Homeಕರೋನಾ ತಲ್ಲಣಕೊರೊನಾ ಪ್ರಕರಣ ಹೆಚ್ಚಾದರೂ, ಲಸಿಕೆ ಕಾರಣಕ್ಕೆ ಸಾವು ನೋವು ಕಡಿಮೆಯಾಗಿದೆ: ICMR ಮುಖ್ಯಸ್ಥ

ಕೊರೊನಾ ಪ್ರಕರಣ ಹೆಚ್ಚಾದರೂ, ಲಸಿಕೆ ಕಾರಣಕ್ಕೆ ಸಾವು ನೋವು ಕಡಿಮೆಯಾಗಿದೆ: ICMR ಮುಖ್ಯಸ್ಥ

- Advertisement -
- Advertisement -

ದೇಶದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿದ್ದರೂ ಹೆಚ್ಚು ಜನರು ಕೋವಿಡ್ ಲಸಿಕೆ ಪಡೆದ ಪರಿಣಾಮ ತೀವ್ರ ಅನಾರೋಗ್ಯ ಮತ್ತು ಸಾವುಗಳು ಉಂಟಾಗುತ್ತಿಲ್ಲ ಎಂದು ಗುರುವಾರ ಪ್ರತಿಪಾದಿಸಿದ್ದಾರೆ.

ಪ್ರಸ್ತುತ ಕೋವಿಡ್ ಉಲ್ಬಣದ ಕುರಿತು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶಾದ್ಯಂತ ಹೆಚ್ಚಿನ ವ್ಯಾಕ್ಸಿನೇಷನ್ ನಡೆದಿರುವುದರಿಂದ ಮೂರನೇ ಅಲೆಯಲ್ಲಿ ಕೊರೊನಾದಿಂದ ಉಂಟಾಗುವ ತೀವ್ರವಾದ ಕಾಯಿಲೆಗಳು ಮತ್ತು ಸಾವುಗಳನ್ನು ತಡೆಯಲು ನಮಗೆ ಸಾಧ್ಯವಾಯಿತು ಎಂದು ಹೇಳಿದ್ದಾರೆ.

ಲಸಿಕೆ ಪ್ರಯೋಜನಕಾರಿಯಾಗಿದೆ ಮತ್ತು ಎರಡನೇ ಕೊರೊನಾ ಅಲೆಯ ಉಲ್ಬಣಕ್ಕೆ ಹೋಲಿಸಿದರೆ ಸಾವುಗಳು ಗಣನೀಯವಾಗಿ ಕಡಿಮೆಯಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ದಡಾರ-ರುಬೆಲ್ಲಾ ಲಸಿಕೆ ಅತ್ಯಂತ ಸುರಕ್ಷಿತ; ಬೆಳಗಾವಿ ಮಕ್ಕಳ ಸಾವಿನ ಬಗ್ಗೆ ಸೂಕ್ತ ತನಿಖೆಯಾಗಬೇಕು: ಡಾ. ಹಿಮಾಂಶು

“ಭಾರತದಲ್ಲಿ ಲಸಿಕೆಗಳು ಪ್ರಯೋಜನಕಾರಿಯಾಗಿವೆ. ವ್ಯಾಕ್ಸಿನೇಷನ್‌ಗಳಿಂದ ಸಾವುಗಳು ಗಣನೀಯವಾಗಿ ಕಡಿಮೆಯಾಗಿದೆ. ಕೊರೊನಾದ ಈ ಮೂರನೇ ಅಲೆಯ ಉಲ್ಬಣದಲ್ಲಿ, ವ್ಯಾಕ್ಸಿನ್‌ ಕಾರಣದಿಂದಾಗಿ ತೀವ್ರವಾದ ಅನಾರೋಗ್ಯ ಮತ್ತು ಸಾವು ಸಂಭವಿಸುತ್ತಿಲ್ಲ” ಎಂದು ಅವರು ಹೇಳಿದ್ದಾರೆ.

ಆದಾಗ್ಯೂ, ಇತರ ಕಾಯಿಲೆ ಇರುವವರು ತಮ್ಮ ಆರೋಗ್ಯದ ಮೇಲ್ವಿಚಾರಣೆ ಮಾಡಬೇಕು ಮತ್ತು ಯಾವುದೇ ತೊಡಕುಗಳನ್ನು ತಪ್ಪಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.

