Homeಮುಖಪುಟಕೇಂದ್ರದ ನಿಯಮ ಮೀರಿ ಲಸಿಕೆ ಪಡೆದ 23 ವರ್ಷದ ಬಿಜೆಪಿ ನಾಯಕನ ಸಂಬಂಧಿ?

ಕೇಂದ್ರದ ನಿಯಮ ಮೀರಿ ಲಸಿಕೆ ಪಡೆದ 23 ವರ್ಷದ ಬಿಜೆಪಿ ನಾಯಕನ ಸಂಬಂಧಿ?

ಬಿಜೆಪಿ ನಾಯಕರ ಕುಟುಂಬಗಳ ಜೀವವಷ್ಟೇ ಮುಖ್ಯವೇ? ಸಾಮಾನ್ಯ ಜನರು ಕೀಟಗಳೇ? ಅವರ ಜೀವನಕ್ಕೆ ಕಿಮ್ಮತ್ತಿಲ್ಲವೆ! ಎಂದು ಕಾಂಗ್ರೆಸ್ ಖಾರವಾಗಿ ಪ್ರಶ್ನಿಸಿದೆ.

- Advertisement -
- Advertisement -

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಅವರ ಯುವ ಸೋದರಳಿಯ ತನ್ಮಯ್ ಫಡ್ನವಿಸ್ ಕೂಡಾ ಲಸಿಕೆ ಪಡೆದ ಫೋಟೋ ವೈರಲ್ ಆಗಿದ್ದು, ಕಾಂಗ್ರೆಸ್‌ ಪಕ್ಷವು 23 ವರ್ಷದ ಯುವಕನಿಗೆ ಹೇಗೆ ಲಸಿಕೆ ಹಾಕಲಾಯಿತು ಎಂದು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದೆ.

ಮಹಾರಾಷ್ಟ್ರ ಸೇರಿದಂತೆ ಹಲವಾರು ರಾಜ್ಯಗಳು ಕಳೆದ ಕೆಲವು ದಿನಗಳಿಂದ ಲಸಿಕೆ ಕೊರತೆಯ ಬಗ್ಗೆ ಕೇಂದ್ರಕ್ಕೆ ದೂರು ನೀಡುತ್ತಲೇ ಇದೆ. ಕೇಂದ್ರದ ಇದುವರೆಗಿನ ನಿಯಮದಂತೆ ಲಸಿಕೆಯು 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮಾತ್ರ ಮುಕ್ತವಾಗಿದೆ. ಅದಾಗ್ಯೂ ಲಸಿಕೆ ಪಡೆಯು ಅರ್ಹ ವಯಸ್ಸಿನ ಗುಂಪಿಗೆ ಸೇರದಿದ್ದರೂ ತನ್ಮಯ್ ಫಡ್ನವಿಸ್ ಹೇಗೆ ಲಸಿಕೆ ಪಡೆದರು ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಇದನ್ನೂ ಓದಿ: ಕೋವಿಡ್ ಸಾವಿನ ಸಂಖ್ಯೆಗಳನ್ನು ಮುಚ್ಚಿಡುತ್ತಿರುವ ಯೋಗಿ ಸರ್ಕಾರ: ಒಂದು ಗ್ರೌಂಡ್ ರಿಪೋರ್ಟ್

ಕಾಂಗ್ರೆಸ್ ತನ್ನ ಟ್ವೀಟ್‌ನಲ್ಲಿ, “ಮೋದಿ ಸರ್ಕಾರವು 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮಾತ್ರ ಲಸಿಕೆ ನೀಡಬೇಕೆಂಬ ಷರತ್ತು ವಿಧಿಸಿತ್ತು. ಅಂತಹ ಪರಿಸ್ಥಿತಿಯಲ್ಲಿ, 45 ವರ್ಷಕ್ಕಿಂತ ಕಡಿಮೆ ವಯಸ್ಸಿನ ಫಡ್ನವೀಸ್ ಅವರ ಸೋದರಳಿಯನಿಗೆ ಹೇಗೆ ಲಸಿಕೆ ನೀಡಿದರು? ಬಿಜೆಪಿ ನಾಯಕರ ಕುಟುಂಬಗಳ ಜೀವವಷ್ಟೇ ಮುಖ್ಯವೇ? ಸಾಮಾನ್ಯ ಜನರು ಕೀಟಗಳೇ? ಅವರ ಜೀವನಕ್ಕೆ ಕಿಮ್ಮತ್ತಿಲ್ಲವೆ!” ಎಂದು ಖಾರವಾಗಿ ಪ್ರಶ್ನಿಸಿದೆ.

