Homeಮುಖಪುಟಕೇಂದ್ರದ ನಿಯಮ ಮೀರಿ ಲಸಿಕೆ ಪಡೆದ 23 ವರ್ಷದ ಬಿಜೆಪಿ ನಾಯಕನ ಸಂಬಂಧಿ?

ಕೇಂದ್ರದ ನಿಯಮ ಮೀರಿ ಲಸಿಕೆ ಪಡೆದ 23 ವರ್ಷದ ಬಿಜೆಪಿ ನಾಯಕನ ಸಂಬಂಧಿ?

ಬಿಜೆಪಿ ನಾಯಕರ ಕುಟುಂಬಗಳ ಜೀವವಷ್ಟೇ ಮುಖ್ಯವೇ? ಸಾಮಾನ್ಯ ಜನರು ಕೀಟಗಳೇ? ಅವರ ಜೀವನಕ್ಕೆ ಕಿಮ್ಮತ್ತಿಲ್ಲವೆ! ಎಂದು ಕಾಂಗ್ರೆಸ್ ಖಾರವಾಗಿ ಪ್ರಶ್ನಿಸಿದೆ.

- Advertisement -
- Advertisement -

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಅವರ ಯುವ ಸೋದರಳಿಯ ತನ್ಮಯ್ ಫಡ್ನವಿಸ್ ಕೂಡಾ ಲಸಿಕೆ ಪಡೆದ ಫೋಟೋ ವೈರಲ್ ಆಗಿದ್ದು, ಕಾಂಗ್ರೆಸ್‌ ಪಕ್ಷವು 23 ವರ್ಷದ ಯುವಕನಿಗೆ ಹೇಗೆ ಲಸಿಕೆ ಹಾಕಲಾಯಿತು ಎಂದು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದೆ.

ಮಹಾರಾಷ್ಟ್ರ ಸೇರಿದಂತೆ ಹಲವಾರು ರಾಜ್ಯಗಳು ಕಳೆದ ಕೆಲವು ದಿನಗಳಿಂದ ಲಸಿಕೆ ಕೊರತೆಯ ಬಗ್ಗೆ ಕೇಂದ್ರಕ್ಕೆ ದೂರು ನೀಡುತ್ತಲೇ ಇದೆ. ಕೇಂದ್ರದ ಇದುವರೆಗಿನ ನಿಯಮದಂತೆ ಲಸಿಕೆಯು 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮಾತ್ರ ಮುಕ್ತವಾಗಿದೆ. ಅದಾಗ್ಯೂ ಲಸಿಕೆ ಪಡೆಯು ಅರ್ಹ ವಯಸ್ಸಿನ ಗುಂಪಿಗೆ ಸೇರದಿದ್ದರೂ ತನ್ಮಯ್ ಫಡ್ನವಿಸ್ ಹೇಗೆ ಲಸಿಕೆ ಪಡೆದರು ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಇದನ್ನೂ ಓದಿ: ಕೋವಿಡ್ ಸಾವಿನ ಸಂಖ್ಯೆಗಳನ್ನು ಮುಚ್ಚಿಡುತ್ತಿರುವ ಯೋಗಿ ಸರ್ಕಾರ: ಒಂದು ಗ್ರೌಂಡ್ ರಿಪೋರ್ಟ್

ಕಾಂಗ್ರೆಸ್ ತನ್ನ ಟ್ವೀಟ್‌ನಲ್ಲಿ, “ಮೋದಿ ಸರ್ಕಾರವು 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮಾತ್ರ ಲಸಿಕೆ ನೀಡಬೇಕೆಂಬ ಷರತ್ತು ವಿಧಿಸಿತ್ತು. ಅಂತಹ ಪರಿಸ್ಥಿತಿಯಲ್ಲಿ, 45 ವರ್ಷಕ್ಕಿಂತ ಕಡಿಮೆ ವಯಸ್ಸಿನ ಫಡ್ನವೀಸ್ ಅವರ ಸೋದರಳಿಯನಿಗೆ ಹೇಗೆ ಲಸಿಕೆ ನೀಡಿದರು? ಬಿಜೆಪಿ ನಾಯಕರ ಕುಟುಂಬಗಳ ಜೀವವಷ್ಟೇ ಮುಖ್ಯವೇ? ಸಾಮಾನ್ಯ ಜನರು ಕೀಟಗಳೇ? ಅವರ ಜೀವನಕ್ಕೆ ಕಿಮ್ಮತ್ತಿಲ್ಲವೆ!” ಎಂದು ಖಾರವಾಗಿ ಪ್ರಶ್ನಿಸಿದೆ.

