Homeಫ್ಯಾಕ್ಟ್‌ಚೆಕ್ಮೋದಿ ಭಾಷಣದ ಅಡಚಣೆಗೆ ಟೆಲಿಫ್ರಾಮ್ಟರ್‌ ಕಾರಣವಲ್ಲ: ಆಲ್ಟ್‌ ನ್ಯೂಸ್‌ ಬಿಚ್ಚಿಟ್ಟ ಸತ್ಯ ಇಲ್ಲಿದೆ!

ಮೋದಿ ಭಾಷಣದ ಅಡಚಣೆಗೆ ಟೆಲಿಫ್ರಾಮ್ಟರ್‌ ಕಾರಣವಲ್ಲ: ಆಲ್ಟ್‌ ನ್ಯೂಸ್‌ ಬಿಚ್ಚಿಟ್ಟ ಸತ್ಯ ಇಲ್ಲಿದೆ!

- Advertisement -
- Advertisement -

“ಪ್ರಧಾನಿ ನರೇಂದ್ರ ಮೋದಿಯವರ ಭಾಷಣದ ವೇಳೆ ಟೆಲಿಪ್ರಾಮ್ಟರ್‌‌ ನಿಂತು ಹೋಗಿದೆ. ಹೀಗಾಗಿ ಭಾಷಣಕ್ಕೆ ಅಡಚಣೆಯಾಗಿದೆ” ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿರುವ ವಿಡಿಯೊದ ಸತ್ಯಾಸತ್ಯತೆಯನ್ನು ‘ಆಲ್ಟ್‌ ನ್ಯೂಸ್’ ಬಯಲಿಗೆಳೆದಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಜನವರಿ 17ರಂದು ವಿಶ್ವ ಆರ್ಥಿಕ ವೇದಿಕೆಯ (WEF) ದಾವೋಸ್ ಅಜೆಂಡಾ 2022 ಆನ್‌ಲೈನ್ ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮೋದಿ ತಮ್ಮ ಭಾಷಣದ ಮಧ್ಯದಲ್ಲಿ ಮಾತನಾಡುವುದನ್ನು ನಿಲ್ಲಿಸಿದ ಸುತ್ತಲೇ ಶೃಂಗಸಭೆಯ ಮುಖ್ಯಾಂಶಗಳು ಮತ್ತು ಸಾಮಾಜಿಕ ಮಾಧ್ಯಮದ ಟ್ರೆಂಡ್‌ಗಳು ಗಿರಿಕಿಹೊಡೆಯುತ್ತಿವೆ. ವಿರೋಧ ಪಕ್ಷಗಳ ನಾಯಕರು ಸೇರಿದಂತೆ ಸಾಮಾಜಿಕ ಮಾಧ್ಯಮ ಬಳಕೆದಾರರ ದೊಡ್ಡ ಗುಂಪು ಟೆಲಿಪ್ರಾಮ್ಟರ್‌‌ ವೈಫಲ್ಯವನ್ನು ಎತ್ತಿ ತೋರಿಸಿದ್ದಾರೆ. ” ಟೆಲಿಪ್ರಾಮ್ಟರ್‌‌ ಇಲ್ಲದೆ ಭಾಷಣ ಮಾಡಲು ಸಾಧ್ಯವಿಲ್ಲ” ಎಂದು ಪ್ರಧಾನಿ ಮೋದಿಯವರನ್ನು ಲೇವಡಿ ಮಾಡಲಾಗಿದೆ.

#TelepromptorPM ಹ್ಯಾಶ್‌ಟ್ಯಾಗ್‌‌ನೊಂದಿಗೆ ಲೈವ್ ಸ್ಟ್ರೀಮ್ ಸಮಯದಲ್ಲಿ ಅಡಚಣೆಯಾದ 37 ಸೆಕೆಂಡುಗಳ ವೀಡಿಯೊವನ್ನು ಕಾಂಗ್ರೆಸ್‌ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ. #TelepromptorPM ಎಂಬ ಹ್ಯಾಶ್‌ಟ್ಯಾಗ್ ವೆರಿಫೈ ಮಾಡಲಾದ ಕಾಂಗ್ರೆಸ್ ಖಾತೆಗಳು ಬಳಸಿವೆ. ಕಾಂಗ್ರೆಸ್ ವಕ್ತಾರರಾದ ಶಾಮಾ ಮೊಹಮ್ಮದ್, ಪಶ್ಚಿಮ ಬಂಗಾಳ ಕಾಂಗ್ರೆಸ್, ಪಶ್ಚಿಮ ಬಂಗಾಳ ಪ್ರದೇಶ ಮಹಿಳಾ ಕಾಂಗ್ರೆಸ್, ಮಣಿಪುರ ಪ್ರದೇಶ ಕಾಂಗ್ರೆಸ್ ಸೇವಾದಳ ಮತ್ತು ತಮಿಳುನಾಡು ಪ್ರದೇಶ ಕಾಂಗ್ರೆಸ್ ಸೇವಾದಳ ಖಾತೆಗಳಲ್ಲೂ ಇದನ್ನೇ ಪ್ರತಿಪಾದನೆ ಮಾಡಲಾಗಿದೆ.

