Homeಮುಖಪುಟಕೇಂದ್ರದ ನಿಯಮ ಮೀರಿ ಲಸಿಕೆ ಪಡೆದ 23 ವರ್ಷದ ಬಿಜೆಪಿ ನಾಯಕನ ಸಂಬಂಧಿ?

ಕೇಂದ್ರದ ನಿಯಮ ಮೀರಿ ಲಸಿಕೆ ಪಡೆದ 23 ವರ್ಷದ ಬಿಜೆಪಿ ನಾಯಕನ ಸಂಬಂಧಿ?

ಬಿಜೆಪಿ ನಾಯಕರ ಕುಟುಂಬಗಳ ಜೀವವಷ್ಟೇ ಮುಖ್ಯವೇ? ಸಾಮಾನ್ಯ ಜನರು ಕೀಟಗಳೇ? ಅವರ ಜೀವನಕ್ಕೆ ಕಿಮ್ಮತ್ತಿಲ್ಲವೆ! ಎಂದು ಕಾಂಗ್ರೆಸ್ ಖಾರವಾಗಿ ಪ್ರಶ್ನಿಸಿದೆ.

- Advertisement -
- Advertisement -

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಅವರ ಯುವ ಸೋದರಳಿಯ ತನ್ಮಯ್ ಫಡ್ನವಿಸ್ ಕೂಡಾ ಲಸಿಕೆ ಪಡೆದ ಫೋಟೋ ವೈರಲ್ ಆಗಿದ್ದು, ಕಾಂಗ್ರೆಸ್‌ ಪಕ್ಷವು 23 ವರ್ಷದ ಯುವಕನಿಗೆ ಹೇಗೆ ಲಸಿಕೆ ಹಾಕಲಾಯಿತು ಎಂದು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದೆ.

ಮಹಾರಾಷ್ಟ್ರ ಸೇರಿದಂತೆ ಹಲವಾರು ರಾಜ್ಯಗಳು ಕಳೆದ ಕೆಲವು ದಿನಗಳಿಂದ ಲಸಿಕೆ ಕೊರತೆಯ ಬಗ್ಗೆ ಕೇಂದ್ರಕ್ಕೆ ದೂರು ನೀಡುತ್ತಲೇ ಇದೆ. ಕೇಂದ್ರದ ಇದುವರೆಗಿನ ನಿಯಮದಂತೆ ಲಸಿಕೆಯು 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮಾತ್ರ ಮುಕ್ತವಾಗಿದೆ. ಅದಾಗ್ಯೂ ಲಸಿಕೆ ಪಡೆಯು ಅರ್ಹ ವಯಸ್ಸಿನ ಗುಂಪಿಗೆ ಸೇರದಿದ್ದರೂ ತನ್ಮಯ್ ಫಡ್ನವಿಸ್ ಹೇಗೆ ಲಸಿಕೆ ಪಡೆದರು ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಇದನ್ನೂ ಓದಿ: ಕೋವಿಡ್ ಸಾವಿನ ಸಂಖ್ಯೆಗಳನ್ನು ಮುಚ್ಚಿಡುತ್ತಿರುವ ಯೋಗಿ ಸರ್ಕಾರ: ಒಂದು ಗ್ರೌಂಡ್ ರಿಪೋರ್ಟ್

ಕಾಂಗ್ರೆಸ್ ತನ್ನ ಟ್ವೀಟ್‌ನಲ್ಲಿ, “ಮೋದಿ ಸರ್ಕಾರವು 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮಾತ್ರ ಲಸಿಕೆ ನೀಡಬೇಕೆಂಬ ಷರತ್ತು ವಿಧಿಸಿತ್ತು. ಅಂತಹ ಪರಿಸ್ಥಿತಿಯಲ್ಲಿ, 45 ವರ್ಷಕ್ಕಿಂತ ಕಡಿಮೆ ವಯಸ್ಸಿನ ಫಡ್ನವೀಸ್ ಅವರ ಸೋದರಳಿಯನಿಗೆ ಹೇಗೆ ಲಸಿಕೆ ನೀಡಿದರು? ಬಿಜೆಪಿ ನಾಯಕರ ಕುಟುಂಬಗಳ ಜೀವವಷ್ಟೇ ಮುಖ್ಯವೇ? ಸಾಮಾನ್ಯ ಜನರು ಕೀಟಗಳೇ? ಅವರ ಜೀವನಕ್ಕೆ ಕಿಮ್ಮತ್ತಿಲ್ಲವೆ!” ಎಂದು ಖಾರವಾಗಿ ಪ್ರಶ್ನಿಸಿದೆ.

