Homeಕೊರೊನಾಕೊರೊನಾ ಪರಿಹಾರ ವಿಳಂಬ: ಬಿಹಾರ, ಆಂಧ್ರ ಪ್ರದೇಶ, ಕೇರಳಕ್ಕೆ ಸುಪ್ರೀಂ ತರಾಟೆ

ಕೊರೊನಾ ಪರಿಹಾರ ವಿಳಂಬ: ಬಿಹಾರ, ಆಂಧ್ರ ಪ್ರದೇಶ, ಕೇರಳಕ್ಕೆ ಸುಪ್ರೀಂ ತರಾಟೆ

- Advertisement -
- Advertisement -

ಕೋವಿಡ್‌ನಿಂದ ಸಾವನ್ನಪ್ಪಿದವರ ಕುಟುಂಬಗಳಿಗೆ ಪರಿಹಾರವನ್ನು ನೀಡುವಲ್ಲಿ ವಿಫಲವಾದ ಮತ್ತು ಪರಿಹಾರ ಪಾವತಿ ಮಾಡುವಲ್ಲಿ ವಿಳಂಬ ಮಾಡಿದ ರಾಜ್ಯಗಳನ್ನು ಸುಪ್ರೀಂ ಕೋರ್ಟ್ ಬುಧವಾರ ತರಾಟೆಗೆ ತೆಗೆದುಕೊಂಡಿದೆ.

ಆಂಧ್ರ ಪ್ರದೇಶ ಮತ್ತು ಬಿಹಾರ ಸರ್ಕಾರಗಳ ಮುಖ್ಯ ಕಾರ್ಯದರ್ಶಿಗಳು ಮಧ್ಯಾಹ್ನ 2 ಗಂಟೆಯ ವಿಚಾರಣೆಗೆ ಹಾಜರಾಗಬೇಕೆಂದು ನ್ಯಾಯಮೂರ್ತಿ ಎಂಆರ್ ಶಾ ನೋಟಿಸ್ ನೀಡಿದ್ದಾರೆ. ಅವರ್‍ಯಾರು ಕಾನೂನಿಗಿಂತ ಮೇಲಲ್ಲ ಎಂದು ನ್ಯಾಯಮೂರ್ತಿಗಳು ಕಿಡಿ ಕಾರಿದ್ದಾರೆ.

ಜೊತೆಗೆ ಕೇರಳ, ಹರಿಯಾಣ, ಗುಜರಾತ್ ಸೇರಿದಂತೆ ಇತರ ರಾಜ್ಯಗಳ ಸಾವಿನ ಲೆಕ್ಕ ಮತ್ತು ಪರಿಹಾರ ಅರ್ಜಿಗಳ ಲೆಕ್ಕದ ಬಗ್ಗೆ ನ್ಯಾಯಾಲಯ ಪ್ರಶ್ನಿಸಿದ್ದು ರಾಜ್ಯ ಸರ್ಕಾರಗಳ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿದೆ.

ಹಿಂದಿನ ನ್ಯಾಯಾಲಯದ ಆದೇಶದ ನಂತರ ಆಂಧ್ರಪ್ರದೇಶವು ಸುಮಾರು 36,000 ಪರಿಹಾರ ಅರ್ಜಿಗಳನ್ನು ದಾಖಲಿಸಿದೆದೆ, ಅದರಲ್ಲಿ 31,000 ಅರ್ಜಿಗಳು ಪರಿಹಾರಕ್ಕೆ ಅರ್ಹವಾಗಿವೆ. ಆದರೆ, ಇದುವರೆಗೆ 11,000 ಅರ್ಜಿದಾರರಿಗೆ ಮಾತ್ರ ಪರಿಹಾರ ನೀಡಲಾಗಿದೆ ಎಂಬುದನ್ನು ನ್ಯಾಯಾಲಯ ಗಮನಿಸಿದೆ.

