Homeಕರ್ನಾಟಕರಾಮನಗರ: ರೇಷ್ಮೆ ಮಾರುಕಟ್ಟೆಯಲ್ಲಿ ಶೋಷಣೆ ಆರೋಪ - ಪತ್ರ ಅಭಿಯಾನ ಆರಂಭಿಸಿದ ರೈತರು

ರಾಮನಗರ: ರೇಷ್ಮೆ ಮಾರುಕಟ್ಟೆಯಲ್ಲಿ ಶೋಷಣೆ ಆರೋಪ – ಪತ್ರ ಅಭಿಯಾನ ಆರಂಭಿಸಿದ ರೈತರು

- Advertisement -
- Advertisement -

ಕಳೆದ 30 ವರ್ಷಗಳಿಂದ ರಾಮನಗರ ರೇಷ್ಮೆಗೂಡಿನ ಮಾರುಕಟ್ಟೆಯಲ್ಲಿ ರೀಲರ್‌ಗಳು ಹಾಗು ಗೂಡು ಕದಿಯುವ ಮಾಫಿಯಾದವರಿಂದ ರೈತರ ಮೇಲೆ ನಿರಂತರ ಶೋಷಣೆ ಆಗುತ್ತಿದೆ ಎಂದು ರೈತರು ಆರೋಪಿಸಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಪತ್ರ ಬರೆಯುವ ಮೂಲಕ ಪತ್ರ ಅಭಿಯಾನ ಆರಂಭಿಸಿದ್ದಾರೆ.

ರೈತರ ಮೇಲಿನ ಶೋಷಣೆ ತಪ್ಪಿಸಲು ಜರೂರು ಕ್ರಮ ವಹಿಸಬೇಕು ಎಂದು ಆಗ್ರಹಿಸಿ ಮಂಡ್ಯ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳ ಮುಂದೆ ಮುಖ್ಯಮಂತ್ರಿಗಳಿಗೆ ರಿಜಿಸ್ಟರ್‌ ಪೋಸ್ಟ್‌ನಲ್ಲಿ ಪತ್ರ ಬರೆಯುವ ಚಳವಳಿ ಆರಂಭವಾಗಿದೆ. ಮದ್ದೂರು ತಾಲೂಕಿನ ಹೋಬಳಿ ಮಟ್ಟದಲ್ಲೂ ರೈತರು ಪತ್ರ ಚಳವಳಿ ಆರಂಭಿಸಿದ್ದಾರೆ.

ಇಂದಿನಿಂದ ಪತ್ರ, ಇ-ಮೇಲ್, ಟ್ವಿಟರ್‌ ಮುಂದಾದ ಸಾಮಾಜಿಕ ಮಾಧ್ಯಮಗಳ ಮೂಲಕವೂ ಮುಖ್ಯಮಂತ್ರಿಗಳ ಮೇಲೆ ಒತ್ತಡ ತರಲಾಗುತ್ತದೆ ಎಂದು ರೈತಮುಖಂಡರಾದ ನ.ಲಿ.ಕೃಷ್ಣರವರು ನಾನುಗೌರಿ.ಕಾಂಗೆ ತಿಳಿಸಿದ್ದಾರೆ.

ರಾಮನಗರದ ರೇಷ್ಮೆಗೂಡು ಮಾರುಕಟ್ಟೆ ಬೃಹತ್ ವ್ಯವಹಾರ ಹೊಂದಿದ್ದು ರಾಜ್ಯದ ಎಲ್ಲಾ ಕಡೆಯಿಂದ ರೈತರು ರೇಷ್ಮೆ ಗೂಡು ಮಾರಾಟಕ್ಕಾಗಿ ರಾಮನಗರದ ಮಾರುಕಟ್ಟೆಗೆ ಬರುತ್ತಾರೆ. ಇಲ್ಲಿನ ರೀಲರ್‌ಗಳು ಮತ್ತು ಗೂಡು ಕದಿಯುವ ಮಾಫಿಯಾದವರು ಅಧಿಕಾರಿಗಳೊಂದಿಗೆ ಶಾಮಿಲಾಗಿ ಪ್ರತಿಕ್ಷಣ ಪ್ರತಿದಿನ ರೈತರನ್ನು ಶೋಷಣೆ ಮಾಡುತ್ತಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ.

