Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಈ ಯೋಗಿ ಹಿಮಾಲಯದವರೂ ಅಲ್ಲ, ಅವರ ಮೈಮೇಲೆ ಇರುವುದು ಹಿಮವೂ ಅಲ್ಲ!

ಫ್ಯಾಕ್ಟ್‌ಚೆಕ್‌: ಈ ಯೋಗಿ ಹಿಮಾಲಯದವರೂ ಅಲ್ಲ, ಅವರ ಮೈಮೇಲೆ ಇರುವುದು ಹಿಮವೂ ಅಲ್ಲ!

ಪ್ರಧಾನಿ ಮೋದಿ ಮತ್ತು ಅಮಿತ್‌ ಶಾ ಫಾಲೋ ಮಾಡುತ್ತಿರುವ ಟ್ವಿಟರ್‌ ಖಾತೆಯು ಈ ಚಿತ್ರವನ್ನು ಹಂಚಿಕೊಂಡಿದೆ

- Advertisement -
- Advertisement -

ಶರೀರ ಪೂರ್ತಿ ಮಂಜುಗಡ್ಡೆಯಲ್ಲಿ ಆವೃತ್ತವಾಗಿರುವಂತೆ ಕಾಣುತ್ತಿರುವ ಪದ್ಮಾಸನ ಹಾಕಿಕೊಂಡು ಕೂತಿರುವ ವ್ಯಕ್ತಿಯೊಬ್ಬರ ಕಪ್ಪುಬಿಳುಪಿನ ಚಿತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಈ ಚಿತ್ರದಲ್ಲಿ ಇರುವ ವ್ಯಕ್ತಿಯನ್ನು ‘ಹಿಮಾಲಯದಲ್ಲಿ ಇರುವ ಯೋಗಿ’ ಎಂದು ಪ್ರತಿಪಾದಿಸಲಾಗುತ್ತಿದೆ.

ಟ್ವಿಟರ್‌ನಲ್ಲಿ ಈ ಚಿತ್ರವನ್ನು ರಿನಿತಿ ಚಟರ್ಜಿ ಎನ್ನುವ ಖಾತೆಯೊಂದು, ‘ಮಂಜುಗಡ್ಡೆಯನ್ನು ಹೊದ್ದುಕೊಂಡಿರುವ ಹಿಮಾಲಯದ ಯೋಗಿ’ ಎಂದು ಹೇಳಿಕೊಂಡಿದೆ. ಈ ಖಾತೆಯು ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಫಾಲೋವರ್‌ ಅನ್ನು ಹೊಂದಿದೆ. ಈ ಚಿತ್ರವನ್ನು ನಿಖಿಲ್ ಠಾಕರ್‌‌ ಎನ್ನುವ ಬಿಜೆಪಿ ಬೆಂಬಲಿಗ ವ್ಯಕ್ತಿಯೊಬ್ಬರು ಹಂಚಿಕೊಂಡಿದ್ದಾರೆ. ವಿಷೇಶವೇನೆಂದರೆ ನಿಖಿಲ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್‌ ಶಾ ಅವರು ಫಾಲೊ ಮಾಡುತ್ತಿದ್ದಾರೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ತುಮಕೂರು ಜಿಲ್ಲೆಗೆ ಮನುಷ್ಯ ರೂಪದ ವಿಚಿತ್ರ ಪ್ರಾಣಿ ಬಂದಿದ್ದು ನಿಜವೇ?

