Homeಮುಖಪುಟ'ಲವ್ ಜಿಹಾದ್' ಎಂದು ಆರೋಪಿಸಿ ಪ್ರಯಾಣಿಕರಿಬ್ಬರನ್ನು ರೈಲಿನಿಂದ ಹೊರಗೆಳೆದು ಹಲ್ಲೆಗೈದ VHP ದುಷ್ಕರ್ಮಿಗಳ ವಿರುದ್ಧ ಪ್ರಕರಣ...

‘ಲವ್ ಜಿಹಾದ್’ ಎಂದು ಆರೋಪಿಸಿ ಪ್ರಯಾಣಿಕರಿಬ್ಬರನ್ನು ರೈಲಿನಿಂದ ಹೊರಗೆಳೆದು ಹಲ್ಲೆಗೈದ VHP ದುಷ್ಕರ್ಮಿಗಳ ವಿರುದ್ಧ ಪ್ರಕರಣ ದಾಖಲಿಸದ ಪೊಲೀಸರು!

- Advertisement -
- Advertisement -

ಬಿಜೆಪಿ ಬೆಂಬಲಿತ ಸಂಘಟನೆಯಾದ ವಿಎಚ್‌ಪಿಯ ಕಾರ್ಯಕರ್ತರು ಮಧ್ಯಪ್ರದೇಶದ ಉಜ್ಜಯಿನಿ ರೈಲ್ವೇ ನಿಲ್ದಾಣದಲ್ಲಿ ಅಜ್ಮೀರ್‌ಗೆ ತೆರಳುತ್ತಿದ್ದ ರೈಲಿನಿಂದ ಮುಸ್ಲಿಂ ಯುವಕ ಮತ್ತು ಆತನೊಂದಿಗೆ ಪ್ರಯಾಣಿಸುತ್ತಿದ್ದ ಹಿಂದೂ ಯುವತಿಯನ್ನು ರೈಲಿನಿಂದ ಹೊರಗೆ ಎಳೆದು ಹಾಕಿದ್ದರು. ಜನವರಿ 14ರ ಸಂಜೆ ಈ ಘಟನೆ ನಡೆದಿದ್ದು, ಈ ವೇಳೆ ದುಷ್ಕರ್ಮಿಗಳು ಲವ್ ಜಿಹಾದ್ ಎಂದು ಆರೋಪಿಸಿ ಯುವಕನಿಗೆ ಹಲ್ಲೆ ಕೂಡಾ ನಡೆಸಿದ್ದಾರೆ.

ಮೂವತ್ತು ವರ್ಷದ ಆಸಿಫ್ ಶೇಖ್ ತನ್ನ ಕುಟುಂಬದ ಸ್ನೇಹಿತರಾದ 26 ವರ್ಷದ ಸಾಕ್ಷಿ ಜೈನ್ ಅವರೊಂದಿಗೆ ಪ್ರಯಾಣಿಸುತ್ತಿದ್ದಾಗ ವಿಎಚ್‌ಪಿ ದುಷ್ಕರ್ಮಿಗಳು ಅವರನ್ನು ರೈಲಿನಿಂದ ಹೊರಗೆ ಎಳೆದು ಹಾಕಿದ್ದಾರೆ. ಈ ಇಬ್ಬರೂ ಇಂದೋರ್ ನಿವಾಸಿಗಳಾಗಿದ್ದಾರೆ.

ವಿಎಚ್‌ಪಿ ದುಷ್ಕರ್ಮಿಗಳು ಅವರನ್ನು ಬಲವಂತವಾಗಿ ಉಜ್ಜಯಿನಿ ರೈಲ್ವೆ ಪೊಲೀಸ್ ಠಾಣೆಗೆ ವಿಚಾರಣೆಗೆ ಕರೆದೊಯ್ದಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ:ಸಹೋದರ ಸಂಬಂಧಿಗಳ ಪ್ರೇಮ ಪ್ರಕರಣಕ್ಕೆ ‘ಲವ್‌ ಜಿಹಾದ್’ ಪಟ್ಟ ಕಟ್ಟಿದ ಬಿಜೆಪಿ ಪರ ಸಂಘಟನೆ ಮತ್ತು ಮಾಧ್ಯಮಗಳು

ಪೊಲೀಸರು ಅವರ ಹೇಳಿಕೆಗಳನ್ನು ದಾಖಲಿಸಿಕೊಂಡು, ಅವರಿಬ್ಬರೂ ಕುಟುಂಬ ಸ್ನೇಹಿತರು ಎಂದು ಪತ್ತೆ ಹಚ್ಚಿದ್ದಾರೆ. ಇದರ ನಂತರ ಅವರನ್ನು ಹೋಗಲು ಬಿಟ್ಟಿದ್ದಾರೆ. ಇಬ್ಬರು ಪ್ರಯಾಣಿಕರು ಕೂಡಾ ದೂರುಗಳನ್ನು ದಾಖಲಿಸಲು ನಿರಾಕರಿಸಿದ್ದರು ಮತ್ತು ರೈಲ್ವೆ ಪೊಲೀಸರು ಕೂಡಾ VHP ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳಲಿಲ್ಲ.

