Homeಕರ್ನಾಟಕಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಯುವಕ: ಮನನೊಂದು 22 ವರ್ಷದ ಯುವತಿ ಆತ್ಮಹತ್ಯೆ 

ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಯುವಕ: ಮನನೊಂದು 22 ವರ್ಷದ ಯುವತಿ ಆತ್ಮಹತ್ಯೆ 

- Advertisement -
- Advertisement -

ಮದುವೆಯಾಗುವುದಾಗಿ ನಂಬಿಸಿದ್ದ ಯುವಕ, ಯುವತಿಗೆ ಮಾನಸಿಕ-ದೈಹಿಕ ಹಲ್ಲೆ ನಡೆಸಿದ್ದು, ಆತನ ಲೈಂಗಿಕ ಕಿರುಕುಳಕ್ಕೆ ಬೇಸತ್ತ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಇಂಜಿನಿಯರಿಂಗ್ ಪದವೀಧರೆ ಹಾಸನ ಮೂಲದ 22 ವರ್ಷದ ಅಚಲ ಬೆಂಗಳೂರಿನ ಪಾಂಡುರಂಗ ನಗರದ ಸಂಬಂಧಿಕರ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮೃತ ಯುವತಿ ಅಚಲ ನಟಿ ಆಶಿಕಾ ರಂಗನಾಥ್ ಅವರ ಮಾವನ ಮಗಳಾಗಿದ್ದು, ಯುವತಿಯ ಸಾವಿನ ಕುರಿತಂತೆ ನಟಿ ಆಶಿಕಾ ರಂಗನಾಥ್ ‘Gone Too Soon’ ಎಂದು ಪೋಸ್ಟ್ ಮಾಡಿದ್ದಾರೆ.

ತಾನು ಅಚಲಳನ್ನು ಮದುವೆಯಾಗುತ್ತೇನೆಂದು ಆಕೆಯ ಪೋಷಕರನ್ನು ಒಪ್ಪಿಸಿದ್ದ ಮಾಯಾಂಕ್ ಅದೇ ಸಲುಗೆಯಲ್ಲಿ ಆಕೆಯೊಂದಿಗೆ ಲೈಂಗಿಕ ಸಂಪರ್ಕಕ್ಕೆ ಪೀಡಿಸುತ್ತಿದ್ದಾನೆ. ಇದಕ್ಕೆ ಒಪ್ಪದ್ದಕ್ಕೆ ಆಕೆಯ ಮೇಲೆ ದೈಹಿಕ ಹಲ್ಲೆ, ಮಾನಸಿಕ ಕಿರುಕುಳ ನೀಡುತ್ತಿದ್ದರಿಂದ ಮನನೊಂದು ಅಚಲ ನೇಣಿಗೆ ಶರಣಾಗಿದ್ದಾಳೆ ಎಂದು ಪೋಷಕರು ಪುಟ್ಟೇನಹಳ್ಳಿ ಠಾಣೆಯಲ್ಲಿ ಮಯಾಂಕ್ ಹಾಗೂ ಆತನ ತಾಯಿ ವಿರುದ್ಧ ದೂರು ನೀಡಿದ್ದಾರೆ.