ಇದನ್ನೂ ಓದಿ: ಕಾವೇರಿಯ ಉಳಿವಿಗೆ ‘ಮೇಕೆದಾಟು ಅಣೆಕಟ್ಟು’ ಪ್ರಸ್ತಾಪ ಕೈಬಿಡಬೇಕು: ಮೇಧಾ ಪಾಟ್ಕರ್‌‌

ರೇಷ್ಮೆ ರೈತರು ಅಭಿಯಾನ ನಡೆಸಲು ಕಾರಣ:

ನಾನು ಗೌರಿ.ಕಾಂ ಜೊತೆಗೆ ಮಾತನಾಡಿರುವ ರೈತ ನ.ಲಿ ಕೃಷ್ಣ ಅಂದಿನ ಘಟನೆಯನ್ನು ತಿಳಿಸಿದ್ದು ಹೀಗೆ.. “ಜನವರಿ 12 ರಂದು ರೇಷ್ಮೆಗೂಡು ಮಾರಾಟಕ್ಕೆ ಬಂದಿದ್ದ ಹಾವೇರಿ ತಾಲೂಕು ಗುಬ್ಬಿ ಗ್ರಾಮದ ರೈತ ವಿರುಪಾಕ್ಷಪ್ಪ ಅವರ ಜಾಲರಿಯಿಂದ ಗೂಡು ಜಾಡಿಸುವ, ಗೂಡು ಬೇರ್ಪಡಿಸುವ ಮೂಲಕ ಅಕ್ರಮವಾಗಿ ಗೂಡು ಸಾಗಿಸುವ, ಗೂಡು ಕದಿಯುವ ಕೆಲಸಕ್ಕೆ ರೀಲರ್ ಮುನೀರ್ ಅಹಮದ್ ಮತ್ತು ಆತನ ಸಹಚರರು ಮುಂದಾಗಿದ್ದಾರೆ. ಹೀಗೆ ತೊಂದರೆ ಮಾಡಬೇಡಿ ಎಂದು ರೈತ ವಿರುಪಾಕ್ಷಪ್ಪ ಕೈ ಮುಗಿದು ಬೇಡಿಕೊಂಡರು ಕೇಳದೇ ಗೂಡು ಮಾಫಿಯಾ ಮಂದಿ ರೈತನ ಮೇಲೆ ಹಲ್ಲೆಗೆ ಮುಂದಾಗಿ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇಷ್ಟು ನಡೆಯುತ್ತಿದ್ದರೂ ಯಾವೊಬ್ಬ ಅಧಿಕಾರಿಯಾಗಲಿ, ಭದ್ರತಾ ಸಿಬ್ಬಂದಿಯಾಗಲಿ, ಅಲ್ಲೇ ಇದ್ದ ರೈತರಾಗಲಿ ವಿರುಪಾಕ್ಷಪ್ಪನವರ ರಕ್ಷಣೆಗೆ ಧಾವಿಸಿಲ್ಲ. ಇದು ಇಲ್ಲಿನ ಮಾರುಕಟ್ಟೆಯ ಗೂಡುಕದಿಯುವ ಮಾಫಿಯಾದ ಬಲವನ್ನು ತಿಳಿಸುತ್ತದೆ” ಎಂದಿದ್ದಾರೆ.

ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ ಮಾರುಕಟ್ಟೆ ಅಧಿಕಾರಿ ಈ ಕುರಿತು ಮರುದಿನ ಸಾಂಕೇತಿಕವಾಗಿ  ಪೊಲೀಸ್ ಠಾಣೆಗೆ ದೂರು ಸಲ್ಲಿಸಿ ತಮ್ಮ ಹುದ್ದೆಯ ರಕ್ಷಣೆಯ ನಾಟಕವಾಡಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ.