ಕಾಂಗ್ರೆಸ್ ನಾಯಕ ರೇವಂತ್ ರೆಡ್ಡಿ ಎರಡು ವೀಡಿಯೊ ಕ್ಲಿಪ್‌ಗಳ ಜೋಡನೆಯನ್ನು ಟ್ವೀಟ್ ಮಾಡಿದ್ದಾರೆ. “ಮೋದಿ ಮಾತನಾಡಲು ಟೆಲಿಪ್ರಾಮ್ಟರ್‌‌ ಬಳಸುತ್ತಾರೆ” ಎಂದು ಆರೋಪಿಸಿರುವ ರಾಹುಲ್ ಗಾಂಧಿಯವರ ಹಳೆಯ ವೀಡಿಯೊ ಮತ್ತು ಬಲಭಾಗದಲ್ಲಿ ದಾವೋಸ್‌ನಲ್ಲಿ ಪ್ರಧಾನಿ ಮೋದಿಯವರ ಅಡ್ಡಿಪಡಿಸಿದ ಭಾಷಣದ ವೀಡಿಯೊವನ್ನು ಇವರ ಟ್ವೀಟ್‌ನಲ್ಲಿ ಕಾಣಬಹುದು. ಈ ವೀಡಿಯೊವನ್ನು ಕಾಂಗ್ರೆಸ್ ನಾಯಕರಾದ ಸಲ್ಮಾನ್ ನಿಜಾಮಿ, ರಾಮ್‌ಕಿಶನ್ ಓಜಾ, ಛತ್ತೀಸ್‌ಗಢ ಪ್ರದೇಶ ಕಾಂಗ್ರೆಸ್ ಸೇವಾದಳ ಮತ್ತು ಪಂಜಾಬ್ ಪ್ರದೇಶ ಕಾಂಗ್ರೆಸ್ ಸೇವಾದಳ ಖಾತೆಗಳೂ ಹಂಚಿಕೊಂಡಿವೆ.

ಎಎಪಿ ನಾಯಕ ಸಂಜಯ್ ಸಿಂಗ್ ಮತ್ತು ಹಿರಿಯ ವಕೀಲ ಪ್ರಶಾಂತ್ ಭೂಷಣ್ ಕೂಡ ಇದೇ ಪ್ರತಿಪಾದನೆ ಮಾಡಿದ್ದಾರೆ.

ಮಹುವಾ ಮೊಯಿತ್ರಾ ಅಭಿಮಾನಿಗಳು [4 ಲಕ್ಷಕ್ಕೂ ಹೆಚ್ಚು ಫಾಲೋಯರ್ಸ್], ಪ್ರಿಯಾಂಕಾ ಗಾಂಧಿ ಅಭಿಮಾನಿಗಳ ಪುಟ [7 ಲಕ್ಷಕ್ಕೂ ಹೆಚ್ಚು ಫಾಲೋಯರ್ಸ್]; ಲೈ ಲಾಮಾ [1.5 ಲಕ್ಷಕ್ಕೂ ಹೆಚ್ಚು ‌ಫಾಲೋಯರ್ಸ್]; ವೆಲ್ ಸನ್ನಿ [9 ಸಾವಿರಕ್ಕಿಂತ ಹೆಚ್ಚು ಫಾಲೋಯರ್ಸ್‌ಗಳು] ಖಾತೆಗಳಲ್ಲೂ ಇದೇ ಪ್ರತಿಪಾದನೆ ಮಾಡಲಾಗಿದೆ.

