Homeಮುಖಪುಟಗೋವಾ BJP ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಪರಿಕ್ಕರ್‌ ಮಗನಿಗೆ ಪಣಜಿಯಿಂದ ಟಿಕೆಟ್ ನಿರಾಕರಣೆ

ಗೋವಾ BJP ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಪರಿಕ್ಕರ್‌ ಮಗನಿಗೆ ಪಣಜಿಯಿಂದ ಟಿಕೆಟ್ ನಿರಾಕರಣೆ

ಬಿಜೆಪಿಯು ಬಳಸಿ ಎಸೆಯುವ ನೀತಿಯನ್ನು ಪ್ರಯೋಗಿಸುತ್ತಿದೆ ಎಂದು ಆರೋಪಿಸಿರುವ ಅರವಿಂದ್‌ ಕೇಜ್ರಿವಾಲ್‌, ಪರಿಕ್ಕರ್‌ ಅವರ ಮಗನನ್ನು ಎಎಪಿ ಟಿಕೆಟ್‌ನಿಂದ ಸ್ಪರ್ಧಿಸುವಂತೆ ಕೇಳಿಕೊಂಡಿದ್ದಾರೆ

- Advertisement -
- Advertisement -

ಗೋವಾ ಬಿಜೆಪಿ ವಿಧಾನಸಭೆ ಚುನಾವಣೆಗೆ ತನ್ನ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮಾಜಿ ಮುಖ್ಯಮಂತ್ರಿ ಮನೋಹರ್‌ ಪರಿಕ್ಕರ್‌ ಅವರ ಮಗ ಉತ್ಪಲ್ ಪರಿಕ್ಕರ್‌ ಕೇಳಿದ್ದ ಕ್ಷೇತ್ರದಿಂದ ಟಿಕೆಟ್‌ ನೀಡಲು ನಿರಾಕರಿಸಿದೆ.

ಪಣಜಿ ಕ್ಷೇತ್ರವು ಮಾಜಿ ಮುಖ್ಯಮಂತ್ರಿ ಮನೋಹರ್‌ ಪರಿಕ್ಕರ್‌ ಅವರ ಕ್ಷೇತ್ರವಾಗಿದ್ದು, ಅವರ ಮಗ ಉತ್ಪಲ್ ಪರಿಕ್ಕರ್‌ ಅಲ್ಲಿನ ಟಿಕೆಟ್‌ ಅಕಾಂಕ್ಷಿಯಾಗಿದ್ದರು. ಆದರೆ ಪಕ್ಷವು ಅವರಿಗೆ ಈ ಕ್ಷೇತ್ರದಿಂದ ಟಿಕೆಟ್‌ ನೀಡಲು ನಿರಾಕರಿಸಿದ್ದು, ಅಲ್ಲಿ ಕಾಂಗ್ರೆಸ್‌ನಿಂದ ಬಿಜೆಪಿಗೆ ಪಕ್ಷಾಂತರವಾಗಿದ್ದ ಅಟಾನಾಸಿಯೊ ಮಾನ್ಸೆರೇಟ್ ‘ಬಾಬುಷ್’ ಅವರನ್ನು ಕಣಕ್ಕಿಳಿಸಿದೆ.

ಇದನ್ನೂ ಓದಿ:ಗೋವಾ BJPಗೆ ಭಾರಿ ಮುಖಭಂಗ: ಒಂದೇ ದಿನದಲ್ಲಿ ಇಬ್ಬರು ಶಾಸಕರು ರಾಜೀನಾಮೆ!

ಉತ್ಪಲ್ ಪರಿಕ್ಕರ್ ತಾನು ಪಣಜಿಯಿಂದಲೆ ಸ್ಪರ್ಧಿಸುವುದಾಗಿ ಪಟ್ಟು ಹಿಡಿದಿದ್ದು, ಬಿಜೆಪಿ ಪ್ರಸ್ತಾಪಿಸಿದ್ದ ಇತರ ಎರಡು ಕ್ಷೇತ್ರಗಳನ್ನು ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ. ಶೀಘ್ರದಲ್ಲೇ ನನ್ನ ನಿಲುವನ್ನು ಸ್ಪಷ್ಟಪಡಿಸುತ್ತೇನೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಉತ್ಪಲ್ ‌ಅವರಿಗೆ ಇನ್ನೆರಡು ಆಯ್ಕೆಗಳನ್ನು ನೀಡಲಾಗಿದೆ ಎಂದು ಬಿಜೆಪಿಯ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. “ಅವರು ಅದನ್ನು ಒಪ್ಪಿಕೊಳ್ಳಬೇಕು ಎಂದು ನಾವು ಭಾವಿಸುತ್ತೇವೆ. ಬಿಜೆಪಿ ಯಾವಾಗಲೂ ಪರಿಕ್ಕರ್ ಪರಿವಾರಕ್ಕೆ ಗೌರವವನ್ನು ನೀಡುತ್ತದೆ” ಎಂದು ಫಡ್ನವಿಸ್‌ ಅವರು ಪಕ್ಷದಲ್ಲಿನ ಆಂತರಿಕ ಬಿಕ್ಕಟ್ಟು ತಡೆಯುವ ಉದ್ದೇಶದೊಂದಿಗೆ ಹೇಳಿದ್ದಾರೆ.

