Homeಮುಖಪುಟಗೋವಾ BJP ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಪರಿಕ್ಕರ್‌ ಮಗನಿಗೆ ಪಣಜಿಯಿಂದ ಟಿಕೆಟ್ ನಿರಾಕರಣೆ

ಗೋವಾ BJP ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಪರಿಕ್ಕರ್‌ ಮಗನಿಗೆ ಪಣಜಿಯಿಂದ ಟಿಕೆಟ್ ನಿರಾಕರಣೆ

ಬಿಜೆಪಿಯು ಬಳಸಿ ಎಸೆಯುವ ನೀತಿಯನ್ನು ಪ್ರಯೋಗಿಸುತ್ತಿದೆ ಎಂದು ಆರೋಪಿಸಿರುವ ಅರವಿಂದ್‌ ಕೇಜ್ರಿವಾಲ್‌, ಪರಿಕ್ಕರ್‌ ಅವರ ಮಗನನ್ನು ಎಎಪಿ ಟಿಕೆಟ್‌ನಿಂದ ಸ್ಪರ್ಧಿಸುವಂತೆ ಕೇಳಿಕೊಂಡಿದ್ದಾರೆ

- Advertisement -
- Advertisement -

ಗೋವಾ ಬಿಜೆಪಿ ವಿಧಾನಸಭೆ ಚುನಾವಣೆಗೆ ತನ್ನ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮಾಜಿ ಮುಖ್ಯಮಂತ್ರಿ ಮನೋಹರ್‌ ಪರಿಕ್ಕರ್‌ ಅವರ ಮಗ ಉತ್ಪಲ್ ಪರಿಕ್ಕರ್‌ ಕೇಳಿದ್ದ ಕ್ಷೇತ್ರದಿಂದ ಟಿಕೆಟ್‌ ನೀಡಲು ನಿರಾಕರಿಸಿದೆ.

ಪಣಜಿ ಕ್ಷೇತ್ರವು ಮಾಜಿ ಮುಖ್ಯಮಂತ್ರಿ ಮನೋಹರ್‌ ಪರಿಕ್ಕರ್‌ ಅವರ ಕ್ಷೇತ್ರವಾಗಿದ್ದು, ಅವರ ಮಗ ಉತ್ಪಲ್ ಪರಿಕ್ಕರ್‌ ಅಲ್ಲಿನ ಟಿಕೆಟ್‌ ಅಕಾಂಕ್ಷಿಯಾಗಿದ್ದರು. ಆದರೆ ಪಕ್ಷವು ಅವರಿಗೆ ಈ ಕ್ಷೇತ್ರದಿಂದ ಟಿಕೆಟ್‌ ನೀಡಲು ನಿರಾಕರಿಸಿದ್ದು, ಅಲ್ಲಿ ಕಾಂಗ್ರೆಸ್‌ನಿಂದ ಬಿಜೆಪಿಗೆ ಪಕ್ಷಾಂತರವಾಗಿದ್ದ ಅಟಾನಾಸಿಯೊ ಮಾನ್ಸೆರೇಟ್ ‘ಬಾಬುಷ್’ ಅವರನ್ನು ಕಣಕ್ಕಿಳಿಸಿದೆ.

ಇದನ್ನೂ ಓದಿ:ಗೋವಾ BJPಗೆ ಭಾರಿ ಮುಖಭಂಗ: ಒಂದೇ ದಿನದಲ್ಲಿ ಇಬ್ಬರು ಶಾಸಕರು ರಾಜೀನಾಮೆ!

ಉತ್ಪಲ್ ಪರಿಕ್ಕರ್ ತಾನು ಪಣಜಿಯಿಂದಲೆ ಸ್ಪರ್ಧಿಸುವುದಾಗಿ ಪಟ್ಟು ಹಿಡಿದಿದ್ದು, ಬಿಜೆಪಿ ಪ್ರಸ್ತಾಪಿಸಿದ್ದ ಇತರ ಎರಡು ಕ್ಷೇತ್ರಗಳನ್ನು ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ. ಶೀಘ್ರದಲ್ಲೇ ನನ್ನ ನಿಲುವನ್ನು ಸ್ಪಷ್ಟಪಡಿಸುತ್ತೇನೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಉತ್ಪಲ್ ‌ಅವರಿಗೆ ಇನ್ನೆರಡು ಆಯ್ಕೆಗಳನ್ನು ನೀಡಲಾಗಿದೆ ಎಂದು ಬಿಜೆಪಿಯ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. “ಅವರು ಅದನ್ನು ಒಪ್ಪಿಕೊಳ್ಳಬೇಕು ಎಂದು ನಾವು ಭಾವಿಸುತ್ತೇವೆ. ಬಿಜೆಪಿ ಯಾವಾಗಲೂ ಪರಿಕ್ಕರ್ ಪರಿವಾರಕ್ಕೆ ಗೌರವವನ್ನು ನೀಡುತ್ತದೆ” ಎಂದು ಫಡ್ನವಿಸ್‌ ಅವರು ಪಕ್ಷದಲ್ಲಿನ ಆಂತರಿಕ ಬಿಕ್ಕಟ್ಟು ತಡೆಯುವ ಉದ್ದೇಶದೊಂದಿಗೆ ಹೇಳಿದ್ದಾರೆ.