ಇದು ಒಂದು ಘಟನೆಯಷ್ಟೆ, ಇಂತಹ ಜಾಲ ಕಳೆದ ಮೂವತ್ತು ವರ್ಷಗಳಿಂದಲೂ ಇಲ್ಲಿ ಬೆಳೆದು ನಿಂತಿದೆ. ಅಧಿಕ ಸಂಖ್ಯೆಯಲ್ಲಿ ರಾಜ್ಯದೆಲ್ಲೆಡೆಯಿಂದ ಬರುವ ರೈತರನ್ನು ವ್ಯವಸ್ಥಿತ ಸಂಚಿನ ಮೂಲಕ ಶೋಷಣೆ ಮಾಡುತ್ತಿದೆ. ಇಲ್ಲಿಗೆ ಗೂಡು ತರುವ ಬಹುತೇಕ ರೈತರು ಈ ಮಾಫಿಯಾದಿಂದ ಗೂಡು ರಕ್ಷಿಸಿ ಕೊಳ್ಳಲು ತಮ್ಮ ಗೂಡಿನ ಜಾಲರಿ ಬಿಟ್ಟು ಕದಲದೆ ದಿನವಿಡಿ ಕಾವಲು ಕಾಯಬೇಕಾದ ಪರಿಸ್ಥಿತಿ ಇದೆ. ಹರಾಜಿಗೆ ಮುನ್ನ ಗೂಡು ಪರೀಕ್ಷಿಸುವ ನೆಪದಲ್ಲಿ ಗೂಡು ಚೆಲ್ಲುವುದು, ಹರಾಜಿನ ನಂತರ ಅಕ್ರಮವಾಗಿ ಗುಂಪುಗೂಡಿ ನಿಯಮಬಾಹಿರವಾಗಿ ಗೂಡು ಬೇರ್ಪಡಿಸುವುದು, ಅಕ್ರಮವಾಗಿ ಗೂಡು ಸಾಗಿಸುವುದು, ಜಾಲರಿಯ ಕೆಳಕ್ಕೆ ಗೂಡು ಚೆಲ್ಲಿ ಗೂಡು ಕದಿಯುವ ಕೆಲಸ ಮಾಡುತ್ತಾರೆ. ದೇವರ ಹೆಸರಿನಲ್ಲಿ, ಇತರೆ ಕಾರಣ ಹೇಳಿ ಐದಾರು ಕೆ.ಜಿ.ಗೂಡು ಎತ್ತಿಕೊಳ್ಳುತ್ತಾರೆ. ಪ್ರಶ್ನಿಸುವ ರೈತನ ಮೇಲೆ ಮಾಫಿಯಾ ಮಂದಿ ಒಟ್ಟಾಗಿ ಸೇರಿ ಹಲ್ಲೆ ನಡೆಸುತ್ತಾರೆ ಎಂದು ನ.ಲಿ.ಕೃಷ್ಣ ತಿಳಿಸಿದ್ದಾರೆ.

ಇದನ್ನೂ ಓದಿ: ಒಡಿಶಾ: ಜಿಂದಾಲ್ ಸ್ಟೀಲ್ ವರ್ಕ್ಸ್ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ- ಪೊಲೀಸರಿಂದ ಮಾರಣಾಂತಿಕ ಹಲ್ಲೆ

ಪ್ರಕರಣ ಹಿನ್ನೆಲೆ ರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ನಡೆಯುತ್ತಿರುವ ಶೋಷಣೆ ವಿರುದ್ಧ ರೈತರು ದನಿ ಎತ್ತಿದ್ದಾರೆ. ಮುಖ್ಯಮಂತ್ರಿಗಳು ಘಟನೆ ಎಸಗಿದ ರೀಲರ್ ಮುನೀರ್ ಅಹಮದ್ ಲೈಸನ್ಸ್ ರದ್ದುಗೊಳಿಸಬೇಕು. ಆತನ ಬಂಧನ ಮಾಡಬೇಕು. ಜೊತೆಗೆ ಪ್ರಮುಖವಾಗಿ ತಕ್ಷಣ ದಕ್ಷ ಅಧಿಕಾರಿಗಳ ನೇಮಕವಾಗಬೇಕು ಎಂದು ರೈತರು ಒತ್ತಾಯಿಸಿದ್ದಾರೆ.

ಇವುಗಳ ಜೊತೆಗೆ…

* ಈ ಕೂಡಲೆ ರಾಮನಗರ ಮಾರುಕಟ್ಟೆಗೆ ದಕ್ಷ ಅಧಿಕಾರಿಗಳ ನೇಮಕವಾಗಬೇಕು

* ಮಾರುಕಟ್ಟೆಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ ನಿಷೇಧಿಸಬೇಕು

* ರೀಲರ್‌ಗಳು ಅಧಿಕೃತ ಬ್ಯಾಡ್ಜ್ ಧರಿಸಿ ವ್ಯಾಪಾರದಲ್ಲಿ ಭಾಗಿಯಾಗಬೇಕು

* ಮಾರುಕಟ್ಟೆ ಆವರಣದಲ್ಲಿ ಸಮಗ್ರವಾಗಿ ಸಿಸಿಟಿವಿ ಅಳವಡಿಸಿ ಅದನ್ನು ಬಹೃತ್ ಪರದೆಯಲ್ಲಿ ಪ್ರದರ್ಶಿಸಬೇಕು

* ಮಾರುಕಟ್ಟೆಯಲ್ಲಿ ಜಾಗೃತ ದಳ ನೇಮಿಸಿ ರೈತರ ಮೇಲಿನ ಶೋಷಣೆ ತಡೆಯಬೇಕು.

