Homeಚಳವಳಿಕೇರಳ: ಸಂಜೆ ಕರ್ಫ್ಯೂ ವಿರುದ್ಧ ವಿದ್ಯಾರ್ಥಿನಿಯರ ಒಂದು ವರ್ಷದ ಹೋರಾಟಕ್ಕೆ ಗೆಲುವು

ಕೇರಳ: ಸಂಜೆ ಕರ್ಫ್ಯೂ ವಿರುದ್ಧ ವಿದ್ಯಾರ್ಥಿನಿಯರ ಒಂದು ವರ್ಷದ ಹೋರಾಟಕ್ಕೆ ಗೆಲುವು

- Advertisement -
- Advertisement -

ಕಾಲೇಜುಗಳ ಮಹಿಳಾ ಹಾಸ್ಟೆಲ್‌ಗಳಲ್ಲಿ ಸಂಜೆ 6 ಗಂಟೆಗೆ ಆರಂಭವಾಗುತ್ತಿದ್ದ ಕರ್ಫ್ಯೂ ವಿರುದ್ದ ಹೋರಾಟ ಆರಂಭಿಸಿದ್ದ ಕೇರಳದ ಅಲುವಾ ಯುಸಿ ಕಾಲೇಜಿನ ವಿದ್ಯಾರ್ಥಿಗಳು ಒಂದು ವರ್ಷದ ಬಳಿಕ ಗೆಲುವು ಸಾಧಿಸಿದ್ದಾರೆ.

ಮಹಿಳಾ ಹಾಸ್ಟೆಲ್‌ಗಳಲ್ಲಿ ಕರ್ಫ್ಯೂ ಸಮಯವನ್ನು ರಾತ್ರಿ 9.30ರ ನಂತರ ವಿಧಿಸಬೇಕು ಎಂಬ ವಿದ್ಯಾರ್ಥಿಗಳ ಉತ್ತಾಯಕ್ಕೆ ಕಾಲೇಜು ಆಡಳಿತ ಒಪ್ಪಿಗೆ ನೀಡಿದೆ. “ಇದು ಕಷ್ಟಪಟ್ಟು ಗಳಿಸಿದ ಸ್ವಾತಂತ್ರ್ಯ. ಹಲವು ಪ್ರತಿಭಟನೆಗಳು ನಡೆಸಿ, ಹಕ್ಕೊತ್ತಾಯಗಳನ್ನು ಸಲ್ಲಿಸಿದ ನಂತರ, ಕಾಲೇಜು ಅಂತಿಮವಾಗಿ ನಮ್ಮ ಕೆಲವು ಬೇಡಿಕೆಗಳನ್ನು ಒಪ್ಪಿಕೊಂಡಿದೆ ”ಎಂದು ವಿದ್ಯಾರ್ಥಿನಿ ಎಮಿಲ್ಲಾ ಜಾನ್ ಹೇಳಿದ್ದಾರೆ.

“2019 ರ ಹೈಕೋರ್ಟ್ ಆದೇಶದಂತೆ ಎಲ್ಲಾ ಹಾಸ್ಟೆಲ್‌ಗಳಲ್ಲಿ ಕರ್ಫ್ಯೂ ರಾತ್ರಿ 9.30ರ ನಂತರ ಇರಬೇಕು. ಭಾನುವಾರ ಮತ್ತು ಸಾರ್ವಜನಿಕ ರಜಾದಿನಗಳಲ್ಲಿ ವಿದ್ಯಾರ್ಥಿಗಳಿಗೆ ಹೊರಗೆ ಹೋಗಲು ಅವಕಾಶ ಮಾಡಿಕೊಡಿ ಎಂದು ನಾವು ಒತ್ತಾಯಿಸಿದ್ದೆವು. 2021ರ ಕೊನೆಯ ಕೆಲವು ತಿಂಗಳುಗಳಲ್ಲಿ ನಮ್ಮ ಪ್ರತಿಭಟನೆ ಆರಂಭಿಸಿದ್ದೆವು. ಈ ಬಳಿಕ, ಕಾಲೇಜು ಪುನರಾರಂಭವಾದಾಗ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದಾಗಿ ಕಾಲೇಜು ಆಡಳಿತ ಭರವಸೆ ನೀಡಿತ್ತು” ಎಂದು ಮತ್ತೊಬ್ಬ ವಿದ್ಯಾರ್ಥಿನಿ ಟೆಸ್ಸಾ ಸಾರಾ ಕುರಿಯಾಕೋಸ್ ತಿಳಿಸಿದ್ದಾರೆ.

ಜನವರಿ 3 ರಂದು ಆಡಳಿತ ಮಂಡಳಿ ಸಭೆ ಸೇರಿತ್ತು. ನಮ್ಮ ಎಲ್ಲಾ ಬೇಡಿಕೆಗಳನ್ನು ಅವರು ಒಪ್ಪಿಕೊಂಡಿದ್ದು, ಮುಂದಿನ ದಿನ ಹಾಸ್ಟೆಲ್ ವಾರ್ಡನ್‌ಗಳೊಂದಿಗಿನ ಸಭೆಯ ನಂತರ ಅಧಿಕೃತ ನಿಲುವನ್ನು ಪ್ರಕಟಿಸಲಾಗುವುದು ಎಂದು ಹೇಳಿದ್ದರು. ಆದರೆ, ಜನವರಿ 4 ರಂದು ನಡೆದ ಸಭೆಯ ನಂತರ, ಕರ್ಫ್ಯೂ ಸಮಯದಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಘೋಷಿಸಿದ್ದರು. ಇದು ನಮ್ಮ ಸಹನೆಯನ್ನು ಪರೀಕ್ಷಿಸಿತ್ತು ಎಂದು ಟೆಸ್ಸಾ ಹೇಳಿದ್ದಾರೆ.