ಟೆಲಿಪ್ರಾಮ್ಟರ್‌‌ ದೋಷದಿಂದಾಗಿ ಅಡೆಚಣೆಯಾಗಿಲ್ಲ

ವರ್ಲ್ಡ್ ಎಕನಾಮಿಕ್ ಫೋರಮ್ (ಡಬ್ಲ್ಯುಇಎಫ್) ಆನ್‌ಲೈನ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿಯವರ ಭಾಷಣಕ್ಕೆ ಸಂಬಂಧಿಸಿದ ವಿವಾದವನ್ನು ಅರ್ಥಮಾಡಿಕೊಳ್ಳಲು, ತಾಂತ್ರಿಕ ದೋಷದ ಕಾರಣಗಳ ಅನುಕ್ರಮವನ್ನು ಆಲ್ಟ್‌ ನ್ಯೂಸ್ ಪರಿಶೀಲಿಸಿದೆ.

ನರೇಂದ್ರ ಮೋದಿ, ದೂರದರ್ಶನ ನ್ಯಾಷನಲ್‌ ಮತ್ತು ವರ್ಲ್ಡ್ ಎಕನಾಮಿಕ್ ಫೋರಮ್ (ಡಬ್ಲ್ಯುಇಎಫ್) ಯೂಟ್ಯೂಬ್‌ ಚಾನೆಲ್‌ಗಳಲ್ಲಿ ಪ್ರಧಾನಿ ಮೋದಿಯವರ ಭಾಷಣ ಲಭ್ಯವಿದೆ. ಡಿಡಿ ಮತ್ತು ಡಬ್ಲ್ಯುಇಎಫ್ ಚಾನೆಲ್‌ಗಳಲ್ಲಿ ಕಾಣಬಹುದಾದ ಅಡಚಣೆಯನ್ನು ನರೇಂದ್ರ ಮೋದಿ ಯೂಟ್ಯೂಬ್‌ ಚಾನೆಲ್‌ನಲ್ಲಿ ಕಾಣಲು ಸಾಧ್ಯವಾಗಿಲ್ಲ.

ಡಿಡಿ ಆವೃತ್ತಿಯ ವೀಡಿಯೊದಲ್ಲಿ ಪ್ರಧಾನಿ ಈಗಾಗಲೇ ಆರು ನಿಮಿಷಗಳ ಕಾಲ ಮಾತನಾಡಿದ ಭಾಗವನ್ನು WEFನ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರ ಮಾಡಲಾಗಿಲ್ಲ ಎಂದು ಆಲ್ಟ್‌ನ್ಯೂಸ್‌ ಗಮನಿಸಿದೆ. ವಾಸ್ತವವಾಗಿ, ಲೈವ್ ಸ್ಟ್ರೀಮ್‌ ಆದ WEFನ ಆವೃತ್ತಿಯ ಮೊದಲ ಎಂಟು ನಿಮಿಷಗಳು ಬ್ಲಾಕ್‌ ಆಗಿವೆ. ಲೈವ್ ಸ್ಟ್ರೀಮ್ ಪ್ರಾರಂಭವಾದಾಗ, PM ಈಗಾಗಲೇ ಭಾಷಣದ ಮಧ್ಯಭಾಗದಲ್ಲಿರುವುದನ್ನು ಕಾಣಬಹುದು. WEFನ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಧಾನಮಂತ್ರಿಯವರ ಭಾಷಣದ ಆರಂಭಿಕ ಭಾಗವನ್ನು ಲೈವ್-ಸ್ಟ್ರೀಮ್ ಮಾಡದ ಕಾರಣ ತಾಂತ್ರಿಕ ದೋಷವಿತ್ತು ಎಂದು ತಿಳಿಯಬಹುದು.

ಆಲ್ಟ್ ನ್ಯೂಸ್ ಜಾಲತಾಣವು WEF ಕಾರ್ಯಕ್ರಮದ ಅನುಕ್ರಮವನ್ನು ಪರಿಶೀಲಿಸಿದ್ದು DD ಮತ್ತು WEF ಯೂಟ್ಯೂಬ್‌ ಚಾನೆಲ್‌ ವೀಡಿಯೊಗಳನ್ನು ಪರಿಶೀಲಿಸಿದೆ.

