Homeಕರ್ನಾಟಕದಡಾರ-ರುಬೆಲ್ಲಾ ಲಸಿಕೆ ಪಡೆದ ಮೂರು ಶಿಶುಗಳ ಸಾವು ಪ್ರಕರಣ: ಸಿಎಂಗೆ ವರದಿ ಸಲ್ಲಿಕೆ

ದಡಾರ-ರುಬೆಲ್ಲಾ ಲಸಿಕೆ ಪಡೆದ ಮೂರು ಶಿಶುಗಳ ಸಾವು ಪ್ರಕರಣ: ಸಿಎಂಗೆ ವರದಿ ಸಲ್ಲಿಕೆ

- Advertisement -
- Advertisement -

ಜಿಲ್ಲೆಯಲ್ಲಿ ದಡಾರ-ರುಬೆಲ್ಲಾ ಲಸಿಕೆ ಪಡೆದು ಮೂರು ಶಿಶುಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖಾ ವರದಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಿರುವುದಾಗಿ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಬುಧವಾರ ತಿಳಿಸಿದ್ದಾರೆ. ಶಿಶುಗಳನ್ನು ಕಳೆದುಕೊಂಡ ಕುಟುಂಬಗಳಿಗೆ ಪರಿಹಾರ ನೀಡುವ ಕುರಿತು ಚರ್ಚೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಳಗಾವಿ ಲಸಿಕೆ ನಿಗಾ ಅಧಿಕಾರಿ ಈಶ್ವರ ಗಡದ್ ಅವರು ವರದಿಯನ್ನು ಮುಖ್ಯಮಂತ್ರಿಗಳಿಗೆ ಕಳುಹಿಸಿದ್ದಾರೆ. ವರದಿಯ ವಿವರಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಮತ್ತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಹಿರೇಮಠ ಹೇಳಿದ್ದಾರೆ.

ಇದನ್ನೂ ಓದಿ:ಬೆಳಗಾವಿಯಲ್ಲಿ 3 ಮಕ್ಕಳ ಸಾವು ಪ್ರಕರಣ: ಇಬ್ಬರು ಅಮಾನತು

“ತಯಾರಿಕೆ ಘಟಕ ಹಾಗೂ ಪ್ರಯೋಗಾಲಯಗಳಿಗೆ ಬಾಟಲಿಗಳನ್ನು ಕಳುಹಿಸಲಾಗಿದ್ದು, ಅವರು ವರದಿ ನೀಡಿದ ನಂತರ ಹೆಚ್ಚಿನ ಸ್ಪಷ್ಟತೆ ದೊರೆಯಲಿದೆ. ಚುಚ್ಚುಮದ್ದಿನ ಕಾರಣದಿಂದ ಉಂಟಾದ ಸಾವುಗಳಿಗೆ ಪರಿಹಾರ ಒದಗಿಸುವ ಪದ್ದತಿ ಇಲ್ಲ, ಆದರೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯ ಅಡಿಯಲ್ಲಿ ಕೆಲವು ಮಾನದಂಡಗಳನ್ನು ಅನುಸರಿಸಿ ಪರಿಹಾರ ನೀಡಲಾಗುತ್ತದೆ. ಇದಕ್ಕಾಗಿ ಜಂಟಿ ಕಾರ್ಯದರ್ಶಿಗೆ ಶಿಫಾರಸು ಮಾಡುತ್ತೇವೆ” ಎಂದು ಅವರು ಹೇಳಿದ್ದಾರೆ.

ಫಾರ್ಮಾಸಿಸ್ಟ್‌ನಿಂದ ಲಸಿಕೆ ಬಾಟಲಿಗಳನ್ನು ಪಡೆದ ನರ್ಸ್ ಎಲ್ಲಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಆಹಾರ ಪದಾರ್ಥಗಳೊಂದಿಗೆ ಹೋಟೆಲ್‌ನ ಫ್ರಿಜ್‌ನಲ್ಲಿ ಇರಿಸಿದ್ದರು ಎಂದು ಮೂರು ಶಿಶುಗಳ ಸಾವಿನ ಬಗ್ಗೆ ನಡೆದ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ವರದಿಯಾಗಿದೆ. ಇದರಿಂದಾಗಿ ಬ್ಯಾಕ್ಟೀರಿಯಾದ ಸೋಂಕಿಗೆ ಕಾರಣವಾಗಿ ಮತ್ತು ಈ ಲಸಿಕೆಗಳನ್ನು ಪಡೆದ ಮೂರು ಶಿಶುಗಳು ಅಸೆಪ್ಟಿಕ್ ಶಾಕ್ ಸಿಂಡ್ರೋಮ್‌ನಿಂದ ಸಾವನ್ನಪ್ಪಿದ್ದವು ಎಂದು ನ್ಯಾಶನಲ್ ಹೆರಾಲ್ಡ್‌ ವರದಿ ಮಾಡಿದೆ.

ಜನವರಿ 12 ರಂದು ಬೋಚಗಾಲ ಕ್ಯಾಂಪ್‌ನಲ್ಲಿ ಲಸಿಕೆ ಹಾಕಿದ ನಂತರ ಎರಡು ಸಾವುಗಳು ವರದಿಯಾಗಿದ್ದು, ಜನವರಿ 11 ರಂದು ರಾಮದುರ್ಗ ತಾಲೂಕಿನ ಮಲ್ಲಾಪುರ ಕ್ಯಾಂಪ್‌ನಲ್ಲಿ ಒಂದು ಸಾವು ವರದಿಯಾಗಿದೆ.

