Homeಅಂಕಣಗಳುಸಾವನ್ನು ಸಂಭ್ರಮಿಸುವ ಮನಸ್ಥಿತಿ: ಮೂಲ ಮತ್ತು ಮೂಲೋತ್ಪಾಟನೆ

ಸಾವನ್ನು ಸಂಭ್ರಮಿಸುವ ಮನಸ್ಥಿತಿ: ಮೂಲ ಮತ್ತು ಮೂಲೋತ್ಪಾಟನೆ

ಸಂತಾಪಸೂಚಕ ಸಂದೇಶಗಳ ಅಲೆಯೊಂದಿಗೆ ಸಮಾಜದ ಇನ್ನೊಂದು ಕರಾಳ ಮುಖವೂ ನಮ್ಮೆದುರಿಗೆ ರಾಚಿದೆ

- Advertisement -
- Advertisement -

ಸಂಪಾದಕೀಯ |
ಸೋಮವಾರ ಬೆಳಗ್ಗೆ ನಾಡಿನ ಅತ್ಯಂತ ಪ್ರಮುಖ ಬರಹಗಾರ, ನಾಟಕಕಾರ, ಬಹುಮುಖ ಪ್ರತಿಭೆ ಗಿರೀಶ್ ಕಾರ್ನಾಡ್ ಇಲ್ಲವಾದರು. ಸಂತಾಪಸೂಚಕ ಸಂದೇಶಗಳ ಅಲೆಯೊಂದಿಗೆ ಸಮಾಜದ ಇನ್ನೊಂದು ಕರಾಳ ಮುಖವೂ ನಮ್ಮೆದುರಿಗೆ ರಾಚಿದೆ. ಸಾಮಾಜಿಕ ಜಾಲತಾಣಗಳಲ್ಲಿ ಕಾರ್ನಾಡ್ ಅವರ ಸಾವನ್ನು ಸಂಭ್ರಮಿಸುವ ಹಲವಾರು ಪೋಸ್ಟ್‍ಗಳು ಕಾಣಿಸಿಕೊಂಡಿವೆ. ಕಳೆದ ವರ್ಷ ಗೌರಿ ಲಂಕೇಶ್ ಹತ್ಯೆಯಾದಾಗಲೂ ಇಂತಹ ಪೋಸ್ಟ್‍ಗಳು ಕಂಡುಬಂದಿದ್ದವು.
ಎಲ್ಲೋ ಒಂದೋ ಎರಡೋ ಇಂತಹ ಪೋಸ್ಟ್‍ಗಳು ಕಂಡುಬಂದಿದ್ದರೆ ಸಮಾಜದಲ್ಲಿ ಕೆಲವು ವಿಕೃತ ಮನಸ್ಥಿತಿಗಳು ಇದ್ದೇ ಇರುತ್ತಾರೆ ಎಂದು ಸುಮ್ಮನಾಗಬಹುದಿತ್ತು. ಆದರೆ ಇಂತಹವರ ಸಂಖ್ಯೆ ಸುಮ್ಮನಾಗುವಷ್ಟು ವಿರಳವಾಗಿಲ್ಲ. ಹಾಗೂ ಇಂಥವರನ್ನು ಬೈದು, ಸಮಾಜಕ್ಕೆ, ಧರ್ಮಕ್ಕೆ ನೀವು ಕಳಂಕ ಎಂದು ಹೇಳಿಯೂ ಸುಮ್ಮನಾಗುವ ಹಾಗಿಲ್ಲ.
ಗಿರೀಶ್ ಕಾರ್ನಾಡ್ ಅವರು ಒಬ್ಬ ಚಿಂತಕರಾಗಿದ್ದರು, ಅವರು ಸಮಾಜದ ಆಗುಹೋಗುಗಳಿಗೆ ಸ್ಪಂದಿಸಿ ಸಮಾಜಕ್ಕೆ ತಮ್ಮ ಕರ್ತವ್ಯವವನ್ನು ತಮ್ಮದೇ ಆದ ರೀತಿಯಲ್ಲಿ ನಿಭಾಯಿಸುತ್ತಿದ್ದರು. ಕೋಮು ಸೌಹಾರ್ದತೆಯ ಬಗ್ಗೆ, ಜಾತ್ಯತೀತತೆಯ ಬಗ್ಗೆ ಸ್ಪಷ್ಟ ನಿಲುವನ್ನು ಹೊಂದಿದವರಾಗಿದ್ದರು. ತಮ್ಮ ನಿಲುವುಗಳನ್ನು ಸ್ಪಷ್ಟಪಡಿಸುವುದಕ್ಕೆ ಎಂದೂ ಹಿಂಜರಿಯಲಿಲ್ಲ. ಅದೇ ಕಾರಣಕ್ಕೆ ಅವರಿಗೆ ಕೆಲವರಿಂದ ವಿರೋಧವೂ ವ್ಯಕ್ತವಾಗಿತ್ತು. ಆದರೆ ಅವರ ಸಾವನ್ನು ಸಂಭ್ರಮಿಸುವವರು ಕೇವಲ ಅವರ ವಿರೋಧಿಗಳಾಗಿಲ್ಲ ಹಾಗೂ ಪ್ರಜಾತಂತ್ರ, ಸಮಾನತೆ, ಉದಾರತೆಯಂತಹ ಆಶಯಗಳನ್ನೇ ವಿರೋಧಿಸುವವರಾಗಿದ್ದಾರೆ. ಅಂತಹವರ ಸಂಖ್ಯೆಯೂ ಗಣನೀಯ ಪ್ರಮಾಣದಲ್ಲಿರುವುದರಿಂದ ಅವರನ್ನು, ಈ ವಿಕೃತ ಸಂಭ್ರಮವನ್ನು ಮೊದಲು ನಾವು ಒಂದು ವಾಸ್ತವ ಮತ್ತು ಗಂಭೀರ ಸಮಸ್ಯೆ ಎಂದು ಒಪ್ಪಿಕೊಳ್ಳಬೇಕಿದೆ. ಇಲ್ಲಿ ಕಾಣಿಸುತ್ತಿರುವುದು ಸಮಾಜದ ವಿಕೃತಿ.