ಚಿತ್ರವು ಕೇವಲ ಟ್ವಿಟರ್‌ ಮಾತ್ರವಲ್ಲದೆ ಪೇಸ್‌ಬುಕ್‌ನಲ್ಲೂ ಹರಿದಾಡುತ್ತಿದೆ. ಫೇಸ್‌ಬುಕ್‌ನಲ್ಲಿ, “ಇಂತಹ ತಪಸ್ಸು, ಹಠಮಾರಿತನ, ಸಾಧನೆ ಇರುವುದು ಸನಾತನದಲ್ಲಿ ಮಾತ್ರ, ಇಂದ್ರಿಯಗಳನ್ನು ಗೆದ್ದುಕೊಂಡ ಸಾವಿರಾರು ಉದಾಹರಣೆಗಳಿವೆ, ಇಂತಹ ಉದಾಹರಣೆ ಬೇರೆ ಯಾವ ಸಂಸ್ಕೃತಿಯಲ್ಲಾಗಲಿ, ಧರ್ಮದಲ್ಲಾಗಲಿ ಕಾಣುವುದಿಲ್ಲ” ಎಂದು ಚಿತ್ರದಲ್ಲಿರುವ ವ್ಯಕ್ತಿ ಅತಿಮಾನುಷವಾದುದನ್ನು ಮಾಡುತ್ತಿದ್ದಾರೆ ಎಂದು ಪ್ರತಿಪಾದಿಸಲಾಗಿದೆ.

ಇದೇ ಪ್ರತಿಪಾದನೆಯನ್ನು ಟ್ವಿಟರ್‌ನಲ್ಲೂ ಮಾಡಲಾಗಿದೆ. ಅದನ್ನುಇಲ್ಲಿ ಮತ್ತು ಇಲ್ಲಿ ನೋಡಬಹುದಾಗಿದೆ. ಈ ಚಿತ್ರವನ್ನು ವೈರಲ್ ಮಾಡಿರುವ ಸಾಮಾಜಿಕ ಜಾಲತಾಣದ ಎಲ್ಲಾ ಹ್ಯಾಂಡಲ್‌ಗಳು ಬಿಜೆಪಿ ಪರವಾಗಿ ಪ್ರೊಪಗಾಂಡ ಸೃಷ್ಟಿಸುವ ಪೇಜ್‌ಗಳಾಗಿವೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್‌: ತಿರುಪತಿ ದೇವಸ್ಥಾನದ ಪುರೋಹಿತರ ಮನೆಯಲ್ಲಿ 128Kg ಚಿನ್ನ ಸಿಕ್ಕಿದ್ದು ನಿಜವೇ?

ಫ್ಯಾಕ್ಟ್‌ಚೆಕ್

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ಚಿತ್ರವನ್ನು ನಾನುಗೌರಿ.ಕಾಂ ರಿವರ್ಸ್‌ ಸರ್ಚ್ ಮೂಲಕ ಹುಡುಕಾಡಿದಾಗ ಈ ಚಿತ್ರವು ‘ಬಾಬಾ ಸರ್‌ಬಂಗಿ I’ ಎನ್ನುವ ಫೇಸ್‌ಬುಕ್‌ ಪೇಜ್‌ನಲ್ಲಿ ಪತ್ತೆಯಾಗಿದೆ. ಈ ಚಿತ್ರವನ್ನು ಮೂರು ವರ್ಷಗಳ ಹಿಂದೆ ಅಪ್‌ಲೋಡ್ ಮಾಡಲಾಗಿದೆ. ಪೇಜ್‌ನಲ್ಲಿ ಇರುವ ಈ ಚಿತ್ರವನ್ನು ಬಳಸಿಕೊಂಡು ಚಿತ್ರವನ್ನು ಕಪ್ಪುಬಿಳುಪಾಗಿ ಎಡಿಟ್‌ ಮಾಡಿ ಅದನ್ನು ವೈರಲ್ ಮಾಡಲಾಗಿದೆ.

ಫೇಸ್‌ಬುಕ್ ಪೇಜ್‌ನಲ್ಲಿ ಈ ವ್ಯಕ್ತಿಯನ್ನು ‘ಬಾಬಾ ಭಲೇ ಗಿರಿ ಜಿ ಮಹಾರಾಜ್’ ಎಂದು ಹೇಳಿಕೊಂಡಿದೆ. ಪೇಜ್‌ನಲ್ಲಿ ಇರುವ ಫೇಸ್‌ಬುಕ್‌‌ ಚಿತ್ರದಲ್ಲಿ ಕಂದು ಬಣ್ಣದ ‘ಬೂದಿ’ ಅವರ ಮೈಮೇಲೆ ಇರುವಂತೆ ಸ್ಪಷ್ಟವಾಗಿ ಕಾಣುತ್ತದೆ. ಜೊತೆಗೆ ಹಿನ್ನಲೆಯಲ್ಲಿ ‘ಬೆರಣಿ’ ಜೋಡಿಸಿರುವುದು ಕೂಡಾ ಕಾಣುತ್ತದೆ.

