Homeಕರ್ನಾಟಕಕೋವಿಡ್ ಕರ್ಫ್ಯೂ ನಡುವೆಯೇ ನಡೆದ ಉಡುಪಿ ಮಠದ ಚೂರ್ಣೋತ್ಸವ

ಕೋವಿಡ್ ಕರ್ಫ್ಯೂ ನಡುವೆಯೇ ನಡೆದ ಉಡುಪಿ ಮಠದ ಚೂರ್ಣೋತ್ಸವ

ಕೋವಿಡ್ ಪ್ರೊಟೋಕಾಲ್ ಉಲ್ಲಂಘನೆಯಾಗಿರುವುದರ ಕುರಿತು ಮಠದ ಸದಸ್ಯರೊಂದಿಗೆ ಸಭೆ ನಡೆಸಿ ವರದಿ ನೀಡುವಂತೆ ತಹಶೀಲ್ದಾರ್‌ರವರಿಗೆ ಉಡುಪಿ ಜಿಲ್ಲಾಧಿಕಾರಿ ಎಂ ಕುರ್ಮರಾವ್ ಆದೇಶಿಸಿದ್ದಾರೆ.

- Advertisement -
- Advertisement -


ಉಡುಪಿ ಅಷ್ಟ ಮಠಗಳ ವಾರ್ಷಿಕ ಜಾತ್ರೋತ್ಸವ ‘ಸಪ್ತೋತ್ಸವ ಮತ್ತು ಚೂರ್ಣೋತ್ಸವ’ ಜನವರಿ 14ರ ಮಕರ ಸಂಕ್ರಾಂತಿ ರಾತ್ರಿ ಮತ್ತು ಜನವರಿ 15ರ ಬೆಳಿಗ್ಗೆ ಅಷ್ಟ ಯತಿಗಳ ಅದ್ವರ್ಯದಲ್ಲಿ ಸಾವಿರಾರು ಜನರ ಸೇರಿಸಿ ಅದ್ಧೂರಿಯಾಗಿ ನಡೆಸಲಾಯಿತು. ಕೋವಿಡ್ ಸಾಂಕ್ರಾಮಿಕ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ವಿಧಿಸಿರುವ ರಾತ್ರಿ ಕರ್ಫ್ಯೂ ಮತ್ತು ವಾರಾಂತ್ಯದ ಕರ್ಫ್ಯೂ ಧಿಕ್ಕರಿಸಿ ಜನ ಜಾತ್ರೆ ಸೇರಿಸಿ ನಡೆಸಲಾಗಿರವ ಈ ಉತ್ಸವದ ಬಗ್ಗೆ ಸಾರ್ವಜನಿಕ ವಲಯದಲ್ಲಿ ಪರ ವಿರೋಧದ ಚರ್ಚೆಯೆದ್ದಿದೆ. ಇದೇ ಸಂದರ್ಭದಲ್ಲಿ ಕೋವಿಡ್ ಪ್ರೊಟೋಕಾಲ್ ಉಲ್ಲಂಘನೆಯಾಗಿರುವುದರ ಕುರಿತು ಮಠದ ಸದಸ್ಯರೊಂದಿಗೆ ಸಭೆ ನಡೆಸಿ ವರದಿ ನೀಡುವಂತೆ ತಹಶೀಲ್ದಾರ್‌ರವರಿಗೆ ಉಡುಪಿ ಜಿಲ್ಲಾಧಿಕಾರಿ ಎಂ ಕುರ್ಮರಾವ್ ಆದೇಶಿಸಿದ್ದಾರೆ.

ಸುಮಾರು 800 ವರ್ಷಗಳ ಹಿಂದೆ ದ್ವೈತ ಮತ ಪ್ರತಿಪಾದಕ ಶ್ರೀ ಮದ್ವಾಚಾರ್ಯರು ಮಕರ ಸಂಕ್ರಾಂತಿ ದಿನವೆ ಉಡುಪಿಯಲ್ಲಿ ಶ್ರೀಕೃಷ್ಣ ಮೂರ್ತಿಯನ್ನು ಪ್ರತಿಷ್ಟಾಪಿಸಿದರೆಂಬ ಪ್ರತೀತಿಯಿದೆ. ಈ ಹಿನ್ನಲೆಯಲ್ಲಿ ಪ್ರತಿ ವರ್ಷ ಸಂಕ್ರಮಣದ ಮೊದಲಿನ ಒಂದು ವಾರ ಸಪ್ತೋತ್ಸವ ಆಚರಿಸಾಗುತ್ತದೆ. ಮಕರ ಸಂಕ್ರಾಂತಿ ದಿವಸ ರಾತ್ರಿ ಮೂರು ತೇರುಗಳ ಉತ್ಸವ ನಡೆಸಿ, ಮರುದಿನ ಹಗಲು ರಥೋತ್ಸವದೊಂದಿಗೆ ಮಠದ ವಾರ್ಷಿಕೋತ್ಸವ ಮುಕ್ತಾಯವಾಗುತ್ತದೆ.

