Homeಅಂಕಣಗಳುಸಾವನ್ನು ಸಂಭ್ರಮಿಸುವ ಮನಸ್ಥಿತಿ: ಮೂಲ ಮತ್ತು ಮೂಲೋತ್ಪಾಟನೆ

ಸಾವನ್ನು ಸಂಭ್ರಮಿಸುವ ಮನಸ್ಥಿತಿ: ಮೂಲ ಮತ್ತು ಮೂಲೋತ್ಪಾಟನೆ

ಸಂತಾಪಸೂಚಕ ಸಂದೇಶಗಳ ಅಲೆಯೊಂದಿಗೆ ಸಮಾಜದ ಇನ್ನೊಂದು ಕರಾಳ ಮುಖವೂ ನಮ್ಮೆದುರಿಗೆ ರಾಚಿದೆ

- Advertisement -
- Advertisement -

ಸಂಪಾದಕೀಯ |
ಸೋಮವಾರ ಬೆಳಗ್ಗೆ ನಾಡಿನ ಅತ್ಯಂತ ಪ್ರಮುಖ ಬರಹಗಾರ, ನಾಟಕಕಾರ, ಬಹುಮುಖ ಪ್ರತಿಭೆ ಗಿರೀಶ್ ಕಾರ್ನಾಡ್ ಇಲ್ಲವಾದರು. ಸಂತಾಪಸೂಚಕ ಸಂದೇಶಗಳ ಅಲೆಯೊಂದಿಗೆ ಸಮಾಜದ ಇನ್ನೊಂದು ಕರಾಳ ಮುಖವೂ ನಮ್ಮೆದುರಿಗೆ ರಾಚಿದೆ. ಸಾಮಾಜಿಕ ಜಾಲತಾಣಗಳಲ್ಲಿ ಕಾರ್ನಾಡ್ ಅವರ ಸಾವನ್ನು ಸಂಭ್ರಮಿಸುವ ಹಲವಾರು ಪೋಸ್ಟ್‍ಗಳು ಕಾಣಿಸಿಕೊಂಡಿವೆ. ಕಳೆದ ವರ್ಷ ಗೌರಿ ಲಂಕೇಶ್ ಹತ್ಯೆಯಾದಾಗಲೂ ಇಂತಹ ಪೋಸ್ಟ್‍ಗಳು ಕಂಡುಬಂದಿದ್ದವು.
ಎಲ್ಲೋ ಒಂದೋ ಎರಡೋ ಇಂತಹ ಪೋಸ್ಟ್‍ಗಳು ಕಂಡುಬಂದಿದ್ದರೆ ಸಮಾಜದಲ್ಲಿ ಕೆಲವು ವಿಕೃತ ಮನಸ್ಥಿತಿಗಳು ಇದ್ದೇ ಇರುತ್ತಾರೆ ಎಂದು ಸುಮ್ಮನಾಗಬಹುದಿತ್ತು. ಆದರೆ ಇಂತಹವರ ಸಂಖ್ಯೆ ಸುಮ್ಮನಾಗುವಷ್ಟು ವಿರಳವಾಗಿಲ್ಲ. ಹಾಗೂ ಇಂಥವರನ್ನು ಬೈದು, ಸಮಾಜಕ್ಕೆ, ಧರ್ಮಕ್ಕೆ ನೀವು ಕಳಂಕ ಎಂದು ಹೇಳಿಯೂ ಸುಮ್ಮನಾಗುವ ಹಾಗಿಲ್ಲ.
ಗಿರೀಶ್ ಕಾರ್ನಾಡ್ ಅವರು ಒಬ್ಬ ಚಿಂತಕರಾಗಿದ್ದರು, ಅವರು ಸಮಾಜದ ಆಗುಹೋಗುಗಳಿಗೆ ಸ್ಪಂದಿಸಿ ಸಮಾಜಕ್ಕೆ ತಮ್ಮ ಕರ್ತವ್ಯವವನ್ನು ತಮ್ಮದೇ ಆದ ರೀತಿಯಲ್ಲಿ ನಿಭಾಯಿಸುತ್ತಿದ್ದರು. ಕೋಮು ಸೌಹಾರ್ದತೆಯ ಬಗ್ಗೆ, ಜಾತ್ಯತೀತತೆಯ ಬಗ್ಗೆ ಸ್ಪಷ್ಟ ನಿಲುವನ್ನು ಹೊಂದಿದವರಾಗಿದ್ದರು. ತಮ್ಮ ನಿಲುವುಗಳನ್ನು ಸ್ಪಷ್ಟಪಡಿಸುವುದಕ್ಕೆ ಎಂದೂ ಹಿಂಜರಿಯಲಿಲ್ಲ. ಅದೇ ಕಾರಣಕ್ಕೆ ಅವರಿಗೆ ಕೆಲವರಿಂದ ವಿರೋಧವೂ ವ್ಯಕ್ತವಾಗಿತ್ತು. ಆದರೆ ಅವರ ಸಾವನ್ನು ಸಂಭ್ರಮಿಸುವವರು ಕೇವಲ ಅವರ ವಿರೋಧಿಗಳಾಗಿಲ್ಲ ಹಾಗೂ ಪ್ರಜಾತಂತ್ರ, ಸಮಾನತೆ, ಉದಾರತೆಯಂತಹ ಆಶಯಗಳನ್ನೇ ವಿರೋಧಿಸುವವರಾಗಿದ್ದಾರೆ. ಅಂತಹವರ ಸಂಖ್ಯೆಯೂ ಗಣನೀಯ ಪ್ರಮಾಣದಲ್ಲಿರುವುದರಿಂದ ಅವರನ್ನು, ಈ ವಿಕೃತ ಸಂಭ್ರಮವನ್ನು ಮೊದಲು ನಾವು ಒಂದು ವಾಸ್ತವ ಮತ್ತು ಗಂಭೀರ ಸಮಸ್ಯೆ ಎಂದು ಒಪ್ಪಿಕೊಳ್ಳಬೇಕಿದೆ. ಇಲ್ಲಿ ಕಾಣಿಸುತ್ತಿರುವುದು ಸಮಾಜದ ವಿಕೃತಿ.
