Homeಮುಖಪುಟಕೇಂದ್ರದ ನಿಯಮ ಮೀರಿ ಲಸಿಕೆ ಪಡೆದ 23 ವರ್ಷದ ಬಿಜೆಪಿ ನಾಯಕನ ಸಂಬಂಧಿ?

ಕೇಂದ್ರದ ನಿಯಮ ಮೀರಿ ಲಸಿಕೆ ಪಡೆದ 23 ವರ್ಷದ ಬಿಜೆಪಿ ನಾಯಕನ ಸಂಬಂಧಿ?

ಬಿಜೆಪಿ ನಾಯಕರ ಕುಟುಂಬಗಳ ಜೀವವಷ್ಟೇ ಮುಖ್ಯವೇ? ಸಾಮಾನ್ಯ ಜನರು ಕೀಟಗಳೇ? ಅವರ ಜೀವನಕ್ಕೆ ಕಿಮ್ಮತ್ತಿಲ್ಲವೆ! ಎಂದು ಕಾಂಗ್ರೆಸ್ ಖಾರವಾಗಿ ಪ್ರಶ್ನಿಸಿದೆ.

- Advertisement -
- Advertisement -

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಅವರ ಯುವ ಸೋದರಳಿಯ ತನ್ಮಯ್ ಫಡ್ನವಿಸ್ ಕೂಡಾ ಲಸಿಕೆ ಪಡೆದ ಫೋಟೋ ವೈರಲ್ ಆಗಿದ್ದು, ಕಾಂಗ್ರೆಸ್‌ ಪಕ್ಷವು 23 ವರ್ಷದ ಯುವಕನಿಗೆ ಹೇಗೆ ಲಸಿಕೆ ಹಾಕಲಾಯಿತು ಎಂದು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದೆ.

ಮಹಾರಾಷ್ಟ್ರ ಸೇರಿದಂತೆ ಹಲವಾರು ರಾಜ್ಯಗಳು ಕಳೆದ ಕೆಲವು ದಿನಗಳಿಂದ ಲಸಿಕೆ ಕೊರತೆಯ ಬಗ್ಗೆ ಕೇಂದ್ರಕ್ಕೆ ದೂರು ನೀಡುತ್ತಲೇ ಇದೆ. ಕೇಂದ್ರದ ಇದುವರೆಗಿನ ನಿಯಮದಂತೆ ಲಸಿಕೆಯು 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮಾತ್ರ ಮುಕ್ತವಾಗಿದೆ. ಅದಾಗ್ಯೂ ಲಸಿಕೆ ಪಡೆಯು ಅರ್ಹ ವಯಸ್ಸಿನ ಗುಂಪಿಗೆ ಸೇರದಿದ್ದರೂ ತನ್ಮಯ್ ಫಡ್ನವಿಸ್ ಹೇಗೆ ಲಸಿಕೆ ಪಡೆದರು ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಇದನ್ನೂ ಓದಿ: ಕೋವಿಡ್ ಸಾವಿನ ಸಂಖ್ಯೆಗಳನ್ನು ಮುಚ್ಚಿಡುತ್ತಿರುವ ಯೋಗಿ ಸರ್ಕಾರ: ಒಂದು ಗ್ರೌಂಡ್ ರಿಪೋರ್ಟ್

ಕಾಂಗ್ರೆಸ್ ತನ್ನ ಟ್ವೀಟ್‌ನಲ್ಲಿ, “ಮೋದಿ ಸರ್ಕಾರವು 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮಾತ್ರ ಲಸಿಕೆ ನೀಡಬೇಕೆಂಬ ಷರತ್ತು ವಿಧಿಸಿತ್ತು. ಅಂತಹ ಪರಿಸ್ಥಿತಿಯಲ್ಲಿ, 45 ವರ್ಷಕ್ಕಿಂತ ಕಡಿಮೆ ವಯಸ್ಸಿನ ಫಡ್ನವೀಸ್ ಅವರ ಸೋದರಳಿಯನಿಗೆ ಹೇಗೆ ಲಸಿಕೆ ನೀಡಿದರು? ಬಿಜೆಪಿ ನಾಯಕರ ಕುಟುಂಬಗಳ ಜೀವವಷ್ಟೇ ಮುಖ್ಯವೇ? ಸಾಮಾನ್ಯ ಜನರು ಕೀಟಗಳೇ? ಅವರ ಜೀವನಕ್ಕೆ ಕಿಮ್ಮತ್ತಿಲ್ಲವೆ!” ಎಂದು ಖಾರವಾಗಿ ಪ್ರಶ್ನಿಸಿದೆ.