ಆದರೆ, ಉತ್ಪಲ್ ಪರಿಕ್ಕರ್‌ ಬಿಜೆಪಿಯ ಆಯ್ಕೆಯನ್ನು ನಿರಾಕರಿಸಲಿದ್ದಾರೆ ಎನ್ನಲಾಗಿದೆ. ಗೋವಾ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ ಬೆನ್ನಲ್ಲೇ ಟ್ವೀಟ್ ಮಾಡಿರುವ ಅರವಿಂದ್ ಕೇಜ್ರಿವಾಲ್, ಉತ್ಪಲ್‌ಗೆ ಆನ್‌ ಆದ್ಮಿ ಪಕ್ಷಕ್ಕೆ ಸೇರುವಂತೆ ಆಹ್ವಾನ ನೀಡಿದ್ದಾರೆ.

ಇದನ್ನೂ ಓದಿ:‘ಕೋಮುವಾದಿ ಪಕ್ಷ’: TMC ಸೇರಿದ ಮೂರೇ ತಿಂಗಳಲ್ಲಿ ಪಕ್ಷದಿಂದ ಹೊರ ನಡೆದ ಗೋವಾದ ಮಾಜಿ ಶಾಸಕ!

“ಪರಿಕ್ಕರ್ ಕುಟುಂಬದೊಂದಿಗೆ ಬಿಜೆಪಿಯು ಬಳಸಿ ಎಸೆಯುವ ನೀತಿಯನ್ನು ಅಳವಡಿಸಿಕೊಂಡಿರುವುದಕ್ಕೆ ಗೋವಾ ಜನರು ತುಂಬಾ ದುಃಖಿತರಾಗಿದ್ದಾರೆ. ನಾನು ಮನೋಹರ್ ಪರಿಕ್ಕರ್ ಅವರನ್ನು ಯಾವಾಗಲೂ ಗೌರವಿಸುತ್ತೇನೆ. ಉತ್ಪಲ್ ಅವರು ಎಎಪಿ ಸೇರಿ, ಪಕ್ಷದ ಟಿಕೆಟ್‌ನೊಂದಿಗೆ ಚುನಾವಣೆ ಎದುರಿಸಲು ಸ್ವಾಗತ” ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ಕಳೆದ ವಾರ, ಶಿವಸೇನೆಯ ಸಂಜಯ್ ರಾವತ್ ಅವರು ಉತ್ಪಲ್ ಪರಿಕ್ಕರ್ ಅವರು ಬಿಜೆಪಿಯಿಂದ ಹೊರಗುಳಿದು ಸ್ವತಂತ್ರವಾಗಿ ಸ್ಪರ್ಧಿಸಿದರೆ ಅವರನ್ನು ಬೆಂಬಲಿಸುವಂತೆ ವಿರೋಧ ಪಕ್ಷಗಳಿಗೆ ಮನವಿ ಮಾಡಿದ್ದರು.

ಮೂರು ಬಾರಿ ಗೋವಾ ಮುಖ್ಯಮಂತ್ರಿಯಾಗಿದ್ದ, ರಾಜ್ಯ ಬಿಜೆಪಿಯ ಉನ್ನತ ನಾಯಕರಾಗಿದ್ದ ಮನೋಹರ್ ಪರಿಕ್ಕರ್ ಅವರು 2019 ರಲ್ಲಿ ನಿಧನರಾಗಿದ್ದರು. ಅವರು 25 ವರ್ಷಗಳ ಕಾಲ ಪಣಜಿ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಇದೀಗ ಅವರ ಪ್ರತಿಸ್ಪರ್ಧಿಯಾಗಿದ್ದ ಬಾಬುಷ್ ಮಾನ್ಸೆರೆಟ್ ಅವರು, ಬಿಜೆಪಿಯಿಂದ ಈ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದಾರೆ.

