Homeಮುಖಪುಟಕಥಕ್ ದಂತಕಥೆ ಪಂಡಿತ್ ಬಿರ್ಜು ಮಹಾರಾಜ್ (83) ನಿಧನ

ಕಥಕ್ ದಂತಕಥೆ ಪಂಡಿತ್ ಬಿರ್ಜು ಮಹಾರಾಜ್ (83) ನಿಧನ

- Advertisement -
- Advertisement -

ಕಥಕ್ ದಂತಕಥೆ 83 ವರ್ಷದ ಪಂಡಿತ್ ಬಿರ್ಜು ಮಹಾರಾಜ್ ಅವರು ಹೃದಯಾಘಾತದಿಂದ ಭಾನುವಾರ ತಡರಾತ್ರಿ ದೆಹಲಿಯ ತಮ್ಮ ಮನೆಯಲ್ಲಿ ನಿಧನರಾಗಿದ್ದಾರೆ.

ಭಾರತದ ಅತ್ಯುತ್ತಮ ಕಲಾವಿದರಲ್ಲಿ ಒಬ್ಬರಾಗಿದ್ದ ಮತ್ತು  ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣವನ್ನು ಪಡೆದವರು ಪಂಡಿತ್ ಬಿರ್ಜು ಮಹಾರಾಜ್. ಅವರ ಶಿಷ್ಯರು ಮತ್ತು ಅನುಯಾಯಿಗಳು ಅವರನ್ನು ಪ್ರೀತಿಯಿಂದ ಪಂಡಿತ್-ಜಿ ಅಥವಾ ಮಹಾರಾಜ್-ಜಿ ಎಂದು ಕರೆಯುತ್ತಿದ್ದರು.

ವರದಿಗಳ ಪ್ರಕಾರ, ಭಾನುವಾರ ತಡರಾತ್ರಿ ಬಿರ್ಜು ಮಹಾರಾಜ್ ತನ್ನ ಮೊಮ್ಮಕ್ಕಳೊಂದಿಗೆ ಆಟವಾಡುತ್ತಿದ್ದಾಗ ಅವರ ಆರೋಗ್ಯ ಹದಗೆಟ್ಟು ಅವರು ಪ್ರಜ್ಞಾಹೀನರಾದರು. ನಂತರ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು ಅಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಈ ಘಟನೆ  ಸಂಭವಿಸಿದಾಗ ಅವರು ನಮ್ಮೊಂದಿಗಿದ್ದರು. ಅವರು ಸಂಗೀತ ಪ್ರಿಯರಾಗಿದ್ದರಿಂದ ಭೋಜನ ಮಾಡಿದ ನಂತರ ಅವರು  ಮತ್ತು ನಾವು ‘ಅಂತಕ್ಷರಿ’ ನಡೆಸುತ್ತಿದ್ದೆವು. ಅವರು ಮಲಗಿದ್ದರು ತದನಂತರ ಇದ್ದಕ್ಕಿದ್ದಂತೆ ಅವರ ಉಸಿರಾಟವು ಏರಿಳಿತವಾಯಿತು. ಅವರು ಹೃದ್ರೋಗಿಯೂ ಆಗಿದ್ದರಿಂದ ಇದು ಹೃದಯ ಸ್ತಂಭನ ಎಂದು ನಾವು ಭಾವಿಸುತ್ತೇವೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.

“ಇದು ಮಧ್ಯರಾತ್ರಿ 12.15 ರಿಂದ 12.30 ರ ನಡುವೆ ಸಂಭವಿಸಿದೆ. ನಾವು ಆಸ್ಪತ್ರೆಗೆ ದಾಖಲಿಸಿದೆವು ಆದರೆ ದುರದೃಷ್ಟವಶಾತ್, ನಮಗೆ ಅವರನ್ನು ಉಳಿಸಲು ಸಾಧ್ಯವಾಗಲಿಲ್ಲ. ಆಸ್ಪತ್ರೆಯನ್ನು ತಲುಪುವ ಮೊದಲೇ ಅವರು ಸಾವನ್ನಪ್ಪಿದರು. ಈ ಘಟನೆ ಸಂಭವಿಸಿದಾಗ ಅವರ ಇಬ್ಬರು ಶಿಷ್ಯರು ಮತ್ತು ಅವರ ಇಬ್ಬರು ಮೊಮ್ಮಕ್ಕಳು, ನನ್ನ ತಂಗಿ ಯಶಸ್ವಿನಿ ಮತ್ತು ನಾನು ಅವರೊಂದಿಗೆ ಇದ್ದೆವು, ಅವರು ತಮ್ಮ ಕೊನೆಯ ಕ್ಷಣಗಳಲ್ಲಿ ನಗುತ್ತಿದ್ದರು” ಎಂದು ಸ್ವತಃ ಕಥಕ್ ನೃತ್ಯಗಾರ್ತಿ ಬಿರ್ಜು ಮಹಾರಾಜ್ ಅವರ ಮೊಮ್ಮಗಳು ರಾಗಿಣಿ ತಿಳಿಸಿದ್ದಾರೆ ಎಂದು ಪಿಟಿಐ ಸುದ್ದಿ ಸಂಸ್ಥೆ ಉಲ್ಲೇಖಿಸಿದೆ.