“ಆಸಿಫ್‌ ಇಂದೋರ್‌ನಲ್ಲಿ ಸ್ಟಿಕ್ಕರ್ ಅಂಗಡಿಯನ್ನು ನಡೆಸುತ್ತಿದ್ದಾರೆ ಮತ್ತು ವಿವಾಹಿತರಾಗಿದ್ದಾರೆ. ಸಾಕ್ಷಿ ಜೈನ್ ಕೂಡಾ ವಿವಾಹಿತೆಯಾಗಿದ್ದು, ಇಂದೋರ್‌ನ ಖಾಸಗಿ ಶಾಲೆಯ ಶಿಕ್ಷಕಿಯಾಗಿದ್ದಾರೆ. ಅವರಿಬ್ಬರೂ ಫ್ಯಾಮಿಲಿ ಸ್ನೇಹಿತರಾಗಿದ್ದು, ಪುಷ್ಕರ್‌‌ ಮೇಳದಲ್ಲಿ ಪಾಲ್ಗೊಳ್ಳಲು ಅಜ್ಮೀರ್‌ಗೆ ತೆರಳುತ್ತಿದ್ದರು” ಎಂದು ಉಜ್ಜಯಿನಿ ರೈಲ್ವೆ ಪೊಲೀಸರು ಹೇಳಿದ್ದಾರೆ.

ಈ ಘಟನೆಯ ವೀಡಿಯೊವನ್ನು ಬಲಪಂಥೀಯ ಹ್ಯಾಂಡಲ್‌‌ಗಳು ತಪ್ಪಾಗಿ ಬಿಂಬಿಸಿ ವೈರಲ್ ಮಾಡಿದ ನಂತರ ಈ ವಿಷಯವು ಜನವರಿ 18 ರಂದು ಬೆಳಕಿಗೆ ಬಂದಿತ್ತು.

ಇದನ್ನೂ ಓದಿ:ಗುಂಪು ಹಲ್ಲೆ ಸರಣಿ ಮುಂದುವರಿಕೆ – ‘ಲವ್‌ ಜಿಹಾದ್‌’ ಆರೋಪದಲ್ಲಿ ಅಪ್ರಾಪ್ತ ಹಿಂದೂ ಬಾಲಕನಿಗೆ ಥಳಿತ

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ, ವಿಎಚ್‌ಪಿ ಕಾರ್ಯಕರ್ತರು ಅಜ್ಮೀರ್‌ಗೆ ಹೋಗುವ ರೈಲಿನ ಎಸಿ ಕೋಚ್‌ನಿಂದ ಪೊಲೀಸ್ ಠಾಣೆಗೆ ಹೋಗುವ ದಾರಿಯಲ್ಲಿ, ಆಸಿಫ್‌ ಶೇಖ್‌ನನ್ನು ಎಳೆದುಕೊಂಡು ಹೋಗುತ್ತಿರುವಾಗ ಥಳಿಸುತ್ತಿರುವುದನ್ನು ಕಾಣಬಹುದು. ಈ ವೇಳೆ ಅವರ ಲಗೇಜ್‌ಗಳನ್ನು ಹಿಡಿದ ಮತ್ತಿಬ್ಬರು ಕಾರ್ಯಕರ್ತರು ಸಾಕ್ಷಿ ಜೈನ್ ಅವರನ್ನು ಹಿಂಬಾಲಿಸಿದ್ದಾರೆ.

ಘಟನೆಯ ಮತ್ತೊಂದು ವೀಡಿಯೊದಲ್ಲಿ, ಯುವತಿಯು ತನ್ನನ್ನು ಚಿತ್ರೀಕರಣ ಮಾಡುವುದನ್ನು ನಿಲ್ಲಿಸುವಂತೆ ಪೊಲೀಸ್ ಠಾಣೆಯೊಳಗೆ ವಿಎಚ್‌ಪಿ ದುಷ್ಕರ್ಮಿಗಳಲ್ಲಿ ಕೇಳಿಕೊಂಡಿದ್ದಾರೆ.

