Homeಮುಖಪುಟವಿರೋಧಿಗಳ ವಾಗ್ದಾಳಿಗೆ ಹೆದರುವುದಿಲ್ಲ: ರೂಪದರ್ಶಿ, ಕಾಂಗ್ರೆಸ್ ಅಭ್ಯರ್ಥಿ ಅರ್ಚನಾ ಗೌತಮ್

ವಿರೋಧಿಗಳ ವಾಗ್ದಾಳಿಗೆ ಹೆದರುವುದಿಲ್ಲ: ರೂಪದರ್ಶಿ, ಕಾಂಗ್ರೆಸ್ ಅಭ್ಯರ್ಥಿ ಅರ್ಚನಾ ಗೌತಮ್

- Advertisement -
- Advertisement -

ಉತ್ತರ ಪ್ರದೇಶದ ಹಸ್ತಿನಾಪುರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ನಟಿ ಮತ್ತು ರೂಪದರ್ಶಿ ಅರ್ಚನಾ ಗೌತಮ್ ಅವರ ಹಳೆಯ ಬಿಕಿನಿ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಇದರ ಜೊತೆಗೆ ಪ್ರತಿಸ್ಪರ್ಧಿ ಬಿಜೆಪಿ ಕೂಡ ಅವರ ಆಯ್ಕೆಯನ್ನು ಟೀಕಿಸಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಅರ್ಚನಾ ಅವರು ಈ ದಾಳಿಯಿಂದ ನಾನು ಭಯಪಟ್ಟಿಲ್ಲ, ಮುಂದುವರೆಯುತ್ತೇನೆ ಎಂದಿದ್ದಾರೆ.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಧೈರ್ಯದ ಮಾತುಗಳಿಂದ ಮತ್ತಷ್ಟು ಧೈರ್ಯಶಾಲಿಯಾಗಿ ಮುಂದುವರೆಯಲಿದ್ದೇನೆ ಎಂದಿದ್ದಾರೆ.

ಪಶ್ಚಿಮ ಉತ್ತರ ಪ್ರದೇಶದ 26 ವರ್ಷದ ನಟಿ, ರೂಪದರ್ಶಿ, ಮಿಸ್ ಬಿಕಿನಿ ಇಂಡಿಯಾ 2018 ಮತ್ತು ಮಿಸ್ ಯುಪಿ 2014 ಕೀರಿಟವನ್ನು ಮುಡಿಗೆರಿಸಿಕೊಂಡಿದ್ದಾರೆ. ಇವರಿಗೆ ಕಾಂಗ್ರೆಸ್‌ನಿಂದ ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಇವರ ಹಳೆಯ ಬಿಕಿನಿ ಪೋಟೋಗಳು ವೈರಲ್ ಆಗಿವೆ. ಬಿಜೆಪಿ ಮತ್ತು ಹಿಂದೂ ಮಹಾಸಭಾದಂತಹ ಗುಂಪುಗಳು ಆಕೆಯ ಚಿತ್ರಗಳನ್ನು ಬೊಟ್ಟು ಮಾಡಿ ಅವಹೇಳನಕಾರಿ ಕಾಮೆಂಟ್ ಮಾಡಿವೆ.

ಇದನ್ನೂ ಓದಿ: ಉತ್ತರ ಪ್ರದೇಶ ಚುನಾವಣೆ: ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಾಯಿಗೆ ಕಾಂಗ್ರೆಸ್‌ನಿಂದ ಟಿಕೆಟ್

ಕಳೆದ ವರ್ಷ ನವೆಂಬರ್‌ನಲ್ಲಿ ಕಾಂಗ್ರೆಸ್‌ಗೆ ಸೇರಿರುವ ಅರ್ಚನಾ, “ನಾನು ಪ್ರಿಯಾಂಕಾ ದೀದಿಯೊಂದಿಗೆ ಮಾತನಾಡಿದಾಗ, ಅವರು ನನಗೆ ಹೇಳಿದರು, ಅರ್ಚನಾ, ನೀವು ಈ ಜಗತ್ತಿಗೆ ಕಾಲಿಡುತ್ತಿದ್ದೀರಿ ಆದರೆ ಅರೆಮನಸ್ಸಿನಿಂದ ಬರಬೇಡಿ, ನಿಮ್ಮ ಚಿತ್ರಗಳು ಮತ್ತು ವೀಡಿಯೊಗಳಿಂದ ನಿಮ್ಮನ್ನು ಟ್ರೋಲ್ ಮಾಡಲಾಗುತ್ತದೆ. ಆದರೆ ನೀವು ಭಯಪಡಬೇಕಾಗಿಲ್ಲ, ನೀವು ಧೈರ್ಯವಾಗಿರಬೇಕು ಎಂದಿದ್ದರು. ಹೀಗಾಗಿ ಪ್ರಿಯಾಂಕಾ ದೀದಿಯ ಮಾತುಗಳಿಂದ ನಾನು ಮೊದಲಿನಿಂದಲೇ ಧೈರ್ಯಶಾಲಿಯಾಗಿದ್ದೇನೆ. ನಾನು ಮುಂದೆ ಸಾಗುತ್ತೇನೆ” ಎಂದಿದ್ದಾರೆ.

