂಚಾಯತ್‌ಗಳಲ್ಲಿ ಉಕ್ಕಿನ ಸ್ಥಾವರವನ್ನು ಸ್ಥಾಪಿಸಲು ಜೆಎಸ್‌ಡಬ್ಲ್ಯೂಗೆ ಭೂಮಿ ಮತ್ತು ವೀಳ್ಯದೆಲೆ ತೋಟಗಳನ್ನು ನೀಡುವ ಒಡಿಶಾ ಸರ್ಕಾರದ ಯೋಜನೆಯನ್ನು ಹಲವಾರು ಗ್ರಾಮಸ್ಥರು ವಿರೋಧಿಸುತ್ತಿದ್ದಾರೆ. ಜನವರಿ 14 ರಂದು ಒಡಿಶಾದ ಜಗತ್‌ಸಿಂಗ್‌ಪುರ ಜಿಲ್ಲೆಯ ಧಿಂಕಿಯಾದಲ್ಲಿ ತೋಟಗಳನ್ನು ಕೆಡವದಂತೆ ಪ್ರತಿಭಟನೆ ನಡೆಸುತ್ತಿದ್ದ ಗ್ರಾಮಸ್ಥರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದು, ಮಹಿಳೆಯರು ಸೇರಿದಂತೆ ಸುಮಾರು 40ಕ್ಕೂ ಹೆಚ್ಚು ಗ್ರಾಮಸ್ಥರು ತೀವ್ರವಾಗಿ ಗಾಯಗೊಂಡಿದ್ದಾರೆ.

ಹೆಚ್ಚಿನ ಸಂಖ್ಯೆಯ ಶಸ್ತ್ರಸಜ್ಜಿತ ಪೊಲೀಸರು ಜನವರಿ 14 ರಂದು ಗ್ರಾಮಸ್ಥರು ನಿರ್ಮಿಸಿದ್ದ ಮರದ ಬ್ಯಾರಿಕೇಡ್‌ಗಳನ್ನು ಮುರಿದು ಧಿಂಕಿಯಾ ಗ್ರಾಮವನ್ನು ಪ್ರವೇಶಿಸಿದ್ದರು. ಪೊಲೀಸರು ಮತ್ತು ಅಧಿಕಾರಿಗಳ ಗ್ರಾಮ ಪ್ರವೇಶವನ್ನು ತಡೆಯಲು ಜೆಎಸ್‌ಡಬ್ಲ್ಯೂ ಪ್ರತಿರೋಧ್ ಸಂಗ್ರಾಮ್ ಸಮಿತಿಯ ಮುಖಂಡರು ಮಹಿಳೆಯರು ಮತ್ತು ಮಕ್ಕಳನ್ನು ಮುಂದೆ ನಿಲ್ಲಿಸಿದ್ದರು.

ಇದನ್ನೂ ಓದಿ: ಮಂಡ್ಯ: ಅಂಗಡಿ ಮುಂದೆ ದಲಿತರು ನಡೆದಾಡಿದ್ದಕ್ಕೆ ಮೈಲಿಗೆಯಾಯಿತೆಂದು ಸವರ್ಣೀಯರಿಂದ ಹಲ್ಲೆ

ಆದರೆ, ಪ್ರತಿಭಟನಾಕಾರರನ್ನು ಚದುರಿಸಲು ಸಶಸ್ತ್ರ ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಇದರಿಂದ ಹಲವರು ಗಾಯಗೊಂಡಿದ್ದಾರೆ ಎಂದು ಧಿಂಕಿಯಾ ನಿವಾಸಿ ಗಣೇಶ್ ದಾಸ್ ತಿಳಿಸಿದ್ದಾರೆ.

“ರಾಜ್ಯ ಸರ್ಕಾರ ಮತ್ತು ಅದರ ಶಸ್ತ್ರಸಜ್ಜಿತ ಪೊಲೀಸರು ಜೆಎಸ್‌ಡಬ್ಲ್ಯೂ ಜನರೊಂದಿಗೆಗೆ ಕೈಜೋಡಿಸಿ ಈ ಪ್ರದೇಶದಲ್ಲಿ ಜನರನ್ನು ಭಯಭೀತಗೊಳಿಸುತ್ತಿದ್ದಾರೆ. ಅವರು ಅನೇಕ ಹಳ್ಳಿಗರ ವೀಳ್ಯದೆಲೆ ತೋಟಗಳನ್ನು ಅಕ್ರಮವಾಗಿ ನೆಲಸಮಗೊಳಿಸಿದ್ದಾರೆ. ಆದರೆ ಉಕ್ಕಿನ ಸ್ಥಾವರವನ್ನು ಸ್ಥಾಪಿಸಲು ಜೆಎಸ್‌ಡಬ್ಲ್ಯುಗೆ ನಾವು ನಮ್ಮ ಒಂದು ಇಂಚು ಭೂಮಿಯನ್ನು ನೀಡುವುದಿಲ್ಲ” ಎಂದು ಧಿಂಕಿಯಾದ ರೈತ ಅನಿಲ್ ಬೆಹೆರಾ ಹೇಳಿದ್ದಾರೆ. ಪೋಲೀಸರ ದೌರ್ಜನ್ಯದ ವಿರುದ್ಧ ಕಿಡಿಕಾರಿದ್ದಾರೆ.

