Homeಮುಖಪುಟಕುಂಭಮೇಳದಿಂದ ದೆಹಲಿಗೆ ಹಿಂದಿರುಗುವವರಿಗೆ 14 ದಿನಗಳ ಕ್ವಾರಂಟೈನ್ ಕಡ್ಡಾಯ

ಕುಂಭಮೇಳದಿಂದ ದೆಹಲಿಗೆ ಹಿಂದಿರುಗುವವರಿಗೆ 14 ದಿನಗಳ ಕ್ವಾರಂಟೈನ್ ಕಡ್ಡಾಯ

- Advertisement -
- Advertisement -

ಹೆಚ್ಚುತ್ತಿರುವ ಕೊರೊನಾ ಎರಡನೇ ಅಲೆಯ ನಡುವೆಯು ಉತ್ತರಖಂಡದ ಹರಿದ್ವಾರದಲ್ಲಿ ನಡೆದ ಕುಂಭಮೇಳದಲ್ಲಿ ಭಾಗವಹಿಸಿ ದೆಹಲಿಗೆ ಹಿಂತಿರುಗುವವರಿಗೆ 14 ದಿನಗಳ ಮನೆ ಕ್ವಾರಂಟೈನ್ ಕಡ್ಡಾಯ ಎಂದು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ಶನಿವಾರ ಮಧ್ಯರಾತ್ರಿ ಆದೇಶಿಸಿದೆ. ಏಪ್ರಿಲ್ 4 ರಿಂದ 17ರವರೆಗೆ ನಡೆದ ಕುಂಭಮೇಳದಲ್ಲಿ ಭಾಗವಹಿಸಿದವರು ತಮ್ಮ ವಿವರಗಳನ್ನು ದೆಹಲಿ ವೆಬ್‌ಸೈಟ್‌ನಲ್ಲಿ ದಾಖಲಿಸಬೇಕು, ಅಲ್ಲದೇ ಏಪ್ರಿಲ್ 18ರಿಂದ ಯಾರಾದರೂ ಕುಂಭಮೇಳಕ್ಕೆ ಹೋಗಲು ಯೋಜಿಸಿದ್ದರೆ ಅವರು ಸಹ ವೆಬ್‌ಸೈಟ್‌ ಮೂಲಕ ದೆಹಲಿ ಸರ್ಕಾರದ ಗಮನಕ್ಕೆ ತರಬೇಕು, ತಪ್ಪಿದವರಿಗೆ ಶಿಕ್ಷೆ ವಿಧಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

24 ಗಂಟೆಗಳ ಒಳಗಾಗಿ ಅಂದರೆ ಭಾನುವಾರ ಮಧ್ಯರಾತ್ರಿಯ ಒಳಗಾಗಿ ಕುಂಭಮೇಳಕ್ಕೆ ತೆರಳಿದ ನಿವಾಸಿಗಳು ತಮ್ಮ ವಿವರಗಳನ್ನು ದೆಹಲಿ ಸರ್ಕಾರದ ವೆಬ್‌ಸೈಟ್‌ನಲ್ಲಿ ನೊಂದಾಯಿಸಬೇಕು. ಟೆಸ್ಟ್, ಟ್ರೇಸ್ ಮತ್ತು ಕ್ವಾಂರಟೈನ್‌ಗೆ ಒಳಪಡಿಸಲು ಇದು ಅಗತ್ಯ ಎಂದು ಮುಖ್ಯ ಕಾರ್ಯದರ್ಶಿ ವಿಜಯ್ ದೇವ್ ತಿಳಿಸಿದ್ದಾರೆ.

ಏಪ್ರಿಲ್ 12 ಮತ್ತು 14 ರಂದು ಕುಂಭಮೇಳದಲ್ಲಿ ನಡೆದ ‘ರಾಯಲ್ ಸ್ನಾನ’ (ಪವಿತ್ರ ಸ್ನಾನ) ದಲ್ಲಿ ಭಕ್ತರು ಭಾಗವಹಿಸಿರುವುದರಿಂದ ಈ ಧಾರ್ಮಿಕ ಸಭೆಯು ಸೂಪರ್ ಸ್ಪ್ರೆಡರ್ ಘಟನೆಯಾಗಿ ಪರಿಣಮಿಸುತ್ತದೆ ಎಂದು ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ. ಒಂದು ವಾರದಲ್ಲಿಯೇ ಮೇಳದಲ್ಲಿ ಭಾಗವಹಿಸಿದ ಸುಮಾರು 2000 ಅಧಿಕ ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇಬ್ಬರು ಸಾಧುಗಳು ನಿಧನರಾಗಿದ್ದಾರೆ.

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ದೆಹಲಿಯು ಕಳೆದ 24 ಗಂಟೆಗಳಲ್ಲಿ 24,375 ಹೊಸ ಪ್ರಕರಣಗಳನ್ನು ದಾಖಲಿಸಿದೆ.

“ಕುಂಭಮೇಳದಿಂದ ಆಯಾ ರಾಜ್ಯಗಳಿಗೆ ಹಿಂದಿರುಗುವವರು ಕೊರೊನಾವನ್ನು ‘ಪ್ರಸಾದ’ ಎಂಬಂತೆ ವಿತರಿಸುತ್ತಾರೆ. ಈ ಎಲ್ಲ ಜನರನ್ನು ಆಯಾ ರಾಜ್ಯಗಳಲ್ಲಿ ತಮ್ಮ ಸ್ವಂತ ವೆಚ್ಚದಲ್ಲಿ ನಿರ್ಬಂಧಿಸಬೇಕು. ಮುಂಬೈನಲ್ಲಿಯೂ ಸಹ, ಹಿಂದಿರುಗುವಾಗ ಅವರನ್ನು ಕ್ವಾರಂಟೈನ್‌ಗೆ ಒಳಪಡಿಸುವ ಬಗ್ಗೆ ಯೋಚಿಸುತ್ತಿದ್ದೇವೆ” ಎಂದು ಮುಂಬೈ ಮೇಯರ್ ಕಿಶೋರಿ ಪಡ್ನೇಕರ್ ನಿನ್ನೆ ಹೇಳಿದ್ದರು.


ಇದನ್ನೂ ಓದಿ: ಕೊರೊನಾ ಎರಡನೆ ಅಲೆಗೆ ವೇದಿಕೆ ಒದಗಿಸಿದ್ದು ಮೋದಿ ಸರ್ಕಾರದ ಅಪಕ್ವ ನಿರ್ಧಾರಗಳು, ಕಣ್ಕಟ್ಟು ಅಂಕಿಅಂಶಗಳು ಮತ್ತು ಬೇಜವಾಬ್ದಾರಿ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...