Homeಮುಖಪುಟಬಿಜೆಪಿ ಈ ಹಿಂದೆ ರೈತರ ಬೆಂಬಲ ದುರುಪಯೋಗ ಮಾಡಿಕೊಂಡಿದೆ, ಈ ಬಾರಿ ರೈತರು ಬುದ್ದಿ ಕಲಿಸುತ್ತಾರೆ:...

ಬಿಜೆಪಿ ಈ ಹಿಂದೆ ರೈತರ ಬೆಂಬಲ ದುರುಪಯೋಗ ಮಾಡಿಕೊಂಡಿದೆ, ಈ ಬಾರಿ ರೈತರು ಬುದ್ದಿ ಕಲಿಸುತ್ತಾರೆ: ನರೇಶ್ ಟಿಕಾಯತ್

- Advertisement -
- Advertisement -

’ಹಿಂದಿನ ಚುನಾವಣೆಗಳಲ್ಲಿ ಭಾರತೀಯ ಕಿಸಾನ್ ಯೂನಿಯನ್ ಬಿಜೆಪಿಯನ್ನು ಬೆಂಬಲಿಸಿತ್ತು. ಆದರೆ, ಬಿಜೆಪಿ ಪಕ್ಷವು ತನ್ನ ರಾಜಕೀಯಕ್ಕಾಗಿ ರೈತರನ್ನು ಶೋಷಣೆ ಮಾಡಿದೆ. ಯೋಗಿ ಸರ್ಕಾರದ ಧೋರಣೆಯ ಬಗ್ಗೆ ರೈತರು ಎಚ್ಚೆತ್ತುಕೊಂಡಿದ್ದಾರೆ’ ಎಂದು ಬಿಕೆಯು ಮುಖ್ಯಸ್ಥ ನರೇಶ್ ಟಿಕಾಯತ್ ಹೇಳಿದ್ದಾರೆ.

“ಒಂದು ವರ್ಷ ನಡೆದ ರೈತರ ಪ್ರತಿಭಟನೆಯು ಮುಂಬರುವ ಯುಪಿ ಚುನಾವಣೆಯಲ್ಲಿ ಬಿಜೆಪಿಗೆ ಖಂಡಿತವಾಗಿಯೂ ಪಾಠ ಕಲಿಸಲಿದೆ. ಬಿಜೆಪಿ ನಷ್ಟವನ್ನು ಅನುಭವಿಸಲಿದೆ” ಎಂದು ರೈತ ನಾಯಕ ನರೇಶ್ ಟಿಕಾಯತ್ ಹೇಳಿದ್ದಾರೆ.

ದಿ ಕ್ವಿಂಟ್‌ ವೆಬ್‌ಸೈಟ್‌ ನಡೆಸಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, ’ಈ ಹಿಂದೆ ಉತ್ತರ ಪ್ರದೇಶದಲ್ಲಿ ಬಿಜೆಪಿಯನ್ನು ಬೆಂಬಲಿಸಿದ್ದಕ್ಕೆ ನಮ್ಮ ಸಂಘಟನೆಯು ವಿಷಾಧಿಸುತ್ತದೆ. 2014 ರ ಲೋಕಸಭಾ ಚುನಾವಣೆ, ಬಿಜೆಪಿ ರೈತರಿಗೆ ನೀಡಿದ್ದ ಭರವಸೆಯನ್ನು ಈಡೇರಿಸುತ್ತದೆ ಎಂಬ ಕಾರಣಕ್ಕೆ 2017 ರ ಯುಪಿ ವಿಧಾನಸಭಾ ಚುನಾವಣೆ ಮತ್ತು 2019 ರ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಕಿಸಾನ್ ಯೂನಿಯನ್ ಬಿಜೆಪಿಯನ್ನು ಬೆಂಬಲಿಸಿತ್ತು. ಆದರೆ, ಬಿಜೆಪಿ ರೈತರ ಬೆಂಬಲವನ್ನು ತಮ್ಮ ಸ್ವಂತ ರಾಜಕೀಯಕ್ಕಾಗಿ ಬಳಸಿಕೊಂಡಿತ್ತು’ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ’ಈ ಚುನಾವಣೆಯಲ್ಲಿ ನಾವು ಯಾರನ್ನೂ ಬೆಂಬಲಿಸುವುದಿಲ್ಲ’: ರಾಕೇಶ್ ಟಿಕಾಯತ್

“13 ತಿಂಗಳು ನಡೆದ ರೈತರ ಸುದೀರ್ಘ ಹೋರಾಟದಲ್ಲಿ ನಾವು 700 ಕ್ಕಿಂತ ಹೆಚ್ಚು ರೈತರನ್ನು ಕಳೆದುಕೊಂಡಿದ್ದೇವೆ. ರೈತ ಸಮುದಾಯವು ಈ ಸಾವುಗಳನ್ನು ಅಷ್ಟು ಸುಲಭವಾಗಿ ಮರೆಯುವುದಿಲ್ಲ. ರೈತರ ಹೃದಯದಲ್ಲಿ ಇನ್ನೂ ಸಾಕಷ್ಟು ಕೋಪವಿದೆ ಮತ್ತು ಬಿಜೆಪಿ ಖಂಡಿತವಾಗಿಯೂ ಇದರಿಂದ ನಷ್ಟ ಅನುಭವಿಸಲಿದೆ. ಬಿಜೆಪಿ ಸರ್ಕಾರವು ಕಾನೂನನ್ನು ಹಿಂತೆಗೆದುಕೊಂಡಿತು. ಆದರೆ ರೈತರ ಹೃದಯಗಳನ್ನು ಗೆಲ್ಲವಲ್ಲಿ ಯಶಸ್ವಿ ಆಗಲಿಲ್ಲ” ಎಂದು ಟಿಕಾಯತ್ ಹೇಳಿದ್ದಾರೆ.