ಈ ಮಾಹಿತಿಯ ಎಳೆಯನ್ನು ಹುಡುಕಿಕೊಂಡು ನಾವು ಮತ್ತಷ್ಟು ಹುಡುಕಿದ್ದೇವೆ. ಈ ವ್ಯಕ್ತಿಯನ್ನು ಜನರು ‘‘ಶ್ರೀಶ್ರೀ 1008 ಮಹಂತ್‌ ಬಾಬಾ ಭಲೇ ಗಿರಿ ಜಿ ಮಹಾರಾಜ್‌” ಎಂದು ಕರೆಯುತ್ತಾರೆ. ಇದು ಹರಿಯಾಣ ರಾಜ್ಯದ ರಿಂಧಾನದಲ್ಲಿರುವ ‘ಪರಾಶರ್‌ ತೀರ್ಥ’ದಲ್ಲಿ ಮಾಡಲಾಗಿರುವ ಧಾರ್ಮಿಕ ಆಚರಣೆಯೊಂದರ ಚಿತ್ರವಾಗಿದೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ರಾಯಚೂರಿನಲ್ಲಿ ಏಕ್ ಮಿನಾರ್ ಮಸೀದಿ ಕೆಡವಿದಾ‌ಗ ಶಿವನ ದೇವಾಲಯ ಪತ್ತೆಯಾಯಿತೆ?

ಈ ಆಚರಣೆಯಲ್ಲಿ ಬೆರಣಿಯನ್ನು ಹಲವು ದೊಡ್ಡ ದೊಡ್ಡ ಗುಂಪಾಗಿ ಜೋಡಿಸಿ ಅದರ ನಡುವೆ ಅವರು ಕುಳಿತುಕೊಳ್ಳುತ್ತಾರೆ. ಈ ವೇಳೆ ಅವರ ಮೈಮೇಲೆ ಬೆರಣಿಯ ಬೂದಿ ಅಂಟಿಕೊಂಡಿದ್ದಾಗಿರಬಹುದಾಗಿದೆ.

ಪ್ರಸ್ತುತ ವೈರಲ್ ಆಗಿರುವ ಚಿತ್ರವು ಮೂರು ವರ್ಷಗಳಷ್ಟು ಹಳೆಯದಾದರೂ, ‘ಬಾಬಾ ಸರ್‌ಬಂಗಿ I‘ ಫೇಸ್‌ಬುಕ್ ಪೇಜ್‌ನಲ್ಲಿ ಈ ಆಚರಣೆಯ ಹಳೆಯ ಚಿತ್ರಗಳು ಮತ್ತು ಇತ್ತೀಚೆಗೆ ಕ್ಲಿಕ್ ಮಾಡಿರುವ ಚಿತ್ರಗಳು ಎಂಬಂತೆ ತೋರುವ ಹಲವಾರು ಚಿತ್ರಗಳು ಇವೆ.

ಒಟ್ಟಿನಲ್ಲಿ ಹೇಳಬಹುದಾದರೆ, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ಚಿತ್ರವು ಯಾವುದೆ ಹಿಮಾಲಯದ ಯೋಗಿಯದ್ದಲ್ಲ ಮತ್ತು ಅವರ ಮೈಮೇಲೆ ಇರುವುದು ಹಿಮವೂ ಅಲ್ಲ. ಅವರು ಹರಿಯಾಣ ರಾಜ್ಯದವರಾಗಿದ್ದು, ಅವರ ಮೈಮೇಲೆ ಇರುವುದು ಬೂದಿಯಾಗಿದೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್‌: ಯೋಗಿ ಆದಿತ್ಯನಾಥರ ಬೆಂಗಾವಲಿನ ಮೇಲೆ ದಾಳಿ ಮಾಡಿದ ಯುವಕರ ವಿಡಿಯೊ ಈಗಿನದ್ದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...