ಅಂದಹಾಗೆ ಬಿರ್ಜು ಮಹಾರಾಜ ಅವರ ದೇಹ ಪಾಶ್ಚಾತ್ಯ ನೃತ್ಯಪಟುಗಳಂತೆ ತೆಳ್ಳಗೆ ಸಪೂರವಾಗಿರಲಿಲ್ಲ. ತಮ್ಮನ್ನು ತಾವು ಖಾತೆಪೀತೆ ಘರ್ ಕಾ ಎಂದು ಕರೆದುಕೊಳ್ಳುತ್ತಿದ್ದ ಅವರು ಚೆನ್ನಾಗಿ ತಿಂದು ದುಂಡದುಂಡಗೆ ಇದ್ದರು. ಒಂದು ಸಲ ವಿದೇಶದಲ್ಲಿ ಕಾರ್ಯಕ್ರಮ ನೀಡಬೇಕಾಗಿತ್ತು. ಆಗ ಅಲ್ಲಿಯ ಭದ್ರತಾ ಸಿಬ್ಬಂದಿ, ಬಿರ್ಜು ಮಹಾರಾಜ ಅವರ ತಂಡದವರಿಗೆ ಒಳಗೇ ಬಿಡಲಿಲ್ಲ. ಇಲ್ಲ, ನಾವೇ ನೃತ್ಯಪಟುಗಳು, ಈಗ ಕಾರ್ಯಕ್ರಮ ನೀಡಬೇಕಾಗಿದ್ದು ನಾವೇ ಎಂದು ಪದೇಪದೇ ವಿನಂತಿಸಿಕೊಂಡರೂ ಬಿಡಲಿಲ್ಲ. ಕೊನೆಗೆ ಇವರ ಮನವಿಗೆ ಸೋತು, ಆ ಭದ್ರತಾ ಸಿಬ್ಬಂದಿ ಕೊನೆಗೂ ತಂಡದವರನ್ನು ಒಳಗೆ ಬಿಡಲು ಒಪ್ಪಿದ. ಆದರೆ ಯಾವ ಆಂಗಲ್ ನಲ್ಲೂ ನೃತ್ಯ ಮಾಡುವವನಂತೆ ಕಾಣದ ಈ ಒಬ್ಬ ವ್ಯಕ್ತಿಯನ್ನು, ಮಾತ್ರ ಒಳಗೆ ಬಿಡಲು ಒಪ್ಪಲಿಲ್ಲ. ಆ ವ್ಯಕ್ತಿಯೇ ಬಿರ್ಜು ಮಹಾರಾಜ. ಇದನ್ನು ತಾವೇ ಒಂದು ಕಾರ್ಯಕ್ರಮದಲ್ಲಿ ಹೇಳಿಕೊಂಡಿದ್ದರು ಬಿರ್ಜು ಮಹಾರಾಜ ಅವರು.

ಅವರ ನಿಧನದ ಸುದ್ದಿ ಬರುತ್ತಿದ್ದಂತೆ ಸಾಗರೋಪಾದಿಯಲ್ಲಿ ಸಂತಾಪಗಳು ಹರಿದು ಬಂದಿವೆ.

“ಲೆಜೆಂಟರಿ ಪಂಡಿತ್ ಬಿರ್ಜು ಮಹಾರಾಜ್ ಅವರ ನಿಧನವು ಒಂದು ಯುಗದ ಅಂತ್ಯವನ್ನು ಸೂಚಿಸುತ್ತದೆ. ಇದು ಭಾರತೀಯ ಸಂಗೀತ ಮತ್ತು ಸಾಂಸ್ಕೃತಿಕ ಜಾಗದಲ್ಲಿ ಆಳವಾದ ಶೂನ್ಯವನ್ನು ಉಂಟುಮಾಡುತ್ತದೆ. ಅವರು ಕಥಕ್ ಅನ್ನು ಜಾಗತಿಕವಾಗಿ ಜನಪ್ರಿಯಗೊಳಿಸಲು ಅಪ್ರತಿಮ ಕೊಡುಗೆಯನ್ನು ನೀಡುವ ಮೂಲಕ ಐಕಾನ್ ಆದವರು ಎಂದು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಟ್ವೀಟ್ ಮೂಲಕ ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಾಂತ್ವನ ಹೇಳಿದ್ದಾರೆ.

“ಭಾರತೀಯ ನೃತ್ಯಕ್ಕೆ ವಿಶ್ವದಾದ್ಯಂತ ವಿಶೇಷ ಮನ್ನಣೆ ನೀಡಿದ ಪಂಡಿತ್ ಬಿರ್ಜು ಮಹಾರಾಜ್ ಜಿ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಅವರ ಅಗಲಿಕೆ ಇಡೀ ಕಲಾ ಜಗತ್ತಿಗೆ ತುಂಬಲಾರದ ನಷ್ಟವಾಗಿದೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪ” ಎಂದು ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.


ಇದನ್ನೂ ಓದಿ: ಸಂಸ್ಕೃತ ಬೇಡ, ಕನ್ನಡ ಬೇಕು: ಗೋಕಾಕ್ ಚಳವಳಿ ಕುರಿತು ಚಂಪಾರವರ ಸಂದರ್ಶನದ ಆಯ್ದ ಭಾಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...