Homeಕೊರೊನಾಕೊರೊನಾ ಪರಿಹಾರ ವಿಳಂಬ: ಬಿಹಾರ, ಆಂಧ್ರ ಪ್ರದೇಶ, ಕೇರಳಕ್ಕೆ ಸುಪ್ರೀಂ ತರಾಟೆ

ಕೊರೊನಾ ಪರಿಹಾರ ವಿಳಂಬ: ಬಿಹಾರ, ಆಂಧ್ರ ಪ್ರದೇಶ, ಕೇರಳಕ್ಕೆ ಸುಪ್ರೀಂ ತರಾಟೆ

- Advertisement -
- Advertisement -

ಕೋವಿಡ್‌ನಿಂದ ಸಾವನ್ನಪ್ಪಿದವರ ಕುಟುಂಬಗಳಿಗೆ ಪರಿಹಾರವನ್ನು ನೀಡುವಲ್ಲಿ ವಿಫಲವಾದ ಮತ್ತು ಪರಿಹಾರ ಪಾವತಿ ಮಾಡುವಲ್ಲಿ ವಿಳಂಬ ಮಾಡಿದ ರಾಜ್ಯಗಳನ್ನು ಸುಪ್ರೀಂ ಕೋರ್ಟ್ ಬುಧವಾರ ತರಾಟೆಗೆ ತೆಗೆದುಕೊಂಡಿದೆ.

ಆಂಧ್ರ ಪ್ರದೇಶ ಮತ್ತು ಬಿಹಾರ ಸರ್ಕಾರಗಳ ಮುಖ್ಯ ಕಾರ್ಯದರ್ಶಿಗಳು ಮಧ್ಯಾಹ್ನ 2 ಗಂಟೆಯ ವಿಚಾರಣೆಗೆ ಹಾಜರಾಗಬೇಕೆಂದು ನ್ಯಾಯಮೂರ್ತಿ ಎಂಆರ್ ಶಾ ನೋಟಿಸ್ ನೀಡಿದ್ದಾರೆ. ಅವರ್‍ಯಾರು ಕಾನೂನಿಗಿಂತ ಮೇಲಲ್ಲ ಎಂದು ನ್ಯಾಯಮೂರ್ತಿಗಳು ಕಿಡಿ ಕಾರಿದ್ದಾರೆ.

ಜೊತೆಗೆ ಕೇರಳ, ಹರಿಯಾಣ, ಗುಜರಾತ್ ಸೇರಿದಂತೆ ಇತರ ರಾಜ್ಯಗಳ ಸಾವಿನ ಲೆಕ್ಕ ಮತ್ತು ಪರಿಹಾರ ಅರ್ಜಿಗಳ ಲೆಕ್ಕದ ಬಗ್ಗೆ ನ್ಯಾಯಾಲಯ ಪ್ರಶ್ನಿಸಿದ್ದು ರಾಜ್ಯ ಸರ್ಕಾರಗಳ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿದೆ.

ಹಿಂದಿನ ನ್ಯಾಯಾಲಯದ ಆದೇಶದ ನಂತರ ಆಂಧ್ರಪ್ರದೇಶವು ಸುಮಾರು 36,000 ಪರಿಹಾರ ಅರ್ಜಿಗಳನ್ನು ದಾಖಲಿಸಿದೆದೆ, ಅದರಲ್ಲಿ 31,000 ಅರ್ಜಿಗಳು ಪರಿಹಾರಕ್ಕೆ ಅರ್ಹವಾಗಿವೆ. ಆದರೆ, ಇದುವರೆಗೆ 11,000 ಅರ್ಜಿದಾರರಿಗೆ ಮಾತ್ರ ಪರಿಹಾರ ನೀಡಲಾಗಿದೆ ಎಂಬುದನ್ನು ನ್ಯಾಯಾಲಯ ಗಮನಿಸಿದೆ.