“ನನ್ನ ಬಗ್ಗೆ ನಿಂದನೆ ಮತ್ತು ಅಸಭ್ಯ ಹೇಳಿಕೆಗಳನ್ನು ನೀಡುವ ಜನರಿಗೆ ನಾನು ಹೇಳುವುದೇನಂದರೆ, ನಾನು ಎರಡು ವೃತ್ತಿಪರ ಜೀವನವನ್ನು ಹೊಂದಿದ್ದೇನೆ. ಎರಡು ಪರಸ್ಪರ ಭಿನ್ನವಾಗಿವೆ. ನಾನು ಅಂತರರಾಷ್ಟ್ರೀಯ ವೇದಿಕೆಯಲ್ಲಿ ಭಾರತವನ್ನು ಪ್ರತಿನಿಧಿಸಿ, ದೇಶವನ್ನು ಹೆಮ್ಮೆಪಡುವಂತೆ ಮಾಡಿದ್ದೇನೆ. ಈ ಎರಡನ್ನೂ ಬೆರೆಸಬಾರದು ಎಂದು ನಾನು ಬಯಸುತ್ತೇನೆ” ಎಂದು ಪಿಟಿಐಗೆ ನೀಡಿರುವ ಸಂದರ್ಶನದಲ್ಲಿ ಹೇಳಿದ್ದಾರೆ.

ಹಸ್ತಿನಾಪುರದಲ್ಲಿ ದ್ರೌಪದಿ ಕಥನವನ್ನು ಪುನಃ ಬರೆಯುವುದಾಗಿ ಹೇಳಿರುವ ಅವರು, “ನಾನು ಈ ನಗರದಲ್ಲಿ ಹುಟ್ಟಿ ಬೆಳೆದಿರುವ ಕಾರಣ ಇಲ್ಲಿ ಬದಲಾವಣೆಯನ್ನು ತರಬಲ್ಲೆ ಎಂದು ನನಗೆ ವಿಶ್ವಾಸವಿದೆ. ನಾನು ಚುನಾವಣೆಯಲ್ಲಿ ಕಣಕ್ಕಿಳಿಯಲು ಮುಂಬೈನಿಂದ ಹಾರಿ ಬಂದವಳಲ್ಲ. ನನಗೆ ಇಲ್ಲೇ ಮನೆ ಇದೆ. ನಾನು ಇಲ್ಲೇ ವಿದ್ಯಾಭ್ಯಾಸ ಮಾಡಿದ್ದೇನೆ” ಎಂದಿದ್ದಾರೆ.

ಇದನ್ನೂ ಓದಿ: ಯುಪಿ ಚುನಾವಣೆ-2022: ಗೋರಖ್‌ಪುರದಿಂದ ಆದಿತ್ಯನಾಥ್‌‌ ಸ್ಪರ್ಧೆ

ಅರ್ಚನಾ ಗೌತಮ್ ಅವರ ಆಯ್ಕೆಯು ಕಾಂಗ್ರೆಸ್‌ಗೆ ಅಭ್ಯರ್ಥಿಗಳಿಲ್ಲ ಎಂದು ತೋರಿಸುತ್ತದೆ. ಕೀಳು ಮಟ್ಟದ ಪ್ರಚಾರಕ್ಕಾಗಿ ಯಾರನ್ನಾದರೂ ಚುನಾವಣೆಗೆ ನಿಲ್ಲಿಸಲು ಕಾಂಗ್ರೆಸ್ ಸಿದ್ಧವಾಗಿದೆ ಎಂದು ಉತ್ತರ ಪ್ರದೇಶದ ಬಿಜೆಪಿ ವಕ್ತಾರ ರಾಕೇಶ್ ತ್ರಿಪಾಠಿ ಹೇಳಿದ್ದಾರೆ.

ಅಖಿಲ ಭಾರತ ಹಿಂದೂ ಮಹಾಸಭಾ ಮತ್ತು ಸಂತ ಮಹಾಸಭಾ ಮುಖ್ಯಸ್ಥ ಸ್ವಾಮಿ ಚಕ್ರಪಾಣಿ, “ಮಾನಸಿಕವಾಗಿ ದಿವಾಳಿಯಾಗಿರುವ ಪಕ್ಷದಿಂದ ಏನನ್ನೂ ನಿರೀಕ್ಷಿಸಲಾಗುವುದಿಲ್ಲ” ಎಂದು ಹೇಳಿದ್ದಾರೆ.

ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿರುವ ಕಾಂಗ್ರೆಸ್, ಯುವತಿಯ ವಿರುದ್ಧ ಕೀಳುಮಟ್ಟದ ಹೇಳಿಕೆ ನೀಡುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದಿದೆ. “ಬೇರೆ ಮಹಿಳೆಯಂತೆ ಅವರು ನಮ್ಮ ಗೌರವಕ್ಕೆ ಅರ್ಹರು. ಅವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವವರು ತಮ್ಮ ಮಹಿಳಾ ವಿರೋಧಿ ನಿಲುವನ್ನು ಮಾತ್ರ ಪ್ರದರ್ಶಿಸುತ್ತಿದ್ದಾರೆ” ಎಂದು ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನಾತೆ ನವದೆಹಲಿಯಲ್ಲಿ ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಫೆಬ್ರವರಿ 10 ರಿಂದ ಏಳು ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.


ಇದನ್ನೂ ಓದಿ: ಯುಪಿ ಚುನಾವಣೆ: ಹೋರಾಟಗಾರರು, ಸಂತ್ರಸ್ತರು ಸೇರಿ 40% ಮಹಿಳೆಯರಿಗೆ ಕಾಂಗ್ರೆಸ್ ಟಿಕೆಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...