ಇದನ್ನೂ ಓದಿ: ಕೊರೋನಾ ಪಾಲಿಟಿಕ್ಸ್: ‘ಕೊರೋನಾ ಸಿಕ್ರೆ ಅದನ್ನ ಫಡ್ನವೀಸ್ ಬಾಯೊಳಗೆ ತುರುಕುತ್ತೇನೆ’ ಎಂದ ಸೇನಾ ಶಾಸಕ

 

ಮಹಾರಾಷ್ಟ್ರ ಕಾಂಗ್ರೆಸ್ ಟ್ವಿಟರ್ ಹ್ಯಾಂಡಲ್ ನಾಗ್ಪುರದ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯಲ್ಲಿ ತನ್ಮಯ್ ಫಡ್ನವಿಸ್‌‌ ಲಸಿಕೆ ತೆಗೆದುಕೊಳ್ಳುವ ಫೋಟೋದೊಂದಿಗೆ ಪ್ರಶ್ನೆಗಳನ್ನು ಕೇಳಿ ಪೋಸ್ಟ್‌ ಹಾಕಿದೆ. ಲಸಿಕೆ ತೆಗೆದುಕೊಳ್ಳುತ್ತಿರುವ ಫೋಟೊ ತನ್ಮಯ್‌ ತನ್ನ ಇನ್ಸ್ಟಾಗ್ರಾಮ್‌ನಲ್ಲಿ ಹಾಕಿದ್ದರು ಎಂದು ಕಾಂಗ್ರೆಸ್‌ನ ಮುಖಂಡರು ಹೇಳಿದ್ದರು. ಆದರೆ ಚಿತ್ರವು ವೈರಲ್ ಆಗುತ್ತಿದ್ದಂತೆ ಅವರು ಅದನ್ನು ಡಿಲಿಟ್ ಮಾಡಿದ್ದರು ಎನ್ನಲಾಗಿದೆ.

ಮೂಲಗಳ ಪ್ರಕಾರ ತನ್ಮಯ್ ಅವರು ತಮ್ಮ ಮೊದಲ ಲಸಿಕೆ ಮುಂಬೈನಲ್ಲಿ ತೆಗೆದುಕೊಂಡಿದ್ದರು ಮತ್ತು ಎರಡನೆ ಡೋಸೇಜ್ ಅನ್ನು ನಾಗ್ಪುರದಲ್ಲಿ ಪಡೆದುಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಇದನ್ನೂ ಓದಿ: 2017ರಲ್ಲಿಯೇ ಆಕ್ಸಿಜನ್ ಕೊರತೆ ಬಗ್ಗೆ ದನಿಯೆತ್ತಿದ್ದೆ, ಆದರೆ ನನ್ನನ್ನು ಜೈಲಿಗೆ ಹಾಕಲಾಯಿತು: ಡಾ.ಕಫೀಲ್ ಖಾನ್

 

 

ಕಾಂಗ್ರೆಸ್ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಬಿಜೆಪಿ ವಕ್ತಾರ ರಾಮ್ ಕದಮ್, “ತನ್ಮಯ್ ಫಡ್ನವೀಸ್ ಅವರು ದೇವೇಂದ್ರ ಫಡ್ನವಿಸ್ ಅವರ ದೂರದ ಸಂಬಂಧಿ ಎಂಬುದನ್ನು ಸರ್ಕಾರ ಮರೆಯಬಾರದು. ಸಂಬಂಧಿಕರಿಗೆ ಲಸಿಕೆ ನೀಡುವುದಾದರೆ ದೇವೇಂದ್ರ ಫಡ್ನವೀಸ್ ಅವರು ಮೊದಲು ತಮ್ಮ ಹೆಂಡತಿಗೆ ಲಸಿಕೆ ಹಾಕುತ್ತಿದ್ದರು. ಅವರು ಇನ್ನೂ ಲಸಿಕೆ ಹಾಕಿಲ್ಲ. ಇದು ದೇವೇಂದ್ರ ಫಡ್ನವಿಸ್ ನಿಯಮಗಳನ್ನು ಅನುಸರಿಸುತ್ತದೆ ಎಂದು ಸ್ಪಷ್ಟಪಡಿಸುತ್ತದೆ” ಎಂದು ಹೇಳಿದ್ದಾರೆ.