ಪರಿಕ್ಕರ್ ಅವರ ಮರಣದ ನಂತರ ನಡೆದ ಉಪಚುನಾವಣೆಯಲ್ಲಿ, ಬಾಬುಷ್ ಮಾನ್ಸೆರೇಟ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಈ ಕ್ಷೇತ್ರದಲ್ಲಿ ಗೆದ್ದಿದ್ದರು. ನಂತರ ಬಿಜೆಪಿಗೆ ಸೇರಿಕೊಂಡಿದ್ದರು.

ಇದನ್ನೂ ಓದಿ:ಗೋವಾ: ಕಾಂಗ್ರೆಸ್‌‌‌ನ ಮಾಜಿ ಕಾರ್ಯಾಧ್ಯಕ್ಷ, ಶಾಸಕ ಅಲೆಕ್ಸೊ ಟಿಎಂಸಿಗೆ ಸೇರ್ಪಡೆ

ಇಂಜಿನಿಯರಿಂಗ್ ಪದವೀಧರರಾದ ಉತ್ಪಲ್ ಪರಿಕ್ಕರ್ ಅವರು ಪಣಜಿಯನ್ನೇ ಕೇಂದ್ರೀಕರಿಸಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಕ್ಷೇತ್ರದ ಜನರನ್ನು ಭೇಟಿ ಮಾಡುತ್ತಿದ್ದು, ದೇವಸ್ಥಾನಗಳಿಗೂ ಭೇಟಿ ನೀಡಿ ಚುನಾವಣೆ ಎದುರಿಸಲು ಸಿದ್ಧ ಎಂದು ಘೋಷಿಸಿದ್ದಾರೆ.

ಕುಟುಂಬ ಎಂಬ ಕಾರಣಕ್ಕಾಗಿ ಅಭ್ಯರ್ಥಿಯಾಗಬೇಕೆಂದು ಯಾರೂ ನಿರೀಕ್ಷಿಸಬಾರದು ಎಂದು ಫಡ್ನವಿಸ್ ಅವರು ಸ್ಪಷ್ಟಪಡಿಸಿದ್ದಾರೆ. “ಗೋವಾದಲ್ಲಿ ಬಿಜೆಪಿಯನ್ನು ಕಟ್ಟಲು ಮನೋಹರ್ ಪರಿಕ್ಕರ್ ಸಾಕಷ್ಟು ಕೆಲಸ ಮಾಡಿದ್ದಾರೆ. ಆದರೆ ಮನೋಹರ್ ಪರಿಕ್ಕರ್ ಅಥವಾ ನಾಯಕರ ಮಗ ಎಂಬ ಕಾರಣಕ್ಕಾಗಿ ಯಾರಿಗೂ ಬಿಜೆಪಿ ಟಿಕೆಟ್ ನೀಡುವುದಿಲ್ಲ. ಯಾರು ಕೆಲಸ ಮಾಡುತ್ತಾರೋ ಅವರನ್ನು ಪರಿಗಣಿಸಲಾಗುತ್ತದೆ” ಎಂದು ಫಡ್ನವಿಸ್ ಹೇಳಿದ್ದಾರೆ.

ಈ ಮಧ್ಯೆ ಬಿಜೆಪಿಯು ಬಾಬುಷ್ ಮೊನ್ಸೆರಾಡ್‌ ಮಾತ್ರವಲ್ಲದೆ ಅವರ ಪತ್ನಿ ಜೆನ್ನಿಫರ್ ಮೊನ್ಸೆರಾಟ್‌ ಅವರನ್ನು ತಾಲೀಗಾವ್ ಕ್ಷೇತ್ರದಿಂದ ಕಣಕ್ಕಿಳಿಸಿದೆ. ಗೋವಾದ ಸಚಿವ ವಿಶ್ವಜಿತ್ ರಾಣೆ ಮತ್ತು ಅವರ ಪತ್ನಿ ದಿವ್ಯಾ ವಿಶ್ವಜಿತ್ ಇಬ್ಬರೂ ಪಟ್ಟಿಯಲ್ಲಿದ್ದಾರೆ. ದಿವ್ಯಾ ವಿಶ್ವಜಿತ್ ಅವರು ಪೊರಿಯಮ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ತಮ್ಮ ಮಾವ ಪ್ರತಾಪ್‌ಸಿಂಹ ರಾಣೆ ವಿರುದ್ಧ ಸ್ಪರ್ಧಿಸುತ್ತಿದ್ದಾರೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ದೇಶದ ಇತರ ಭಾಗಗಳು ಮೊಘಲರಿಂದ ಆಳುತ್ತಿದ್ದಾಗ ಗೋವಾ ಪೋರ್ಚುಗಲ್ ಆಳ್ವಿಕೆಗೆ ಒಳಪಟ್ಟಿತು ಎಂಬ ಮೋದಿ ಹೇಳಿಕೆ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...