Homeಕರ್ನಾಟಕಕೋವಿಡ್ ಕರ್ಫ್ಯೂ ನಡುವೆಯೇ ನಡೆದ ಉಡುಪಿ ಮಠದ ಚೂರ್ಣೋತ್ಸವ

ಕೋವಿಡ್ ಕರ್ಫ್ಯೂ ನಡುವೆಯೇ ನಡೆದ ಉಡುಪಿ ಮಠದ ಚೂರ್ಣೋತ್ಸವ

ಕೋವಿಡ್ ಪ್ರೊಟೋಕಾಲ್ ಉಲ್ಲಂಘನೆಯಾಗಿರುವುದರ ಕುರಿತು ಮಠದ ಸದಸ್ಯರೊಂದಿಗೆ ಸಭೆ ನಡೆಸಿ ವರದಿ ನೀಡುವಂತೆ ತಹಶೀಲ್ದಾರ್‌ರವರಿಗೆ ಉಡುಪಿ ಜಿಲ್ಲಾಧಿಕಾರಿ ಎಂ ಕುರ್ಮರಾವ್ ಆದೇಶಿಸಿದ್ದಾರೆ.

- Advertisement -
- Advertisement -


ಉಡುಪಿ ಅಷ್ಟ ಮಠಗಳ ವಾರ್ಷಿಕ ಜಾತ್ರೋತ್ಸವ ‘ಸಪ್ತೋತ್ಸವ ಮತ್ತು ಚೂರ್ಣೋತ್ಸವ’ ಜನವರಿ 14ರ ಮಕರ ಸಂಕ್ರಾಂತಿ ರಾತ್ರಿ ಮತ್ತು ಜನವರಿ 15ರ ಬೆಳಿಗ್ಗೆ ಅಷ್ಟ ಯತಿಗಳ ಅದ್ವರ್ಯದಲ್ಲಿ ಸಾವಿರಾರು ಜನರ ಸೇರಿಸಿ ಅದ್ಧೂರಿಯಾಗಿ ನಡೆಸಲಾಯಿತು. ಕೋವಿಡ್ ಸಾಂಕ್ರಾಮಿಕ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ವಿಧಿಸಿರುವ ರಾತ್ರಿ ಕರ್ಫ್ಯೂ ಮತ್ತು ವಾರಾಂತ್ಯದ ಕರ್ಫ್ಯೂ ಧಿಕ್ಕರಿಸಿ ಜನ ಜಾತ್ರೆ ಸೇರಿಸಿ ನಡೆಸಲಾಗಿರವ ಈ ಉತ್ಸವದ ಬಗ್ಗೆ ಸಾರ್ವಜನಿಕ ವಲಯದಲ್ಲಿ ಪರ ವಿರೋಧದ ಚರ್ಚೆಯೆದ್ದಿದೆ. ಇದೇ ಸಂದರ್ಭದಲ್ಲಿ ಕೋವಿಡ್ ಪ್ರೊಟೋಕಾಲ್ ಉಲ್ಲಂಘನೆಯಾಗಿರುವುದರ ಕುರಿತು ಮಠದ ಸದಸ್ಯರೊಂದಿಗೆ ಸಭೆ ನಡೆಸಿ ವರದಿ ನೀಡುವಂತೆ ತಹಶೀಲ್ದಾರ್‌ರವರಿಗೆ ಉಡುಪಿ ಜಿಲ್ಲಾಧಿಕಾರಿ ಎಂ ಕುರ್ಮರಾವ್ ಆದೇಶಿಸಿದ್ದಾರೆ.

ಸುಮಾರು 800 ವರ್ಷಗಳ ಹಿಂದೆ ದ್ವೈತ ಮತ ಪ್ರತಿಪಾದಕ ಶ್ರೀ ಮದ್ವಾಚಾರ್ಯರು ಮಕರ ಸಂಕ್ರಾಂತಿ ದಿನವೆ ಉಡುಪಿಯಲ್ಲಿ ಶ್ರೀಕೃಷ್ಣ ಮೂರ್ತಿಯನ್ನು ಪ್ರತಿಷ್ಟಾಪಿಸಿದರೆಂಬ ಪ್ರತೀತಿಯಿದೆ. ಈ ಹಿನ್ನಲೆಯಲ್ಲಿ ಪ್ರತಿ ವರ್ಷ ಸಂಕ್ರಮಣದ ಮೊದಲಿನ ಒಂದು ವಾರ ಸಪ್ತೋತ್ಸವ ಆಚರಿಸಾಗುತ್ತದೆ. ಮಕರ ಸಂಕ್ರಾಂತಿ ದಿವಸ ರಾತ್ರಿ ಮೂರು ತೇರುಗಳ ಉತ್ಸವ ನಡೆಸಿ, ಮರುದಿನ ಹಗಲು ರಥೋತ್ಸವದೊಂದಿಗೆ ಮಠದ ವಾರ್ಷಿಕೋತ್ಸವ ಮುಕ್ತಾಯವಾಗುತ್ತದೆ.

