Homeಮುಖಪುಟಯುಪಿ ಚುನಾವಣೆ: ಮಹಿಳೆಯರಿಗೆ ಕಾಂಗ್ರೆಸ್‌ ಆದ್ಯತೆ; ಉಳಿದ ಪಕ್ಷಗಳ ಕಥೆಯೇನು..?

ಯುಪಿ ಚುನಾವಣೆ: ಮಹಿಳೆಯರಿಗೆ ಕಾಂಗ್ರೆಸ್‌ ಆದ್ಯತೆ; ಉಳಿದ ಪಕ್ಷಗಳ ಕಥೆಯೇನು..?

- Advertisement -
- Advertisement -

ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯು ಬಿಜೆಪಿ ನೇತೃತ್ವದ ಎನ್‌ಡಿಎ, ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷ, ಕಾಂಗ್ರೆಸ್ ಪಕ್ಷಗಳ ನಡುವಿನ ಸ್ಪರ್ಧೆಯಾಗಿದೆ. ಮಾಯಾವತಿಯವರ ಬಿಎಸ್‌ಪಿ ಪಕ್ಷ ಈ ಬಾರಿ ಇದ್ದು ಇಲ್ಲದಂತಾಗಿದೆ.

ಬಿಜೆಪಿಯ ಹಲವು ಹಾಲಿ ಶಾಸಕ, ಸಚಿವರು ಬಿಜೆಪಿ ತೊರೆದು ಸಮಾಜವಾದಿ ಪಕ್ಷದೆಡೆಗೆ ಮುಖ ಮಾಡಿದ್ದಾರೆ. ಇದು ಸಮಾಜವಾದಿ ಪಕ್ಷವು ಯುಪಿಯಲ್ಲಿ ಮುಂದಿನ ಸರ್ಕಾರವನ್ನು ರಚಿಸುವ ಸಾಧ್ಯತೆಯನ್ನು ಹುಟ್ಟುಹಾಕಿದೆ ಎಂಬ ಅಭಿಪ್ರಾಯವೂ ವ್ಯಕ್ತವಾಗುತ್ತಿದೆ.

ಒಂದು ಕಾಲದಲ್ಲಿ ಪ್ರಬಲ ಪಕ್ಷವಾಗಿದ್ದ ಕಾಂಗ್ರೆಸ್‌ ಈಗ ಉತ್ತರ ಪ್ರದೇಶದಲ್ಲಿ ತನ್ನ ಪ್ರಬಲ್ಯವನ್ನು ಕಳೆದುಕೊಂಡಿದೆ. ಈ ಬಾರಿಯ ಚುನಾವಣೆಯಲ್ಲಿ ತನ್ನ ನೆಲೆಯನ್ನು ಮರುಸೃಷ್ಟಿಸಿಕೊಳ್ಳಲು ಕಾಂಗ್ರೆಸ್‌ ಭಾರೀ ಪ್ರಯತ್ನ ಮಾಡುತ್ತಿದೆ. ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ಯುಪಿ ಚುನಾವಣೆಯನ್ನು ಎದುರಿಸುತ್ತಿರುವ ಕಾಂಗ್ರೆಸ್‌, ಮಹಿಳೆಯರಿಗೆ ಹೆಚ್ಚಿನ ಆದ್ಯತೆಯನ್ನು ನೀಡುತ್ತಿದೆ.

ಪ್ರಬಲ ಮಹಿಳಾ ರಾಜಕಾರಣಿಗಳು ದೇಶಕ್ಕೆ ಹೊಸದೇನಲ್ಲ. ಪ್ರಿಯಾಂಕಾ ಗಾಂಧಿ ಅವರ ಅಜ್ಜಿ ಮತ್ತು ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರು ದಶಕಗಳ ಕಾಲ ದೇಶದ ರಾಜಕೀಯದ ಮೇಲೆ ಪ್ರಭಾವ ಬೀರಿದ್ದಾರೆ.