* ದಿನದ ವಹಿವಾಟಿನ ಕೊನೆಗೆ ಎಲ್ಲಾ ರೈತರಿಗೆ ತೂಕಕ್ಕೆ ತಕ್ಕ ದರಕ್ಕೆ ತಕ್ಕ ಹಣ ಹೊಂದಾಣಿಕೆ ಆಗಿರುವುದನ್ನ ಖಚಿತಪಡಿಸಿಕ್ಕೊಳ್ಳುವ ಅಧಿಕಾರಿ ನೇಮಕವಾಗಬೇಕು.

* ಮಾರುಕಟ್ಟೆ ಆವರಣದಲ್ಲಿ ಕಿರು ಪೊಲೀಸ್ ಠಾಣೆ ಸ್ಥಾಪಿಸಬೇಕು ಎಂಬ ಪ್ರಮುಖ ಹಕ್ಕೋತ್ತಾಯಗಳನ್ನು ಸಲ್ಲಿಸಿದ್ದಾರೆ.

ಘಟನೆ ಸಂಬಂಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೂಡ ಟ್ವೀಟ್ ಮಾಡಿ ಖಂಡಿಸಿದ್ದರು. “ರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ರೈತನ ಮೇಲೆ ರೀಲರ್‌ ಒಬ್ಬ ದುಂಡಾವರ್ತನೆ ನಡೆಸಿದ ಘಟನೆ ಖಂಡನೀಯ. ಹಗಲು ರಾತ್ರಿ ನಿದ್ದೆಗೆಟ್ಟು ಕಷ್ಟದಿಂದ ರೇಷ್ಮೆಗೂಡು ಬೆಳೆದು ತರುವ ರೈತರ ಮೇಲೆ ಈ ರೀತಿ ದೌರ್ಜನ್ಯ ಎಸಗುವುದು ಅಕ್ಷಮ್ಯ” ಎಂದಿದ್ದರು.

“ದೌರ್ಜನ್ಯ ಎಸಗಿದ ರೀಲರುಗಳ ವಿರುದ್ಧ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ರಾಮನಗರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಗಿರೀಶ್‌ ಅವರಿಗೆ ತಿಳಿಸಿದ್ದೇನೆ. ರೇಷ್ಮೆಗೂಡು ಹರಾಜು ನಡೆಯುವ ಸಂದರ್ಭದಲ್ಲಿ ಹೆಚ್ಚುವರಿ ಭದ್ರತೆ ಒದಗಿಸುವಂತೆಯೂ ಸೂಚಿಸಿದ್ದೇನೆ. ಇಂಥ ಘಟನೆಗಳು ಮರುಕಳಿಸದಂತೆ ಬಿಗಿಕ್ರಮ ಕೈಗೊಳ್ಳುವಂತೆ ಹೇಳಿದ್ದೇನೆ. ಹರಾಜು ಸಂದರ್ಭದಲ್ಲಿ ರೇಷ್ಮೆ ಗೂಡನ್ನು ಬೇರ್ಪಡಿಸುವುದು, ಅಕ್ರಮವಾಗಿ ಗೂಡನ್ನು ತೆಗೆದುಕೊಳ್ಳುವುದು, ಕಳ್ಳತನ ಮಾಡುವುದು ರಾಮನಗರ ಮಾರುಕಟ್ಟೆಯಲ್ಲಿ ನಡೆಯುತ್ತಿರುವ ಬಗ್ಗೆ ನನಗೆ ಅನೇಕ ದೂರುಗಳು ಬಂದಿವೆ. ಇಂಥ ಕಾನೂನು ಬಾಹಿರ ಕೃತ್ಯಗಳನ್ನು ಸಹಿಸುವ ಪ್ರಶ್ನೆ ಇಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.


ಇದನ್ನೂ ಓದಿ: ಸಂಸ್ಕೃತ ವಿವಿಗೆ ದುಡ್ಡು ಸುರಿಯುವ ಬದಲು ಸರ್ಕಾರಿ ಶಾಲೆ ಉಳಿಸಿ: ಕನ್ನಡಿಗರ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...