“ಜನವರಿ 14 ರಂದು, ಕನಿಷ್ಠ 500 ಗ್ರಾಮಸ್ಥರು ಅದರಲ್ಲೂ ಹೆಚ್ಚಾಗಿ ಮಹಿಳೆಯರು, ಪೊಲೀಸರು ಮತ್ತು ಅಧಿಕಾರಿಗಳ ಮೇಲೆ ದಾಳಿ ಮಾಡಲು ಪ್ರಯತ್ನಿಸಿದರು, ಪೊಲೀಸರು ಅವರನ್ನು ಚದುರಿಸಲು ಲಾಠಿ ಪ್ರಹಾರ ನಡೆಸಿದರು. ವೀಳ್ಯದೆಲೆ ಬಳ್ಳಿ ಕಿತ್ತು ಹಾಕುವುದನ್ನು ತಾತ್ಕಾಲಿಕವಾಗಿ ನಿಲ್ಲಿಸಿದ್ದೇವೆ. ಈ ಭಾಗದಲ್ಲಿ ಸ್ಟೀಲ್ ಪ್ಲಾಂಟ್ ಸ್ಥಾಪನೆಗೆ ಹಲವರು ಒಲವು ತೋರಿದ್ದಾರೆ. ಆದರೆ ಕೆಲವು ಜನರು ಧಿಂಕಿಯಾದಲ್ಲಿ ತೊಂದರೆಯನ್ನುಂಟುಮಾಡಲು ಪ್ರಯತ್ನಿಸುತ್ತಿದ್ದಾರೆ” ಎಂದು ಎರಸಮ ಬ್ಲಾಕ್‌ನ ತಹಸೀಲ್ದಾರ್ ಪ್ರಜ್ಞಾನಂದ ದಾಸ್ ಹೇಳಿದ್ದಾರೆ.

ಜಗತ್‌ಸಿಂಗ್‌ಪುರದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಉಮೇಶ್ ಪಾಂಡಾ ಮಾತನಾಡಿ, ಸರ್ಕಾರಿ ಜಮೀನುಗಳಲ್ಲಿರುವ ವೀಳ್ಯದೆಲೆ ತೋಟಗಳನ್ನು ಸ್ವಾಧೀನಪಡಿಸಿಕೊಳ್ಳಲು ಅವಕಾಶ ನೀಡುವಂತೆ ಆಡಳಿತವು ಎಲ್ಲಾ ವೀಳ್ಯದೆಲೆ ರೈತರಿಗೆ ಜನವರಿ 14 ರಂದು ಮನವಿ ಮಾಡಿದೆ. ದಿಂಕಿಯಾದಲ್ಲಿ ನಡೆಯುತ್ತಿದ್ದ ಭೂಸ್ವಾಧೀನ ಕಾಮಗಾರಿಯನ್ನು ಕೆಲವು ದುರುದ್ದೇಶದಿಂದ ವಿರೋಧಿಸಿದ್ದಾರೆ, ಇದಕ್ಕಾಗಿ ಪೊಲೀಸರು ಅವರನ್ನು ಚದುರಿಸಲು ಲಾಠಿ ಪ್ರಹಾರ ನಡೆಸಿದ್ದಾರೆ. ಪ್ರತಿಭಟನಾಕಾರರು ದಳಿ ನಡೆಸಿದ್ದರಿಂದ ಕೆಲವು ಪೊಲೀಸರಿಗೆ ಗಾಯಗಳಾಗಿವೆ” ಎಂದಿದ್ದಾರೆ.

ಗ್ರಾಮಸ್ಥರು ಮತ್ತು ಪೊಲೀಸರ ನಡುವಿನ ಹಿಂಸಾತ್ಮಕ ಘರ್ಷಣೆಗಳ ಬಳಿಕ ಶನಿವಾರದಿಂದ ಗ್ರಾಮದಲ್ಲಿ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕೆಲವು ಭೂಸ್ವಾಧೀನ ವಿರೋಧಿ ಗ್ರಾಮಸ್ಥರ ಬೆದರಿಕೆಯ ದೃಷ್ಟಿಯಿಂದ ಸುಗಮವಾಗಿ ಭೂಸ್ವಾಧೀನ ಕಾರ್ಯ ನಡೆಸಲು ಮತ್ತು ಯಾವುದೇ ಅಹಿತಕರ ಘಟನೆಯನ್ನು ತಡೆಗಟ್ಟಲು ಉದ್ದೇಶಿತ ಉಕ್ಕಿನ ಸ್ಥಾವರದ ಸ್ಥಳದಲ್ಲಿ 12 ಪೊಲೀಸರ ತುಕಡಿಗಳನ್ನು ನಿಯೋಜಿಸಲಾಗಿದೆ ಎಂದು ಪಾಂಡಾ ಹೇಳಿದ್ದಾರೆ.


ಇದನ್ನೂ ಓದಿ: ಕಾವೇರಿಯ ಉಳಿವಿಗೆ ‘ಮೇಕೆದಾಟು ಅಣೆಕಟ್ಟು’ ಪ್ರಸ್ತಾಪ ಕೈಬಿಡಬೇಕು: ಮೇಧಾ ಪಾಟ್ಕರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...