Homeಕರ್ನಾಟಕದಡಾರ-ರುಬೆಲ್ಲಾ ಲಸಿಕೆ ಅತ್ಯಂತ ಸುರಕ್ಷಿತ; ಬೆಳಗಾವಿ ಮಕ್ಕಳ ಸಾವಿನ ಬಗ್ಗೆ ಸೂಕ್ತ ತನಿಖೆಯಾಗಬೇಕು: ಡಾ. ಹಿಮಾಂಶು

ದಡಾರ-ರುಬೆಲ್ಲಾ ಲಸಿಕೆ ಅತ್ಯಂತ ಸುರಕ್ಷಿತ; ಬೆಳಗಾವಿ ಮಕ್ಕಳ ಸಾವಿನ ಬಗ್ಗೆ ಸೂಕ್ತ ತನಿಖೆಯಾಗಬೇಕು: ಡಾ. ಹಿಮಾಂಶು

- Advertisement -
- Advertisement -

ದಡಾರದ ರುಬೆಲ್ಲಾ ಲಸಿಕೆಯಿಂದ ಮಕ್ಕಳು ಮೃತಪಡುವುದು ಅಪರೂಪದಲ್ಲೇ ಅಪರೂಪ ಎಂದು ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಡಾ. ಹಿಮಾಂಶು ಅವರು ಬೆಳಗಾವಿಯಲ್ಲಿ ಮೂವರು ಮಕ್ಕಳ ಸಾವಿನ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡುತ್ತಾ ಹೇಳಿದ್ದಾರೆ. ರುಬೆಲ್ಲಾ ಲಸಿಕೆಯು ಅತ್ಯಂತ ಸುರಕ್ಷಿತ ಲಸಿಕೆಯಾಗಿದ್ದು, ಸುಮಾರು 40-50 ವರ್ಷದಿಂದ ಇದನ್ನು ನೀಡಲಾಗುತ್ತಿದೆ. ಇದರಿಂದಾಗಿ ಮಕ್ಕಳು ಮೃತಪಟ್ಟ ಸುದ್ದಿಯನ್ನು ನಾನಂತೂ ಕೇಳಿಲ್ಲ, ಬೆಳಗಾವಿ ಮಕ್ಕಳ ಸಾವಿನ ಬಗ್ಗೆ ಸೂಕ್ತ ತನಿಖೆ ಆಗಬೇಕು ಎಂದು ಅವರು ಹೇಳಿದ್ದಾರೆ.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸಾಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಕಳೆದ ವಾರ ದಡಾರದ ರುಬೆಲ್ಲಾ ಲಸಿಕೆ ಪಡೆದುಕೊಂಡಿದ್ದ ಮೂವರು ಮಕ್ಕಳ ಮೃತಪಟ್ಟಿದ್ದರು. ಜನವರಿ 11 ರಂದು ರಾಮದುರ್ಗ ತಾಲೂಕಿನ ಮಲ್ಲಾಪುರದಲ್ಲಿ ಒಂದು ಮಗು ಮೃತಪಟ್ಟರೆ, ಜನವರಿ 12 ರಂದು ಬೋಚಬಾಲ ಗ್ರಾಮದಲ್ಲಿ ಇಬ್ಬರು ಶಿಶುಗಳು ಮೃತಪಟ್ಟಿದ್ದವು. ಇನ್ನೂ ಇಬ್ಬರು ಶಿಶುಗಳು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ:ಬೆಳಗಾವಿಯಲ್ಲಿ 3 ಮಕ್ಕಳ ಸಾವು ಪ್ರಕರಣ: ಇಬ್ಬರು ಅಮಾನತು

ಈ ಬಗ್ಗೆ ಪ್ರಾಥಮಿಕ ತನಿಖಾ ವರದಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಿರುವುದಾಗಿ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಬುಧವಾರ ತಿಳಿಸಿದ್ದಾರೆ. ಶಿಶುಗಳನ್ನು ಕಳೆದುಕೊಂಡ ಕುಟುಂಬಗಳಿಗೆ ಪರಿಹಾರ ನೀಡುವ ಕುರಿತು ಚರ್ಚೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