ಕಾರ್ನಾಡ್ ಅವರು ಹಿಂದೂ ಧರ್ಮದ ವಿರೋಧಿಯಾಗಿದ್ದರು ಹಾಗೂ ಧರ್ಮದ ವಿರೋಧಿ ಸಾವನ್ನು ಸಂಭ್ರಮಿಸುವುದರಲ್ಲಿ ತಪ್ಪೇನೂ ಇಲ್ಲ ಎನ್ನುವುದು ಈ ಸಾವನ್ನು ಸಂಭ್ರಮಿಸಿದವರ ವಾದ.
ಧರ್ಮಾತ್ಮ, ಧರ್ಮ-ಕರ್ಮ, ಮಾನವೀಯತೆಯೇ ಧರ್ಮ, ದಯವೇ ಧರ್ಮ ಇತ್ಯಾದಿಗಳೆಲ್ಲಾ ಧರ್ಮವಾಗಿದ್ದರೆ ಕಾರ್ನಾಡ್ ಅವರು ಧರ್ಮದ ಪರ ಇರುವವರಾಗಿರುತ್ತಿದ್ದರು ಎಂಬ ಮಾತನ್ನು ನಾವು ಹೇಳುವುದು ಪ್ರಯೋಜನವಾಗುತ್ತಿಲ್ಲ. ಬಲಿ ಚಕ್ರವರ್ತಿ ಮತ್ತು ಅಸುರರನ್ನು (ಯಾರು ಅಸುರರು ಎಂಬುದಕ್ಕೆ ಬದಲಾದ ವ್ಯಾಖ್ಯಾನವಿರುವಾಗ) ಕೊಂದದ್ದಕ್ಕೆ ಹಬ್ಬ ಆಚರಿಸುತ್ತಿರುವ ಸಂಸ್ಕೃತಿಯೂ ಈ ದೇಶದಲ್ಲಿದೆ. ಅದನ್ನೇ ‘ಅಧಾರ್ಮಿಕರು’ ಸಮರ್ಥನೆಯಾಗಿ ಬಳಸುತ್ತಿದ್ದಾರೆ.
ನಮ್ಮ ಸಮಾಜವನ್ನು ನಿರ್ಮಿಸುವಲ್ಲಿ ಧರ್ಮವು ಸಕಾರಾತ್ಮಕ ಪಾತ್ರವನ್ನೇ ನಿರ್ವಹಿಸಿದೇ ಅಂತೇನಲ್ಲ. ಆದರೆ ಅದರ ಪಾತ್ರವಂತೂ ಅತ್ಯಂತ ದೊಡ್ಡದು. ಬಡತನ ಮತ್ತು ಅಭದ್ರತೆಯಿಂದ ಬಳಲುತ್ತ ಸಿನಿಕತೆಯನ್ನು ಮೈಗೂಡಿಸಿಕೊಂಡ ನಮ್ಮ ಸಮಾಜದಲ್ಲಿ ಇವುಗಳನ್ನು ಮತ್ತು ಎಲ್ಲೋ ಹುದುಗಿರುವ ದ್ವೇಷವನ್ನೂ ಬಳಸಿಕೊಂಡು ಮಾಡುತ್ತಿರುವ ರಾಜಕಾರಣಕ್ಕೆ ಪ್ರಗತಿಪರರು ಇದುವರೆಗೆ ನೀಡಿರುವ ಉತ್ತರ ಸಾಕಾಗುವುದಿಲ್ಲ ಎಂಬುದನ್ನಷ್ಟೇ ಇವೆಲ್ಲವೂ ತೋರುತ್ತಿದೆ. ಅವರು ದ್ವೇಷವನ್ನು ಬಿತ್ತಿಬಳಸಿದರೆ ನಾವುಗಳು ಭಾರತವು ಎಂದಿಗೂ ಸೌಹಾರ್ದದ ನಾಡಾಗಿತ್ತು, ಕೋಮು ದ್ವೇಷ, ದಳ್ಳುರಿ ಎಂದಿಗೂ ಇದ್ದಿಲ್ಲ, ಹಿಂದೂ ಧರ್ಮ ಅಹಿಂಸೆಯ ಪ್ರತೀಕ ಎನ್ನುವ ಅರೆಸತ್ಯಗಳಿಂದ ಎದುರಿಸಲಾಗುವುದಿಲ್ಲ. ಹಾಗೂ ಹಿಂದು ಧರ್ಮವೆಂದರೆ ಜಾತಿ ತಾರತಮ್ಯ, ಹಿಂದು ಧರ್ಮವೆಂದರೆ ಕಂದಾಚಾರ ಮತ್ತು ಶೋಷಣೆ ಎನ್ನುವುದಷ್ಟೇ ಸರಿಯಲ್ಲ. ಈ ಎಲ್ಲಾ ವಾದಗಳನ್ನು ನಾವು ಮೀರಬೇಕಿದೆ. ಹಾಗೂ ಸಮಾಜವನ್ನು ನಿರ್ಮಿಸುವುದರಲ್ಲಿ ಧರ್ಮ ಮುಖ್ಯ ಪಾತ್ರ ನಿರ್ವಹಿಸುತ್ತದೆ ಎಂದು ಒಪ್ಪಿಕೊಂಡು ಅದರ ಮರ್ಮವನ್ನು ಅರಿಯುವ ಪ್ರಯತ್ನವನ್ನೂ ಮಾಡಬೇಕಿದೆ. ಬೇರೊಂದು ಧರ್ಮವೇ ದೇಶದ ಅತಿದೊಡ್ಡ ಶತ್ರು ಎಂದು ನಂಬಿಸಿ, ದ್ವೇಷವನ್ನೇ ಬಂಡವಾಳ ಮಾಡಿಕೊಂಡು ರಾಜಕೀಯವಾಗಿ ಗೆಲ್ಲುತ್ತಿರುವಾಗ ಅದನ್ನು ವಿರೋಧಿಸಿದ ಕಾರ್ನಾಡರಂತಹ ಚೇತನಗಳು ಇಲ್ಲವಾದಾಗ ಕಾಣಿಸಿಕೊಳ್ಳುವ ಸಂಭ್ರಮ ನಮಗೆ ಅಚ್ಚರಿ/ಆಘಾತವನ್ನಷ್ಟೇ ಮೂಡಿಸಬಾರದು. ಈ ಮನುಷ್ಯತ್ವ ವಿರೋಧಿ ಶಕ್ತಿಗಳು ಧರ್ಮದ ಪರಿಕಲ್ಪನೆಯನ್ನು ತಿರುಚಿ, ಧರ್ಮದ ಅರ್ಥವನ್ನು ಸಂಕುಚಿತಗೊಳಿಸಿ, ಧರ್ಮದ ಪಾಲನೆಯೆಂದರೆ ಅನ್ಯ ಧರ್ಮದ ವಿರೋಧ ಎಂದು ನಂಬಿಸುವಲ್ಲಿ ಬಹುಮಟ್ಟಿಗೆ ಯಶಸ್ವಿಯಾಗಿವೆ. ಇಂತಹ ಸಂದರ್ಭದಲ್ಲಿ ನಾವು ಧಾರ್ಮಿಕತೆಯ ವರ್ಸಸ್ ಜಾತ್ಯತೀತತೆ ಎಂದಾಗಿಬಿಟ್ಟಿರುವ ಸರಳ ಬೈನರಿಗಳನ್ನು ಕೈಬಿಡಬೇಕಿದೆ. ಸಾವನ್ನು ಸಂಭ್ರಮಿಸಿದವರಿಗೆ ಅವರದೇ ಭಾಷೆಯಲ್ಲಿ ಉತ್ತರ ನೀಡದೇ ಅರಿವು ಮೂಡಿಸಬೇಕಿದೆ.
ಗಿರೀಶ ಕಾರ್ನಾಡ ಅವರು ನಮ್ಮ ದೇಶದ ಇತಿಹಾಸ ಮತ್ತು ಪುರಾಣಗಳನ್ನು ಆಳವಾಗಿ ಅಭ್ಯಸಿಸಿ ಸಾಹಿತ್ಯವನ್ನು ಸೃಷ್ಟಿಸಿದ ವ್ಯಕ್ತಿ. ಅವರ ಸಾಹಿತ್ಯದಲ್ಲೇ ಅವರ ಸಾವನ್ನು ಸಂಭ್ರಮಿಸುತ್ತಿರುವವರಿಗೆ ಸಾಕಷ್ಟು ಉತ್ತರಗಳು ಸಿಗುತ್ತವೆ. ನಾಡಿಗೆ ಈ ಚೇತನ ನೀಡಿದ ಕೊಡುಗೆಗಳನ್ನು ಸಂಭ್ರಮಿಸೋಣ. ಇನ್ನೊಮ್ಮೆ ಯಾರ ಸಾವನ್ನೂ ಸಂಭ್ರಮಿಸದ ಸಮಾಜವನ್ನು ಸೃಷ್ಟಿಸೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...