ಇದನ್ನೂ ಓದಿ: ಆಸ್ಕರ್‌ ಯೂಟ್ಯೂಬ್‌ ಚಾನೆಲ್‌ನಲ್ಲಿ ’ಜೈ ಭೀಮ್’ ದೃಶ್ಯಗಳು: ಅತ್ಯುನ್ನತ ಗೌರವ ಎಂದ ತಂಡ

“ಪರಿಹಾರವನ್ನು ಪಾವತಿಸಲು ಪದೇ ಪದೇ ನಿರ್ದೇಶನಗಳನ್ನು ನೀಡಲಾಗುತ್ತಿದೆ. ಈ ವಿಷಯದಲ್ಲಿ ಆಂಧ್ರಪ್ರದೇಶದ ಭಾಗದಲ್ಲಿ ಸಂಪೂರ್ಣ ನಿರ್ದಯತೆ ಇದೆ. ಈ ನ್ಯಾಯಾಲಯದ ಆದೇಶಗಳನ್ನು ಅನುಸರಿಸುವಲ್ಲಿ ರಾಜ್ಯವು ಗಂಭೀರವಾಗಿಲ್ಲ ಎಂದು ತೋರುತ್ತಿರುವುದು ಅತ್ಯಂತ ದುರದೃಷ್ಟಕರವಾಗಿದೆ. ಪರಿಹಾರ ನೀಡದಿರುವುದಕ್ಕೆ ಯಾವುದೇ ಸಮರ್ಥನೆ ಇಲ್ಲ” ಎಂದು ನ್ಯಾಯಾಲಯ ಕಿಡಿಕಾರಿದೆ.

“ಅರ್ಹ ಹಕ್ಕುದಾರರಿಗೆ ಪರಿಹಾರ ಪಾವತಿ ಮಾಡದಿರುವುದು ನಮ್ಮ ಹಿಂದಿನ ಆದೇಶಕ್ಕೆ ತೋರಿದ ಅವಿಧೇಯತೆಯಾಗಿದೆ. ಇದಕ್ಕೆ ಮುಖ್ಯ ಕಾರ್ಯದರ್ಶಿ ಜವಾಬ್ದಾರರಾಗಿರುತ್ತಾರೆ. ಮುಖ್ಯ ಕಾರ್ಯದರ್ಶಿಯವರು ವಾಸ್ತವಿಕವಾಗಿ ಮಧ್ಯಾಹ್ನ 2 ಗಂಟೆಗೆ ಹಾಜರಾಗಿ, ಸ್ಪಷ್ಟನೆ ನೀಡಲಿ” ಎಂದು ನ್ಯಾಯಮೂರ್ತಿ ಶಾ ಹೇಳಿದ್ದಾರೆ.

ಇನ್ನು, ಬಿಹಾರವು ತೀರಾ ಕಡಿಮೆ ಕೊರೊನಾ ಸಾವುಗಳ ವರದಿ ಮಾಡಿದೆ ಎಂದ ನ್ಯಾಯಾಲಯ, “ನೀವು ಡೇಟಾವನ್ನು ಸಹ ನವೀಕರಿಸುವುದಿಲ್ಲ. ನಿಮ್ಮ ಪ್ರಕಾರ ಕೇವಲ 12,000 ಜನರು ಸಾವನ್ನಪ್ಪಿದ್ದಾರೆ. ನಮಗೆ ನೈಜ ಸಂಗತಿಗಳು ಬೇಕು. ನಮ್ಮ ಹಿಂದಿನ ಆದೇಶದ ನಂತರ ಇತರ ರಾಜ್ಯಗಳಲ್ಲಿ ಸಂಖ್ಯೆಗಳು ಹೆಚ್ಚಿವೆ. ಬಿಹಾರದಲ್ಲಿ ಕೇವಲ 12,000 ಮಂದಿ ಸತ್ತಿದ್ದಾರೆ ಎಂಬುದನ್ನು ಒಪ್ಪಿಕೊಳ್ಳಲು ನಾವು ಸಿದ್ಧರಿಲ್ಲ” ಎಂದು ತರಾಟೆ ತೆಗೆದುಕೊಂಡಿದ್ದಾರೆ.

ಬಿಹಾರದಲ್ಲಿ ಇದುವರೆಗೆ ಸುಮಾರು ಎಂಟು ಲಕ್ಷ ಕೊರೊನಾ ಪ್ರಕರಣಗಳಿಂದ 12,145 ಕೋವಿಡ್ ಸಂಬಂಧಿತ ಸಾವುಗಳು ವರದಿಯಾಗಿವೆ.