ಇದನ್ನೂ ಓದಿ: ಕೊರೋನಾ ಪಾಲಿಟಿಕ್ಸ್: ‘ಕೊರೋನಾ ಸಿಕ್ರೆ ಅದನ್ನ ಫಡ್ನವೀಸ್ ಬಾಯೊಳಗೆ ತುರುಕುತ್ತೇನೆ’ ಎಂದ ಸೇನಾ ಶಾಸಕ

 

ಮಹಾರಾಷ್ಟ್ರ ಕಾಂಗ್ರೆಸ್ ಟ್ವಿಟರ್ ಹ್ಯಾಂಡಲ್ ನಾಗ್ಪುರದ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯಲ್ಲಿ ತನ್ಮಯ್ ಫಡ್ನವಿಸ್‌‌ ಲಸಿಕೆ ತೆಗೆದುಕೊಳ್ಳುವ ಫೋಟೋದೊಂದಿಗೆ ಪ್ರಶ್ನೆಗಳನ್ನು ಕೇಳಿ ಪೋಸ್ಟ್‌ ಹಾಕಿದೆ. ಲಸಿಕೆ ತೆಗೆದುಕೊಳ್ಳುತ್ತಿರುವ ಫೋಟೊ ತನ್ಮಯ್‌ ತನ್ನ ಇನ್ಸ್ಟಾಗ್ರಾಮ್‌ನಲ್ಲಿ ಹಾಕಿದ್ದರು ಎಂದು ಕಾಂಗ್ರೆಸ್‌ನ ಮುಖಂಡರು ಹೇಳಿದ್ದರು. ಆದರೆ ಚಿತ್ರವು ವೈರಲ್ ಆಗುತ್ತಿದ್ದಂತೆ ಅವರು ಅದನ್ನು ಡಿಲಿಟ್ ಮಾಡಿದ್ದರು ಎನ್ನಲಾಗಿದೆ.

ಮೂಲಗಳ ಪ್ರಕಾರ ತನ್ಮಯ್ ಅವರು ತಮ್ಮ ಮೊದಲ ಲಸಿಕೆ ಮುಂಬೈನಲ್ಲಿ ತೆಗೆದುಕೊಂಡಿದ್ದರು ಮತ್ತು ಎರಡನೆ ಡೋಸೇಜ್ ಅನ್ನು ನಾಗ್ಪುರದಲ್ಲಿ ಪಡೆದುಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಇದನ್ನೂ ಓದಿ: 2017ರಲ್ಲಿಯೇ ಆಕ್ಸಿಜನ್ ಕೊರತೆ ಬಗ್ಗೆ ದನಿಯೆತ್ತಿದ್ದೆ, ಆದರೆ ನನ್ನನ್ನು ಜೈಲಿಗೆ ಹಾಕಲಾಯಿತು: ಡಾ.ಕಫೀಲ್ ಖಾನ್

 

 

ಕಾಂಗ್ರೆಸ್ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಬಿಜೆಪಿ ವಕ್ತಾರ ರಾಮ್ ಕದಮ್, “ತನ್ಮಯ್ ಫಡ್ನವೀಸ್ ಅವರು ದೇವೇಂದ್ರ ಫಡ್ನವಿಸ್ ಅವರ ದೂರದ ಸಂಬಂಧಿ ಎಂಬುದನ್ನು ಸರ್ಕಾರ ಮರೆಯಬಾರದು. ಸಂಬಂಧಿಕರಿಗೆ ಲಸಿಕೆ ನೀಡುವುದಾದರೆ ದೇವೇಂದ್ರ ಫಡ್ನವೀಸ್ ಅವರು ಮೊದಲು ತಮ್ಮ ಹೆಂಡತಿಗೆ ಲಸಿಕೆ ಹಾಕುತ್ತಿದ್ದರು. ಅವರು ಇನ್ನೂ ಲಸಿಕೆ ಹಾಕಿಲ್ಲ. ಇದು ದೇವೇಂದ್ರ ಫಡ್ನವಿಸ್ ನಿಯಮಗಳನ್ನು ಅನುಸರಿಸುತ್ತದೆ ಎಂದು ಸ್ಪಷ್ಟಪಡಿಸುತ್ತದೆ” ಎಂದು ಹೇಳಿದ್ದಾರೆ.