ಇದನ್ನೂ ಓದಿ: ಕೊರೋನಾ ಪಾಲಿಟಿಕ್ಸ್: ‘ಕೊರೋನಾ ಸಿಕ್ರೆ ಅದನ್ನ ಫಡ್ನವೀಸ್ ಬಾಯೊಳಗೆ ತುರುಕುತ್ತೇನೆ’ ಎಂದ ಸೇನಾ ಶಾಸಕ

 

ಮಹಾರಾಷ್ಟ್ರ ಕಾಂಗ್ರೆಸ್ ಟ್ವಿಟರ್ ಹ್ಯಾಂಡಲ್ ನಾಗ್ಪುರದ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯಲ್ಲಿ ತನ್ಮಯ್ ಫಡ್ನವಿಸ್‌‌ ಲಸಿಕೆ ತೆಗೆದುಕೊಳ್ಳುವ ಫೋಟೋದೊಂದಿಗೆ ಪ್ರಶ್ನೆಗಳನ್ನು ಕೇಳಿ ಪೋಸ್ಟ್‌ ಹಾಕಿದೆ. ಲಸಿಕೆ ತೆಗೆದುಕೊಳ್ಳುತ್ತಿರುವ ಫೋಟೊ ತನ್ಮಯ್‌ ತನ್ನ ಇನ್ಸ್ಟಾಗ್ರಾಮ್‌ನಲ್ಲಿ ಹಾಕಿದ್ದರು ಎಂದು ಕಾಂಗ್ರೆಸ್‌ನ ಮುಖಂಡರು ಹೇಳಿದ್ದರು. ಆದರೆ ಚಿತ್ರವು ವೈರಲ್ ಆಗುತ್ತಿದ್ದಂತೆ ಅವರು ಅದನ್ನು ಡಿಲಿಟ್ ಮಾಡಿದ್ದರು ಎನ್ನಲಾಗಿದೆ.

ಮೂಲಗಳ ಪ್ರಕಾರ ತನ್ಮಯ್ ಅವರು ತಮ್ಮ ಮೊದಲ ಲಸಿಕೆ ಮುಂಬೈನಲ್ಲಿ ತೆಗೆದುಕೊಂಡಿದ್ದರು ಮತ್ತು ಎರಡನೆ ಡೋಸೇಜ್ ಅನ್ನು ನಾಗ್ಪುರದಲ್ಲಿ ಪಡೆದುಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಇದನ್ನೂ ಓದಿ: 2017ರಲ್ಲಿಯೇ ಆಕ್ಸಿಜನ್ ಕೊರತೆ ಬಗ್ಗೆ ದನಿಯೆತ್ತಿದ್ದೆ, ಆದರೆ ನನ್ನನ್ನು ಜೈಲಿಗೆ ಹಾಕಲಾಯಿತು: ಡಾ.ಕಫೀಲ್ ಖಾನ್

 

 

ಕಾಂಗ್ರೆಸ್ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಬಿಜೆಪಿ ವಕ್ತಾರ ರಾಮ್ ಕದಮ್, “ತನ್ಮಯ್ ಫಡ್ನವೀಸ್ ಅವರು ದೇವೇಂದ್ರ ಫಡ್ನವಿಸ್ ಅವರ ದೂರದ ಸಂಬಂಧಿ ಎಂಬುದನ್ನು ಸರ್ಕಾರ ಮರೆಯಬಾರದು. ಸಂಬಂಧಿಕರಿಗೆ ಲಸಿಕೆ ನೀಡುವುದಾದರೆ ದೇವೇಂದ್ರ ಫಡ್ನವೀಸ್ ಅವರು ಮೊದಲು ತಮ್ಮ ಹೆಂಡತಿಗೆ ಲಸಿಕೆ ಹಾಕುತ್ತಿದ್ದರು. ಅವರು ಇನ್ನೂ ಲಸಿಕೆ ಹಾಕಿಲ್ಲ. ಇದು ದೇವೇಂದ್ರ ಫಡ್ನವಿಸ್ ನಿಯಮಗಳನ್ನು ಅನುಸರಿಸುತ್ತದೆ ಎಂದು ಸ್ಪಷ್ಟಪಡಿಸುತ್ತದೆ” ಎಂದು ಹೇಳಿದ್ದಾರೆ.