ಆದರೆ, ಉತ್ಪಲ್ ಪರಿಕ್ಕರ್‌ ಬಿಜೆಪಿಯ ಆಯ್ಕೆಯನ್ನು ನಿರಾಕರಿಸಲಿದ್ದಾರೆ ಎನ್ನಲಾಗಿದೆ. ಗೋವಾ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ ಬೆನ್ನಲ್ಲೇ ಟ್ವೀಟ್ ಮಾಡಿರುವ ಅರವಿಂದ್ ಕೇಜ್ರಿವಾಲ್, ಉತ್ಪಲ್‌ಗೆ ಆನ್‌ ಆದ್ಮಿ ಪಕ್ಷಕ್ಕೆ ಸೇರುವಂತೆ ಆಹ್ವಾನ ನೀಡಿದ್ದಾರೆ.

ಇದನ್ನೂ ಓದಿ:‘ಕೋಮುವಾದಿ ಪಕ್ಷ’: TMC ಸೇರಿದ ಮೂರೇ ತಿಂಗಳಲ್ಲಿ ಪಕ್ಷದಿಂದ ಹೊರ ನಡೆದ ಗೋವಾದ ಮಾಜಿ ಶಾಸಕ!

“ಪರಿಕ್ಕರ್ ಕುಟುಂಬದೊಂದಿಗೆ ಬಿಜೆಪಿಯು ಬಳಸಿ ಎಸೆಯುವ ನೀತಿಯನ್ನು ಅಳವಡಿಸಿಕೊಂಡಿರುವುದಕ್ಕೆ ಗೋವಾ ಜನರು ತುಂಬಾ ದುಃಖಿತರಾಗಿದ್ದಾರೆ. ನಾನು ಮನೋಹರ್ ಪರಿಕ್ಕರ್ ಅವರನ್ನು ಯಾವಾಗಲೂ ಗೌರವಿಸುತ್ತೇನೆ. ಉತ್ಪಲ್ ಅವರು ಎಎಪಿ ಸೇರಿ, ಪಕ್ಷದ ಟಿಕೆಟ್‌ನೊಂದಿಗೆ ಚುನಾವಣೆ ಎದುರಿಸಲು ಸ್ವಾಗತ” ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ಕಳೆದ ವಾರ, ಶಿವಸೇನೆಯ ಸಂಜಯ್ ರಾವತ್ ಅವರು ಉತ್ಪಲ್ ಪರಿಕ್ಕರ್ ಅವರು ಬಿಜೆಪಿಯಿಂದ ಹೊರಗುಳಿದು ಸ್ವತಂತ್ರವಾಗಿ ಸ್ಪರ್ಧಿಸಿದರೆ ಅವರನ್ನು ಬೆಂಬಲಿಸುವಂತೆ ವಿರೋಧ ಪಕ್ಷಗಳಿಗೆ ಮನವಿ ಮಾಡಿದ್ದರು.

ಮೂರು ಬಾರಿ ಗೋವಾ ಮುಖ್ಯಮಂತ್ರಿಯಾಗಿದ್ದ, ರಾಜ್ಯ ಬಿಜೆಪಿಯ ಉನ್ನತ ನಾಯಕರಾಗಿದ್ದ ಮನೋಹರ್ ಪರಿಕ್ಕರ್ ಅವರು 2019 ರಲ್ಲಿ ನಿಧನರಾಗಿದ್ದರು. ಅವರು 25 ವರ್ಷಗಳ ಕಾಲ ಪಣಜಿ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಇದೀಗ ಅವರ ಪ್ರತಿಸ್ಪರ್ಧಿಯಾಗಿದ್ದ ಬಾಬುಷ್ ಮಾನ್ಸೆರೆಟ್ ಅವರು, ಬಿಜೆಪಿಯಿಂದ ಈ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದಾರೆ.

ಪರಿಕ್ಕರ್ ಅವರ ಮರಣದ ನಂತರ ನಡೆದ ಉಪಚುನಾವಣೆಯಲ್ಲಿ, ಬಾಬುಷ್ ಮಾನ್ಸೆರೇಟ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಈ ಕ್ಷೇತ್ರದಲ್ಲಿ ಗೆದ್ದಿದ್ದರು. ನಂತರ ಬಿಜೆಪಿಗೆ ಸೇರಿಕೊಂಡಿದ್ದರು.

