Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಈ ಯೋಗಿ ಹಿಮಾಲಯದವರೂ ಅಲ್ಲ, ಅವರ ಮೈಮೇಲೆ ಇರುವುದು ಹಿಮವೂ ಅಲ್ಲ!

ಫ್ಯಾಕ್ಟ್‌ಚೆಕ್‌: ಈ ಯೋಗಿ ಹಿಮಾಲಯದವರೂ ಅಲ್ಲ, ಅವರ ಮೈಮೇಲೆ ಇರುವುದು ಹಿಮವೂ ಅಲ್ಲ!

ಪ್ರಧಾನಿ ಮೋದಿ ಮತ್ತು ಅಮಿತ್‌ ಶಾ ಫಾಲೋ ಮಾಡುತ್ತಿರುವ ಟ್ವಿಟರ್‌ ಖಾತೆಯು ಈ ಚಿತ್ರವನ್ನು ಹಂಚಿಕೊಂಡಿದೆ

- Advertisement -
- Advertisement -

ಶರೀರ ಪೂರ್ತಿ ಮಂಜುಗಡ್ಡೆಯಲ್ಲಿ ಆವೃತ್ತವಾಗಿರುವಂತೆ ಕಾಣುತ್ತಿರುವ ಪದ್ಮಾಸನ ಹಾಕಿಕೊಂಡು ಕೂತಿರುವ ವ್ಯಕ್ತಿಯೊಬ್ಬರ ಕಪ್ಪುಬಿಳುಪಿನ ಚಿತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಈ ಚಿತ್ರದಲ್ಲಿ ಇರುವ ವ್ಯಕ್ತಿಯನ್ನು ‘ಹಿಮಾಲಯದಲ್ಲಿ ಇರುವ ಯೋಗಿ’ ಎಂದು ಪ್ರತಿಪಾದಿಸಲಾಗುತ್ತಿದೆ.

ಟ್ವಿಟರ್‌ನಲ್ಲಿ ಈ ಚಿತ್ರವನ್ನು ರಿನಿತಿ ಚಟರ್ಜಿ ಎನ್ನುವ ಖಾತೆಯೊಂದು, ‘ಮಂಜುಗಡ್ಡೆಯನ್ನು ಹೊದ್ದುಕೊಂಡಿರುವ ಹಿಮಾಲಯದ ಯೋಗಿ’ ಎಂದು ಹೇಳಿಕೊಂಡಿದೆ. ಈ ಖಾತೆಯು ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಫಾಲೋವರ್‌ ಅನ್ನು ಹೊಂದಿದೆ. ಈ ಚಿತ್ರವನ್ನು ನಿಖಿಲ್ ಠಾಕರ್‌‌ ಎನ್ನುವ ಬಿಜೆಪಿ ಬೆಂಬಲಿಗ ವ್ಯಕ್ತಿಯೊಬ್ಬರು ಹಂಚಿಕೊಂಡಿದ್ದಾರೆ. ವಿಷೇಶವೇನೆಂದರೆ ನಿಖಿಲ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್‌ ಶಾ ಅವರು ಫಾಲೊ ಮಾಡುತ್ತಿದ್ದಾರೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ತುಮಕೂರು ಜಿಲ್ಲೆಗೆ ಮನುಷ್ಯ ರೂಪದ ವಿಚಿತ್ರ ಪ್ರಾಣಿ ಬಂದಿದ್ದು ನಿಜವೇ?