ಇದನ್ನೂ ಓದಿ: ರಾಮನಗರ: ರೇಷ್ಮೆ ಮಾರುಕಟ್ಟೆಯಲ್ಲಿ ಶೋಷಣೆ ಆರೋಪ – ಪತ್ರ ಅಭಿಯಾನ ಆರಂಭಿಸಿದ ರೈತರು

“ಭರವಸೆ ನೀಡಿ ಮತ್ತೆ ಅದನ್ನು ಈಡೇರಿಸದಿರುವುದನ್ನು ಒಪ್ಪಿಕೊಳ್ಳಲು ವಿದ್ಯಾರ್ಥಿಗಳು ಸಿದ್ಧರಿರಲಿಲ್ಲ. ಆರಂಭದಲ್ಲಿ ಅನೇಕ ಹಾಸ್ಟೆಲ್‌ಗಳಿಗೆ ನಮ್ಮ ಸಮಸ್ಯೆಗಳ ವಿಚಾರದಲ್ಲಿ ಸಂಘಟನೆಗಳು ಭಾಗಿಯಾಗುವುದು ಇಷ್ಟವಿರಲಿಲ್ಲ. ಆದರೆ, ಕಾಲೇಜು ನಮ್ಮ ಬೇಡಿಕೆಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದರಿಂದಾಗಿ, ಜನವರಿ 6 ರಂದು ಎಸ್‌ಎಫ್‌ಐ ಸಂಘಟನೆಯು ಪ್ರಾಂಶುಪಾಲರ ಕಚೇರಿಯ ಬಳಿ ಪ್ರತಿಭಟನೆ ಮತ್ತು ಕೆಎಸ್‌ಯು ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಯಿತು. ನಾವು ಹಾಸ್ಟೆಲ್ ನಿಯಮ ಪುಸ್ತಕವನ್ನು ಸುಡುವ ಮೂಲಕ ಹೋರಾಟವನ್ನು ಪ್ರಾರಂಭಿಸಿವು. 30 ಗಂಟೆಗಳ ನಿರಂತರ ಪ್ರತಿಭಟನೆಯ ನಂತರ ಆಡಳಿತವು ನಮ್ಮ ಕೆಲವು ಬೇಡಿಕೆಗಳನ್ನು ಒಪ್ಪಿಕೊಂಡಿತು” ಟೆಸ್ಸಾ ಸಾರಾ ಕುರಿಯಾಕೋಸ್ ತಿಳಿಸಿದ್ದಾರೆ.

“ಈಗ ಸಂಜೆ 6 ಗಂಟೆಗೆ ಕರ್ಫ್ಯೂ ಹಾಗೆ ಉಳಿದಿದ್ದರೂ ವಿದ್ಯಾರ್ಥಿಗಳು ಲೇಟಾಗಿ ಬರುವ ಚೀಟಿಗೆ ಸಹಿ ಮಾಡಿ ರಾತ್ರಿ 9 ರವರೆಗೆ ಹೊರಗಿರಬಹುದು ಎಂದು ಹೊಸ ನಿಯಮಗಳು ಹೇಳುತ್ತವೆ. ಚಲನಚಿತ್ರಗಳನ್ನು ವೀಕ್ಷಿಸಲು ಹೋಗುವುದು, ಶಾಪಿಂಗ್ ಸೇರಿದಂತೆ ಯಾವುದೇ ಕಾರಣಗಳನ್ನು ಬೇಕಾದರೂ ನೀಡಬಹುದು. ಎರಡನೇ ಮತ್ತು ನಾಲ್ಕನೇ ಭಾನುವಾರದಂದು ಸಂಜೆ 5 ಗಂಟೆಯವರೆಗೆ ಹೊರ ಹೋಗಬಹುದು. ಜೊತೆಗೆ ಸಾರ್ವಜನಿಕ ರಜಾದಿನಗಳಲ್ಲಿ ಹೊರಗೆ ಹೋಗಬಹುದು” ಎಂದು ವಿದ್ಯಾರ್ಥಿನಿ ಎಮಿಲಾ ಹೇಳುತ್ತಾರೆ.

ಮೊದಲ ಮತ್ತು ಮೂರನೇ ಭಾನುವಾರವೂ ಹೊರ ಹೋಗಲು ಅನುಮತಿ ನೀಡುವಂತೆ ಕೇಳಲಾಗಿದೆ. ಈ ಬಗ್ಗೆ ಆಡಳಿತ ಮಂಡಳಿ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕೇಳಲಾಗಿದೆ. ಒಂದು ತಿಂಗಳೊಳಗೆ ಅವರು ತಮ್ಮ ನಿರ್ಧಾರವನ್ನು ನಮಗೆ ತಿಳಿಸುತ್ತಾರೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.


ಇದನ್ನೂ ಓದಿ: ಉಡುಪಿ: ಹಿಜಾಬ್ ಧರಿಸಿ ಬರುವ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಇನ್ನೂ ಪ್ರವೇಶ ನೀಡದ ಕಾಲೇಜು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...