“ಆದರೆ ಮತ್ತೊಂದೆಡೆ ಥಾಣೆ ಕಾರ್ಪೋರೇಷನ್‌ ಮೇಯರ್ ಮತ್ತು ಎಲ್ಲಾ ಕಾರ್ಪೋರೇಟರ್‌ಗಳು ಎಲ್ಲಾ ನಿಯಮಗಳನ್ನು ಉಲ್ಲಂಘಿಸಿ ಸ್ವತಃ ಲಸಿಕೆ ಪಡೆದ್ದರೆ. ಇದಕ್ಕೆ ಯಾರು ಉತ್ತರಿಸುತ್ತಾರೆ? ರೆಮ್‌ಡೆಸಿವಿರ್ ಲಭ್ಯವಿಲ್ಲದ ಕಾರಣ ಜನರು ಸಾಯುತ್ತಿದ್ದಾರೆ ಆದರೆ ಎನ್‌ಸಿಪಿ ನಾಯಕಲ್ಲಿ ದೊಡ್ಡ ಮೊತ್ತದ ರೆಮ್‌ಡೆಸಿವಿರ್‌ ಹೊಂದಿದ್ದಾರೆ, ಹೇಗೆ?” ಎಂದು ಅವರು ಮರಳಿ ಕಾಂಗ್ರೆಸ್‌ಗೆ ಪ್ರಶ್ನಿಸಿದ್ದಾರೆ.

ಅಲ್ಲದೆ ಈ ಬಗ್ಗೆ ದೇವೇಂದ್ರ ಫಡ್ನವಿಸ್ ಕೂಡಾ ಸ್ಪಷ್ಟೀಕರಣ ನೀಡಿದ್ದು, “ತನ್ಮಯ್ ಫಡ್ನವಿಸ್ ನನ್ನ ದೂರದ ಸಂಬಂಧಿ. ಅವನು ಯಾವ ಆಧಾರದಲ್ಲಿ ತನ್ನ ಡೋಸ್ ಪಡೆದನೆಂದು ನನಗೆ ತಿಳಿದಿಲ್ಲ. ಮಾರ್ಗಸೂಚಿಗಳ ಪ್ರಕಾರ ತೆಗೆದುಕೊಂಡಿದ್ದರೆ, ಅದಕ್ಕೆ ಯಾವುದೇ ಆಕ್ಷೇಪಣೆ ಇರಬಾರದು. ಆದರೆ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ತೆಗೆದುಕೊಂಡಿದ್ದರೆ, ಅದು ಸಂಪೂರ್ಣವಾಗಿ ಅನುಚಿತವಾಗಿದೆ. ಲಸಿಕೆಯೆ ಪಡೆಯಲು ಅರ್ಹತೆ ಹೊಂದಿಲ್ಲದ ಕಾರಣಕ್ಕೆ ನನ್ನ ಹೆಂಡತಿ ಮತ್ತು ಮಗಳು ಸಹ ವ್ಯಾಕ್ಸಿನೇಷನ್ ಪಡೆದಿಲ್ಲ. ಪ್ರತಿಯೊಬ್ಬರೂ ನಿಯಮಗಳನ್ನು ಪಾಲಿಸಬೇಕು ಎಂಬ ದೃಡವಾದ ಅಭಿಪ್ರಾಯ ನನ್ನದು” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸಂಘ ಪರಿವಾರ ಬೆಂಬಲಿಗ ಪತ್ರಿಕೆ ‘ಹೊಸದಿಗಂತ’ದ ಸಂಪಾದಕ ಮತ್ತು ಪ್ರಕಾಶಕರಿಗೆ ಏಳು ತಿಂಗಳ ಜೈಲು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...