Homeಮುಖಪುಟಮುಸ್ಲಿಮರ ಹತ್ಯಾಕಾಂಡ ಪ್ರಚೋದನೆ: ಫೆಡರಲ್ ಬ್ಯಾಂಕ್ ಅಧಿಕಾರಿ ವಿರುದ್ಧ FIR

ಮುಸ್ಲಿಮರ ಹತ್ಯಾಕಾಂಡ ಪ್ರಚೋದನೆ: ಫೆಡರಲ್ ಬ್ಯಾಂಕ್ ಅಧಿಕಾರಿ ವಿರುದ್ಧ FIR

- Advertisement -
- Advertisement -

ಮಂಗಳೂರು-ವಿಟ್ಲ ಭಾಗದ ಮುಸ್ಲಿಮರ ನರಮೇಧಕ್ಕೆ ಫೇಸ್ ಬುಕ್ ಪೋಸ್ಟ್ ಮೂಲಕ ಪ್ರಚೋದಿಸಿದ್ದ ಫೆಡರಲ್ ಬ್ಯಾಂಕ್ ಅಧಿಕಾರಿ ವಿಷ್ಣುಪ್ರಸಾದ್ ನಿಡ್ಡಾಜೆ ಮೇಲೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ವಿಟ್ಲ ಬಳಿ ತಾನು ಫೆಡರಲ್ ಬ್ಯಾಂಕಿನ ಅಧಿಕಾರಿಯೆಂದು ತನ್ನ ಫೇಸ್ ಬುಕ್ ಪ್ರೋಫೈಲ್‌ನಲ್ಲಿ ಹೇಳಿಕೊಂಡಿರುವ ವಿಷ್ಣುಪ್ರಸಾದ್ ಎಂಬುವವರು ವಿಟ್ಲದ ಬಳಿಯ ಸಾಲೆತ್ತೂರಿನಲ್ಲಿ ಮುಸ್ಲಿಮ್ ಮದುಮಗನೊಬ್ಬ ಕೊರಗರ ಆರಾದ್ಯ ದೈವ ಕೊರಗಜ್ಜನ ಅಣಕಿಸುವ ವೇಷ ತೊಟ್ಟಿದ್ದನೆಂಬ ಆರೋಪಕ್ಕೆ ಸಂಬಂಧಿಸಿ ಪ್ರಚೋದನಕಾರಿ ಪೋಸ್ಟ್ ಹಾಕಿದ್ದ. ಇದರ ವಿರುದ್ದ ನೆಟ್ಟಿಗರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಟ್ವಿಟರ್ ಬಳಕೆದಾರರೊಬ್ಬರು ಫೆಡರಲ್ ಬ್ಯಾಂಕ್‌ನ್ನು ತರಾಟೆಗೆ ತೆಗೆದುಕೊಂಡಿದ್ದರು. ಅಲ್ಲದೆ ಆರೋಪಿ ವಿರುದ್ದ ಪಿಎಫ್‌ಐ ಸಂಘಟನೆಯು ವಿಟ್ಲ ಠಾಣೆಯಲ್ಲಿ ದೂರು ದಾಖಲಿಸಿತ್ತು.

ಈಗ ಆರೋಪಿ ವಿಷ್ಣುಪ್ರಸಾದ್ ನಿಡ್ಡಾಜೆ ಮೇಲೆ ಐಪಿಸಿ ಸೆಕ್ಷನ್ 505ರಡಿ ಎಫ್‌ಐಆರ್ ದಾಖಲಿಸಲಾಗಿದೆಯೆಂದು ಪೊಲೀಸರು ತಿಳಿಸಿದ್ದಾರೆ.