“ಲಸಿಕೆಯು ಸಾವನ್ನು ತಡೆಯುತ್ತದೆ ಮತ್ತು ಆದ್ದರಿಂದ ಇದು ಅತ್ಯಗತ್ಯವಾಗಿದೆ. ಕೋವಿಡ್ ಲಸಿಕೆಗಳನ್ನು ಪಡೆಯುವುದರಿಂದ ಈ ಅಲೆಯಲ್ಲಿ ಸಾವುಗಳು ತುಂಬಾ ಕಡಿಮೆಯಾಗಿದೆ. ದೇಶದ 94% ವಯಸ್ಕರಿಗೆ ಮೊದಲ ಡೋಸ್‌‌ ನೀಡಲಾಗಿದೆ ಮತ್ತು 72% ದಷ್ಟು ವಯಸ್ಕರಿಗೆ ಪೂರ್ಣ ಪ್ರಮಾಣದ ಡೋಸ್ ಆಗಿದೆ” ಎಂದು ಡಾ ಭಾರ್ಗವ ಹೇಳಿದ್ದಾರೆ.

ಇದನ್ನೂ ಓದಿ:ಬಿಜೆಪಿ ಈ ಹಿಂದೆ ರೈತರ ಬೆಂಬಲ ದುರುಪಯೋಗ ಮಾಡಿಕೊಂಡಿದೆ, ಈ ಬಾರಿ ರೈತರು ಬುದ್ದಿ ಕಲಿಸುತ್ತಾರೆ: ನರೇಶ್ ಟಿಕಾಯತ್

ಪ್ರಸ್ತುತ ಉಲ್ಬಣದಲ್ಲಿ ಮನೆಯಲ್ಲೆ ಕೋವಿಡ್ ಪರೀಕ್ಷೆಗಳ ಪ್ರವೃತ್ತಿ ಹೆಚ್ಚುತ್ತಿದೆ, “ಈ ವರ್ಷದ 20 ದಿನಗಳಲ್ಲಿ, ನಾವು 2 ಲಕ್ಷ ಮನೆ ಪರೀಕ್ಷೆಗಳನ್ನು ನೋಡಿದ್ದೇವೆ” ಎಂದು ಅವರು ಕೋವಿಡ್ ಪರೀಕ್ಷೆಗಳ ಕುರಿತು ಹೇಳಿದ್ದಾರೆ.

NITI ಆಯೋಗ(ಆರೋಗ್ಯ) ಸದಸ್ಯ, ಡಾ ವಿ.ಕೆ. ಪೌಲ್, ದೇಶದಲ್ಲಿ ಒಟ್ಟಾರೆ 16% ದಷ್ಟು ಪಾಸಿಟಿವಿಟಿ ದರ ಹೆಚ್ಚಾಗಿದೆ ಎಂದು ಹೇಳಿದ್ದಾರೆ. ಗೋವಾದಂತಹ ಕೆಲವು ರಾಜ್ಯಗಳಲ್ಲಿ 50% ಕ್ಕಿಂತ ಹೆಚ್ಚು ಪಾಸಿಟಿವಿಟಿ ವರದಿಯಾಗಿವೆ. ಕೇರಳದಲ್ಲಿ 42% ಇದ್ದರೆ, ರಾಜಸ್ಥಾನದಲ್ಲಿ 31%ದಷ್ಟು ಪಾಸಿಟಿವಿಟಿ ಪ್ರಮಾಣವಿದೆ.

ಪಾಸಿಟಿವಿಟಿ ದರ ಎಂದರೆ, ಕೊರೊನಾ ಪರೀಕ್ಷೆ ಮಾಡಿರುವ ಪ್ರತಿ ನೂರು ಜನರಲ್ಲಿ ಎಷ್ಟು ಜನರಿಗೆ ಕೊರೊನಾ ಪಾಸಿಟಿವ್ ಆಗಿದೆ ಎಂಬ ಲೆಕ್ಕಚಾರವಾಗಿದೆ. ಉದಾಹರಣೆಗೆ ಪರೀಕ್ಷೆ ಮಾಡಿದ ನೂರು ಜನರಲ್ಲಿ ಐವತ್ತು ಜನರಿಗೆ ಕೊರೊನಾ ಪಾಸಿಟಿವ್‌ ಆದರೆ, 50% ಪಾಸಿವಿಟಿ ಇದೆ ಎಂದರ್ಥ.

ಇದನ್ನೂ ಓದಿ:ಹಿಜಾಬ್‌ ಧರಿಸುವುದು ಅಶಿಸ್ತು: ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ವಿವಾದಾತ್ಮಕ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...