ಹೀಗಾಗಿ, ಕೇಂದ್ರ ಸರ್ಕಾರವು ಜಾರಿಗೊಳಿಸಲು ಮುಂದಾಗಿದ್ದ ಸಿಎಎ ಕಾನೂನಿನ ವಿರುದ್ದ ಪ್ರತಿಭಟಿಸಿ ಜೈಲು ಸೇರಿದ್ದ ನಟಿ ಸದಾಫ್ ಜಾಫರ್, ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಾಯಿ ಹಾಗೂ ಸೌಂದರ್ಯ ಸ್ಪರ್ಧೆಯ ವಿಜೇತೆ ಸೇರಿದಂತೆ ಯುಪಿಯ ಒಟ್ಟು ಸೀಟುಗಳ ಪೈಕಿ ಶೇ.40 ರಷ್ಟು ಸ್ಥಾನಗಳಲ್ಲಿ ಮಹಿಳಾ ಅಭ್ಯರ್ಥಿಗಳನ್ನು ಕಾಂಗ್ರೆಸ್‌ ಕಣಕ್ಕಿಳಿಸುತ್ತಿದೆ.

ಇದನ್ನೂ ಓದಿ: ಯುಪಿ ಚುನಾವಣೆ: ಹೋರಾಟಗಾರರು, ಸಂತ್ರಸ್ತರು ಸೇರಿ 40% ಮಹಿಳೆಯರಿಗೆ ಕಾಂಗ್ರೆಸ್ ಟಿಕೆಟ್

ಎಲ್ಲಾ ರಾಜಕೀಯ ಪಕ್ಷಗಳು ಮಹಿಳಾ ಮತದಾರರನ್ನು ನೆಚ್ಚಿಕೊಂಡಿದ್ದರೂ, ಹೆಚ್ಚಿನ ಸಂಖ್ಯೆಯ ಮಹಿಳಾ ಶಾಸಕರನ್ನು ಯಾವುದೇ ರಾಜ್ಯವೂ ಇದೂವರೆಗೂ ಹೊಂದಲು ಸಾಧ್ಯವಾಗಿಲ್ಲ. ಇಂಟರ್ ಪಾರ್ಲಿಮೆಂಟರಿ ಯೂನಿಯನ್ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ಲೋಕಸಭೆಯಲ್ಲಿ ಮಹಿಳೆಯರ ಶೇಕಡಾವಾರು ಪ್ರಮಾಣದಲ್ಲಿ ಭಾರತವು ಕಳೆದ ವರ್ಷ 193 ರಾಷ್ಟ್ರಗಳ ಪೈಕಿ 147 ನೇ ಸ್ಥಾನದಲ್ಲಿದೆ.

ರಾಜ್ಯದಲ್ಲಿ ಬಿಜೆಪಿ ಮತ್ತು ಅದರ ಪ್ರಮುಖ ಪ್ರತಿಸ್ಪರ್ಧಿ ಸಮಾಜವಾದಿ ಪಕ್ಷಗಳು ಕಾಂಗ್ರೆಸ್‌ ಅನ್ನು ಗಂಭೀರ ಎದುರಾಳಿಯಾಗಿ ಪರಿಗಣಿಸುತ್ತವೆಯೇ ಎಂದು ನೋಡಬೇಕಾಗಿದೆ. ಇಲ್ಲಿಯವರೆಗೆ ಬಿಜೆಪಿ ತನ್ನ 107 ಅಭ್ಯರ್ಥಿಗಳ ಪೈಕಿ 10 ಮಹಿಳೆಯರನ್ನು ಕಣಕ್ಕಿಳಿಸಿದ್ದರೆ, ಸಮಾಜವಾದಿ ಪಕ್ಷವು ಪ್ರಾದೇಶಿಕ ಪಕ್ಷದೊಂದಿಗಿನ ಮೈತ್ರಿಯಿಂದ ಒಬ್ಬ ಮಹಿಳಾ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.