’ನಾವು ಯಾವ ಪಕ್ಷವನ್ನು ಬೆಂಬಲಿಸುತ್ತೆವೆ ಎಂದು ಇನ್ನು ನಿರ್ಧರಿಸಿಲ್ಲ. ಭಾರತಿಯ ಕಿಸಾನ್ ಮೋರ್ಚಾದ ಇತರ ಸದಸ್ಯರು ಈ ಬಗ್ಗೆ ಜಂಟಿ ಚರ್ಚೆ ನಡೆಸಬೇಕು. ನಂತರವೇ ನಾವು ಯಾವ ಪಕ್ಷವನ್ನು ಬೆಂಬಲಿಸುತ್ತೇವೆ ಎಂದು ನಿರ್ಧರಿಸಲು ಸಾಧ್ಯ. ಮುಸ್ಲಿಮರು ಮತ್ತು ಜಾಟ್‌ಗಳ ನಡುವೆ 2013 ರಲ್ಲಿ ನಡೆದ ಮುಜಫರ್‌ನಗರ ಗಲಭೆಯು ಎರಡು ಸಮುದಾಯಗಳ ನಡುವಿನ ಬಾಂಧವ್ಯವನ್ನು ತೀವ್ರವಾಗಿ ಹಾಳುಮಾಡಿದೆ, ಇದರಿಂದ ಮುಸ್ಲಿಮರು ಮತ್ತು ಜಾಟ್‌ಗಳ ನಡುವಿನ ಸಂಬಂಧವು ಘಾಸಿಗೊಂಡಿದೆ. ಇದನ್ನು ಬಿಜೆಪಿ ಸರ್ಕಾರ ಬಳಸಿಕೊಳ್ಳುವುದರ ಮೂಲಕ ಎರಡು ಸಮುದಾಯಗಳ ನಡುವೆ ತಡೆ ಗೋಡೆಯನ್ನೇ ನಿರ್ಮಿಸಿಬಿಟ್ಟಿದೆ” ಎಂದಿದ್ದಾರೆ.

’ಕೆಲವು ವರ್ಷಗಳಿಂದ ಆ ಗೋಡೆಯನ್ನು ಒಡೆದು ಬಾಂಧವ್ಯವನ್ನು ಬೆಸೆಯುವ ಕೆಲಸವನ್ನು ನಾವು ಮಾಡುತ್ತಿದ್ದೇವೆ. ಅಂದು ನಡೆದ ಗಲಭೆಯ ನಂತರ ಜಾಟ್ ಸಮುದಾಯದ ಯುವಕರು ಬಿಜೆಪಿಯ ಹುಸಿ ದೇಶ ಪ್ರೇಮದ ರಾಜಕೀಯದಿಂದ ಪ್ರಭಾವಿತರಾಗಿದ್ದಾರೆ. ಮುಂದಿನ ದಿನಗಳಲ್ಲಿ ನಾವು ಯಾವುದೇ ಹಿಂದೂ-ಮುಸ್ಲಿಂ ಘರ್ಷಣೆಗೆ ಮತ್ತೆ ಅವಕಾಶ ನೀಡಬಾರದು ಮತ್ತು ಶಾಂತಿಯನ್ನು ಕಾಪಾಡಬೇಕಿದೆ ಎಂದು ಟಿಕಾಯತ್ ಹೇಳಿದ್ದಾರೆ’ ಎಂದು ಟಿಕಾಯತ್ ತಿಳಿಸಿದ್ದಾರೆ.

’ನಾವು ಸ್ಥಳೀಯ ಮುಸ್ಲಿಂ ಮುಖಂಡರೊಂದಿಗೆ ಮಾತನಾಡಿದ್ದೇವೆ. ಯುವ ಹಿಂದೂಗಳಿಗೆ ಅವರ ಬಗೆಗಿನ ಆತಂಕಗಳನ್ನು ಸಹ ತಿಳಿಸಿದ್ದೇವೆ. ಅವರು ತಮ್ಮ ಗಮನವನ್ನ ಓದು ಮತ್ತು ಅಧ್ಯಯನದ ಮೇಲೆ ಕೇಂದ್ರೀಕರಿಸಬೇಕೆಂದು ಅವರಿಗೆ ಅರ್ಥಮಾಡಿಸುವ ಪ್ರಯತ್ನ ಮಾಡುತ್ತೆವೆ’ ಎಂದು ಸಂದರ್ಶನದಲ್ಲಿ ನರೇಶ್ ಟಿಕಾಯತ್ ತಿಳಿಸಿದ್ದಾರೆ.


ಇದನ್ನೂ ಓದಿ: ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ರೈತ ನಾಯಕ ರಾಕೇಶ್ ಟಿಕಾಯತ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...