ಈ ಚೂರ್ಣೋತ್ಸವದಲ್ಲಿ ಶ್ರೀಕ್ರಷ್ಣನ-ಮುಖ್ಯ ಪ್ರಾಣ ಮೂರ್ತಿಗಳನ್ನು ಚಿನ್ನದ ಪಲ್ಲಕ್ಕಿಯಲ್ಲಿ ತಂದು ಸ್ವಾಗತ ಗೋಪುರದ ಮುಂದಿರವ ಬ್ರಹ್ಮರಥದಲ್ಲಿ ಪ್ರತಿಷ್ಟಾಪಿಸಲಾಗುತ್ತದೆ. ಅಷ್ಟ ಯತಿಗಳು ರಥವೇರಿ ಆರತಿ ಬೆಳಗಿದ ನಂತರ ರಥವನ್ನು ರಥ ಬೀದಿಗೆ ಒಂದು ಸುತ್ತು ಹಾಕಲಾಗುತ್ತದೆ. ನಂತರ ಶ್ರೀಕೃಷ್ಣ-ಮುಖ್ಯ ಪ್ರಾಣ ಮೂರ್ತಿಗಳನ್ನು ಮಠಕ್ಕೆ ತಂದು ಮದ್ವಮಂಟಪದಲ್ಲಿ ತೊಟ್ಟಿಲು ಪೂಜೆ ಮಾಡಲಾಗುತ್ತದೆ. ಒಕುಳಿಯನ್ನು ಎಂಟು ಯತಿಗಳ ಜತೆ ನೂರಾರು ಭಕ್ತರು ಹಂಚಿಕೊಂಡು ಮದ್ವ ಸರೋವರದಲ್ಲಿ ಅಭವೃತ ಸ್ನಾನಮಾಡುತ್ತಾರೆ. ಬಳಿಕ ಅನ್ನ ಸಂತರ್ಪಣೆಗಾಗಿ ತಯಾರಿಸಲಾದ ಅನ್ನದ ರಾಶಿಗೆ ಪಲ್ಲ ಪೂಜೆ ನೆರವೇರಿಸಲಾಗುತ್ತದೆ. ಸಾವಿರಾರು ಮಂದಿ ಅನ್ನ ಸಂತರ್ಪಣೆಯಲ್ಲಿ ಪಾಲ್ಗೊಳ್ಳುತ್ತಾರೆ.

ಇದು ಚೂರ್ಣೋತ್ಸವದ ಸಂಪ್ರದಾಯವಾಗಿದ್ದು, ಇದೆಲ್ಲ ಈ ಸಲವೂ ಕೋವಿಡ್ ನಿರ್ಬಂಧದ ಕರ್ಫ್ಯೂ ಜಾರಿಲ್ಲಿರುವಾಲೇ ಯಾವುದೆ ಅಳುಕು-ಅಂಜಿಕೆಯಿಲ್ಲದೆ ಅಷ್ಟ ಯತಿಗಳ ಸಮ್ಮುಖದಲ್ಲೇ ನೆರವೇರಿಸಲಾಗಿದೆ. ಪರ್ಯಾಯ ಅದಮಾರು ಮಠದ ಶ್ರೀಈಶಪ್ರಿಯ ತೀರ್ಥ ಸ್ವಾಮಿ, ಇವರಿಂದ ಇದೇ ಜ.18ರಂದು ಪರ್ಯಾಯ ಪೋಜಾಧಿಕಾರ ವಹಿಸಿಕೊಳ್ಳಲಿರುವ ಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರತೀರ್ಥ ಸ್ವಾಮಿ, ಪೇಜಾವರ ಮಠದ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮಿ, ಪಲಿಮಾರು ಮಠದ ಶ್ರೀವಿದ್ಯಾಧೀಶತೀರ್ಥ ಸ್ವಾಮಿ, ಕಾಣಿಯೂರು ಮಠದ ಶೀವಿದ್ಯಾವಲ್ಲಿ ತೀರ್ಥ ಸ್ವಾಮಿ, ಸೋದೆ ಮಠದ ಶ್ರೀವಿಶ್ವವಲ್ಲಭತೀರ್ಥ ಸ್ವಾಮಿ, ಪಲಿಮಾರು ಮಠದ ಕಿರಿಯ ಯತಿ ಶ್ರೀವಿದ್ಯಾರಾಜೇಶ್ವರತೀರ್ಥ ಸ್ವಾಮಿ ಮತ್ತು ಶಿರೂರು ಮಥದ ಶ್ರೀವೇದವರ್ಧನತೀರ್ಥ ಸ್ವಾಮಿ ಚೂರ್ಣೋತ್ಸವದಲ್ಲ ಪಾಲ್ಗೊಂಡಿದ್ದರು.

