Homeಕರೋನಾ ತಲ್ಲಣಕೊರೊನಾ ಪ್ರಕರಣ ಹೆಚ್ಚಾದರೂ, ಲಸಿಕೆ ಕಾರಣಕ್ಕೆ ಸಾವು ನೋವು ಕಡಿಮೆಯಾಗಿದೆ: ICMR ಮುಖ್ಯಸ್ಥ

ಕೊರೊನಾ ಪ್ರಕರಣ ಹೆಚ್ಚಾದರೂ, ಲಸಿಕೆ ಕಾರಣಕ್ಕೆ ಸಾವು ನೋವು ಕಡಿಮೆಯಾಗಿದೆ: ICMR ಮುಖ್ಯಸ್ಥ

- Advertisement -
- Advertisement -

ದೇಶದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿದ್ದರೂ ಹೆಚ್ಚು ಜನರು ಕೋವಿಡ್ ಲಸಿಕೆ ಪಡೆದ ಪರಿಣಾಮ ತೀವ್ರ ಅನಾರೋಗ್ಯ ಮತ್ತು ಸಾವುಗಳು ಉಂಟಾಗುತ್ತಿಲ್ಲ ಎಂದು ಗುರುವಾರ ಪ್ರತಿಪಾದಿಸಿದ್ದಾರೆ.

ಪ್ರಸ್ತುತ ಕೋವಿಡ್ ಉಲ್ಬಣದ ಕುರಿತು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶಾದ್ಯಂತ ಹೆಚ್ಚಿನ ವ್ಯಾಕ್ಸಿನೇಷನ್ ನಡೆದಿರುವುದರಿಂದ ಮೂರನೇ ಅಲೆಯಲ್ಲಿ ಕೊರೊನಾದಿಂದ ಉಂಟಾಗುವ ತೀವ್ರವಾದ ಕಾಯಿಲೆಗಳು ಮತ್ತು ಸಾವುಗಳನ್ನು ತಡೆಯಲು ನಮಗೆ ಸಾಧ್ಯವಾಯಿತು ಎಂದು ಹೇಳಿದ್ದಾರೆ.

ಲಸಿಕೆ ಪ್ರಯೋಜನಕಾರಿಯಾಗಿದೆ ಮತ್ತು ಎರಡನೇ ಕೊರೊನಾ ಅಲೆಯ ಉಲ್ಬಣಕ್ಕೆ ಹೋಲಿಸಿದರೆ ಸಾವುಗಳು ಗಣನೀಯವಾಗಿ ಕಡಿಮೆಯಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ದಡಾರ-ರುಬೆಲ್ಲಾ ಲಸಿಕೆ ಅತ್ಯಂತ ಸುರಕ್ಷಿತ; ಬೆಳಗಾವಿ ಮಕ್ಕಳ ಸಾವಿನ ಬಗ್ಗೆ ಸೂಕ್ತ ತನಿಖೆಯಾಗಬೇಕು: ಡಾ. ಹಿಮಾಂಶು

“ಭಾರತದಲ್ಲಿ ಲಸಿಕೆಗಳು ಪ್ರಯೋಜನಕಾರಿಯಾಗಿವೆ. ವ್ಯಾಕ್ಸಿನೇಷನ್‌ಗಳಿಂದ ಸಾವುಗಳು ಗಣನೀಯವಾಗಿ ಕಡಿಮೆಯಾಗಿದೆ. ಕೊರೊನಾದ ಈ ಮೂರನೇ ಅಲೆಯ ಉಲ್ಬಣದಲ್ಲಿ, ವ್ಯಾಕ್ಸಿನ್‌ ಕಾರಣದಿಂದಾಗಿ ತೀವ್ರವಾದ ಅನಾರೋಗ್ಯ ಮತ್ತು ಸಾವು ಸಂಭವಿಸುತ್ತಿಲ್ಲ” ಎಂದು ಅವರು ಹೇಳಿದ್ದಾರೆ.

ಆದಾಗ್ಯೂ, ಇತರ ಕಾಯಿಲೆ ಇರುವವರು ತಮ್ಮ ಆರೋಗ್ಯದ ಮೇಲ್ವಿಚಾರಣೆ ಮಾಡಬೇಕು ಮತ್ತು ಯಾವುದೇ ತೊಡಕುಗಳನ್ನು ತಪ್ಪಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.