ಇದನ್ನೂ ಓದಿ:ಹಸಿವಿನಿಂದ ಮಕ್ಕಳ ಸಾವು: ನಾವು ‘ನಾರ್ಮಲ್’ ಆಗಿರಬಹುದೇ?

ಬೋಚಗಾಲದಲ್ಲಿ 17 ಶಿಶುಗಳಿಗೆ ಲಸಿಕೆ ಹಾಕಲಾಗಿದ್ದು, ಮಲ್ಲಾಪುರದಲ್ಲಿ ನಾಲ್ಕು ಶಿಶುಗಳಿಗೆ ಲಸಿಕೆ ಹಾಕಲಾಗಿದೆ. ಒಂದು 18 ತಿಂಗಳ ಮಗು ಮತ್ತು ಇನ್ನೊಂದು 12 ತಿಂಗಳ ಮಗು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

ರಾಜ್ಯ ಆರೋಗ್ಯ ಸಚಿವ ಕೆ.ಸುಧಾಕರ್ ಅವರು ನರ್ಸ್ ಮತ್ತು ಫಾರ್ಮಾಸಿಸ್ಟ್‌ನನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಶಿಷ್ಟಾಚಾರದ ಪ್ರಕಾರ ಲಸಿಕೆ ಬಾಟಲಿಗಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರದಿಂದ (ಪಿಎಚ್‌ಸಿ) ಲಸಿಕಾ ಶಿಬಿರಗಳಿಗೆ ತೆಗೆದುಕೊಂಡು ಹೋಗಬೇಕು ಮತ್ತು ಪಿಎಚ್‌ಸಿಗೆ ಹಿಂತಿರುಗಿಸಬೇಕು ಎಂದು ಈಶ್ವರ ಗಡಾದ್ ಹೇಳಿದ್ದಾರೆ.

ಇದನ್ನೂ ಓದಿ:ಉತ್ತರಾಖಂಡ: ಶಾಲೆಯಲ್ಲಿ ದಲಿತ ಮಹಿಳೆ ಅಡಿಗೆ ಮಾಡಿದ ಕಾರಣಕ್ಕೆ ಊಟ ನಿರಾಕರಿಸಿದ ಸವರ್ಣಿಯ ಮಕ್ಕಳು

“ನರ್ಸ್ ಲಸಿಕೆ ಬಾಟಲಿಗಳನ್ನು ತೆಗೆದುಕೊಂಡು ಹೋಗಿ ಹೋಟೆಲ್ ಫ್ರಿಡ್ಜ್‌ನಲ್ಲಿ ಇಡಬಾರದಿತ್ತು. ಅವರು ಪಡೆದ ಎಲ್ಲಾ ಬಾಟಲುಗಳನ್ನು ಹಿಂದಕ್ಕೆ ತೆಗೆದುಕೊಂಡು ಪರೀಕ್ಷೆಗೆ ಕಳುಹಿಸಲಾಗಿದೆ. ಇದು ದುರದೃಷ್ಟಕರ ಘಟನೆಯಾಗಿದೆ. ಆರೋಗ್ಯ ಇಲಾಖೆ ಇದರ ಬಗ್ಗೆ ಕಾಳಜಿ ವಹಿಸಿದ್ದು, ಪೋಷಕರು ತಮ್ಮ ಶಿಶುಗಳಿಗೆ ಲಸಿಕೆ ಹಾಕಲು ಮುಂದೆ ಬರಬೇಕು” ಎಂದು ಅವರು ಹೇಳಿದ್ದಾರೆ.

ಮೊದಲ ಡೋಸ್‌ ನೀಡಿದ ಕೆಲವೇ ಗಂಟೆಗಳ ನಂತರ ವಾಕರಿಕೆ ಮತ್ತು ವಾಂತಿ ಕಾಣಿಸಿಕೊಂಡು ಅದೇ ದಿನ ಪವಿತ್ರಾ ಹಲಗೂರ್ ಎಂಬ 13 ತಿಂಗಳ ಹೆಣ್ಣು ಮಗು ಸಾವನ್ನಪ್ಪಿದೆ.

ಉಮೇಶ ಕರಗುಂಡಿ ಎಂಬ 14 ತಿಂಗಳ ಮಗು, ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಸ್ಥಳಾಂತರಗೊಂಡರೂ, ಐಸಿಯುನಲ್ಲಿ ಜನವರಿ 15 ರಂದು ಸಾವನ್ನಪ್ಪಿದೆ. ಮಲ್ಲಾಪುರ ಕ್ಯಾಂಪ್‌ನಲ್ಲಿ ಲಸಿಕೆ ಹಾಕಿಸಿಕೊಂಡ 15 ತಿಂಗಳ ಮಗು ಚೇತನಾ ಕೂಡ ಜನವರಿ 15ರಂದು ಮೃತಪಟ್ಟಿದೆ.

15 ತಿಂಗಳ ಕೆಳಗಿನ ಮಕ್ಕಳಿಗೆ ದಡಾರ-ರುಬೆಲ್ಲಾ ವಿರುದ್ಧ ಮೊದಲ ಲಸಿಕೆ ಡೋಸ್ ನೀಡಲಾಗುತ್ತದೆ ಮತ್ತು 15 ತಿಂಗಳ ಮೇಲ್ಪಟ್ಟವರಿಗೆ ಎರಡನೇ ಲಸಿಕೆ ಡೋಸ್ ನೀಡಲಾಗುತ್ತದೆ.

ಇದನ್ನೂ ಓದಿ:2020ರಲ್ಲಿ ದಿನವೊಂದಕ್ಕೆ ಸರಾಸರಿ 31 ಅಪ್ರಾಪ್ತ ಮಕ್ಕಳು ಆತ್ಮಹತ್ಯೆ: ಒಕ್ಕೂಟ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...