ಕೋವಿಡ್ ಮೂರನ ಅಲೆ ವೇಗವಾಗಿ ವ್ಯಾಪಿಸುತ್ತಿರುವ ಜಿಲ್ಲೆಗಳಲ್ಲಿ ಉಡುಪಿಯೂ ಒಂದಾಗಿದ್ದು, ಇಂಥ ಸೂಕ್ಮ ಪ್ರದೇಶದಲ್ಲಿ ಅಷ್ಟಯತಿಗಳ ಸಮ್ಮುಖದಲ್ಲೆೆ ಸಾವಿರಾರು ಜನರನ್ನು ಸೇರಿಸಿ ಕೋವಿಡ್ ಶಿಚ್ಟಾಚಾರವನ್ನು ಪ್ರಜ್ಞಾರ್ಪೂಕವಾಗಿ ಉಲ್ಲಂಘಿಸಿ ಅದ್ಧೂರಿ ಉತ್ಸವ ನಡೆಸಿದರೂ ಜಿಲ್ಲಾಡಳಿತ ಮತ್ತು ಪೋಲೀಸ್ ವ್ಯವಸ್ಥೆ ಅಸಾಯಕವೆಂಬಂತೆ ಇದ್ದರು ಎಂಬ ಆರೋಪ ಕೇಳಿಬಂದಿದೆ.

ವಾರಾಂತ್ಯದ ಕರ್ಫ್ಯೂ ಇದ್ದುದರಿಂದ ಉಡುಪಿಯಲ್ಲಿ ಅಗತ್ಯ ವಸ್ತುಗಳನ್ನು ಹೊರತು ಪಡಿಸಿ ಉಳಿದೆಲ್ಲ ಅಂಗಡಿ, ಚಟುವಟಿಕೆ ಸ್ಥಬ್ಧಗೊಂಡಿತ್ತು. ಆದರೆ ಈ ನಿಯಮ ತಮಗೆ ಸಂಬಂಧಿಸಿದ್ದಲ್ಲ ಎಂಬಂತೆ ಅಷ್ಟ ಮಠದ ಉತ್ಸವ ಮಾಸ್ಕ್ ಧಾರಣೆ,ಸರಕ್ಷಿತ ಅಂತರ ನಿರ್ಬಂಧ ಕಡೆಗಣಿಸಿ ನಡೆದರೂ ಜಿಲ್ಲಾಡಳಿತ ಕಣ್ಮುಚ್ಚಿ ಕುಳಿತಿರುವುದೇಕೆಂಬ ಎಂಬ ಪ್ರಶ್ನೆ ಎದ್ದಿದೆ.


ಇದನ್ನೂ ಓದಿ: ಒಡಿಶಾ: ಜಿಂದಾಲ್ ಸ್ಟೀಲ್ ವರ್ಕ್ಸ್ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ- ಪೊಲೀಸರಿಂದ ಮಾರಣಾಂತಿಕ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕೋವಿಡ್ ಪ್ರೊಟೋಕಾಲ್ ಉಲ್ಲಂಘನೆ ಆಗಿರುವಾಗ ಕೇಸ್ ಹಾಕಬೇಕು; ಅಷ್ಟಮಠಗಳೊಟ್ಟಿಗೆ ಚರ್ಚೆ ಯಾಕೆ?

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...