ನಮ್ಮದು ಕೃಷ್ಣನ ತತ್ವ, ಶಿಶುಪಾಲನ ನೂರು ಪೆಟ್ಟುಗಳನ್ನು ಸಹಿಸೋದು, ನೂರೊಂದನೆ ಪೆಟ್ಟಿಗೆ ಢಿಮ್… ಬಾಂಧವರ ಸಾವಿರ ಪೆಟ್ಟು ಸಹಿಸೋದು, ನಂತರ ಗೋಧ್ರಾ ತರದ ಒಂದು ಪೆಟ್ಟಿನಲ್ಲಿ 20 ವರ್ಷ ಗಪ್ ಚುಪ್… ಗುಜರಾತಿನ ಕೊನೆಯ ಕೋಮುಗಲಭೆ ಯಾವಾಗ ಎಲ್ಲಿ ಹೇಗೆ ನಡೆಯಿತು ಅನ್ನೂದನ್ನ ಸ್ವಲ್ಪ ಯೋಚಿಸಿ ನೋಡಿದರೆ ಇದು ಅರ್ಥವಾದೀತು… ಬಹುಶಃ ವಿಟ್ಲ, ಮಂಗಳೂರು ಕಡೆ ಇನ್ನೂ ಅವುಗಳ ಕೌಂಟ್ ಪೂರ್ತಿ ಆಗಿಲ್ಲ ಅನ್ಸುತ್ತೆ… ಬಂದೂ ಬಂದೂ ಕೆಣಕುತ್ತಿವೆ… ಎಂದು ಹಿಂಸಾತ್ಮಕ ಬರಹ ವಿಷ್ಣುಪ್ರಸಾದ್ ತನ್ನ ಫೇಸ್‌ಬುಕ್ ಖಾತೆಯಲ್ಲಿ ಹಾಕಿಕೊಂಡಿದ್ದ. ಮತ್ತೊಂದು ಪೋಸ್ಟ್‌ನಲ್ಲಿ-ಕೊರಗಜ್ಜನ ವೇಷ ಹಾಕಿದ್ದಾನೆಂದು ಆರೋಪಿಸಲಾಗಿರುವ ಮುಸ್ಲಿಮರ ಮದುಮಗನ ಮನೆ, ಕಾರು, ಅಂಗಡಿ ಧ್ವಂಸ ಮಾಡಬೇಕೆಂಬರ್ಥದಲ್ಲಿ ಬರೆದಿದ್ದ. ಈಗ ವಿಷ್ಣುಪ್ರಸಾದ್ ಫೇಸ್‌ಬುಕ್ ಖಾತೆ ಡಿಲೀಟ್ ಆಗಿದೆ.

ಇದೆಲ್ಲವನ್ನು ಜಾಲತಾಣಿಗರು ಟ್ವೀಟ್ ಮೂಲಕ ಫೆಡರಲ್ ಬ್ಯಾಂಕ್ ಗಮನಕ್ಕೆ ತಂದಿದ್ದರು. ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಮುಜುಗರಕ್ಕೀಡಾಗಿದ್ದ ಫೆಡರಲ್ ಬ್ಯಾಂಕ್ ಆಡಳಿತಗಾರರು ಪ್ರತಿಕಿಯಿಸುವುದು ಅನಿವಾರ್ಯವಾಯಿತು. ಒಂದು ಜವಾಬ್ದಾರಿಯುತ ಸಂಸ್ಥೆಯಾಗಿ ನಮ್ಮ ಉದ್ಯೋಗಿಗಳ ಕಡೆಯಿಂದ ಯಾವುದೆ ಅಸಭ್ಯ, ಅನಪೇಕ್ಷಿತ ಅಥವಾ ಹಿಂಸಾತ್ಮಕ, ಪ್ರಶ್ನಾತ್ಮಕ ಕೃತ್ಯಗಳನ್ನು ಎಂದಿಗೂ ಪ್ರೋತ್ಸಾಹಿಸುವುದಿಲ್ಲ. ಅಂತಹ ವರ್ತನೆಯನ್ನು ಸಂಸ್ಥೆ ಎಂದು ಸಹಿಸುವುದಿಲ್ಲ. ಇಂತಹ ಯಾವುದೇ ಪ್ರಚೋದನೆಗೂ ಸಂಸ್ಥೆಗೂ ಸಂಬಂಧವಿಲ್ಲ. ಈ ಕುರಿತು ಸೂಕ್ತ ಕ್ರಮಕ್ಕಾಗಿ ವಿಚಾರಣೆ ಪ್ರಾರಂಭಿಸಲಾಗಿದೆ ಎಂದು ಫೆಡರಲ್ ಬ್ಯಾಂಕ್ ಹೇಳಿತ್ತು.


ಇದನ್ನೂ ಓದಿ: ಮಂಗಳೂರು: ಮುಸ್ಲಿಮರ ನರಮೇಧಕ್ಕೆ ಪ್ರಚೋದಿಸಿದ ಬ್ಯಾಂಕ್ ಅಧಿಕಾರಿ- ಕ್ರಮಕ್ಕೆ ಮುಂದಾದ ಬ್ಯಾಂಕ್ ಆಡಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...