ಡಿಡಿಯ ಯೂಟ್ಯೂಬ್ ಚಾನೆಲ್‌ನಲ್ಲಿನ ವೀಡಿಯೊದ ಆರಂಭಿಕ ನಾಲ್ಕು ನಿಮಿಷಗಳಲ್ಲಿ, ಪಿಎಂ ಮೋದಿ ಮತ್ತು ಆತಿಥೇಯ ಡಬ್ಲ್ಯುಇಎಫ್ ಎಕ್ಸಿಕ್ಯೂಟಿವ್ ಚೇರ್ಮನ್ ಕ್ಲಾಸ್ ಶ್ವಾಬ್, ಕುಶಲೋಪರಿ ವಿನಿಮಯ ಮಾಡಿಕೊಂಡರು. 5:04 ನಿಮಿಷಗಳಿಗೆ ಪ್ರಧಾನಮಂತ್ರಿಯವರು ತಮ್ಮ ಭಾಷಣವನ್ನು ಪ್ರಾರಂಭಿಸುತ್ತಾರೆ. ಆದಾಗ್ಯೂ, ಕೆಲವು ಸೆಕೆಂಡುಗಳ ಮೊದಲು [5:00 ರಿಂದ 5:01 ನಿಮಿಷ ನೋಡಿ], ಒಬ್ಬ ವ್ಯಕ್ತಿಯು ಇಂಗ್ಲಿಷ್‌ನಲ್ಲಿ “… ಗ್ರಾಫಿಕ್ಸ್… ಸರ್?” ಎನ್ನುವುದನ್ನು ಕೇಳಬಹುದು. ಅದರ ನಂತರ ನರೇಂದ್ರಮೋದಿಯವರು 5:12 ನಿಮಿಷಕ್ಕೆ ತಮ್ಮ ಇಯರ್‌ಫೋನ್‌‌ ತೆಗೆದು ತಮ್ಮ ಭಾಷಣವನ್ನು ಪ್ರಾರಂಭಿಸುತ್ತಾರೆ.

7:07 ನಿಮಿಷದ ಅವಧಿಯಲ್ಲಿ, ಪ್ರಧಾನಿ ಮೋದಿ ಎಡಕ್ಕೆ ನೋಡುತ್ತಾರೆ ಮತ್ತು ಮಾತನಾಡುವುದನ್ನು ನಿಲ್ಲಿಸುತ್ತಾರೆ. ಸುಮಾರು, 7:15ರ ನಿಮಿಷದಲ್ಲಿ ‌ಆತಿಥೇಯರನ್ನು ಮೋದಿ ಸಂಭೋದಿಸುತ್ತಾರೆ. “ನೀವು ನನ್ನನ್ನು ಆಲಿಸುತ್ತಿದ್ದೀರಾ?” ಎಂದು ಕೇಳುತ್ತಾರೆ. ಆಲಿಸುತ್ತಿರುವುದಾಗಿ ಶ್ವಾಬ್‌ ಖಚಿತಪಡಿಸಿದ್ದಾರೆ. ಆಗ ಪ್ರಧಾನಮಂತ್ರಿಯವರು ಕೇಳುತ್ತಾರೆ, “ನಮ್ಮ ಇಂಟರ್ಪ್ರಿಟರ್ ಕೂಡ ಕೇಳಬಲ್ಲರೇ?”. ಶ್ವಾಬ್ ದೃಢೀಕರಿಸುತ್ತಾರೆ. “ಸಂಗೀತದೊಂದಿಗೆ ಒಂದು ಸಣ್ಣ ಪರಿಚಯ…”. ನಂತರ ಅಧಿಕೃತವಾಗಿ ಅಧಿವೇಶನವು ಮತ್ತೆ ಪ್ರಾರಂಭವಾಗುತ್ತದೆ (7:45 ನಿಮಿಷದಲ್ಲಿ ಪರಿಶೀಲಿಸಿ).

10:49 ನಿಮಿಷದ ಅವಧಿಯಲ್ಲಿ ಪ್ರಧಾನಿ ಮೋದಿ ತಮ್ಮ ಭಾಷಣವನ್ನು ಪುನರಾರಂಭಿಸುತ್ತಾರೆ. ಅವರ ಭಾಷಣದ 5:04 ನಿಮಿಷದಲ್ಲಿ ನೋಡಿದ ಹೇಳಿಕೆಯನ್ನು ಮತ್ತೆ ಗಮನಿಸಬಹುದು.