ಇದನ್ನೂ ಓದಿ: ಕೊರೋನಾ ಪಾಲಿಟಿಕ್ಸ್: ‘ಕೊರೋನಾ ಸಿಕ್ರೆ ಅದನ್ನ ಫಡ್ನವೀಸ್ ಬಾಯೊಳಗೆ ತುರುಕುತ್ತೇನೆ’ ಎಂದ ಸೇನಾ ಶಾಸಕ

 

ಮಹಾರಾಷ್ಟ್ರ ಕಾಂಗ್ರೆಸ್ ಟ್ವಿಟರ್ ಹ್ಯಾಂಡಲ್ ನಾಗ್ಪುರದ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯಲ್ಲಿ ತನ್ಮಯ್ ಫಡ್ನವಿಸ್‌‌ ಲಸಿಕೆ ತೆಗೆದುಕೊಳ್ಳುವ ಫೋಟೋದೊಂದಿಗೆ ಪ್ರಶ್ನೆಗಳನ್ನು ಕೇಳಿ ಪೋಸ್ಟ್‌ ಹಾಕಿದೆ. ಲಸಿಕೆ ತೆಗೆದುಕೊಳ್ಳುತ್ತಿರುವ ಫೋಟೊ ತನ್ಮಯ್‌ ತನ್ನ ಇನ್ಸ್ಟಾಗ್ರಾಮ್‌ನಲ್ಲಿ ಹಾಕಿದ್ದರು ಎಂದು ಕಾಂಗ್ರೆಸ್‌ನ ಮುಖಂಡರು ಹೇಳಿದ್ದರು. ಆದರೆ ಚಿತ್ರವು ವೈರಲ್ ಆಗುತ್ತಿದ್ದಂತೆ ಅವರು ಅದನ್ನು ಡಿಲಿಟ್ ಮಾಡಿದ್ದರು ಎನ್ನಲಾಗಿದೆ.

ಮೂಲಗಳ ಪ್ರಕಾರ ತನ್ಮಯ್ ಅವರು ತಮ್ಮ ಮೊದಲ ಲಸಿಕೆ ಮುಂಬೈನಲ್ಲಿ ತೆಗೆದುಕೊಂಡಿದ್ದರು ಮತ್ತು ಎರಡನೆ ಡೋಸೇಜ್ ಅನ್ನು ನಾಗ್ಪುರದಲ್ಲಿ ಪಡೆದುಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಇದನ್ನೂ ಓದಿ: 2017ರಲ್ಲಿಯೇ ಆಕ್ಸಿಜನ್ ಕೊರತೆ ಬಗ್ಗೆ ದನಿಯೆತ್ತಿದ್ದೆ, ಆದರೆ ನನ್ನನ್ನು ಜೈಲಿಗೆ ಹಾಕಲಾಯಿತು: ಡಾ.ಕಫೀಲ್ ಖಾನ್

 

 

ಕಾಂಗ್ರೆಸ್ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಬಿಜೆಪಿ ವಕ್ತಾರ ರಾಮ್ ಕದಮ್, “ತನ್ಮಯ್ ಫಡ್ನವೀಸ್ ಅವರು ದೇವೇಂದ್ರ ಫಡ್ನವಿಸ್ ಅವರ ದೂರದ ಸಂಬಂಧಿ ಎಂಬುದನ್ನು ಸರ್ಕಾರ ಮರೆಯಬಾರದು. ಸಂಬಂಧಿಕರಿಗೆ ಲಸಿಕೆ ನೀಡುವುದಾದರೆ ದೇವೇಂದ್ರ ಫಡ್ನವೀಸ್ ಅವರು ಮೊದಲು ತಮ್ಮ ಹೆಂಡತಿಗೆ ಲಸಿಕೆ ಹಾಕುತ್ತಿದ್ದರು. ಅವರು ಇನ್ನೂ ಲಸಿಕೆ ಹಾಕಿಲ್ಲ. ಇದು ದೇವೇಂದ್ರ ಫಡ್ನವಿಸ್ ನಿಯಮಗಳನ್ನು ಅನುಸರಿಸುತ್ತದೆ ಎಂದು ಸ್ಪಷ್ಟಪಡಿಸುತ್ತದೆ” ಎಂದು ಹೇಳಿದ್ದಾರೆ.