ಇದನ್ನೂ ಓದಿ: ಸಂಸ್ಕೃತ ಕಲಿತು ಮೇಷ್ಟ್ರಾಗಬೇಕಷ್ಟೇ, ಬೇರೆ ಅವಕಾಶಗಳಿಲ್ಲ: ಸಂಸ್ಕೃತ ಪ್ರಾಧ್ಯಾಪಕ ವೇಣುಗೋಪಾಲ್

ಕೊರೊನಾ ಪರಿಹಾರಕ್ಕಾಗಿ ಸ್ವೀಕರಿಸಿದ ಅರ್ಜಿಗಳ ಸಂಖ್ಯೆ ಮತ್ತು ರಾಜ್ಯಗಳಲ್ಲಿ ದಾಖಲಾದ ಸಾವುಗಳ ನಡುವಿನ “ಅತ್ಯಂತ ಗಂಭೀರ” ಅಂತರದ ಬಗ್ಗೆ ಉನ್ನತ ನ್ಯಾಯಾಲಯವು ಕೇರಳ ಸೇರಿದಂತೆ ಇತರ ರಾಜ್ಯಗಳನ್ನು ಸಹ ತರಾಟೆಗೆ ತೆಗೆದುಕೊಂಡಿದೆ.

ಗುಜರಾತ್‌ನಲ್ಲಿ 10,174 ಸಾವುಗಳು ವರದಿಯಾಗಿವೆ. ಆದರೆ ಸುಮಾರು 91,000 ಪರಿಹಾರ ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ನ್ಯಾಯಾಲಯವು ತೋರಿಸಿದೆ.

ಇದಕ್ಕೆ ವ್ಯತಿರಿಕ್ತವಾಗಿ, ಕೇರಳವು 51,000 ಕ್ಕೂ ಹೆಚ್ಚು ಸಾವುಗಳನ್ನು ವರದಿ ಮಾಡಿದೆ. ಆದರೆ 27,000 ಅರ್ಜಿಗಳು ಮಾತ್ರ ಸಲ್ಲಿಕೆಯಾಗಿವೆ. ಹರಿಯಣದಲ್ಲಿ 10,000 ಕ್ಕೂ ಹೆಚ್ಚು ಸಾವುಗಳಾಗಿದ್ದು, 7,360 ಅರ್ಜಿಗಳನ್ನು ಸ್ವೀಕರಿಸಿದೆ ಎಂದು ಹರಿಯಾಣ ನ್ಯಾಯಾಲಯಕ್ಕೆ ತಿಳಿಸಿದೆ.

“ಕೇರಳ ಕೇವಲ 27,000 ಅರ್ಜಿಗಳನ್ನು ಹೇಗೆ ಸ್ವೀಕರಿಸಿದೆ..? ಇತರ ರಾಜ್ಯಗಳಲ್ಲಿ ಸಾವುಗಳಿಗಿಂತ ಹೆಚ್ಚು ಅರ್ಜಿಗಳು ದಾಖಲಾಗಿವೆ. ಇಲ್ಲಿ ಏಕೆ ವಿರುದ್ಧ ಪ್ರವೃತ್ತಿ ಇದೆ..? ನೀವು ಈಗಾಗಲೇ ಮೃತರ ವಿವರಗಳನ್ನು ಹೊಂದಿದ್ದೀರಿ. ನಿಮ್ಮ ಅಧಿಕಾರಿಗಳು ಹೋಗಿ ಪರಿಹಾರದ ಬಗ್ಗೆ ಸಂತ್ರಸ್ತ ಕುಟುಂಬಗಳಿಗೆ ಹೇಳಬೇಕು. ಅವರಿಗೆ ಪರಿಹಾರವನ್ನು ನೀಡಲೇಬೇಕು,” ಎಂದು ನ್ಯಾಯಾಲಯ ಆದೇಶಿಸಿದೆ.

ಅಕ್ಟೋಬರ್‌ನಲ್ಲಿ ನ್ಯಾಯಾಲಯವು ಯಾವುದೇ ರಾಜ್ಯವು ಕೊರೊನಾ ಪರಿಹಾರವನ್ನು ನಿರಾಕರಿಸುವಂತಿಲ್ಲ. ಅರ್ಜಿ ಸಲ್ಲಿಸಿದ 30 ದಿನಗಳಲ್ಲಿ ಹಣವನ್ನು ವಿತರಿಸಬೇಕು ಎಂದು ಆದೇಶಿಸಿತ್ತು.


ಇದನ್ನೂ ಓದಿ: ಕೊರೊನಾ ಸಾಂಕ್ರಾಮಿಕದಿಂದ ಮಾರಾಟದಲ್ಲಿ ದಾಖಲೆ ಬರೆದ ಡೋಲೊ-650

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...