“ಆದರೆ ಮತ್ತೊಂದೆಡೆ ಥಾಣೆ ಕಾರ್ಪೋರೇಷನ್‌ ಮೇಯರ್ ಮತ್ತು ಎಲ್ಲಾ ಕಾರ್ಪೋರೇಟರ್‌ಗಳು ಎಲ್ಲಾ ನಿಯಮಗಳನ್ನು ಉಲ್ಲಂಘಿಸಿ ಸ್ವತಃ ಲಸಿಕೆ ಪಡೆದ್ದರೆ. ಇದಕ್ಕೆ ಯಾರು ಉತ್ತರಿಸುತ್ತಾರೆ? ರೆಮ್‌ಡೆಸಿವಿರ್ ಲಭ್ಯವಿಲ್ಲದ ಕಾರಣ ಜನರು ಸಾಯುತ್ತಿದ್ದಾರೆ ಆದರೆ ಎನ್‌ಸಿಪಿ ನಾಯಕಲ್ಲಿ ದೊಡ್ಡ ಮೊತ್ತದ ರೆಮ್‌ಡೆಸಿವಿರ್‌ ಹೊಂದಿದ್ದಾರೆ, ಹೇಗೆ?” ಎಂದು ಅವರು ಮರಳಿ ಕಾಂಗ್ರೆಸ್‌ಗೆ ಪ್ರಶ್ನಿಸಿದ್ದಾರೆ.

ಅಲ್ಲದೆ ಈ ಬಗ್ಗೆ ದೇವೇಂದ್ರ ಫಡ್ನವಿಸ್ ಕೂಡಾ ಸ್ಪಷ್ಟೀಕರಣ ನೀಡಿದ್ದು, “ತನ್ಮಯ್ ಫಡ್ನವಿಸ್ ನನ್ನ ದೂರದ ಸಂಬಂಧಿ. ಅವನು ಯಾವ ಆಧಾರದಲ್ಲಿ ತನ್ನ ಡೋಸ್ ಪಡೆದನೆಂದು ನನಗೆ ತಿಳಿದಿಲ್ಲ. ಮಾರ್ಗಸೂಚಿಗಳ ಪ್ರಕಾರ ತೆಗೆದುಕೊಂಡಿದ್ದರೆ, ಅದಕ್ಕೆ ಯಾವುದೇ ಆಕ್ಷೇಪಣೆ ಇರಬಾರದು. ಆದರೆ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ತೆಗೆದುಕೊಂಡಿದ್ದರೆ, ಅದು ಸಂಪೂರ್ಣವಾಗಿ ಅನುಚಿತವಾಗಿದೆ. ಲಸಿಕೆಯೆ ಪಡೆಯಲು ಅರ್ಹತೆ ಹೊಂದಿಲ್ಲದ ಕಾರಣಕ್ಕೆ ನನ್ನ ಹೆಂಡತಿ ಮತ್ತು ಮಗಳು ಸಹ ವ್ಯಾಕ್ಸಿನೇಷನ್ ಪಡೆದಿಲ್ಲ. ಪ್ರತಿಯೊಬ್ಬರೂ ನಿಯಮಗಳನ್ನು ಪಾಲಿಸಬೇಕು ಎಂಬ ದೃಡವಾದ ಅಭಿಪ್ರಾಯ ನನ್ನದು” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸಂಘ ಪರಿವಾರ ಬೆಂಬಲಿಗ ಪತ್ರಿಕೆ ‘ಹೊಸದಿಗಂತ’ದ ಸಂಪಾದಕ ಮತ್ತು ಪ್ರಕಾಶಕರಿಗೆ ಏಳು ತಿಂಗಳ ಜೈಲು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...