ಕಾರ್ನಾಡ್ ಅವರು ಹಿಂದೂ ಧರ್ಮದ ವಿರೋಧಿಯಾಗಿದ್ದರು ಹಾಗೂ ಧರ್ಮದ ವಿರೋಧಿ ಸಾವನ್ನು ಸಂಭ್ರಮಿಸುವುದರಲ್ಲಿ ತಪ್ಪೇನೂ ಇಲ್ಲ ಎನ್ನುವುದು ಈ ಸಾವನ್ನು ಸಂಭ್ರಮಿಸಿದವರ ವಾದ.
ಧರ್ಮಾತ್ಮ, ಧರ್ಮ-ಕರ್ಮ, ಮಾನವೀಯತೆಯೇ ಧರ್ಮ, ದಯವೇ ಧರ್ಮ ಇತ್ಯಾದಿಗಳೆಲ್ಲಾ ಧರ್ಮವಾಗಿದ್ದರೆ ಕಾರ್ನಾಡ್ ಅವರು ಧರ್ಮದ ಪರ ಇರುವವರಾಗಿರುತ್ತಿದ್ದರು ಎಂಬ ಮಾತನ್ನು ನಾವು ಹೇಳುವುದು ಪ್ರಯೋಜನವಾಗುತ್ತಿಲ್ಲ. ಬಲಿ ಚಕ್ರವರ್ತಿ ಮತ್ತು ಅಸುರರನ್ನು (ಯಾರು ಅಸುರರು ಎಂಬುದಕ್ಕೆ ಬದಲಾದ ವ್ಯಾಖ್ಯಾನವಿರುವಾಗ) ಕೊಂದದ್ದಕ್ಕೆ ಹಬ್ಬ ಆಚರಿಸುತ್ತಿರುವ ಸಂಸ್ಕೃತಿಯೂ ಈ ದೇಶದಲ್ಲಿದೆ. ಅದನ್ನೇ ‘ಅಧಾರ್ಮಿಕರು’ ಸಮರ್ಥನೆಯಾಗಿ ಬಳಸುತ್ತಿದ್ದಾರೆ.
ನಮ್ಮ ಸಮಾಜವನ್ನು ನಿರ್ಮಿಸುವಲ್ಲಿ ಧರ್ಮವು ಸಕಾರಾತ್ಮಕ ಪಾತ್ರವನ್ನೇ ನಿರ್ವಹಿಸಿದೇ ಅಂತೇನಲ್ಲ. ಆದರೆ ಅದರ ಪಾತ್ರವಂತೂ ಅತ್ಯಂತ ದೊಡ್ಡದು. ಬಡತನ ಮತ್ತು ಅಭದ್ರತೆಯಿಂದ ಬಳಲುತ್ತ ಸಿನಿಕತೆಯನ್ನು ಮೈಗೂಡಿಸಿಕೊಂಡ ನಮ್ಮ ಸಮಾಜದಲ್ಲಿ ಇವುಗಳನ್ನು ಮತ್ತು ಎಲ್ಲೋ ಹುದುಗಿರುವ ದ್ವೇಷವನ್ನೂ ಬಳಸಿಕೊಂಡು ಮಾಡುತ್ತಿರುವ ರಾಜಕಾರಣಕ್ಕೆ ಪ್ರಗತಿಪರರು ಇದುವರೆಗೆ ನೀಡಿರುವ ಉತ್ತರ ಸಾಕಾಗುವುದಿಲ್ಲ ಎಂಬುದನ್ನಷ್ಟೇ ಇವೆಲ್ಲವೂ ತೋರುತ್ತಿದೆ. ಅವರು ದ್ವೇಷವನ್ನು ಬಿತ್ತಿಬಳಸಿದರೆ ನಾವುಗಳು ಭಾರತವು ಎಂದಿಗೂ ಸೌಹಾರ್ದದ ನಾಡಾಗಿತ್ತು, ಕೋಮು ದ್ವೇಷ, ದಳ್ಳುರಿ ಎಂದಿಗೂ ಇದ್ದಿಲ್ಲ, ಹಿಂದೂ ಧರ್ಮ ಅಹಿಂಸೆಯ ಪ್ರತೀಕ ಎನ್ನುವ ಅರೆಸತ್ಯಗಳಿಂದ ಎದುರಿಸಲಾಗುವುದಿಲ್ಲ. ಹಾಗೂ ಹಿಂದು ಧರ್ಮವೆಂದರೆ ಜಾತಿ ತಾರತಮ್ಯ, ಹಿಂದು ಧರ್ಮವೆಂದರೆ ಕಂದಾಚಾರ ಮತ್ತು ಶೋಷಣೆ ಎನ್ನುವುದಷ್ಟೇ ಸರಿಯಲ್ಲ. ಈ ಎಲ್ಲಾ ವಾದಗಳನ್ನು ನಾವು ಮೀರಬೇಕಿದೆ. ಹಾಗೂ ಸಮಾಜವನ್ನು ನಿರ್ಮಿಸುವುದರಲ್ಲಿ ಧರ್ಮ ಮುಖ್ಯ ಪಾತ್ರ ನಿರ್ವಹಿಸುತ್ತದೆ ಎಂದು ಒಪ್ಪಿಕೊಂಡು ಅದರ ಮರ್ಮವನ್ನು ಅರಿಯುವ ಪ್ರಯತ್ನವನ್ನೂ ಮಾಡಬೇಕಿದೆ. ಬೇರೊಂದು ಧರ್ಮವೇ ದೇಶದ ಅತಿದೊಡ್ಡ ಶತ್ರು ಎಂದು ನಂಬಿಸಿ, ದ್ವೇಷವನ್ನೇ ಬಂಡವಾಳ ಮಾಡಿಕೊಂಡು ರಾಜಕೀಯವಾಗಿ ಗೆಲ್ಲುತ್ತಿರುವಾಗ ಅದನ್ನು ವಿರೋಧಿಸಿದ ಕಾರ್ನಾಡರಂತಹ ಚೇತನಗಳು ಇಲ್ಲವಾದಾಗ ಕಾಣಿಸಿಕೊಳ್ಳುವ ಸಂಭ್ರಮ ನಮಗೆ ಅಚ್ಚರಿ/ಆಘಾತವನ್ನಷ್ಟೇ ಮೂಡಿಸಬಾರದು. ಈ ಮನುಷ್ಯತ್ವ ವಿರೋಧಿ ಶಕ್ತಿಗಳು ಧರ್ಮದ ಪರಿಕಲ್ಪನೆಯನ್ನು ತಿರುಚಿ, ಧರ್ಮದ ಅರ್ಥವನ್ನು ಸಂಕುಚಿತಗೊಳಿಸಿ, ಧರ್ಮದ ಪಾಲನೆಯೆಂದರೆ ಅನ್ಯ ಧರ್ಮದ ವಿರೋಧ ಎಂದು ನಂಬಿಸುವಲ್ಲಿ ಬಹುಮಟ್ಟಿಗೆ ಯಶಸ್ವಿಯಾಗಿವೆ. ಇಂತಹ ಸಂದರ್ಭದಲ್ಲಿ ನಾವು ಧಾರ್ಮಿಕತೆಯ ವರ್ಸಸ್ ಜಾತ್ಯತೀತತೆ ಎಂದಾಗಿಬಿಟ್ಟಿರುವ ಸರಳ ಬೈನರಿಗಳನ್ನು ಕೈಬಿಡಬೇಕಿದೆ. ಸಾವನ್ನು ಸಂಭ್ರಮಿಸಿದವರಿಗೆ ಅವರದೇ ಭಾಷೆಯಲ್ಲಿ ಉತ್ತರ ನೀಡದೇ ಅರಿವು ಮೂಡಿಸಬೇಕಿದೆ.
ಗಿರೀಶ ಕಾರ್ನಾಡ ಅವರು ನಮ್ಮ ದೇಶದ ಇತಿಹಾಸ ಮತ್ತು ಪುರಾಣಗಳನ್ನು ಆಳವಾಗಿ ಅಭ್ಯಸಿಸಿ ಸಾಹಿತ್ಯವನ್ನು ಸೃಷ್ಟಿಸಿದ ವ್ಯಕ್ತಿ. ಅವರ ಸಾಹಿತ್ಯದಲ್ಲೇ ಅವರ ಸಾವನ್ನು ಸಂಭ್ರಮಿಸುತ್ತಿರುವವರಿಗೆ ಸಾಕಷ್ಟು ಉತ್ತರಗಳು ಸಿಗುತ್ತವೆ. ನಾಡಿಗೆ ಈ ಚೇತನ ನೀಡಿದ ಕೊಡುಗೆಗಳನ್ನು ಸಂಭ್ರಮಿಸೋಣ. ಇನ್ನೊಮ್ಮೆ ಯಾರ ಸಾವನ್ನೂ ಸಂಭ್ರಮಿಸದ ಸಮಾಜವನ್ನು ಸೃಷ್ಟಿಸೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...