ಈ ಚೂರ್ಣೋತ್ಸವದಲ್ಲಿ ಶ್ರೀಕ್ರಷ್ಣನ-ಮುಖ್ಯ ಪ್ರಾಣ ಮೂರ್ತಿಗಳನ್ನು ಚಿನ್ನದ ಪಲ್ಲಕ್ಕಿಯಲ್ಲಿ ತಂದು ಸ್ವಾಗತ ಗೋಪುರದ ಮುಂದಿರವ ಬ್ರಹ್ಮರಥದಲ್ಲಿ ಪ್ರತಿಷ್ಟಾಪಿಸಲಾಗುತ್ತದೆ. ಅಷ್ಟ ಯತಿಗಳು ರಥವೇರಿ ಆರತಿ ಬೆಳಗಿದ ನಂತರ ರಥವನ್ನು ರಥ ಬೀದಿಗೆ ಒಂದು ಸುತ್ತು ಹಾಕಲಾಗುತ್ತದೆ. ನಂತರ ಶ್ರೀಕೃಷ್ಣ-ಮುಖ್ಯ ಪ್ರಾಣ ಮೂರ್ತಿಗಳನ್ನು ಮಠಕ್ಕೆ ತಂದು ಮದ್ವಮಂಟಪದಲ್ಲಿ ತೊಟ್ಟಿಲು ಪೂಜೆ ಮಾಡಲಾಗುತ್ತದೆ. ಒಕುಳಿಯನ್ನು ಎಂಟು ಯತಿಗಳ ಜತೆ ನೂರಾರು ಭಕ್ತರು ಹಂಚಿಕೊಂಡು ಮದ್ವ ಸರೋವರದಲ್ಲಿ ಅಭವೃತ ಸ್ನಾನಮಾಡುತ್ತಾರೆ. ಬಳಿಕ ಅನ್ನ ಸಂತರ್ಪಣೆಗಾಗಿ ತಯಾರಿಸಲಾದ ಅನ್ನದ ರಾಶಿಗೆ ಪಲ್ಲ ಪೂಜೆ ನೆರವೇರಿಸಲಾಗುತ್ತದೆ. ಸಾವಿರಾರು ಮಂದಿ ಅನ್ನ ಸಂತರ್ಪಣೆಯಲ್ಲಿ ಪಾಲ್ಗೊಳ್ಳುತ್ತಾರೆ.

ಇದು ಚೂರ್ಣೋತ್ಸವದ ಸಂಪ್ರದಾಯವಾಗಿದ್ದು, ಇದೆಲ್ಲ ಈ ಸಲವೂ ಕೋವಿಡ್ ನಿರ್ಬಂಧದ ಕರ್ಫ್ಯೂ ಜಾರಿಲ್ಲಿರುವಾಲೇ ಯಾವುದೆ ಅಳುಕು-ಅಂಜಿಕೆಯಿಲ್ಲದೆ ಅಷ್ಟ ಯತಿಗಳ ಸಮ್ಮುಖದಲ್ಲೇ ನೆರವೇರಿಸಲಾಗಿದೆ. ಪರ್ಯಾಯ ಅದಮಾರು ಮಠದ ಶ್ರೀಈಶಪ್ರಿಯ ತೀರ್ಥ ಸ್ವಾಮಿ, ಇವರಿಂದ ಇದೇ ಜ.18ರಂದು ಪರ್ಯಾಯ ಪೋಜಾಧಿಕಾರ ವಹಿಸಿಕೊಳ್ಳಲಿರುವ ಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರತೀರ್ಥ ಸ್ವಾಮಿ, ಪೇಜಾವರ ಮಠದ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮಿ, ಪಲಿಮಾರು ಮಠದ ಶ್ರೀವಿದ್ಯಾಧೀಶತೀರ್ಥ ಸ್ವಾಮಿ, ಕಾಣಿಯೂರು ಮಠದ ಶೀವಿದ್ಯಾವಲ್ಲಿ ತೀರ್ಥ ಸ್ವಾಮಿ, ಸೋದೆ ಮಠದ ಶ್ರೀವಿಶ್ವವಲ್ಲಭತೀರ್ಥ ಸ್ವಾಮಿ, ಪಲಿಮಾರು ಮಠದ ಕಿರಿಯ ಯತಿ ಶ್ರೀವಿದ್ಯಾರಾಜೇಶ್ವರತೀರ್ಥ ಸ್ವಾಮಿ ಮತ್ತು ಶಿರೂರು ಮಥದ ಶ್ರೀವೇದವರ್ಧನತೀರ್ಥ ಸ್ವಾಮಿ ಚೂರ್ಣೋತ್ಸವದಲ್ಲ ಪಾಲ್ಗೊಂಡಿದ್ದರು.