“ಲಸಿಕೆಯು ಸಾವನ್ನು ತಡೆಯುತ್ತದೆ ಮತ್ತು ಆದ್ದರಿಂದ ಇದು ಅತ್ಯಗತ್ಯವಾಗಿದೆ. ಕೋವಿಡ್ ಲಸಿಕೆಗಳನ್ನು ಪಡೆಯುವುದರಿಂದ ಈ ಅಲೆಯಲ್ಲಿ ಸಾವುಗಳು ತುಂಬಾ ಕಡಿಮೆಯಾಗಿದೆ. ದೇಶದ 94% ವಯಸ್ಕರಿಗೆ ಮೊದಲ ಡೋಸ್‌‌ ನೀಡಲಾಗಿದೆ ಮತ್ತು 72% ದಷ್ಟು ವಯಸ್ಕರಿಗೆ ಪೂರ್ಣ ಪ್ರಮಾಣದ ಡೋಸ್ ಆಗಿದೆ” ಎಂದು ಡಾ ಭಾರ್ಗವ ಹೇಳಿದ್ದಾರೆ.

ಇದನ್ನೂ ಓದಿ:ಬಿಜೆಪಿ ಈ ಹಿಂದೆ ರೈತರ ಬೆಂಬಲ ದುರುಪಯೋಗ ಮಾಡಿಕೊಂಡಿದೆ, ಈ ಬಾರಿ ರೈತರು ಬುದ್ದಿ ಕಲಿಸುತ್ತಾರೆ: ನರೇಶ್ ಟಿಕಾಯತ್

ಪ್ರಸ್ತುತ ಉಲ್ಬಣದಲ್ಲಿ ಮನೆಯಲ್ಲೆ ಕೋವಿಡ್ ಪರೀಕ್ಷೆಗಳ ಪ್ರವೃತ್ತಿ ಹೆಚ್ಚುತ್ತಿದೆ, “ಈ ವರ್ಷದ 20 ದಿನಗಳಲ್ಲಿ, ನಾವು 2 ಲಕ್ಷ ಮನೆ ಪರೀಕ್ಷೆಗಳನ್ನು ನೋಡಿದ್ದೇವೆ” ಎಂದು ಅವರು ಕೋವಿಡ್ ಪರೀಕ್ಷೆಗಳ ಕುರಿತು ಹೇಳಿದ್ದಾರೆ.

NITI ಆಯೋಗ(ಆರೋಗ್ಯ) ಸದಸ್ಯ, ಡಾ ವಿ.ಕೆ. ಪೌಲ್, ದೇಶದಲ್ಲಿ ಒಟ್ಟಾರೆ 16% ದಷ್ಟು ಪಾಸಿಟಿವಿಟಿ ದರ ಹೆಚ್ಚಾಗಿದೆ ಎಂದು ಹೇಳಿದ್ದಾರೆ. ಗೋವಾದಂತಹ ಕೆಲವು ರಾಜ್ಯಗಳಲ್ಲಿ 50% ಕ್ಕಿಂತ ಹೆಚ್ಚು ಪಾಸಿಟಿವಿಟಿ ವರದಿಯಾಗಿವೆ. ಕೇರಳದಲ್ಲಿ 42% ಇದ್ದರೆ, ರಾಜಸ್ಥಾನದಲ್ಲಿ 31%ದಷ್ಟು ಪಾಸಿಟಿವಿಟಿ ಪ್ರಮಾಣವಿದೆ.

ಪಾಸಿಟಿವಿಟಿ ದರ ಎಂದರೆ, ಕೊರೊನಾ ಪರೀಕ್ಷೆ ಮಾಡಿರುವ ಪ್ರತಿ ನೂರು ಜನರಲ್ಲಿ ಎಷ್ಟು ಜನರಿಗೆ ಕೊರೊನಾ ಪಾಸಿಟಿವ್ ಆಗಿದೆ ಎಂಬ ಲೆಕ್ಕಚಾರವಾಗಿದೆ. ಉದಾಹರಣೆಗೆ ಪರೀಕ್ಷೆ ಮಾಡಿದ ನೂರು ಜನರಲ್ಲಿ ಐವತ್ತು ಜನರಿಗೆ ಕೊರೊನಾ ಪಾಸಿಟಿವ್‌ ಆದರೆ, 50% ಪಾಸಿವಿಟಿ ಇದೆ ಎಂದರ್ಥ.

ಇದನ್ನೂ ಓದಿ:ಹಿಜಾಬ್‌ ಧರಿಸುವುದು ಅಶಿಸ್ತು: ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ವಿವಾದಾತ್ಮಕ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...