ಚಿತ್ರವು ಕೇವಲ ಟ್ವಿಟರ್‌ ಮಾತ್ರವಲ್ಲದೆ ಪೇಸ್‌ಬುಕ್‌ನಲ್ಲೂ ಹರಿದಾಡುತ್ತಿದೆ. ಫೇಸ್‌ಬುಕ್‌ನಲ್ಲಿ, “ಇಂತಹ ತಪಸ್ಸು, ಹಠಮಾರಿತನ, ಸಾಧನೆ ಇರುವುದು ಸನಾತನದಲ್ಲಿ ಮಾತ್ರ, ಇಂದ್ರಿಯಗಳನ್ನು ಗೆದ್ದುಕೊಂಡ ಸಾವಿರಾರು ಉದಾಹರಣೆಗಳಿವೆ, ಇಂತಹ ಉದಾಹರಣೆ ಬೇರೆ ಯಾವ ಸಂಸ್ಕೃತಿಯಲ್ಲಾಗಲಿ, ಧರ್ಮದಲ್ಲಾಗಲಿ ಕಾಣುವುದಿಲ್ಲ” ಎಂದು ಚಿತ್ರದಲ್ಲಿರುವ ವ್ಯಕ್ತಿ ಅತಿಮಾನುಷವಾದುದನ್ನು ಮಾಡುತ್ತಿದ್ದಾರೆ ಎಂದು ಪ್ರತಿಪಾದಿಸಲಾಗಿದೆ.

ಇದೇ ಪ್ರತಿಪಾದನೆಯನ್ನು ಟ್ವಿಟರ್‌ನಲ್ಲೂ ಮಾಡಲಾಗಿದೆ. ಅದನ್ನುಇಲ್ಲಿ ಮತ್ತು ಇಲ್ಲಿ ನೋಡಬಹುದಾಗಿದೆ. ಈ ಚಿತ್ರವನ್ನು ವೈರಲ್ ಮಾಡಿರುವ ಸಾಮಾಜಿಕ ಜಾಲತಾಣದ ಎಲ್ಲಾ ಹ್ಯಾಂಡಲ್‌ಗಳು ಬಿಜೆಪಿ ಪರವಾಗಿ ಪ್ರೊಪಗಾಂಡ ಸೃಷ್ಟಿಸುವ ಪೇಜ್‌ಗಳಾಗಿವೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್‌: ತಿರುಪತಿ ದೇವಸ್ಥಾನದ ಪುರೋಹಿತರ ಮನೆಯಲ್ಲಿ 128Kg ಚಿನ್ನ ಸಿಕ್ಕಿದ್ದು ನಿಜವೇ?

ಫ್ಯಾಕ್ಟ್‌ಚೆಕ್

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ಚಿತ್ರವನ್ನು ನಾನುಗೌರಿ.ಕಾಂ ರಿವರ್ಸ್‌ ಸರ್ಚ್ ಮೂಲಕ ಹುಡುಕಾಡಿದಾಗ ಈ ಚಿತ್ರವು ‘ಬಾಬಾ ಸರ್‌ಬಂಗಿ I’ ಎನ್ನುವ ಫೇಸ್‌ಬುಕ್‌ ಪೇಜ್‌ನಲ್ಲಿ ಪತ್ತೆಯಾಗಿದೆ. ಈ ಚಿತ್ರವನ್ನು ಮೂರು ವರ್ಷಗಳ ಹಿಂದೆ ಅಪ್‌ಲೋಡ್ ಮಾಡಲಾಗಿದೆ. ಪೇಜ್‌ನಲ್ಲಿ ಇರುವ ಈ ಚಿತ್ರವನ್ನು ಬಳಸಿಕೊಂಡು ಚಿತ್ರವನ್ನು ಕಪ್ಪುಬಿಳುಪಾಗಿ ಎಡಿಟ್‌ ಮಾಡಿ ಅದನ್ನು ವೈರಲ್ ಮಾಡಲಾಗಿದೆ.

ಫೇಸ್‌ಬುಕ್ ಪೇಜ್‌ನಲ್ಲಿ ಈ ವ್ಯಕ್ತಿಯನ್ನು ‘ಬಾಬಾ ಭಲೇ ಗಿರಿ ಜಿ ಮಹಾರಾಜ್’ ಎಂದು ಹೇಳಿಕೊಂಡಿದೆ. ಪೇಜ್‌ನಲ್ಲಿ ಇರುವ ಫೇಸ್‌ಬುಕ್‌‌ ಚಿತ್ರದಲ್ಲಿ ಕಂದು ಬಣ್ಣದ ‘ಬೂದಿ’ ಅವರ ಮೈಮೇಲೆ ಇರುವಂತೆ ಸ್ಪಷ್ಟವಾಗಿ ಕಾಣುತ್ತದೆ. ಜೊತೆಗೆ ಹಿನ್ನಲೆಯಲ್ಲಿ ‘ಬೆರಣಿ’ ಜೋಡಿಸಿರುವುದು ಕೂಡಾ ಕಾಣುತ್ತದೆ.

