Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಈ ಯೋಗಿ ಹಿಮಾಲಯದವರೂ ಅಲ್ಲ, ಅವರ ಮೈಮೇಲೆ ಇರುವುದು ಹಿಮವೂ ಅಲ್ಲ!

ಫ್ಯಾಕ್ಟ್‌ಚೆಕ್‌: ಈ ಯೋಗಿ ಹಿಮಾಲಯದವರೂ ಅಲ್ಲ, ಅವರ ಮೈಮೇಲೆ ಇರುವುದು ಹಿಮವೂ ಅಲ್ಲ!

ಪ್ರಧಾನಿ ಮೋದಿ ಮತ್ತು ಅಮಿತ್‌ ಶಾ ಫಾಲೋ ಮಾಡುತ್ತಿರುವ ಟ್ವಿಟರ್‌ ಖಾತೆಯು ಈ ಚಿತ್ರವನ್ನು ಹಂಚಿಕೊಂಡಿದೆ

- Advertisement -
- Advertisement -

ಶರೀರ ಪೂರ್ತಿ ಮಂಜುಗಡ್ಡೆಯಲ್ಲಿ ಆವೃತ್ತವಾಗಿರುವಂತೆ ಕಾಣುತ್ತಿರುವ ಪದ್ಮಾಸನ ಹಾಕಿಕೊಂಡು ಕೂತಿರುವ ವ್ಯಕ್ತಿಯೊಬ್ಬರ ಕಪ್ಪುಬಿಳುಪಿನ ಚಿತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಈ ಚಿತ್ರದಲ್ಲಿ ಇರುವ ವ್ಯಕ್ತಿಯನ್ನು ‘ಹಿಮಾಲಯದಲ್ಲಿ ಇರುವ ಯೋಗಿ’ ಎಂದು ಪ್ರತಿಪಾದಿಸಲಾಗುತ್ತಿದೆ.

ಟ್ವಿಟರ್‌ನಲ್ಲಿ ಈ ಚಿತ್ರವನ್ನು ರಿನಿತಿ ಚಟರ್ಜಿ ಎನ್ನುವ ಖಾತೆಯೊಂದು, ‘ಮಂಜುಗಡ್ಡೆಯನ್ನು ಹೊದ್ದುಕೊಂಡಿರುವ ಹಿಮಾಲಯದ ಯೋಗಿ’ ಎಂದು ಹೇಳಿಕೊಂಡಿದೆ. ಈ ಖಾತೆಯು ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಫಾಲೋವರ್‌ ಅನ್ನು ಹೊಂದಿದೆ. ಈ ಚಿತ್ರವನ್ನು ನಿಖಿಲ್ ಠಾಕರ್‌‌ ಎನ್ನುವ ಬಿಜೆಪಿ ಬೆಂಬಲಿಗ ವ್ಯಕ್ತಿಯೊಬ್ಬರು ಹಂಚಿಕೊಂಡಿದ್ದಾರೆ. ವಿಷೇಶವೇನೆಂದರೆ ನಿಖಿಲ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್‌ ಶಾ ಅವರು ಫಾಲೊ ಮಾಡುತ್ತಿದ್ದಾರೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ತುಮಕೂರು ಜಿಲ್ಲೆಗೆ ಮನುಷ್ಯ ರೂಪದ ವಿಚಿತ್ರ ಪ್ರಾಣಿ ಬಂದಿದ್ದು ನಿಜವೇ?