ಈ ವಿಡಿಯೊದಲ್ಲಿ ಅವರು, “ನೀವು ನಮ್ಮನ್ನು ತಪ್ಪಾಗಿ ತಿಳಿದುಕೊಂಡಿದ್ದೀರಿ, ಇದರಿಂದ ನನ್ನ ಜೀವನ ನಾಶವಾಗುತ್ತದೆ. ನನ್ನನ್ನು ವಿಡಿಯೊ ಮಾಡುತ್ತಿದ್ದೀರಿ, ನನ್ನ ಮಾತು ಕೇಳಿ… ನಾನು ವಯಸ್ಕಳಿದ್ದೇನೆ, ನಾನು ಏನು ಮಾಡುತ್ತಿದ್ದೇನೆಂದು ನನಗೆ ತಿಳಿದಿದೆ…ನಾನು ಶಿಕ್ಷಕಿ…” ಎಂದು ಹೇಳುತ್ತಾರೆ. ಯುವತಿಯು ಕಿರುಚುತ್ತಿರುವುದನ್ನು ಕೇಳಿಸಿಕೊಂಡರೂ ಸಹ, ಪೊಲೀಸರು ಅವರನ್ನು ನೋಡುತ್ತಾ ಕುಳಿತಿರುವುದನ್ನು ಕಾಣಬಹುದು.

ದಿ ವೈರ್ ಜೊತೆ ಮಾತನಾಡಿದ ಉಜ್ಜಯಿನಿಯ ಜಿಆರ್‌ಪಿ ಇನ್ಸ್‌ಪೆಕ್ಟರ್ ಆರ್.ಎಸ್. ಮಹಾಜನ್‌, ‘‘ಲವ್ ಜಿಹಾದ್ ಎಂದು ಶಂಕಿಸಿ ಜನವರಿ 14 ರಂದು ವಿಎಚ್‌ಪಿ ಕಾರ್ಯಕರ್ತರು ಇಬ್ಬರು ಪ್ರಯಾಣಿಕರನ್ನು ಕರೆತಂದರು, ಅವರನ್ನು ವಿಚಾರಿಸಿದಾಗ ಅದು ಸುಳ್ಳು ಎಂದು ತಿಳಿದುಬಂದಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಲವ್‌ ಜಿಹಾದ್‌, ಗೋ ಹತ್ಯೆ ನಿಷೇಧದಂತಹ ನಾಟಕಗಳು ಬಿಜೆಪಿಯನ್ನು ಗೆಲ್ಲಿಸುವುದಿಲ್ಲ- ‌ RLD ಮುಖ್ಯಸ್ಥ ಜಯಂತ್‌ ಚೌಧರಿ

ಅವರಿಬ್ಬರು ಒಟ್ಟಿಗೆ ಪ್ರಯಾಣಿಸುತ್ತಿರುವುದು ಅವರ ಕುಟುಂಬಗಳಿಗೆ ತಿಳಿದಿದೆ ಎಂದು ಅವರು ಹೇಳಿದ್ದಾರೆ.

ಅದಾಗಿಯು, ಅಸಿಫ್‌ ಮತ್ತು ಸಾಕ್ಷಿ ಅವರ ಪೋಷಕರು 65 ಕಿಮೀ ದೂರದ ಇಂದೋರ್‌ನಿಂದ ಉಜ್ಜಯಿನಿಗೆ ಬರುವವರೆಗೆ ಪೊಲೀಸ್ ಠಾಣೆಯಲ್ಲಿ ಅವರನ್ನು ಕಾಯುವಂತೆ ಮಾಡಲಾಯಿತು ಎಂದು ವೈರ್ ಉಲ್ಲೇಖಿಸಿದೆ.