“ಆದರೆ ಮತ್ತೊಂದೆಡೆ ಥಾಣೆ ಕಾರ್ಪೋರೇಷನ್‌ ಮೇಯರ್ ಮತ್ತು ಎಲ್ಲಾ ಕಾರ್ಪೋರೇಟರ್‌ಗಳು ಎಲ್ಲಾ ನಿಯಮಗಳನ್ನು ಉಲ್ಲಂಘಿಸಿ ಸ್ವತಃ ಲಸಿಕೆ ಪಡೆದ್ದರೆ. ಇದಕ್ಕೆ ಯಾರು ಉತ್ತರಿಸುತ್ತಾರೆ? ರೆಮ್‌ಡೆಸಿವಿರ್ ಲಭ್ಯವಿಲ್ಲದ ಕಾರಣ ಜನರು ಸಾಯುತ್ತಿದ್ದಾರೆ ಆದರೆ ಎನ್‌ಸಿಪಿ ನಾಯಕಲ್ಲಿ ದೊಡ್ಡ ಮೊತ್ತದ ರೆಮ್‌ಡೆಸಿವಿರ್‌ ಹೊಂದಿದ್ದಾರೆ, ಹೇಗೆ?” ಎಂದು ಅವರು ಮರಳಿ ಕಾಂಗ್ರೆಸ್‌ಗೆ ಪ್ರಶ್ನಿಸಿದ್ದಾರೆ.

ಅಲ್ಲದೆ ಈ ಬಗ್ಗೆ ದೇವೇಂದ್ರ ಫಡ್ನವಿಸ್ ಕೂಡಾ ಸ್ಪಷ್ಟೀಕರಣ ನೀಡಿದ್ದು, “ತನ್ಮಯ್ ಫಡ್ನವಿಸ್ ನನ್ನ ದೂರದ ಸಂಬಂಧಿ. ಅವನು ಯಾವ ಆಧಾರದಲ್ಲಿ ತನ್ನ ಡೋಸ್ ಪಡೆದನೆಂದು ನನಗೆ ತಿಳಿದಿಲ್ಲ. ಮಾರ್ಗಸೂಚಿಗಳ ಪ್ರಕಾರ ತೆಗೆದುಕೊಂಡಿದ್ದರೆ, ಅದಕ್ಕೆ ಯಾವುದೇ ಆಕ್ಷೇಪಣೆ ಇರಬಾರದು. ಆದರೆ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ತೆಗೆದುಕೊಂಡಿದ್ದರೆ, ಅದು ಸಂಪೂರ್ಣವಾಗಿ ಅನುಚಿತವಾಗಿದೆ. ಲಸಿಕೆಯೆ ಪಡೆಯಲು ಅರ್ಹತೆ ಹೊಂದಿಲ್ಲದ ಕಾರಣಕ್ಕೆ ನನ್ನ ಹೆಂಡತಿ ಮತ್ತು ಮಗಳು ಸಹ ವ್ಯಾಕ್ಸಿನೇಷನ್ ಪಡೆದಿಲ್ಲ. ಪ್ರತಿಯೊಬ್ಬರೂ ನಿಯಮಗಳನ್ನು ಪಾಲಿಸಬೇಕು ಎಂಬ ದೃಡವಾದ ಅಭಿಪ್ರಾಯ ನನ್ನದು” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸಂಘ ಪರಿವಾರ ಬೆಂಬಲಿಗ ಪತ್ರಿಕೆ ‘ಹೊಸದಿಗಂತ’ದ ಸಂಪಾದಕ ಮತ್ತು ಪ್ರಕಾಶಕರಿಗೆ ಏಳು ತಿಂಗಳ ಜೈಲು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...