ಚಿತ್ರವು ಕೇವಲ ಟ್ವಿಟರ್‌ ಮಾತ್ರವಲ್ಲದೆ ಪೇಸ್‌ಬುಕ್‌ನಲ್ಲೂ ಹರಿದಾಡುತ್ತಿದೆ. ಫೇಸ್‌ಬುಕ್‌ನಲ್ಲಿ, “ಇಂತಹ ತಪಸ್ಸು, ಹಠಮಾರಿತನ, ಸಾಧನೆ ಇರುವುದು ಸನಾತನದಲ್ಲಿ ಮಾತ್ರ, ಇಂದ್ರಿಯಗಳನ್ನು ಗೆದ್ದುಕೊಂಡ ಸಾವಿರಾರು ಉದಾಹರಣೆಗಳಿವೆ, ಇಂತಹ ಉದಾಹರಣೆ ಬೇರೆ ಯಾವ ಸಂಸ್ಕೃತಿಯಲ್ಲಾಗಲಿ, ಧರ್ಮದಲ್ಲಾಗಲಿ ಕಾಣುವುದಿಲ್ಲ” ಎಂದು ಚಿತ್ರದಲ್ಲಿರುವ ವ್ಯಕ್ತಿ ಅತಿಮಾನುಷವಾದುದನ್ನು ಮಾಡುತ್ತಿದ್ದಾರೆ ಎಂದು ಪ್ರತಿಪಾದಿಸಲಾಗಿದೆ.

ಇದೇ ಪ್ರತಿಪಾದನೆಯನ್ನು ಟ್ವಿಟರ್‌ನಲ್ಲೂ ಮಾಡಲಾಗಿದೆ. ಅದನ್ನುಇಲ್ಲಿ ಮತ್ತು ಇಲ್ಲಿ ನೋಡಬಹುದಾಗಿದೆ. ಈ ಚಿತ್ರವನ್ನು ವೈರಲ್ ಮಾಡಿರುವ ಸಾಮಾಜಿಕ ಜಾಲತಾಣದ ಎಲ್ಲಾ ಹ್ಯಾಂಡಲ್‌ಗಳು ಬಿಜೆಪಿ ಪರವಾಗಿ ಪ್ರೊಪಗಾಂಡ ಸೃಷ್ಟಿಸುವ ಪೇಜ್‌ಗಳಾಗಿವೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್‌: ತಿರುಪತಿ ದೇವಸ್ಥಾನದ ಪುರೋಹಿತರ ಮನೆಯಲ್ಲಿ 128Kg ಚಿನ್ನ ಸಿಕ್ಕಿದ್ದು ನಿಜವೇ?

ಫ್ಯಾಕ್ಟ್‌ಚೆಕ್

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ಚಿತ್ರವನ್ನು ನಾನುಗೌರಿ.ಕಾಂ ರಿವರ್ಸ್‌ ಸರ್ಚ್ ಮೂಲಕ ಹುಡುಕಾಡಿದಾಗ ಈ ಚಿತ್ರವು ‘ಬಾಬಾ ಸರ್‌ಬಂಗಿ I’ ಎನ್ನುವ ಫೇಸ್‌ಬುಕ್‌ ಪೇಜ್‌ನಲ್ಲಿ ಪತ್ತೆಯಾಗಿದೆ. ಈ ಚಿತ್ರವನ್ನು ಮೂರು ವರ್ಷಗಳ ಹಿಂದೆ ಅಪ್‌ಲೋಡ್ ಮಾಡಲಾಗಿದೆ. ಪೇಜ್‌ನಲ್ಲಿ ಇರುವ ಈ ಚಿತ್ರವನ್ನು ಬಳಸಿಕೊಂಡು ಚಿತ್ರವನ್ನು ಕಪ್ಪುಬಿಳುಪಾಗಿ ಎಡಿಟ್‌ ಮಾಡಿ ಅದನ್ನು ವೈರಲ್ ಮಾಡಲಾಗಿದೆ.

ಫೇಸ್‌ಬುಕ್ ಪೇಜ್‌ನಲ್ಲಿ ಈ ವ್ಯಕ್ತಿಯನ್ನು ‘ಬಾಬಾ ಭಲೇ ಗಿರಿ ಜಿ ಮಹಾರಾಜ್’ ಎಂದು ಹೇಳಿಕೊಂಡಿದೆ. ಪೇಜ್‌ನಲ್ಲಿ ಇರುವ ಫೇಸ್‌ಬುಕ್‌‌ ಚಿತ್ರದಲ್ಲಿ ಕಂದು ಬಣ್ಣದ ‘ಬೂದಿ’ ಅವರ ಮೈಮೇಲೆ ಇರುವಂತೆ ಸ್ಪಷ್ಟವಾಗಿ ಕಾಣುತ್ತದೆ. ಜೊತೆಗೆ ಹಿನ್ನಲೆಯಲ್ಲಿ ‘ಬೆರಣಿ’ ಜೋಡಿಸಿರುವುದು ಕೂಡಾ ಕಾಣುತ್ತದೆ.

ಈ ಮಾಹಿತಿಯ ಎಳೆಯನ್ನು ಹುಡುಕಿಕೊಂಡು ನಾವು ಮತ್ತಷ್ಟು ಹುಡುಕಿದ್ದೇವೆ. ಈ ವ್ಯಕ್ತಿಯನ್ನು ಜನರು ‘‘ಶ್ರೀಶ್ರೀ 1008 ಮಹಂತ್‌ ಬಾಬಾ ಭಲೇ ಗಿರಿ ಜಿ ಮಹಾರಾಜ್‌” ಎಂದು ಕರೆಯುತ್ತಾರೆ. ಇದು ಹರಿಯಾಣ ರಾಜ್ಯದ ರಿಂಧಾನದಲ್ಲಿರುವ ‘ಪರಾಶರ್‌ ತೀರ್ಥ’ದಲ್ಲಿ ಮಾಡಲಾಗಿರುವ ಧಾರ್ಮಿಕ ಆಚರಣೆಯೊಂದರ ಚಿತ್ರವಾಗಿದೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ರಾಯಚೂರಿನಲ್ಲಿ ಏಕ್ ಮಿನಾರ್ ಮಸೀದಿ ಕೆಡವಿದಾ‌ಗ ಶಿವನ ದೇವಾಲಯ ಪತ್ತೆಯಾಯಿತೆ?

ಈ ಆಚರಣೆಯಲ್ಲಿ ಬೆರಣಿಯನ್ನು ಹಲವು ದೊಡ್ಡ ದೊಡ್ಡ ಗುಂಪಾಗಿ ಜೋಡಿಸಿ ಅದರ ನಡುವೆ ಅವರು ಕುಳಿತುಕೊಳ್ಳುತ್ತಾರೆ. ಈ ವೇಳೆ ಅವರ ಮೈಮೇಲೆ ಬೆರಣಿಯ ಬೂದಿ ಅಂಟಿಕೊಂಡಿದ್ದಾಗಿರಬಹುದಾಗಿದೆ.

ಪ್ರಸ್ತುತ ವೈರಲ್ ಆಗಿರುವ ಚಿತ್ರವು ಮೂರು ವರ್ಷಗಳಷ್ಟು ಹಳೆಯದಾದರೂ, ‘ಬಾಬಾ ಸರ್‌ಬಂಗಿ I‘ ಫೇಸ್‌ಬುಕ್ ಪೇಜ್‌ನಲ್ಲಿ ಈ ಆಚರಣೆಯ ಹಳೆಯ ಚಿತ್ರಗಳು ಮತ್ತು ಇತ್ತೀಚೆಗೆ ಕ್ಲಿಕ್ ಮಾಡಿರುವ ಚಿತ್ರಗಳು ಎಂಬಂತೆ ತೋರುವ ಹಲವಾರು ಚಿತ್ರಗಳು ಇವೆ.

ಒಟ್ಟಿನಲ್ಲಿ ಹೇಳಬಹುದಾದರೆ, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ಚಿತ್ರವು ಯಾವುದೆ ಹಿಮಾಲಯದ ಯೋಗಿಯದ್ದಲ್ಲ ಮತ್ತು ಅವರ ಮೈಮೇಲೆ ಇರುವುದು ಹಿಮವೂ ಅಲ್ಲ. ಅವರು ಹರಿಯಾಣ ರಾಜ್ಯದವರಾಗಿದ್ದು, ಅವರ ಮೈಮೇಲೆ ಇರುವುದು ಬೂದಿಯಾಗಿದೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್‌: ಯೋಗಿ ಆದಿತ್ಯನಾಥರ ಬೆಂಗಾವಲಿನ ಮೇಲೆ ದಾಳಿ ಮಾಡಿದ ಯುವಕರ ವಿಡಿಯೊ ಈಗಿನದ್ದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...