ಈ ಮಾಹಿತಿಯ ಎಳೆಯನ್ನು ಹುಡುಕಿಕೊಂಡು ನಾವು ಮತ್ತಷ್ಟು ಹುಡುಕಿದ್ದೇವೆ. ಈ ವ್ಯಕ್ತಿಯನ್ನು ಜನರು ‘‘ಶ್ರೀಶ್ರೀ 1008 ಮಹಂತ್‌ ಬಾಬಾ ಭಲೇ ಗಿರಿ ಜಿ ಮಹಾರಾಜ್‌” ಎಂದು ಕರೆಯುತ್ತಾರೆ. ಇದು ಹರಿಯಾಣ ರಾಜ್ಯದ ರಿಂಧಾನದಲ್ಲಿರುವ ‘ಪರಾಶರ್‌ ತೀರ್ಥ’ದಲ್ಲಿ ಮಾಡಲಾಗಿರುವ ಧಾರ್ಮಿಕ ಆಚರಣೆಯೊಂದರ ಚಿತ್ರವಾಗಿದೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ರಾಯಚೂರಿನಲ್ಲಿ ಏಕ್ ಮಿನಾರ್ ಮಸೀದಿ ಕೆಡವಿದಾ‌ಗ ಶಿವನ ದೇವಾಲಯ ಪತ್ತೆಯಾಯಿತೆ?

ಈ ಆಚರಣೆಯಲ್ಲಿ ಬೆರಣಿಯನ್ನು ಹಲವು ದೊಡ್ಡ ದೊಡ್ಡ ಗುಂಪಾಗಿ ಜೋಡಿಸಿ ಅದರ ನಡುವೆ ಅವರು ಕುಳಿತುಕೊಳ್ಳುತ್ತಾರೆ. ಈ ವೇಳೆ ಅವರ ಮೈಮೇಲೆ ಬೆರಣಿಯ ಬೂದಿ ಅಂಟಿಕೊಂಡಿದ್ದಾಗಿರಬಹುದಾಗಿದೆ.

ಪ್ರಸ್ತುತ ವೈರಲ್ ಆಗಿರುವ ಚಿತ್ರವು ಮೂರು ವರ್ಷಗಳಷ್ಟು ಹಳೆಯದಾದರೂ, ‘ಬಾಬಾ ಸರ್‌ಬಂಗಿ I‘ ಫೇಸ್‌ಬುಕ್ ಪೇಜ್‌ನಲ್ಲಿ ಈ ಆಚರಣೆಯ ಹಳೆಯ ಚಿತ್ರಗಳು ಮತ್ತು ಇತ್ತೀಚೆಗೆ ಕ್ಲಿಕ್ ಮಾಡಿರುವ ಚಿತ್ರಗಳು ಎಂಬಂತೆ ತೋರುವ ಹಲವಾರು ಚಿತ್ರಗಳು ಇವೆ.

ಒಟ್ಟಿನಲ್ಲಿ ಹೇಳಬಹುದಾದರೆ, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ಚಿತ್ರವು ಯಾವುದೆ ಹಿಮಾಲಯದ ಯೋಗಿಯದ್ದಲ್ಲ ಮತ್ತು ಅವರ ಮೈಮೇಲೆ ಇರುವುದು ಹಿಮವೂ ಅಲ್ಲ. ಅವರು ಹರಿಯಾಣ ರಾಜ್ಯದವರಾಗಿದ್ದು, ಅವರ ಮೈಮೇಲೆ ಇರುವುದು ಬೂದಿಯಾಗಿದೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್‌: ಯೋಗಿ ಆದಿತ್ಯನಾಥರ ಬೆಂಗಾವಲಿನ ಮೇಲೆ ದಾಳಿ ಮಾಡಿದ ಯುವಕರ ವಿಡಿಯೊ ಈಗಿನದ್ದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...