WEFನ ಯೂಟ್ಯೂಬ್ ಚಾನೆಲ್‌ನಲ್ಲಿ ಅದೇ ವೀಡಿಯೊವನ್ನು ವೀಕ್ಷಿಸಿದ ನಂತರ, ಪಿಎಂ ಮೋದಿ ಎಡಕ್ಕೆ ನೋಡಿದ ನಿಖರವಾದ ಸಮಯವನ್ನು ಗುರುತಿಸಬಹುದು. ಕಾರ್ಯಕ್ರಮ ನಿರ್ವಹಣಾ ತಂಡದ ಯಾರೋ ಒಬ್ಬರು, “ಪ್ರಧಾನ ಮಂತ್ರಿಯವರು ಎಲ್ಲರೂ ಸೇರಿದ್ದಾರೆಯೇ ಅಥವಾ ಇಲ್ಲವೇ ಎಂದು ಕೇಳಬೇಕು” ಎಂದು ಸಲಹೆ ನೀಡುತ್ತಾರೆ. ಹಿಂದಿಯಲ್ಲಿ ಒಂದು ಧ್ವನಿಯು ಪ್ರಧಾನಿ ಮೋದಿಯನ್ನು ಉದ್ದೇಶಿಸಿ, “ಸರ್, ಎಲ್ಲರೂ ಸೇರಿದ್ದರೆ ಅವರನ್ನು ಒಮ್ಮೆ ಕೇಳಿ…” ಎನ್ನುವುದನ್ನು ಗಮನಿಸಬಹುದು. ಇದಾದ ನಂತರವೇ ಪ್ರಧಾನಿಯವರು ತಮ್ಮ ಭಾಷಣ ಮತ್ತು ದ್ವಿಭಾಷಿಯ ಧ್ವನಿಯ ಕುರಿತು ವಿಚಾರಿಸುತ್ತಾರೆ. ಹೀಗಾಗಿ, ಪ್ರಧಾನಿ ಮೋದಿ ಮಾತನಾಡುವುದನ್ನು ನಿಲ್ಲಿಸಲು- ಕಾರ್ಯಕ್ರಮವನ್ನು ನಿರ್ವಹಿಸುವ ತಂಡದ ಮಧ್ಯಪ್ರವೇಶವೇ ಕಾರಣವಾಗಿದೆ.

ಅಡಚಣೆ ಇರುವುದನ್ನು ಮನಗಂಡ ಕ್ಲಾಸ್ ಶ್ವಾಬ್ ಪ್ರಧಾನಿಯನ್ನು ಪರಿಚಯಿಸುತ್ತಾರೆ. ಪಿ.ಎಂ. ಮತ್ತೆ ಭಾಷಣ ಆರಂಭಿಸುತ್ತಾರೆ. ಕಾರ್ಯಕ್ರಮದಲ್ಲಿ ಉಂಟಾದ ತಾಂತ್ರಿಕ ದೋಷದಿಂದಾಗಿ ಅಡಚಣೆಯಾಗಿದೆ. ಆದರೆ ಟೆಲಿಪ್ರಾಮ್ಟರ್‌‌ ಸಮಸ್ಯೆಯಾಗಿದೆ ಎಂಬುದು ಸತ್ಯಕ್ಕೆ ದೂರವಾಗಿದೆ.


ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ಹೈದ್ರಾಬಾದ್‌ನಲ್ಲಿ ಉದ್ಘಾಟನೆಯಾಗಲಿರುವ ರಾಮಾನುಜಾಚಾರ್ಯರ ಪ್ರತಿಮೆ ಪ್ರಧಾನಿ ಮೋದಿ ನಿರ್ಮಿಸಿದ್ದಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ತಾಂತ್ರಿಕ ಸಮಸ್ಯೆ ಏನೇ ಇರಲಿ, ಮೋದಿ ಟೆಲೆಫ್ರಾಂಪ್ಟರ್ ಬಳಸುತ್ತಾರೆ ಎಂಬುದು ಸಾಬೀತಾಯಿತು. ಡಾ.ಮನಮೋಹನ್ ಸಿಂಗ್ ಎಂದೂ ಟೆಲೆಫ್ರಾಂಪ್ಟರ್ ಬಳಸುತ್ತಲೇ ಇರಲಿಲ್ಲ!
    ನೆಹರು ಸಹಾ ಟೆಲೆ ಫ್ರಾಂಪ್ಟರ್ ಬಳಸುತ್ತಿದ್ದರು ಎಂದು ಭಕ್ತರು ಹೇಳುತ್ತಿದ್ದಾರೆ !!!☺️😊☺️😊😢

  2. ಇಲ್ಲಿಯ ವರೆಗೆ ಜನರು ಮೋದಿ ಅನಕ್ಷರಸ್ಥ ಎಂದು ತಿಳಿದಿದ್ದರು. ಆದರೆ ಮೋದಿಗೆ ಓದಲು ಬರೆಯಲು ಬರುತ್ತದೆ ಎಂದು ಈಗ ದೇಶದ ಜನಕ್ಕೆ ಗೊತ್ತಾಗಿ ಸಂತೋಷವಾಯಿತು !!.
    ಥ್ಯಾಂಕ್ಸ್ ಟೆಲೆಫ್ರಾಂಪ್ಟರ್ ! ☺️😊☺️😊😢

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...