ಇದನ್ನೂ ಓದಿ: ಆಸ್ಕರ್‌ ಯೂಟ್ಯೂಬ್‌ ಚಾನೆಲ್‌ನಲ್ಲಿ ’ಜೈ ಭೀಮ್’ ದೃಶ್ಯಗಳು: ಅತ್ಯುನ್ನತ ಗೌರವ ಎಂದ ತಂಡ

“ಪರಿಹಾರವನ್ನು ಪಾವತಿಸಲು ಪದೇ ಪದೇ ನಿರ್ದೇಶನಗಳನ್ನು ನೀಡಲಾಗುತ್ತಿದೆ. ಈ ವಿಷಯದಲ್ಲಿ ಆಂಧ್ರಪ್ರದೇಶದ ಭಾಗದಲ್ಲಿ ಸಂಪೂರ್ಣ ನಿರ್ದಯತೆ ಇದೆ. ಈ ನ್ಯಾಯಾಲಯದ ಆದೇಶಗಳನ್ನು ಅನುಸರಿಸುವಲ್ಲಿ ರಾಜ್ಯವು ಗಂಭೀರವಾಗಿಲ್ಲ ಎಂದು ತೋರುತ್ತಿರುವುದು ಅತ್ಯಂತ ದುರದೃಷ್ಟಕರವಾಗಿದೆ. ಪರಿಹಾರ ನೀಡದಿರುವುದಕ್ಕೆ ಯಾವುದೇ ಸಮರ್ಥನೆ ಇಲ್ಲ” ಎಂದು ನ್ಯಾಯಾಲಯ ಕಿಡಿಕಾರಿದೆ.

“ಅರ್ಹ ಹಕ್ಕುದಾರರಿಗೆ ಪರಿಹಾರ ಪಾವತಿ ಮಾಡದಿರುವುದು ನಮ್ಮ ಹಿಂದಿನ ಆದೇಶಕ್ಕೆ ತೋರಿದ ಅವಿಧೇಯತೆಯಾಗಿದೆ. ಇದಕ್ಕೆ ಮುಖ್ಯ ಕಾರ್ಯದರ್ಶಿ ಜವಾಬ್ದಾರರಾಗಿರುತ್ತಾರೆ. ಮುಖ್ಯ ಕಾರ್ಯದರ್ಶಿಯವರು ವಾಸ್ತವಿಕವಾಗಿ ಮಧ್ಯಾಹ್ನ 2 ಗಂಟೆಗೆ ಹಾಜರಾಗಿ, ಸ್ಪಷ್ಟನೆ ನೀಡಲಿ” ಎಂದು ನ್ಯಾಯಮೂರ್ತಿ ಶಾ ಹೇಳಿದ್ದಾರೆ.

ಇನ್ನು, ಬಿಹಾರವು ತೀರಾ ಕಡಿಮೆ ಕೊರೊನಾ ಸಾವುಗಳ ವರದಿ ಮಾಡಿದೆ ಎಂದ ನ್ಯಾಯಾಲಯ, “ನೀವು ಡೇಟಾವನ್ನು ಸಹ ನವೀಕರಿಸುವುದಿಲ್ಲ. ನಿಮ್ಮ ಪ್ರಕಾರ ಕೇವಲ 12,000 ಜನರು ಸಾವನ್ನಪ್ಪಿದ್ದಾರೆ. ನಮಗೆ ನೈಜ ಸಂಗತಿಗಳು ಬೇಕು. ನಮ್ಮ ಹಿಂದಿನ ಆದೇಶದ ನಂತರ ಇತರ ರಾಜ್ಯಗಳಲ್ಲಿ ಸಂಖ್ಯೆಗಳು ಹೆಚ್ಚಿವೆ. ಬಿಹಾರದಲ್ಲಿ ಕೇವಲ 12,000 ಮಂದಿ ಸತ್ತಿದ್ದಾರೆ ಎಂಬುದನ್ನು ಒಪ್ಪಿಕೊಳ್ಳಲು ನಾವು ಸಿದ್ಧರಿಲ್ಲ” ಎಂದು ತರಾಟೆ ತೆಗೆದುಕೊಂಡಿದ್ದಾರೆ.

ಬಿಹಾರದಲ್ಲಿ ಇದುವರೆಗೆ ಸುಮಾರು ಎಂಟು ಲಕ್ಷ ಕೊರೊನಾ ಪ್ರಕರಣಗಳಿಂದ 12,145 ಕೋವಿಡ್ ಸಂಬಂಧಿತ ಸಾವುಗಳು ವರದಿಯಾಗಿವೆ.