ಈ ದೂರು ಆಧರಿಸಿ ಇಬ್ಬರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಡ್ರಗ್ ಅಡಿಕ್ಟ್ ಆಗಿರುವ ಮಯಾಂಕ್‌ ಹಲವು ಯುವತಿಯೊಂದಿಗೆ ಸಂಬಂಧ ಹೊಂದಿದ್ದ ಎಂಬ ವಿಚಾರ ಅಚಲಗೆ ಗೊತ್ತಾಗಿ ಮನೆಯಲ್ಲಿ ವಿಷಯ ಹೇಳಿದ್ದಳು. ಇದರಿಂದ ಕೋಪಗೊಂಡ ಮಾಯಾಂಕ್ ಪದೇ ಪದೇ ಕಿರುಕುಳ ಹಿಂಸೆ ನೀಡುತ್ತಿದ್ದನು. ಅಲ್ಲದೆ ಕರೆ ಮಾಡಿ ಅವಾಚ್ಯವಾಗಿ ನಿಂದಿಸುತ್ತಿದ್ದನು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಮಾಯಾಂಕ್ ತನಗೆ ವಂಚಿಸಿರುವ ವಿಷಯ ತಿಳಿದರೂ ಅಚಲಾಗೆ ಆತನ ಮೇಲಿನ ಪ್ರೀತಿ ಕಡಿಮೆಯಾಗಿರಲಿಲ್ಲ. ಹೀಗಾಗಿ ಅಚಲ ಆತನಿಗೆ ಮೆಸೇಜ್ ಮಾಡಿ, ಜೀವನದಲ್ಲಿ ನಿನ್ನ ಬಿಟ್ಟು ನನಗೆ ಬದುಕಲು ಸಾಧ್ಯವಿಲ್ಲ. ನೀನು ನನಗೆ ಮೋಸ ಮಾಡಿದರೂ ನಿನ್ನನ್ನು ಮರೆಯಲು ಆಗುತ್ತಿಲ್ಲ. ನನ್ನ ಕನಸುಗಳನ್ನು ನೀನು ನುಚ್ಚು ನೂರು ಮಾಡಿದ್ದೀಯ. ನನಗೆ ನೀನು ಮೋಸ ಮಾಡಿಲ್ಲವಾದರೆ ರಾಘವೇಂದ್ರ ಸ್ವಾಮಿ ಮೇಲೆ ಆಣೆ ಮಾಡು. ನೀನು ಮಾಡಿದ ಮೋಸಕ್ಕೆ ತಕ್ಕ ಬೆಲೆ ಕಟ್ಟಲೇಬೇಕು ಎಂದು ಕೊನೆಯ ಬಾರಿಗೆ ಮೆಸೇಜ್ ಮಾಡಿ, ಆನಂತರದಲ್ಲಿ ನೇಣಿಗೆ ಶರಣಾಗಿದ್ದಾಳೆ.

ಘಟನೆ ನಡೆದು 10 ದಿನ ಕಳೆದರೂ ಆರೋಪಿಗಳ ಬಂಧನವಾಗಿಲ್ಲ. ಆರೋಪಿಗಳ ಬಂಧನಕ್ಕೆ ಮೃತ ಅಚಲ ಪೋಷಕರ ಒತ್ತಾಯಿಸಿದ್ದು, ಪೊಲೀಸರ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸ್ ಕಾರ್ಯಾಚರಣೆ ತಡೆದು ಕೋಳಿ ಅಂಕ : ಪುತ್ತೂರು ಶಾಸಕ ಅಶೋಕ್ ರೈ ಸೇರಿ 17 ಮಂದಿ ವಿರುದ್ಧ ಪ್ರಕರಣ ದಾಖಲು

ಶಾಸಕರೇ ಮುಂದೆ ನಿಂತು ಕಾನೂನುಬಾಹಿರ ಚಟುವಟಿಕೆ ನಡೆಸಲು ಜನರನ್ನು ಪ್ರೋತ್ಸಾಹಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಬಳಿ ಶನಿವಾರ (ಡಿ.20) ನಡೆದಿದೆ. ಕೇಪು ಶ್ರೀ ಉಳ್ಳಾಲ್ತಿ ದೈವಸ್ಥಾನದ ವಠಾರದಲ್ಲಿ ನಡೆಯುತ್ತಿದ್ದ...

ನಾಲ್ವರು ಬಾಲಕರಿಂದ ಬಾಲಕಿಗೆ ಕಿರುಕುಳ ಆರೋಪ : ‘ಉತ್ತಮ ಸಂಸ್ಕಾರ ಕಲಿಸಿಲ್ಲ’ ಎಂದು ತಾಯಂದಿರನ್ನು ಬಂಧಿಸಿದ ಪೊಲೀಸರು!

ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಾಲ್ವರು ಬಾಲಕರ ವಿರುದ್ಧ ಬಾಲಕಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಪೊಲೀಸರು ಬಾಲಕರ ತಾಯಂದಿರನ್ನು 'ಪ್ರಿವೆಂಟಿವ್ ಅರೆಸ್ಟ್' ಮಾಡಿದ್ದಾರೆ ಎಂದು indianexpress.com ಶನಿವಾರ (ಡಿ.20) ವರದಿ...

ಎಸ್‌ಐಆರ್‌: ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಲ್ಲಿ 1 ಲಕ್ಷ ಮತದಾರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಡಿಲೀಟ್

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಿಂದ 1,03,812 ಕ್ಕೂ ಹೆಚ್ಚು ಮತದಾರರ ಹೆಸರು ತೆಗೆದುಹಾಕಲಾಗಿದೆ. ಇದು ತಮಿಳುನಾಡಿನಲ್ಲಿ ರಾಜ್ಯಾದ್ಯಂತ ನಡೆದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಮತದಾರರ ಪಟ್ಟಿಯಲ್ಲಿನ ಅತಿದೊಡ್ಡ ಮತದಾರರ...

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...