ಕೋವಿಡ್ ಮೂರನ ಅಲೆ ವೇಗವಾಗಿ ವ್ಯಾಪಿಸುತ್ತಿರುವ ಜಿಲ್ಲೆಗಳಲ್ಲಿ ಉಡುಪಿಯೂ ಒಂದಾಗಿದ್ದು, ಇಂಥ ಸೂಕ್ಮ ಪ್ರದೇಶದಲ್ಲಿ ಅಷ್ಟಯತಿಗಳ ಸಮ್ಮುಖದಲ್ಲೆೆ ಸಾವಿರಾರು ಜನರನ್ನು ಸೇರಿಸಿ ಕೋವಿಡ್ ಶಿಚ್ಟಾಚಾರವನ್ನು ಪ್ರಜ್ಞಾರ್ಪೂಕವಾಗಿ ಉಲ್ಲಂಘಿಸಿ ಅದ್ಧೂರಿ ಉತ್ಸವ ನಡೆಸಿದರೂ ಜಿಲ್ಲಾಡಳಿತ ಮತ್ತು ಪೋಲೀಸ್ ವ್ಯವಸ್ಥೆ ಅಸಾಯಕವೆಂಬಂತೆ ಇದ್ದರು ಎಂಬ ಆರೋಪ ಕೇಳಿಬಂದಿದೆ.

ವಾರಾಂತ್ಯದ ಕರ್ಫ್ಯೂ ಇದ್ದುದರಿಂದ ಉಡುಪಿಯಲ್ಲಿ ಅಗತ್ಯ ವಸ್ತುಗಳನ್ನು ಹೊರತು ಪಡಿಸಿ ಉಳಿದೆಲ್ಲ ಅಂಗಡಿ, ಚಟುವಟಿಕೆ ಸ್ಥಬ್ಧಗೊಂಡಿತ್ತು. ಆದರೆ ಈ ನಿಯಮ ತಮಗೆ ಸಂಬಂಧಿಸಿದ್ದಲ್ಲ ಎಂಬಂತೆ ಅಷ್ಟ ಮಠದ ಉತ್ಸವ ಮಾಸ್ಕ್ ಧಾರಣೆ,ಸರಕ್ಷಿತ ಅಂತರ ನಿರ್ಬಂಧ ಕಡೆಗಣಿಸಿ ನಡೆದರೂ ಜಿಲ್ಲಾಡಳಿತ ಕಣ್ಮುಚ್ಚಿ ಕುಳಿತಿರುವುದೇಕೆಂಬ ಎಂಬ ಪ್ರಶ್ನೆ ಎದ್ದಿದೆ.


ಇದನ್ನೂ ಓದಿ: ಒಡಿಶಾ: ಜಿಂದಾಲ್ ಸ್ಟೀಲ್ ವರ್ಕ್ಸ್ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ- ಪೊಲೀಸರಿಂದ ಮಾರಣಾಂತಿಕ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕೋವಿಡ್ ಪ್ರೊಟೋಕಾಲ್ ಉಲ್ಲಂಘನೆ ಆಗಿರುವಾಗ ಕೇಸ್ ಹಾಕಬೇಕು; ಅಷ್ಟಮಠಗಳೊಟ್ಟಿಗೆ ಚರ್ಚೆ ಯಾಕೆ?

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...