ಇದನ್ನೂ ಓದಿ: ಸಂಸ್ಕೃತ ಕಲಿತು ಮೇಷ್ಟ್ರಾಗಬೇಕಷ್ಟೇ, ಬೇರೆ ಅವಕಾಶಗಳಿಲ್ಲ: ಸಂಸ್ಕೃತ ಪ್ರಾಧ್ಯಾಪಕ ವೇಣುಗೋಪಾಲ್

ಕೊರೊನಾ ಪರಿಹಾರಕ್ಕಾಗಿ ಸ್ವೀಕರಿಸಿದ ಅರ್ಜಿಗಳ ಸಂಖ್ಯೆ ಮತ್ತು ರಾಜ್ಯಗಳಲ್ಲಿ ದಾಖಲಾದ ಸಾವುಗಳ ನಡುವಿನ “ಅತ್ಯಂತ ಗಂಭೀರ” ಅಂತರದ ಬಗ್ಗೆ ಉನ್ನತ ನ್ಯಾಯಾಲಯವು ಕೇರಳ ಸೇರಿದಂತೆ ಇತರ ರಾಜ್ಯಗಳನ್ನು ಸಹ ತರಾಟೆಗೆ ತೆಗೆದುಕೊಂಡಿದೆ.

ಗುಜರಾತ್‌ನಲ್ಲಿ 10,174 ಸಾವುಗಳು ವರದಿಯಾಗಿವೆ. ಆದರೆ ಸುಮಾರು 91,000 ಪರಿಹಾರ ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ನ್ಯಾಯಾಲಯವು ತೋರಿಸಿದೆ.

ಇದಕ್ಕೆ ವ್ಯತಿರಿಕ್ತವಾಗಿ, ಕೇರಳವು 51,000 ಕ್ಕೂ ಹೆಚ್ಚು ಸಾವುಗಳನ್ನು ವರದಿ ಮಾಡಿದೆ. ಆದರೆ 27,000 ಅರ್ಜಿಗಳು ಮಾತ್ರ ಸಲ್ಲಿಕೆಯಾಗಿವೆ. ಹರಿಯಣದಲ್ಲಿ 10,000 ಕ್ಕೂ ಹೆಚ್ಚು ಸಾವುಗಳಾಗಿದ್ದು, 7,360 ಅರ್ಜಿಗಳನ್ನು ಸ್ವೀಕರಿಸಿದೆ ಎಂದು ಹರಿಯಾಣ ನ್ಯಾಯಾಲಯಕ್ಕೆ ತಿಳಿಸಿದೆ.

“ಕೇರಳ ಕೇವಲ 27,000 ಅರ್ಜಿಗಳನ್ನು ಹೇಗೆ ಸ್ವೀಕರಿಸಿದೆ..? ಇತರ ರಾಜ್ಯಗಳಲ್ಲಿ ಸಾವುಗಳಿಗಿಂತ ಹೆಚ್ಚು ಅರ್ಜಿಗಳು ದಾಖಲಾಗಿವೆ. ಇಲ್ಲಿ ಏಕೆ ವಿರುದ್ಧ ಪ್ರವೃತ್ತಿ ಇದೆ..? ನೀವು ಈಗಾಗಲೇ ಮೃತರ ವಿವರಗಳನ್ನು ಹೊಂದಿದ್ದೀರಿ. ನಿಮ್ಮ ಅಧಿಕಾರಿಗಳು ಹೋಗಿ ಪರಿಹಾರದ ಬಗ್ಗೆ ಸಂತ್ರಸ್ತ ಕುಟುಂಬಗಳಿಗೆ ಹೇಳಬೇಕು. ಅವರಿಗೆ ಪರಿಹಾರವನ್ನು ನೀಡಲೇಬೇಕು,” ಎಂದು ನ್ಯಾಯಾಲಯ ಆದೇಶಿಸಿದೆ.

ಅಕ್ಟೋಬರ್‌ನಲ್ಲಿ ನ್ಯಾಯಾಲಯವು ಯಾವುದೇ ರಾಜ್ಯವು ಕೊರೊನಾ ಪರಿಹಾರವನ್ನು ನಿರಾಕರಿಸುವಂತಿಲ್ಲ. ಅರ್ಜಿ ಸಲ್ಲಿಸಿದ 30 ದಿನಗಳಲ್ಲಿ ಹಣವನ್ನು ವಿತರಿಸಬೇಕು ಎಂದು ಆದೇಶಿಸಿತ್ತು.


ಇದನ್ನೂ ಓದಿ: ಕೊರೊನಾ ಸಾಂಕ್ರಾಮಿಕದಿಂದ ಮಾರಾಟದಲ್ಲಿ ದಾಖಲೆ ಬರೆದ ಡೋಲೊ-650

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...