“ಆದರೆ ಮತ್ತೊಂದೆಡೆ ಥಾಣೆ ಕಾರ್ಪೋರೇಷನ್‌ ಮೇಯರ್ ಮತ್ತು ಎಲ್ಲಾ ಕಾರ್ಪೋರೇಟರ್‌ಗಳು ಎಲ್ಲಾ ನಿಯಮಗಳನ್ನು ಉಲ್ಲಂಘಿಸಿ ಸ್ವತಃ ಲಸಿಕೆ ಪಡೆದ್ದರೆ. ಇದಕ್ಕೆ ಯಾರು ಉತ್ತರಿಸುತ್ತಾರೆ? ರೆಮ್‌ಡೆಸಿವಿರ್ ಲಭ್ಯವಿಲ್ಲದ ಕಾರಣ ಜನರು ಸಾಯುತ್ತಿದ್ದಾರೆ ಆದರೆ ಎನ್‌ಸಿಪಿ ನಾಯಕಲ್ಲಿ ದೊಡ್ಡ ಮೊತ್ತದ ರೆಮ್‌ಡೆಸಿವಿರ್‌ ಹೊಂದಿದ್ದಾರೆ, ಹೇಗೆ?” ಎಂದು ಅವರು ಮರಳಿ ಕಾಂಗ್ರೆಸ್‌ಗೆ ಪ್ರಶ್ನಿಸಿದ್ದಾರೆ.

ಅಲ್ಲದೆ ಈ ಬಗ್ಗೆ ದೇವೇಂದ್ರ ಫಡ್ನವಿಸ್ ಕೂಡಾ ಸ್ಪಷ್ಟೀಕರಣ ನೀಡಿದ್ದು, “ತನ್ಮಯ್ ಫಡ್ನವಿಸ್ ನನ್ನ ದೂರದ ಸಂಬಂಧಿ. ಅವನು ಯಾವ ಆಧಾರದಲ್ಲಿ ತನ್ನ ಡೋಸ್ ಪಡೆದನೆಂದು ನನಗೆ ತಿಳಿದಿಲ್ಲ. ಮಾರ್ಗಸೂಚಿಗಳ ಪ್ರಕಾರ ತೆಗೆದುಕೊಂಡಿದ್ದರೆ, ಅದಕ್ಕೆ ಯಾವುದೇ ಆಕ್ಷೇಪಣೆ ಇರಬಾರದು. ಆದರೆ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ತೆಗೆದುಕೊಂಡಿದ್ದರೆ, ಅದು ಸಂಪೂರ್ಣವಾಗಿ ಅನುಚಿತವಾಗಿದೆ. ಲಸಿಕೆಯೆ ಪಡೆಯಲು ಅರ್ಹತೆ ಹೊಂದಿಲ್ಲದ ಕಾರಣಕ್ಕೆ ನನ್ನ ಹೆಂಡತಿ ಮತ್ತು ಮಗಳು ಸಹ ವ್ಯಾಕ್ಸಿನೇಷನ್ ಪಡೆದಿಲ್ಲ. ಪ್ರತಿಯೊಬ್ಬರೂ ನಿಯಮಗಳನ್ನು ಪಾಲಿಸಬೇಕು ಎಂಬ ದೃಡವಾದ ಅಭಿಪ್ರಾಯ ನನ್ನದು” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸಂಘ ಪರಿವಾರ ಬೆಂಬಲಿಗ ಪತ್ರಿಕೆ ‘ಹೊಸದಿಗಂತ’ದ ಸಂಪಾದಕ ಮತ್ತು ಪ್ರಕಾಶಕರಿಗೆ ಏಳು ತಿಂಗಳ ಜೈಲು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...