ಇದನ್ನೂ ಓದಿ:ಗೋವಾ: ಕಾಂಗ್ರೆಸ್‌‌‌ನ ಮಾಜಿ ಕಾರ್ಯಾಧ್ಯಕ್ಷ, ಶಾಸಕ ಅಲೆಕ್ಸೊ ಟಿಎಂಸಿಗೆ ಸೇರ್ಪಡೆ

ಇಂಜಿನಿಯರಿಂಗ್ ಪದವೀಧರರಾದ ಉತ್ಪಲ್ ಪರಿಕ್ಕರ್ ಅವರು ಪಣಜಿಯನ್ನೇ ಕೇಂದ್ರೀಕರಿಸಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಕ್ಷೇತ್ರದ ಜನರನ್ನು ಭೇಟಿ ಮಾಡುತ್ತಿದ್ದು, ದೇವಸ್ಥಾನಗಳಿಗೂ ಭೇಟಿ ನೀಡಿ ಚುನಾವಣೆ ಎದುರಿಸಲು ಸಿದ್ಧ ಎಂದು ಘೋಷಿಸಿದ್ದಾರೆ.

ಕುಟುಂಬ ಎಂಬ ಕಾರಣಕ್ಕಾಗಿ ಅಭ್ಯರ್ಥಿಯಾಗಬೇಕೆಂದು ಯಾರೂ ನಿರೀಕ್ಷಿಸಬಾರದು ಎಂದು ಫಡ್ನವಿಸ್ ಅವರು ಸ್ಪಷ್ಟಪಡಿಸಿದ್ದಾರೆ. “ಗೋವಾದಲ್ಲಿ ಬಿಜೆಪಿಯನ್ನು ಕಟ್ಟಲು ಮನೋಹರ್ ಪರಿಕ್ಕರ್ ಸಾಕಷ್ಟು ಕೆಲಸ ಮಾಡಿದ್ದಾರೆ. ಆದರೆ ಮನೋಹರ್ ಪರಿಕ್ಕರ್ ಅಥವಾ ನಾಯಕರ ಮಗ ಎಂಬ ಕಾರಣಕ್ಕಾಗಿ ಯಾರಿಗೂ ಬಿಜೆಪಿ ಟಿಕೆಟ್ ನೀಡುವುದಿಲ್ಲ. ಯಾರು ಕೆಲಸ ಮಾಡುತ್ತಾರೋ ಅವರನ್ನು ಪರಿಗಣಿಸಲಾಗುತ್ತದೆ” ಎಂದು ಫಡ್ನವಿಸ್ ಹೇಳಿದ್ದಾರೆ.

ಈ ಮಧ್ಯೆ ಬಿಜೆಪಿಯು ಬಾಬುಷ್ ಮೊನ್ಸೆರಾಡ್‌ ಮಾತ್ರವಲ್ಲದೆ ಅವರ ಪತ್ನಿ ಜೆನ್ನಿಫರ್ ಮೊನ್ಸೆರಾಟ್‌ ಅವರನ್ನು ತಾಲೀಗಾವ್ ಕ್ಷೇತ್ರದಿಂದ ಕಣಕ್ಕಿಳಿಸಿದೆ. ಗೋವಾದ ಸಚಿವ ವಿಶ್ವಜಿತ್ ರಾಣೆ ಮತ್ತು ಅವರ ಪತ್ನಿ ದಿವ್ಯಾ ವಿಶ್ವಜಿತ್ ಇಬ್ಬರೂ ಪಟ್ಟಿಯಲ್ಲಿದ್ದಾರೆ. ದಿವ್ಯಾ ವಿಶ್ವಜಿತ್ ಅವರು ಪೊರಿಯಮ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ತಮ್ಮ ಮಾವ ಪ್ರತಾಪ್‌ಸಿಂಹ ರಾಣೆ ವಿರುದ್ಧ ಸ್ಪರ್ಧಿಸುತ್ತಿದ್ದಾರೆ.

ಇದನ್ನೂ ಓದಿ:ಫ್ಯಾಕ್ಟ್‌ಚೆಕ್: ದೇಶದ ಇತರ ಭಾಗಗಳು ಮೊಘಲರಿಂದ ಆಳುತ್ತಿದ್ದಾಗ ಗೋವಾ ಪೋರ್ಚುಗಲ್ ಆಳ್ವಿಕೆಗೆ ಒಳಪಟ್ಟಿತು ಎಂಬ ಮೋದಿ ಹೇಳಿಕೆ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...