ಫಾರ್ಮಾಸಿಸ್ಟ್‌ನಿಂದ ಲಸಿಕೆ ಬಾಟಲಿಗಳನ್ನು ಪಡೆದ ನರ್ಸ್ ಎಲ್ಲಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಆಹಾರ ಪದಾರ್ಥಗಳೊಂದಿಗೆ ಹೋಟೆಲ್‌ನ ಫ್ರಿಜ್‌ನಲ್ಲಿ ಇರಿಸಿದ್ದರು ಎಂದು ಮೂರು ಶಿಶುಗಳ ಸಾವಿನ ಬಗ್ಗೆ ನಡೆದ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ವರದಿಯಾಗಿದೆ. ಇದರಿಂದಾಗಿ ಬ್ಯಾಕ್ಟೀರಿಯಾದ ಸೋಂಕಿಗೆ ಕಾರಣವಾಗಿ ಮತ್ತು ಈ ಲಸಿಕೆಗಳನ್ನು ಪಡೆದ ಮೂರು ಶಿಶುಗಳು ಅಸೆಪ್ಟಿಕ್ ಶಾಕ್ ಸಿಂಡ್ರೋಮ್‌ನಿಂದ ಸಾವನ್ನಪ್ಪಿದ್ದವು ಎಂದು ನ್ಯಾಶನಲ್ ಹೆರಾಲ್ಡ್‌ ತನ್ನ ವರದಿಯಲ್ಲಿ ಹೇಳಿದೆ.

ಇದನ್ನೂ ಓದಿ:ದಡಾರ-ರುಬೆಲ್ಲಾ ಲಸಿಕೆ ಪಡೆದ ಮೂರು ಶಿಶುಗಳ ಸಾವು ಪ್ರಕರಣ: ಸಿಎಂಗೆ ವರದಿ ಸಲ್ಲಿಕೆ

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಡಾ. ಹಿಮಾಂಶು, “ಸಧ್ಯಕ್ಕೆ ಪ್ರಾಥಮಿಕ ತನಿಖೆಯಷ್ಟೇ ಬಂದಿದೆ. ಪೂರ್ತಿ ತನಿಖೆಯಲ್ಲಿ ಏನು ನಡೆದಿದೆ ಎಂದು ತಿಳಿಯಬಹುದು. ಅಸೆಪ್ಟಿಕ್ ಶಾಕ್ ಸಿಂಡ್ರೋಂನಿಂದ ಸಾಯುವುದು ತುಂಬಾ ಕಡಿಮೆ. ಅಲ್ಲದೆ ರುಬೆಲ್ಲಾ ಲಸಿಕೆಯಿಂದಾಗಿ ಸಾವು ಸಂಭವಿಸುವುದಿಲ್ಲ, ಅದನ್ನು ಕೋಲ್ಡ್‌ ಸ್ಟೋರೇಜ್ ಮಾಡಿದಾಗ ಅದರ ಟೆಂಪರೇಚರ್‌ನಲ್ಲಿ ವ್ಯತ್ಯಾಸ ಆದರೆ ಲಸಿಕೆಯ ಶಕ್ತಿ ಕಡಿಮೆಯಾಗುತ್ತದೆಯೆ ಹೊರತು ಅದರಿಂದ ಸಾವು ಉಂಟಾಗುವುದಿಲ್ಲ” ಎಂದು ಹೇಳಿದ್ದಾರೆ.

“ಲಸಿಕೆ ಚುಚ್ಚುವ ಸಿರಿಂಜ್ ಸರಿಯಿಲ್ಲದಿದ್ದರೆ ಅಥವಾ ಸಿರಿಂಜ್ ಸರಿಯಾಗಿ ಸಂಗ್ರಹ ಮಾಡದೆ ಇದ್ದರೆ ಹಾಗೂ ಗಲೀಜಾಗಿದ್ದರೆ, ಅಸೆಪ್ಟಿಕ್‌ ಶಾಕ್ ಸಿಂಡ್ರೋಂ ಆಗುತ್ತದೆ. ಅಸೆಪ್ಟಿಕ್ ಶಾಕ್‌‌ ಸಿಂಡ್ರೋಂ ಕೂಡಾ ಅಷ್ಟು ಸುಲಭದಲ್ಲಿ ಆಗುವುದಿಲ್ಲ. ಮಕ್ಕಳು ಅಪೌಷ್ಠಿಕತೆಯಲ್ಲಿದ್ದರೆ ಮತ್ತು ಅವರಿಗೆ ಇತರ ಸಮಸ್ಯೆ ಇದ್ದು ಹಾಗೂ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದಿದ್ದರೆ ಮಾತ್ರ ಸಾವು ಸಂಭವಿಸುತ್ತದೆ. ಪ್ರಾಥಮಿಕ ತನಿಖೆಯಿಂದ ಕೂಡಾ ಏನೂ ಹೇಳಲು ಸಾಧ್ಯವಿಲ್ಲ. ಅದರ ಬಗ್ಗೆ ಸೂಕ್ತ ತನಿಖೆ ನಡೆಯಬೇಕು” ಎಂದು ಅವರು ಡಾ. ಹಿಮಾಂಶು ಹೇಳಿದ್ದಾರೆ.

ಇದನ್ನೂ ಓದಿ:ಕೊರೊನಾ ಲಸಿಕೆಯಿಂದ ‘ಬಂಜೆತನ’ ಉಂಟಾಗುವುದಿಲ್ಲ: ಒಕ್ಕೂಟ ಸರ್ಕಾರ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...