“ಕಾಂಗ್ರೆಸ್ ಪಕ್ಷವು ಸಂಘಟನಾ ರಚನೆಯನ್ನು ಹೊಂದಿಲ್ಲ ಮತ್ತು ತಳಮಟ್ಟದಲ್ಲಿ ಕಾರ್ಯಕರ್ತರನ್ನು ಹೊಂದಿಲ್ಲ ಎಂಬ ಅಂಶವನ್ನು ತೆಗೆದುಹಾಕಲು ಸಾಧ್ಯವಿಲ್ಲ. ಪಕ್ಷವು ಮಹಿಳೆಯರಿಗೆ ಹೆಚ್ಚಿನ ಆಧ್ಯತೆ ನೀಡುತ್ತಿರುವುದು ಪಕ್ಷವನ್ನು ಪುನರುಜ್ಜೀವನಗೊಳಿಸಲು ಸಹಾಯ ಮಾಡುತ್ತದೆ ಎಂಬುದು ಪ್ರಶ್ನಾರ್ಹವಾಗಿದೆ” ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ರಾಜಕೀಯ ಅಧ್ಯಯನ ಕೇಂದ್ರದ ಪ್ರಾಧ್ಯಾಪಕಿ ಸುಧಾ ಪೈ ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ ಚುನಾವಣೆ: ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಾಯಿಗೆ ಕಾಂಗ್ರೆಸ್‌ನಿಂದ ಟಿಕೆಟ್

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ನ ‘ಲಡ್ಕಿ ಹು, ಲಾಡ್ ಸಕ್ತಿ ಹೂ’ (ನಾನು ಹುಡುಗಿ, ನಾನು ಹೋರಾಡಬಲ್ಲೆ)’ ಪ್ರಚಾರದ ಮುಖವಾಗಿರುವ ಪ್ರಿಯಾಂಕಾ ಮೌರ್ಯ ಅವರಿಗೆ ಕಾಂಗ್ರೆಸ್‌ನಿಂದ ಟಿಕೆಟ್‌ ನೀಡಲು ನಿರಾಕರಿಸಲಾಗಿದೆ ಎಂದು ಹೇಳಲಾಗಿದ್ದು, ಅವರು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಅಲ್ಲದೆ, ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಅವರ ಸೊಸೆ ಅಪರ್ಣಾ ಯಾದವ್ ಅವರು ಬಿಜೆಪಿಗೆ ಸೇರಿದ್ದಾರೆ. ಹಲವು ಬಿಜೆಪಿ ನಾಯಕರು, ಶಾಸಕ, ಸಚಿವರು ಬಿಜೆಪಿ ತೊರೆದು ಸಮಾಜವಾದಿ ಪಕ್ಷವನ್ನು ಸೇರುತ್ತಿದ್ದಾರೆ.

ಬಿಜೆಪಿ ಅಧ್ಯಕ್ಷ ಜೆಡಿ ನಡ್ಡಾ ಅವರು ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಅಪ್ನಾ ದಳ (ಎಸ್) ಮತ್ತು ನಿಶಾದ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಕಣಕ್ಕಿಳಿಯಲಿದೆ ಎಂದು ಘೋಷಿಸಿದ್ದಾರೆ. ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯು ಫೆಬ್ರವರಿ 10 ರಿಂದ ಏಳು ಹಂತಗಳಲ್ಲಿ ನಡೆಯಲಿದೆ. ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.


ಇದನ್ನೂ ಓದಿ: ಯುಪಿ: ಹಿಂದುತ್ವದ ಐಕಾನ್‌ ಆಗಿದ್ದ ಯೋಗಿ ತಮ್ಮ ಚರಿಷ್ಮಾ ಕಳೆದುಕೊಂಡಿದ್ದಾರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...