ಪ್ರಯಾಣಿಕರ ಸುರಕ್ಷತೆಯ ಬಗ್ಗೆ ಮತ್ತು ಪ್ರಯಾಣಿಕರನ್ನು ಎಳೆದೊಯ್ದು ಹಲ್ಲೆ ಮಾಡಿದ ವಿಎಚ್‌ಪಿ ದುಷ್ಕರ್ಮಿಗಳ ವಿರುದ್ಧ ಯಾಕೆ ಕ್ರಮ ಕೈಗೊಂಡಿಲ್ಲ ಎಂಬ ವೈರ್‌ ಪ್ರಶ್ನೆಗೆ ಉತ್ತರಿಸಿದ ಪೊಲೀಸ್ ಅಧೀಕ್ಷಕ ನಿವೇದಿತಾ ಗುಪ್ತಾ, “ಉಜ್ಜಯಿನಿ ಘಟನೆಯಲ್ಲಿ ಪ್ರಯಾಣಿಕರೊಬ್ಬರನ್ನು ಅನುಚಿತವಾಗಿ ನಡೆಸಿಕೊಂಡ ಘಟನೆ ನಮಗೆ ತಿಳಿದು ಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆದ ನಂತರವೇ ವಿಎಚ್‌ಪಿಯವರಿಗೆ ಲವ್ ಜಿಹಾದ್ ಶಂಕೆ ವ್ಯಕ್ತವಾಗಿದೆ. ಪ್ರಶ್ನಿಸಿದಾಗ, ಇಬ್ಬರೂ ಪ್ರಯಾಣಿಕರು ಒಂದೇ ದಿನದಲ್ಲಿ ಬಿಡುಗಡೆಗೊಂಡು ಅಲ್ಲಿಂದ ತೆರಳಿದ್ದಾರೆ ಎಂದು ನಾವು ಕಂಡುಕೊಂಡಿದ್ದೇವೆ. ಆದರೆ ಅವರು ವಿಎಚ್‌ಪಿ ಕಾರ್ಯಕರ್ತರ ವಿರುದ್ಧ ಯಾವುದೇ ದೂರು ನೀಡಿಲ್ಲ” ಎಂದು ಹೇಳಿದ್ದಾರೆ.

ಈ ಮಧ್ಯೆ, ವಿಎಚ್‌ಪಿಯ ಮಾಲ್ವಾ ಪ್ರಾಂತ್‌ನ ಪ್ರಚಾರ್ ಪ್ರಮುಖ್ ಕುಂದನ್ ಚಂದ್ರಾಕರ್, “ಮುಸ್ಲಿಂ ವ್ಯಕ್ತಿಯೊಬ್ಬ ಹಿಂದೂ ಯುವತಿಯನ್ನು ಆಮಿಷವೊಡ್ಡುತ್ತಿದ್ದಾನೆ ಮತ್ತು ಮದುವೆಗಾಗಿ ಅಜ್ಮೀರ್‌ಗೆ ಕರೆದುಕೊಂಡು ಹೋಗುತ್ತಿದ್ದಾನೆ ಎಂದು ನಮ್ಮ ಮೂಲಗಳು ತಿಳಿಸಿವೆ. ‘ ಲವ್ ಜಿಹಾದ್ ’ ಎಂದು ಶಂಕಿಸಿ ನಮ್ಮ ಕಾರ್ಯಕರ್ತರು ಅವರನ್ನು ಹಿಡಿದು ಜಿಆರ್‌ಪಿ ಪೊಲೀಸ್ ಠಾಣೆಗೆ ಕರೆದೊಯ್ದು ಬಿಟ್ಟರು. ನಂತರ ಪೊಲೀಸರು ಏನು ಮಾಡಿದರು ಎಂಬುದು ನಮಗೆ ತಿಳಿದಿಲ್ಲ” ಎಂದು ತಿಳಿಸಿದ್ದಾರೆ.

ಯುವತಿಯು ಮುಸ್ಲಿಂ ಯುವಕನೊಂದಿಗೆ ಆಕರ್ಷಿತಳಾಗಿದ್ದಾಳೆ ಎಂದು ಅವರಿಗೆ ಹೇಗೆ ತಿಳಿಯಿತು ಎಂಬ ಪ್ರಶ್ನೆಗೆ, “ನಮ್ಮ ಹಿಂದೂ ಹೆಣ್ಣುಮಕ್ಕಳು ‘ಲವ್ ಜಿಹಾದ್’ ಮಾಡುವ ಮುಸ್ಲಿಂ ಪುರುಷರಿಂದ ಶೋಷಣೆಗೆ ಒಳಗಾಗುತ್ತಿರುವ ಬಗ್ಗೆ ಜನರು ಕಾಳಜಿ ವಹಿಸುವ ಸಮಾಜದಲ್ಲಿ ನಾವು ವಾಸಿಸುತ್ತಿದ್ದೇವೆ. ನಮ್ಮ ಸಹೋದರಿಯರ ಮೇಲಿನ ಕಾಳಜಿಯಿಂದ ನಮ್ಮ ಕಾರ್ಯಕರ್ತರು ಮಧ್ಯಪ್ರವೇಶಿಸಿದ್ದಾರೆ” ಎಂದು ಚಂದ್ರಾಕರ್‌‌ ತಿಳಿಸಿದ್ದಾರೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ವೈರಲ್ ಚಿತ್ರದಲ್ಲಿರುವ ಮಹಿಳೆ ’ಲವ್‌ ಜಿಹಾದ್’ ಪ್ರಕರಣದಲ್ಲಿ ಹತ್ಯೆ ಆಗಿದ್ದು ನಿಜವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...